Breaking News

Uncategorized

ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್ ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ವ್ಯಕಿಯೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಆರೋಪ ಸಂಬಂಧ ಸಂಡೂರು ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಮಹೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಬೇಕು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ. ತನ್ನ ಮೇಲೆ ಭೀಕರವಾಗಿ ಹಲ್ಲೆ ನಡೆಸಿರುವ ಸಂಡೂರು ಠಾಣೆ ಪೊಲೀಸ್ ಇನ್ಸ್​ಪೆಕ್ಟರ್ ಮಹೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ಮಾಡಲು ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಬೇಕು ಎಂದು ಕೋರಿ ಬಳ್ಳಾರಿ ಜಿಲ್ಲೆಯ …

Read More »

ಬೆಳಗಾವಿಯಲ್ಲಿ ಬೆಂಕಿ ಕಾಯಿಸಿಕೊಳ್ಳುವಾಗ ಆವರಿಸಿದ ದಟ್ಟ ಹೊಗೆ: ಉಸಿರುಗಟ್ಟಿ ಮೂವರು ಯುವಕರ ದುರ್ಮರಣ

ಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಸೋಮವಾರ ರಾತ್ರಿ ರೂಮಿನಲ್ಲಿ ಇದ್ದಿಲಿನ ಬೆಂಕಿ ಇಟ್ಟುಕೊಂಡು ಮಲಗಿದ್ದರು‌. ನಿದ್ರೆಗೆ ಜಾರಿದಾಗ ರೂಮಿನಲ್ಲಿ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿ ಸಾವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಅಮನ್ ನಗರದ ನಿವಾಸಿಗಳಾದ ರಿಹಾನ್ …

Read More »

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

* *ನವೆಂಬರ್ 28ರ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು* * *ತುಮಕೂರು ಜಿಲ್ಲಾ ಮಟ್ಟದ ಪೂರ್ವ ಬಾವಿ ಸಭೆಯಲ್ಲಿ ಸಚಿವರ ಕರೆ* *ತುಮಕೂರು:* ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ …

Read More »

ಸೌದಿ ಅರೇಬಿಯಾದಲ್ಲಿ ಬಸ್ ದುರಂತ ಹುಬ್ಬಳ್ಳಿ ಅಬ್ದುಲ್ ಘಣಿ ಸಾವು

ಹುಬ್ಬಳ್ಳಿ:ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತನ್ನ ಕುಟುಂಬವನ್ನು ಬಿಟ್ಟು ದುಬೈಗೆಂದು ದುಡಿಯಲು ಹೋಗಿದ್ದರು. ಸ್ವಲ್ಪ ದಿನಗಳ ಮಟ್ಟಿಗೆ ರಜೆ ಹಾಕಿ ತನ್ನ ಹುಟ್ಟೂರು ಅಂದ್ರೆ ಹುಬ್ಬಳ್ಳಿಗೆ ಬರುತ್ತಿದ್ದರು. ಬರುವಾಗ ತನ್ನ ಸ್ನೇಹಿತರ ಜೊತೆ ಸೌದಿ ಅರೇಬಿಯಾದ ಮೆಕ್ಕಾಗೆ ಹೋಗುವಾಗ, ಬಸ್ ನಲ್ಲಿದ್ದ 42 ಜನರು ಸಜೀವ ದಹನವಾಗಿ ದಾರುಣ ಮರಣ ಹೊಂದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯ ಗಣೇಶಪೇಟಗ್ ನಿವಾಸಿ ಅಬ್ದುಲ್ ಗನಿ ಶಿರಹಟ್ಟಿ ಕೂಡ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಲ್ಲಿ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …

Read More »

