Breaking News

Uncategorized

ಸುದೀಪ್ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ನಟ ಯಶ್ ಎಂಟ್ರಿ :ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜಕೀಯ ಮುಖಂಡರು ಸಂಪರ್ಕ ಮಾಡಿದ್ದಾರೆ

ಬೆಂಗಳೂರು : ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಣೆ ಮಾಡಿದ ಬೆನ್ನಲ್ಲೇ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜಕೀಯ ಮುಖಂಡರು ಸಂಪರ್ಕ ಮಾಡಿದ್ದಾರೆ ಎನ್ನಲಾಗಿದೆ. ಹೌದು, ಸ್ಟಾರ್ ಪ್ರಚಾರಕರನ್ನು ಕರೆತಂದು ಮತದಾರರ ಸೆಳೆಯುವ ಪ್ರಯತ್ನ ಮಾಡುತ್ತಿರುವ ರಾಜಕೀಯ ಪಕ್ಷಗಳು ನಟ ಯಶ್ ಮನೆಯ ಬಾಗಿಲು ಕೂಡ ತಟ್ಟಿದ್ದಾರೆ ಎನ್ನಲಾಗಿದೆ. ಆದರೆ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿರುವ ನಟ ಯಶ್ ಇದಕ್ಕೆ ನೋ ಎಂದಿದ್ದಾರೆ …

Read More »

ಸುದೀಪ್-ಪ್ರಕಾಶ್ ರೈ ಗೆ ನಟ ಚೇತನ್ ಟಾಂಗ್

ಬೆಂಗಳೂರು : ಬಿಜೆಪಿಗೆ ಬೆಂಬಲ ನೀಡುತ್ತಿದ್ದಂತೆ ನಟ ಪ್ರಕಾಶ್ ರೈ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಇದೀಗ ಇಬ್ಬರೂ ನಟರಿಗೆ ಚೇತನ್ ಅಹಿಂಸಾ ಪೋಸ್ಟ್ ಒಂದನ್ನು ಮಾಡುವ ಮೂಲಕ ಟಾಂಗ್ ನೀಡಿದ್ದಾರೆ. ಬಿಜೆಪಿಗೆ ಸುದೀಪ್ ರವರು ನೀಡಿದ ಬೆಂಬಲದಿಂದ ಪ್ರಕಾಶ್ ರಾಜ್ ರವರು ‘ಆಶ್ಚರ್ಯ & ಆಘಾತಕ್ಕೊಳಗಾಗಿದ್ದಾರೆ’ಇದು ಕುತೂಹಲಕಾರಿ ವಿಷಯವಾಗಿದೆ. ಇಬ್ಬರು ಪ್ರತಿಭಾವಂತ ನಟರು – ಒಬ್ಬರು ಬಿಜೆಪಿ ಪರ & ಮತ್ತೊಬ್ಬರು ಬಿಜೆಪಿ ವಿರೋಧಿ – ಜೂಜಿನ …

Read More »

ಆರಂಭದಲ್ಲೇ ಕೊರೊನಾಗೆ ಕಡಿವಾಣ ಹಾಕಲು ‘ಕೇಂದ್ರ’ ಕಸರತ್ತು ; ಏ.10,11ಕ್ಕೆ ಆಸ್ಪತ್ರೆಗಳಲ್ಲಿ ‘ಮಾಕ್ ಡ್ರಿಲ್’ಗೆ ಸೂಚನೆ

ನವದೆಹಲಿ : ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ರಾಜ್ಯಗಳಿಗೆ ಜಾಗರೂಕರಾಗಿರಲು ಮತ್ತು ಕೋವಿಡ್ ನಿರ್ವಹಣೆಗೆ ಸಿದ್ಧರಾಗಿರಲು ಕೇಳಿಕೊಂಡರು. ಮಾಂಡವೀಯ ಅವರು ಕೋವಿಡ್ ಪರಿಸ್ಥಿತಿಯನ್ನ ಪರಿಶೀಲಿಸಿದರು ಮತ್ತು ತುರ್ತು ಹಾಟ್ಸ್ಪಾಟ್ಗಳನ್ನು ಗುರುತಿಸಲು, ಪರೀಕ್ಷೆಯನ್ನ ಹೆಚ್ಚಿಸಲು, ಆಸ್ಪತ್ರೆಯ ಮೂಲಸೌಕರ್ಯ ಸನ್ನದ್ಧತೆಯನ್ನ ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ಸೂಚಿಸಿದರು.   ಏಪ್ರಿಲ್ 10, 11 ರಂದು ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಅಣಕು ಡ್ರಿಲ್ಗಳನ್ನ ಪರಿಶೀಲಿಸಲು ಆಸ್ಪತ್ರೆಗಳಿಗೆ ಭೇಟಿ ನೀಡುವಂತೆ …

