ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ! ನವಲಗುಂದ ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ, ಸಿದ್ದಾರೂಢ ಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಶಾಲಾ ಮಕ್ಕಳಿಗೆ ಪೆನ್ನು-ನೋಟ್’ಬುಕ್ ವಿತರಿಸುವ ಮೂಲಕ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹೆಬ್ಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಜರುಗಿದ್ದು, ಅಳಗವಾಡಿಯ ಸಿದ್ದಾರೂಢ ಮಠದ ಶ್ರೀ ಶಿವಾನಂದ …
Read More »ಬಾಗಲಕೋಟೆ ರೈಲ್ವೆ ಬೇಡಿಕೆ: ಹೊಸ ಮಾರ್ಗ, ಹೊಸ ಸಂಚಾರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ!
ಬಾಗಲಕೋಟೆ ರೈಲ್ವೆ ಬೇಡಿಕೆ: ಹೊಸ ಮಾರ್ಗ, ಹೊಸ ಸಂಚಾರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ! ಬಾಗಲಕೋಟೆ ರೈಲು ಬೇಡಿಕೆ, ಬೃಹತ್ ಪ್ರತಿಭಟನೆ ಹೊಸ ಮಾರ್ಗ ಆಗ್ರಹಿಸಿ, ರಸ್ತೆಯಲ್ಲೇ ಧರಣಿ ನಿಲ್ದಾಣ ಪ್ರವೇಶ ತಡೆದ ಪೊಲೀಸರು, ವಾಗ್ವಾದ! ಸಂಘಟನೆಗಳ ಒಕ್ಕೂಟ, ರೈಲ್ವೆ ವಿರುದ್ಧ ಆಕ್ರೋಶ! ಬಾಗಲಕೋಟೆ ಜಿಲ್ಲೆಯಿಂದ ರಾಜ್ಯದ ಹಾಗೂ ದೇಶದ ವಿವಿಧ ಪ್ರಮುಖ ಸ್ಥಳಗಳಿಗೆ ಹೊಸ ರೈಲು ಸಂಚಾರ ಮತ್ತು ಬಹುಕಾಲದ ಬೇಡಿಕೆಯಾದ ಹೊಸ ರೈಲು ಮಾರ್ಗಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಇಂದು …
Read More »ಗದ್ದುಗೆ ಗುದ್ದಾಟ: ನಾಳೆ ದೆಹಲಿಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ
ಗದ್ದುಗೆ ಗುದ್ದಾಟ: ನಾಳೆ ದೆಹಲಿಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ಬೆಂಗಳೂರು: ಅಧಿಕಾರ ಹಸ್ತಾಂತರ ವಿಚಾರವಾಗಿ ರಾಜ್ಯದಲ್ಲಿ ಮುಸುಕಿನ ಗುದ್ದಾಟ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ”ಮಾತಿನ ಶಕ್ತಿ ಹಾಗೂ ನಂಬಿಕೆ” ಹೆಸರಿನಲ್ಲಿ ರಾಜಕೀಯ ನಾಯಕರು ಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಮುಖವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪವರ್ ಶೇರಿಂಗ್ ವಿಚಾರಕ್ಕೆ ಇವರಿಬ್ಬರ ಸೂಚ್ಯ ಹೇಳಿಕೆಗಳು ತೆರೆಮೆರೆ ಕದನಕ್ಕೆ ಇನ್ನಷ್ಟು ಕುತೂಹಲ ಮೂಡುವಂತೆ ಮಾಡಿದೆ. ಈಗಾಗಲೇ ಒಕ್ಕಲಿಗ ಸಂಘ ಹಾಗೂ …
Read More »ನೀರಿನ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಸಿಹಿ ಸುದ್ದಿ
ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ. Bengaluru …
Read More »ಉಜ್ವಲ ಯೋಜನೆ 3.0 ಆರಂಭ: ಉಚಿತ ಎಲ್ಪಿಜಿ ಸಂಪರ್ಕ ಪಡೆಯಲು ಮಹಿಳೆಯರ ದೌಡು!
