Breaking News

Uncategorized

ರೆಡ್ಡಿ ಪಕ್ಷ ಸೇರಿದ ಕಾಂಗ್ರೆಸ್‌ ಮುಖಂಡರು

ಕೊಪ್ಪಳ/ಗಂಗಾವತಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನೂತನವಾಗಿ ಆರಂಭಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ವಿವಿಧ ಪಕ್ಷಗಳ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದಾರೆ. ಈಗಾಗಲೇ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಆಪ್ತ ಅಲಿಖಾನ್ ಸಹಾಯದಿಂದ ಮುಸ್ಲಿಂ, ಪರಿಶಿಷ್ಟಜಾತಿ, ಕುರುಬ ಸೇರಿ ಸಮಾಜದ ಮುಖಂಡರನ್ನು ಸೆಳೆಯಲು ವಿವಿಧ ರೀತಿಯ ರಣತಂತ್ರ ಹೂಡಿ, ಪ್ರಯೋಗ ಮಾಡಿದ್ದು, ವಿವಿಧ ಸಮಾಜದ ಮುಖಂಡರು ರೆಡ್ಡಿ ಪಕ್ಷಕ್ಕೆ ಸೇರುತ್ತಿದ್ದಾರೆ.   …

Read More »

ರಾಜ್ಯ ಸರ್ಕಾರದಿಂದ ‘ಪಡಿತರ ಚೀಟಿದಾರ’ರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ ಅದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಬಿಗ್ ಗಿಫ್ಟ್ ನೀಡಲಾಗಿದೆ. ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ …

Read More »

ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತವಾದ ಹಿನ್ನೆಲೆಯಲ್ಲಿ ಅಥಣಿ ಕಾರ್ಯನಿರತ ಪತ್ರಕರ್ತ ಸಂಘದಿಂದ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಶ್ರದ್ಧಾಂಜಲಿ

ನಾಡು ಕಂಡ ಶ್ರೇಷ್ಠ ಸಂತ ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತವಾದ ಹಿನ್ನೆಲೆಯಲ್ಲಿ ಅಥಣಿ ಕಾರ್ಯನಿರತ ಪತ್ರಕರ್ತ ಸಂಘದಿಂದ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಶ್ರದ್ಧಾಂಜಲಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಹಿರಿಯ ಪತ್ರಕರ್ತ ಸಿ. ಎ ಇಟ್ನಾಳಮಠ ವಿಶ್ವದ ಶ್ರೇಷ್ಠ ಸಂತರಲ್ಲಿ ಒಬ್ಬರಾದ ಸಿದ್ಧೇಶ್ವರ ಮಹಾಸ್ವಾಮಿಗಳು ತಮ್ಮ ಸರಳತೆಯಿಂದ ಮತ್ತು ಜ್ಞಾನದಿಂದ ಜನರ ಮನಸ್ಸಿನಲ್ಲಿ ನೆಲೆಸಿದವರು ಅಂತ ಅವರ ಅಗಲಿಕೆಯಿಂದ ನಿಜಕ್ಕೂ ನಾಡು ಅನಾಥವಾಗಿದೆ ಸಾಕಷ್ಟು ಸಾಧು ಸಂತರು ದೇಣಿಗೆ ಸಂಗ್ರಹ …

Read More »

ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣ

ಸಾಂಬ್ರಾ: ಸಮೀಪದ ಮಾರೀಹಾಳ ಗ್ರಾಮದ ರೈತರೇ ಒಂದಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹೊಲಗಳಿಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಮುಂದಾದರು. ರೈತರೇ ಸೇರಿಕೊಂಡಿ ಜೆಸಿಬಿಗೆ ಪೂಜೆ ಸಲ್ಲಿಸಿ ಕಾಮಗಾರಿಗೂ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಂದ್ರ ಧರ್ಮೋಜಿ ಅವರು ಜೆಸಿಬಿ ಪೂಜೆ ಮಾಡುವ ಮೂಲಕ ರಸ್ತೆ ನಿರ್ಮಾಣ ಆರಂಭಿಸಿದರು. ರೈತರಾದ ರಫೀಕ್‌ ಮುಲ್ಲಾ, ಅಪ್ಪಣ್ಣ ಕಲ್ಲನ್ನವರ, ಗಣಪತಿ ಕಲ್ಲನ್ನವರ, ದಸ್ತಗೀರ ಮುಲ್ಲಾ, ಗುರುನಾಥ ಅಕ್ಕತಂಗೇರಹಾಳ, ಚಂದ್ರಹಾಸ ಅಕ್ಕತಂಗೇರಹಾಳ, ಗುಲ್ಲು …

Read More »