Read More »

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬಂಡೀಪುರದಲ್ಲಿ ಖಾಕಿ ಹೈ ಅಲರ್ಟ್

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ – ಬಂಡೀಪುರದಲ್ಲಿ ಹೈ ಅಲರ್ಟ್ – ವಾಹನ ಸಂಚಾರ ನಿರ್ಬಂಧ- ಡ್ರೋನ್ ಹಾರಾಟವೂ ಬಂದ್. ಬಂಡೀಪುರದಲ್ಲಿ ಖಾಕಿ ಹೈ ಅಲರ್ಟ್ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರರಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರ ರಸ್ತೆಯಲ್ಲಿ ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲ ವಾಹನಗಳನ್ನು …

Read More »

ಅಮೆರಿಕಾದ ಪ್ಲೋರಿಡಾದಲ್ಲಿ ಲಘು ವಿಮಾನ ಪತನ, ದಂಪತಿ ಸಾವು ಸುಮಾರು 23 ಅಡಿ ನೀರಿನ ಅಡಿಯಲ್ಲಿ ಕಂಡುಬಂದ ವಿಮಾನ

ಅಮೆರಿಕಾದ ಪ್ಲೋರಿಡಾದಲ್ಲಿ ಲಘು ವಿಮಾನವೊಂದು ಪತನವಾಗಿದ್ದು, ನಾಲ್ವರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಲ್ಫ್​, ಅಮೆರಿಕ: ಫ್ಲೋರಿಡಾದ ಗಲ್ಫ್ ಕೋಸ್ಟ್ ಬಳಿ ಗುರುವಾರ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ವಿಮಾನ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ವೆನಿಸ್ ವಿಮಾನ ನಿಲ್ದಾಣದಿಂದ ಹೊರಟು ಬುಧವಾರ ರಾತ್ರಿ 9:30 ರ ನಂತರ ಪಶ್ಚಿಮಕ್ಕೆ …

Read More »

ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​

 ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಸಹಾಯಕ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ (ಎಎಸ್​ಐ) ಅನ್ನು ಅಮಾನತು ಮಾಡಲಾಗಿದೆ. ಈ ಘಟನೆ ಕೇರಳದಲ್ಲಿ ನಡೆದಿದೆ. ಸ್ಪೆಷಲ್​ ಬ್ರಾಂಚ್​ ವರದಿಯ ಪ್ರಕಾರ ಇಡುಕ್ಕಿ ಜಿಲ್ಲೆಯ ಸಾಂಥನಪರದ ಎಎಸ್​ಐ ಕೆ.ಪಿ. ಶಾಜಿ ಎಂಬುವರನ್ನು ಅಮಾನತು ಮಾಡಲಾಗಿದೆ. ಪೂಪ್ಪಾರ ಬಳಿ ದೇವಸ್ಥಾನದ ಉತ್ಸವದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಸ್ಪೆಷಲ್​ ಬ್ರಾಂಚ್​ ತನಿಖೆ ನಡೆಸಿ …

Read More »

ಬದುಕಿದ್ದಾಗಲೇ ಡೆತ್ ಸರ್ಟಿಫಿಕೆಟ್

ಕುಟುಂಬದಲ್ಲಿ ಯಾರಾದರೂ ಸಾವಿಗೀಡಾದಾಗ ಜನನ- ಮರಣ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯ. ಆದರೆ ತಾಯಿ ನಿಧನರಾದ ಸಂಬಂಧ ಅವರ ಡೆತ್ ಸರ್ಟಿಫಿಕೇಟ್ ಕೊಡಿ ಎಂದು ಜನನ-ಮರಣ ನೋಂದಣಿ ಕಚೇರಿಗೆ ಮಗಳು ಅರ್ಜಿ ಸಲ್ಲಿಸಿದರೆ ಅಲ್ಲಿ ಕಾರ್ಯನಿರ್ವಹಿಸುವ ಮಹಾನುಭಾವ ಸತ್ತವರದ್ದು ಬಿಟ್ಟು, ಅರ್ಜಿ ಕೊಟ್ಟವರ ಮರಣ ಪ್ರಮಾಣ ಪತ್ರ ನೀಡಿ ಬೇಜವಾಬ್ದಾರಿತನ ಮೆರೆದಿದ್ದಾರೆ.   ಈ ಘಟನೆ ನಡೆದಿರುವುದು ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ದೇವರ ನಿಂಬರಗಿ ವೃತ್ತದ ಜನನ-ಮರಣ ನೋಂದಣಿ …

Read More »

ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ

ವಾರಣಾಸಿಯ ಸಾರಾನಾಥ್‌ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇಬ್ಬರು ಆರೋಪಿಗಳಾದ ಸಮರ್ ಸಿಂಗ್ ಮತ್ತು ಸಂಜಯ್ ಸಿಂಗ್ ಅವರು ದೇಶ ಬಿಟ್ಟು ಹೋಗದಂತೆ ಅವರ ವಿವರಗಳನ್ನು ಎಲ್ಲಾ ವಿಮಾನ ನಿಲ್ದಾಣಗಳಿಗೆ ಕಳುಹಿಸಲಾಗಿದೆ.   ನಟಿಯ ತಾಯಿ ಮಧು ದುಬೆ ಪರ ಪ್ರಕರಣವನ್ನು ಕೈಗೆತ್ತಿಕೊಂಡಿರುವ ವಕೀಲ …

Read More »

ಗೆಳತಿಗಾಗಿ 21 ಗಂಟೆ ಮಂಡಿಯೂರಿ ಮನವೊಲಿಸಲು ಪ್ರಯತ್ನಿಸಿದ ಯುವಕ

ಪ್ರೀತಿಯು ಸುಂದರವಾಗಿದ್ದರೂ, ವಿಘಟನೆಯು ಅಷ್ಟೇ ನೋವಿನಿಂದ ಕೂಡಿದೆ ಮತ್ತು ಅದರ ಪರಿಣಾಮವು ದೀರ್ಘಕಾಲದವರೆಗೆ ಇರುತ್ತದೆ. ನಿಮ್ಮ ಪ್ರೀತಿಗೆ ಅಂಟಿಕೊಂಡಿರುವ ನೆನಪುಗಳನ್ನು ಬಿಡುವುದು ಕಷ್ಟ ಮತ್ತು ಒಂಟಿತನವು ಸಂಕಟದಂತೆ ಭಾಸವಾಗುತ್ತದೆ. ಇತ್ತೀಚಿಗೆ, ಚೀನಾದಲ್ಲಿ ಒಬ್ಬ ವ್ಯಕ್ತಿ ತನ್ನ ಗೆಳತಿ ಬಿಟ್ಟು ಹೋದರೂ ಆತ ತನ್ನ ಪ್ರೀತಿಯನ್ನು ಬಿಡಲು ಸಿದ್ಧವಿರರಲಿಲ್ಲ. ಆದ್ದರಿಂದ ಅವನು ತನ್ನ ಪ್ರೀತಿಯನ್ನು ಅವಳಿಗೆ ತೋರಿಸಲು ಮತ್ತು ಅವಳನ್ನು ಮರಳಿ ಗೆಲ್ಲುವ ಪ್ರಯತ್ನದಲ್ಲಿ ತೀವ್ರ ಹಂತಕ್ಕೆ ಹೋಗಿದ್ದು, ಅದರ ವಿಡಿಯೋ …

Read More »

ಮನೋಸಂಕಲ್ಪ ಈಡೇರಿಸುವ ಮಾರುತಿ: ಇಂದು ಹನುಮ ಜಯಂತಿ

ವಾಯುವಿಗೆ ಎಲ್ಲವನ್ನೂ ಮೀರಿಹೋಗುವ ಶಕ್ತಿಯಿದೆ. ಇದನ್ನು ಮೀರಿಹೋಗುವ ಶಕ್ತಿ ಮನಸ್ಸಿಗಿದೆ. ಇದನ್ನೇ ಮನೋವೇಗ ಎನ್ನುವರು. ಮನೋವೇಗ ವುಳ್ಳವನೇ ಆಂಜನೇಯ. ಆದ್ದರಿಂದ ಇವನನ್ನು ಋಷಿಮುನಿ ಗಳು ‘ಮನೋವೇಗರ ಗಮನ’ ಎಂದಿರುವರು. ನಮ್ಮ ಮನಸ್ಸಿನಲ್ಲಿರುವ ಸಂಕಲ್ಪವನ್ನು ತಿಳಿದು ಅದಕ್ಕೆ ಸ್ಪಂದಿಸುವ ಹಾಗೂ ಭವಸಾಗರವನ್ನು ದಾಟಿಸುವ ಶಕ್ತಿಯೂ ಆಂಜನೇಯನಿಗಿದೆ. ಕೇಸರಿ ಎಂಬ ಕಪಿಶ್ರೇಷ್ಠನ ಪತ್ನಿಗೆ ಬಹುಕಾಲ ಮಕ್ಕಳಿರಲಿಲ್ಲ. ಕೇಸರಿಯು ಮತಂಗ ಮುನಿಗಳ ಬಳಿ ತನ್ನ ನೋವನ್ನು ಹೇಳಿಕೊಂಡನು. ಅದಕ್ಕೆ ಅವರು ‘ಪಂಪಾ ಸರೋವರಕ್ಕೆ ಪೂರ್ವದಲ್ಲಿರುವ …

Read More »