Breaking News

Uncategorized

ಪ್ರಧಾನಿ ಮೋದಿ ಏನು ದೇವರಾ, ಛೂ ಮಂತರ್ ಬಾಬಾನಾ?: ನಡ್ಡಾಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಿತ್ರನಟ ಕಿಚ್ಚ ಸುದೀಪ್‌ ಅವರು ಬೊಮ್ಮಾಯಿ ಅವರಿಗೆ ಸಾಥ್ ನೀಡಿದ್ದರು. ಇದೇ ವೇಳೆ, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದ ಜೆ.ಪಿ.ನಡ್ಡಾ, ‘ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ …

Read More »

ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ B.J.P.

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಗುರುವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನ. ಹಾಗಾಗಿ ಬುಧವಾರ ರಾತ್ರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗಕ್ಕೆ ಚನ್ನಬಸಪ್ಪ ಮತ್ತು ಮಾನ್ವಿಗೆ ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರ. ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.

Read More »

ಶೆಟ್ಟರ್‌ ಸೇರ್ಪಡೆಯಿಂದ ‘ಕೈ’ಗೆ ಬಲ: ಖರ್ಗೆ

ಬೆಂಗಳೂರು: ‘ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲುವಂತೆ ರಾಹುಲ್ ಗಾಂಧಿ ಹೇಳಿದ್ದಾರೆ. ಜಗದೀಶ ಶೆಟ್ಟರ್ ಅವರ ಸೇರ್ಪಡೆಯಿಂದ ಆ ಸಾಧನೆ ಮಾಡುವುದರಲ್ಲಿ ಅನುಮಾನವೇ ಇಲ್ಲ. ತಮ್ಮ ಕ್ಷೇತ್ರ ಮಾತ್ರವಲ್ಲ, ರಾಜ್ಯದ ಇತರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಾಮರ್ಥ್ಯ ಅವರಿಗಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.   ಕೆಪಿಸಿಸಿ ಕಚೇರಿಯಲ್ಲಿ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಮಾತನಾಡಿದ ಖರ್ಗೆ, ‘ಜನಸಂಘದ ಹಿನ್ನೆಲೆ ಇದ್ದರೂ ವಿವಾದವಿಲ್ಲದೇ ಶೆಟ್ಟರ್‌ ಕೆಲಸ …

Read More »

ಮತ್ತೆ ಇಬ್ಬರು ಪ್ರಭಾವಿ ಶಾಸಕರಿಗೆ BJP ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಿದ್ದು 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಲಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಅರವಿಂದ ಲಿಂಬಾವಳಿಗೆ ಟಿಕೆಟ್ ಕೈತಪ್ಪಿದೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕರಾಗಿರುವ ಎಸ್.ಎ.ರಾಮದಾಸ್ ಅವರಿಗೆ ಈಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ರಾಮದಾಸ್ ಬದಲಿಗೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೋರ್ವ ಶಾಸಕ ಅರವಿಂದ್ ಲಿಂಬಾವಳಿ ಅವರಿಗೂ ಟಿಕಿಕೆಟ್ ಕೈತಪ್ಪಿದೆ. ಮಹದೇವಪುರ ಕ್ಷೇತ್ರದ ಹಾಲಿ ಶಾಸಕ ಅರವಿಂದ್ …

Read More »

ಒಬ್ಬಅಭ್ಯರ್ಥಿ; ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಕೆ!

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ರಾಜಕೀಯ ಡ್ರಾಮಾ, ಹೈಡ್ರಾಮಾಗಳ ವೇದಿಕೆ ಸೃಷ್ಟಿಸಿದೆ. ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಗಾಗಿ ಅತೃಪ್ತಿ, ಅಸಮಾಧಾನ, ಎದುರಾಳಿ ಪಕ್ಷಕ್ಕೆ ಜಿಗಿತ, ಹಳೆಯ ಪಕ್ಷಕ್ಕೆ ಉಗಿತ.. ಹೀಗೆ ಒಂದಲ್ಲ ಒಂದು ಸೀನ್ ರಂಜನೀಯವಾಗಿ ಮೂಡಿಬರುತ್ತಿವೆ. ಇಂಥ ಸನ್ನಿವೇಶದಲ್ಲಿ ಒಬ್ಬರೇ ವ್ಯಕ್ತಿ ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಅವರು ಮೈಸೂರಿನ ಅಯೂಬ್ ಖಾನ್. ಇತ್ತೀಚೆಗೆ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಮೈಸೂರಿನಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದಲೂ ಸ್ಪರ್ಧೆ ಬಯಸಿದ್ದ …

Read More »