ಕಳಸಾ-ಭಂಡೂರಿ ಯೋಜನೆಯಿಂದ ಖಾನಾಪುರ, ಮಲಪ್ರಭಾ ದಡದ ಗ್ರಾಮಗಳಿಗೆ ಪ್ರವಾಹದ ಭೀತಿ

ಪಣಜಿ: ಕಳಸಾ-ಭಂಡೂರಿ ನಾಲೆಯಿಂದ ನೀರು ಹರಿಸುವ ಕರ್ನಾಟಕದ ಪರಿಷ್ಕೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ. ಇದಕ್ಕೆ ಅಡ್ಡಿತರುವ ನಿಟ್ಟಿನಲ್ಲಿ ಗೋವಾ ಸರ್ಕಾರ ಮತ್ತೆ ತನ್ನ ಪ್ರಯತ್ನ ಆರಂಭಿಸಲು ಮುಂದಾಗಿದೆ. ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಪರಿಸರ ಹೋರಾಟಗಾರರೂ ಕೂಡ ತಮ್ಮ ಹೋರಾಟ ಆರಂಭಿಸುವ ಮೂಲಕ ಕರ್ನಾಟಕದ ಈ ಜನ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ.   ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಆಕ್ರೋಶ: ನೈಸರ್ಗಿಕ ಸಂಪತ್ತನ್ನು ಒತ್ತುವರಿ ಮಾಡಿಕೊಂಡು …

Read More »

ಜ.12 ಹಾಗೂ 13 ರಂದು ರಾಯಣ್ಣ ಉತ್ಸವ ವಿಜೃಂಭಣೆಯಿಂದ ಆಚರಣೆ

ಬೈಲಹೊಂಗಲ: ಪ್ರತಿವರ್ಷದಂತೆ ಜ.12 ಹಾಗೂ 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಸೋಮವಾರ ತಾಲೂಕಿನ ಸಂಗೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೋವಿಡ್‌ ಕಾರಣಕ್ಕೆ ಎರಡು ವರ್ಷಗಳಿಂದ ಸರಳ ರೀತಿಯಲ್ಲಿ ಆಚರಿಸಲಾಗಿದೆ. ಆದರೆ ಈ ಬಾರಿ ಗ್ರಾಮಸ್ಥರ ಒಕ್ಕೊರಲಿನ ಒತ್ತಾಯದಂತೆ ಉತ್ಸವವನ್ನು ಸಡಗರದಿಂದ ಆಚರಿಸಲಾಗುವುದು. ಉತ್ಸವಕ್ಕಾಗಿ …

Read More »

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಕಾರ್ಯಕರ್ತರು ಒಗ್ಗಟ್ಟಿನ ನಾಮಬಲದೊಂದಿಗೆ ಪಕ್ಷದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡುವಂತೆ ಹೇಳಿದರು.   ಬಿಜೆಪಿಯು ರಾಜ್ಯದಲ್ಲಿ ಮತ್ತೊಮ್ಮೆ …

Read More »

ಕಿಸೆ’ಯಿಲ್ಲದ ವೈರಾಗ್ಯಮೂರ್ತಿ ಸಿದ್ಧೇಶ್ವರ ಸ್ವಾಮೀಜಿ

ವಿಜಯಪುರ: ಬಿಜ್ಜರಗಿ ಎಂಬ ಪುಟ್ಟ ಗ್ರಾಮದ ‘ಸಿದ್ಧು’ ಎಂಬ ಶಾಂತ ಸ್ವಭಾವದ ಬಾಲಕ ‘ಸಿದ್ಧೇಶ್ವರ ಶ್ರೀ’ ಎಂಬ ಮಹಾನ್‌ ‘ಜ್ಞಾನಯೋಗಿ’ ಯಾಗಿ, ತತ್ವಜ್ಞಾನಿಯಾಗಿ, ಸದಾ ಶ್ವೇತವಸ್ತ್ರಧಾರಿಯಾಗಿ ‘ಕಿಸೆ’ಯಿಲ್ಲದ ವೈರಾಗ್ಯ ಮೂರ್ತಿಯಾಗಿ ಬೆಳೆದು ಬಂದ ದಾರಿ ಅಕ್ಷರಶಃ ವಿಸ್ಮಯ.   ವಿಜಯಪುರ ಜಿಲ್ಲೆ ತಿಕೋಟಾ ತಾಲ್ಲೂಕಿನ ಬಿಜ್ಜರಗಿಯಲ್ಲಿ 1940ರ ಸೆಪ್ಟೆಂಬರ್‌ 5 ರಂದು ಕೃಷಿಕರಾದ ಓಗೆಪ್ಪ ಗೌಡ ಬಿರಾದಾರ, ಸಂಗವ್ವ ದಂಪತಿಯ ಆರು ಜನ ಮಕ್ಕಳಲ್ಲಿ ಹಿರಿಯ ಪುತ್ರರಾಗಿ ಜನಿಸಿದ ಸಿದಗೊಂಡ …

Read More »

ಡಬಲ್ ಎಂಜಿನ್‌ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ

ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು.   ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್‌ ಫಾರ್‌ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …

Read More »

ಸಂಕ್ರಾಂತಿಯೊಳಗೆ ‘ಕೈ’ ಮೊದಲ ಪಟ್ಟಿ ಬಿಡುಗಡೆ; ಖರ್ಗೆ ಜತೆ ಡಿಕೆಶಿ ಚರ್ಚೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ವಿಚಾರದಲ್ಲಿ 3-4 ಜಿಲ್ಲೆಗಳು ಮಾತ್ರ ಹಿಂದುಳಿದಿದ್ದು, ಸಂಕ್ರಾಂತಿಯೊಳಗೆ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಹತ್ವದ ಚರ್ಚೆ ನಡೆಸಿದ್ದಾರೆ.   ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಹೊಸ ವರ್ಷದ ಶುಭಾಶಯ ತಿಳಿಸಿದ ಬಳಿಕ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದೀರ್ಘ …

Read More »