ಉಜ್ವಲ ಯೋಜನೆ 3.0 ಆರಂಭ: ಉಚಿತ ಎಲ್ಪಿಜಿ ಸಂಪರ್ಕ ಪಡೆಯಲು ಮಹಿಳೆಯರ ದೌಡು! ಪ್ರತಿ ಕುಟುಂಬಕ್ಕೂ ಎಲ್ಪಿಜಿ ಅನಿಲ ಸಂಪರ್ಕ ಲಭ್ಯವಾಗುವಂತೆ ಮಾಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂರನೇ ಹಂತವು ಕಳೆದ ಎರಡು ದಿನಗಳಿಂದ ಆರಂಭಗೊಂಡಿದೆ. ಉಚಿತ ಸಂಪರ್ಕಗಳು ಮತ್ತು ಸಿಲಿಂಡರ್ಗಳ ಮೇಲೆ ಸಬ್ಸಿಡಿ ದೊರೆಯುತ್ತಿರುವುದರಿಂದ ಅರ್ಹ ನಾಗರಿಕರು ನೋಂದಾಯಿಸಲು ಧಾವಿಸುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ಒಲೆಯ ಮೇಲೆ ಅಡುಗೆ ಮಾಡುವುದರಿಂದ ಉಂಟಾಗುವ …
Read More »ಲಿವ್-ಇನ್ ಸಂಬಂಧಕ್ಕೂ ಐಪಿಸಿ 498ಎ ಅನ್ವಯ: ಹೈಕೋರ್ಟ್
ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ, ಮದುವೆಯ ಗುಣಲಕ್ಷಣಗಳನ್ನು ಹೊಂದಿರುವ ಲಿವ್–ಇನ್(ಪುರುಷ-ಮಹಿಳೆ ವಿವಾಹವಾಗದೆ ಒಟ್ಟಿಗೆ ಇರುವುದು) ಸಂಬಂಧಗಳಿಗೂ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಇಂದು ಮಹತ್ವದ ಆದೇಶ ನೀಡಿತು. ಮಹಿಳೆಯೊಬ್ಬರು(ಎರಡನೇ ಪತ್ನಿ) ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಶಿವಮೊಗ್ಗದ ಡಾ.ಬಿ.ಎಚ್.ಲೋಕೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಪೀಠ ಈ …
Read More »ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ.
ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ. ಮುರಗೋಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುರಗೋಡದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಶಿವ ಚಿದಂಬರೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂತೋಷ್ ಜಾರಕಿಹೊಳಿ ಅವರ ಸಾಮಾಜಿಕ ಕಾರ್ಯ ಹಾಗೂ ಸೇವೆಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳು, ಸಂಘಟಕರು, ಕಾರ್ಯಕರ್ತರು …
Read More »ಚಿರಾಗ್ ನಗರದಲ್ಲಿ ಯುಜಿಡಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ
• ಒಳಚರಂಡಿ ಯೋಜನೆಗೆ ಶಾಸಕ ಆಸೀಫ್ ಸೇಠ್ ಚಾಲನೆ. • ₹36 ಕೋಟಿ ಒಳಚರಂಡಿ ಅಭಿವೃದ್ಧಿ ನಿಧಿ ಬಳಕೆ • ನಗರದಲ್ಲಿ ನೈರ್ಮಲ್ಯ ಮತ್ತು ಮೂಲಸೌಕರ್ಯ ಸುಧಾರಣೆ ಗುರಿ • ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಯ ಪರಿಶೀಲನೆ. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಚಿರಾಗ್ ನಗರದಲ್ಲಿ ಬಹುನಿರೀಕ್ಷಿತ ಭೂಗತ ಒಳಚರಂಡಿ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆ, ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದುದ್ದಕ್ಕೂ ಸಮಗ್ರ ಒಳಚರಂಡಿ …
Read More »‘ಸುವರ್ಣ ವಿಧಾನಸೌಧದ ಮುಂದೆ ಬಸವಣ್ಣನ ಮೂರ್ತಿ ಸ್ಥಾಪಿಸಿ, ಅಧಿವೇಶನದಲ್ಲಿ ಘೋಷಿಸಿ’
ಬೆಳಗಾವಿ: ಅನುಭವ ಮಂಟಪದ ಮೂಲಕ ಜಗತ್ತಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದವರು ವಿಶ್ವಗುರು ಬಸವಣ್ಣ. ಭಾರತದ ಸಂವಿಧಾನದಲ್ಲಿರುವ ಬಹುತೇಕ ಅಂಶಗಳು ಬಸವಾದಿ ಶರಣರ ವಿಚಾರಗಳೇ ಆಗಿವೆ. ಅಂತಹ ಬಸವಣ್ಣನವರ ಪುತ್ಥಳಿಯನ್ನು ಉತ್ತರ ಕರ್ನಾಟಕದ ಶಕ್ತಿ ಸೌಧ ಸುವರ್ಣ ವಿಧಾನಸೌಧದ ಮುಂದೆ ಪ್ರತಿಷ್ಠಾಪಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಸುವರ್ಣ ವಿಧಾನಸೌಧದ ಮುಂಭಾಗ ಈಗಾಗಲೇ ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗಳನ್ನು ಬಸವರಾಜ ಬೊಮ್ಮಾಯಿ ಅವರ ಸರ್ಕಾರದ …
Read More »ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನು ನಾನು ಒಪ್ಪಲ್ಲ: ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್
ಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು …
Read More »
Laxmi News 24×7