ರಾಷ್ಟ್ರೀಯ ನಾಯಕರ 20 ದಿನಗಳ ಪ್ರವಾಸದ ರೂಪುರೇಷೆ

ಬೆಂಗಳೂರು: “ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ‌ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. “ರಾಷ್ಟ್ರೀಯ ನಾಯಕರ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. …

Read More »

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ವರ್ಷ ಶಾಲೆ ಆರಂಭದಲ್ಲೇ ಸಿಗಲಿವೆ ಪಠ್ಯಪುಸ್ತಕಗಳು|

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ಈ ಬಾರಿ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭವಾಗುವ ವೇಳೆಗೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ಪಠ್ಯ ಪುಸ್ತಕ ಪರಿಷ್ಕರಣೆ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗಿ ನಾಲ್ಕೈದು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಿಕ್ಕಿರಲಿಲ್ಲ. ಇದರಿಂದ ಎಚ್ಚೆತ್ತಿರುವ ಶಾಲಾ ಶಿಕ್ಷಣ ಇಲಾಖೆ ಈ ವರ್ಷ ಶಾಲಾ ಆರಂಭದ ಸಮಯದಲ್ಲೇ ಪಠ್ಯಪುಸ್ತಕ ವಿತರಿಸಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೇ. 29 ರಿಂದ ಪ್ರಸಕ್ತ 2023-24 …

Read More »

ಮುಚ್ಚಿಡಲ್ಪಟ್ಟ ಬಾಬಾಸಾಹೇಬ್ ಅಂಬೇಡ್ಕರ್ ರ ಭವ್ಯ ಇತಿಹಾಸ

ಬಾಬಾಸಾಹೇಬ್ ಡಾ||ಅಂಬೇಡ್ಕರ್ ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲ್ಲಿ ಹುಟ್ಟಿದರು, ಬಾಲ್ಯದಿಂದಲೆ ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರು, ತಮ್ಮ ತಂದೆಯನ್ನು ನೋಡಲು ಗಾಡಿಯಲ್ಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು… ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನ ಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ’ ಎನಿಸಿಕೊಂಡರು, ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ …

Read More »

ಅನಿಲ ಬೆನಕೆ ಕೋರಿಕೆಯನ್ನು ತಿರಸ್ಕರಿಸಿದ ಕಾಂಗ್ರೆಸ್

ಬೆಳಗಾವಿ: ಟಿಕೆಟ್ ವಂಚಿತರಾಗಿರುವ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಸೇರ್ಪಡೆಗೆ ಕಾಂಗ್ರೆಸ್ ನೋ ಎಂದಿದೆ.  ದೊರಕಿರುವ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ತಪ್ಪುತ್ತಿದ್ದಂತೆ ಅನಿಲ ಬೆನಕೆ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದಾರೆ. ಉತ್ತರದ ಟಿಕೆಟ್ ನೀಡುವಂತೆ ಕೋರಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆಂದು ಪಕ್ಷ ಮೀಸಲಿಟ್ಟಿರುವ ಬೆಳಗಾವಿ ಉತ್ತರ ಕ್ಷೇತ್ರದ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.     ಬೆಳಗಾವಿ ಜಿಲ್ಲೆಯ 18ರಲ್ಲಿ ಒಂದು ಕ್ಷೇತ್ರವನ್ನು ಅಲ್ಪಸಂಖ್ಯಾತರಿಗೆ …

Read More »

ಬಿಜೆಪಿ ಶಾಸಕ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ ರಾಜಿನಾಮೆ

ಶಿರಸಿ: ಶಾಸಕ ಸ್ಥಾನಕ್ಕೆ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ ರಾಜಿನಾಮೆ ನೀಡಿದರು. ಗುರುವಾರ ಸಂಜೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದರು. ಬಿಜೆಪಿ ಟಿಕ್ಟ್ ತಪ್ಪಿದ್ದರಿಂದ ಬೇಸರಗೊಂಡು ಅವರು ರಾಜಿನಾಮೆ ನೀಡಿದರು.2023ರ ವಿಧಾನಸಭಾ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.ಷಡ್ಯುಲ್ ಕ್ಯಾಸ್ಟ್ ನವರು ಎಸ್.ಸಿ ಕ್ಷೇತ್ರದಲ್ಲಿ ನಿಲ್ಲಬೇಕು.‌ ಎಸ್‌ಟಿ ಕ್ಷೇತ್ರದಲ್ಲಿ ಎಸ್.ಟಿ ಜನಾಂಗದವರು ಚುನಾವಣೆಗೆ ನಿಲ್ಲಬೇಕು. ಜನರಲ್ ನವರು …

Read More »