ಅರಿಹಂತ ಕಾರ್ಖಾನೆಯಿಂದ ಟನ್ ಕಬ್ಬಿಗೆ 3350 ರೂಪಾಯಿ ದರ, ಮಾಲಿಕರಿಗೆ ರೈತರಿಂದ ಸನ್ಮಾನ

ಚಿಕ್ಕೋಡಿ:ಜೈನಾಪುರದ ಅರಿಹಂತ ಶುಗರ್ ಇಂಡಸ್ಟ್ರೀಸ್ ವತಿಯಿಂದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಅಭಿನಂದನ ಪಾಟೀಲ ಮತ್ತು ಯುವ ನಾಯಕ ಉತ್ತಮ ಪಾಟೀಲ ಕಳೆದ 7 ವರ್ಷಗಳಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಬಯೋ ಪ್ರಾಡಕ್ಟ್ ಉತ್ಪನ್ನವಿಲ್ಲದಿದ್ದರೂ ಪ್ರಸ್ತುತ ಹಂಗಾಮಿನಲ್ಲಿ ಪ್ರತಿ ಟನ್‌ಗೆ 3350 ರೂ. ಕಬ್ಬಿನ ಬೆಲೆ ನೀಡಿ ರೈತರ ಹಿತಾಸಕ್ತಿ ಕಾಪಾಡಿದ್ದಾರೆ ಎಂದು ಸ್ವಾಭಿಮಾನಿ ರೈತ ಸಂಘಟನೆಯ ನಾಯಕ ರಾಜು ಖಿಚಡೆ ಹೇಳಿದರು. ಬೋರಗಾಂವ ಪಟ್ಟಣದಲ್ಲಿ ಸ್ವಾಭಿಮಾನಿ ಶೇತಕರಿ …

Read More »

ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ

ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಪ್ರಕಾಶ ಹುಕ್ಕೇರಿ ಚಿಕೋಡಿ: ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 4 ಕೋಟಿ ರೂ ಅನುದಾನವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ತಿಳಿಸಿದರು. ಯಕ್ಸಂಬಾ ಪಟ್ಟಣದ ಗೃಹ ಕಚೇರಿ ಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ …

Read More »

ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ

ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದ ಗ್ರಾಮಸ್ಥರು ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ ಬೆಳಗಾವಿ : ಗ್ರಾಮಕ್ಕೆ ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸಿರುವ ಹಿನ್ನೆಲೆಯಲ್ಲಿ ಕಂಗ್ರಾಳಿ ಬಿಕೆ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೋಮವಾರ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ …

Read More »

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಚಂಡೀಗಢದಲ್ಲಿ ನಡೆದ ಸಮಾರಂಭ ಡಾ. ಡಿ. ಬೆಹೆರಾ ಅವರ ಅಧ್ಯಕ್ಷತೆ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಅಕಾಡೆಮಿ, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಉನ್ನತ ಸಂಸ್ಥೆಯಾಗಿದೆ. ಈ …

Read More »

ಮೂಕ ಪ್ರಾಣಿಗಳ ಸಾವಿಗೆ ಕಾರಣ ಆದವರ ವಿರುದ್ಧ ಕ್ರಮ ನಿಶ್ಚಿತ: ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ

ಬೆಳಗಾವಿ : ಮೂಕ ಪ್ರಾಣಿಗಳ ಸಾವಿಗೆ ಯಾರೇ ಕಾರಣವಾದರೂ ಅವರ ಮೇಲೆ ಕ್ರಮ ಖಂಡಿತ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರು ಎಚ್ಚರಿಸಿದ್ದಾರೆ. ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸೋಮವಾರ ಮೃಗಾಲಯಕ್ಕೆ ರಂಗಸ್ವಾಮಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರ ತಂಡಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ್​, ಉಪ ಅರಣ್ಯ ಸಂರಕ್ಷಣಾಧಿಕಾರಿ …

Read More »

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಂದಿನಿಂದ ಅಧಿಕೃತ ಚಾಲನೆ ದೊರೆತಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರವಾದ ಇಂದು ಬಸವನಗುಡಿಯ ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಪರಿಷೆ ಆರಂಭವಾಗಿದ್ದು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಎರಡು ದಿನಗಳ ಬದಲು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ಪರಿಷೆ ನಡೆಯಲಿದ್ದು, ಬಸವನಗುಡಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಜನರ ಜಾತ್ರೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. …

Read More »