Breaking News

Uncategorized

ಜಡ್ಜ್ ಸ್ಥಾನಕ್ಕೆ ರಾಜೀನಾಮೆ; ಜೆಡಿಎಸ್​ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ಎಂಟ್ರಿ

ಗದಗ: ರಾಜ್ಯದಲ್ಲಿ ವಿಧಾಸಭಾ ಚುನಾವಣಾ ಸಮಯ ಸಮೀಪಿಸುತ್ತಿದ್ದಂತೆ ಹೊಸ ಹೊಸ ಅಭ್ಯರ್ಥಿಗಳು ವಿವಿಧ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅದರಲ್ಲೂ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಪ್ರವೇಶಿಸುತ್ತಿರುವವರ ಸಂಖ್ಯೆ ಈ ಬಾರಿ ಹೆಚ್ಚಿದೆ. ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ, ಚುನಾವಣೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ. ಇದೀಗ ನ್ಯಾಯಾಧೀಶರೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ರಾಜೀಯಕ್ಕೆ ಎಂಟ್ರಿ ಪಡೆದುಕೊಂಡಿದ್ದಾರೆ. ಗದಗ ನಗರದ ಜೆಎಂಎಫಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿದ್ದ ಸುಭಾಷಚಂದ್ರ …

Read More »

ಹಸಿದವರಿಗೆ ಅನ್ನ ಹಾಕುತ್ತಿರುವ ಮಂಗಳಮುಖಿಯರು,

ಉಡುಪಿ: ಬಸ್ ಸ್ಟಾಂಡ್ ಪಕ್ಕದ ಬೀದಿಬದಿಯಲ್ಲಿ ಚಿಕ್ಕ ಟೇಬಲ್, ಡಬ್ಬಗಳಲ್ಲಿ ವಿಧ ವಿಧದ ತಿಂಡಿ ತಿನಿಸು, ಟೀ. ಚಿಕ್ಕದಾದ್ರೂ ಚೊಕ್ಕ ಕ್ಯಾಂಟೀನ್ (Transgenders Hotel In Udupi)  ಇಟ್ಕೊಂಡಿರೋ ಇವ್ರು ಮಂಗಳಮುಖಿಯರು (Positive Story Of Transgenders) ಅಂದ್ರೆ ಯಾರೂ ನಂಬಲ್ಲ! ಆದ್ರೆ ಉಡುಪಿಯ ಈ ಮಂಗಳಮುಖಿಯರು ಮಾತ್ರ ತಮ್ಮ ಪ್ರಯತ್ನದಿಂದ ಕ್ರಾಂತಿ ಗೀತೆಯನ್ನೇ ಹಾಡುತ್ತಿದ್ದಾರೆ. ಹೀಗೆ ಬದಲಾವಣೆಯ ದಾರಿ ಹಿಡಿದ ಮಂಗಳಮುಖಿಯರ ಹೆಸರು ಪೂರ್ವಿ, ಡಿಂಪಲ್, ವೈಷ್ಣವಿ ಮತ್ತು …

Read More »

ಮೈಸೂರಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ

ಮೈಸೂರು: ಆರ್.ಟಿ.ನಗರದಲ್ಲಿ ಮಂಗಳೂರಿನ ದೈವಗಳು ಗುಡಿಗಳು ತಲೆ ಎತ್ತಿದ್ದು, ಜನರ ನಂಬಿಕೆಯಾದ ಕೊರಗಜ್ಜ ದೈವದ ಹೆಸರಿನಲ್ಲಿ ದಂಧೆ ನಡೆಯುತ್ತಿದ್ದೆಯಾ ಎಂಬ ಅನುಮಾನ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಕೊರಗಜ್ಜನ ದೈವಸ್ಥಾನದ ಪಕ್ಕದಲ್ಲಿಯೇ, ಇದೀಗ ದೈವ ರಾಜ ಗುಳಿಗ ಹೆಸರಿನಲ್ಲಿ ಮತ್ತೊಂದು ದೈವಸ್ಥಾನ ನಿರ್ಮಾಣವಾಗಿದೆ.   ಇದಲ್ಲದೆ ದೈವಸ್ಥಾನದ ಟ್ರಸ್ಟ್​ ಸದಸ್ಯರಲ್ಲಿಯೇ ಹಣಕ್ಕಾಗಿ ಕಿತ್ತಾಟ ಆರಂಭವಾಗಿದ್ದು, ದೈವಸ್ಥಾನದ ಅರ್ಚಕ ಹುಂಡಿಯನ್ನು ತನ್ನ ಮನೆಗೆ ಕೊಂಡೊಯ್ದಿರುವ ಘಟನೆ ನಡೆದಿದೆ. …

Read More »

K.I.A.D,B, ಭೂಮಿ ಹಂಚಿಕೆ: ಅವ್ಯವಹಾರ ಆರೋಪ

ಬೆಂಗಳೂರು: ‘ಕೆಐಎಡಿಬಿಯಿಂದ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ನೀಡಿಕೆಯಲ್ಲಿ ಅವ್ಯವಹಾರವಾಗಿದೆ’ ಎಂದು ವಿಧಾನ ಪರಿಷತ್‍ನಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಮಾಡಿದ ಆರೋಪ ‌ಚರ್ಚೆಗೆ ಗ್ರಾಸವಾಯಿತು. ‘ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಡಲು ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಬ್ರಿಗೇಡ್‌ ರಿಯಲ್ ಎಸ್ಟೇಟ್ ಸಂಸ್ಥೆಗೆ ಕೆಐಎಡಿಬಿಯಿಂದ ಭೂಮಿ ನೀಡಲಾಗಿದೆ. ಅದರಲ್ಲಿ ಬಡವರಿಗೆ ಮನೆ ಕಟ್ಟಿಕೊಡುವುದಾಗಿ ಹೇಳಲಾಗಿತ್ತು. ಆದರೆ, ನಿಯಮ ಪಾಲನೆ ಆಗದಿರುವುದರಿಂದ ಸರ್ಕಾರಕ್ಕೆ ನಷ್ಟವಾಗಿದೆ’ ಎಂದು ಮರಿತಿಬ್ಬೇಗೌಡ ದೂರಿದರು. …

Read More »

ಬೆಳಗಾವಿ: ಕಣ್ಮನ ಸೆಳೆದ ‘ಮಕ್ಕಳ ಕಲಿಕಾ ಹಬ್ಬ

(ಬೆಳಗಾವಿ): ಒಂದೆಡೆ ಮಹಿಳೆಯರ ಪೂರ್ಣಕುಂಭ ಮೆರವಣಿಗೆ ಕಣ್ಮನ ಸೆಳೆದರೆ, ಮತ್ತೊಂದೆಡೆ ಮಕ್ಕಳ ಜಾನಪದ ಕಲೆಗಳ ಪ್ರದರ್ಶನ ಜನರನ್ನು ರಂಜಿಸಿತು. ಆಲಂಕೃತ ಚಕ್ಕಡಿಗಳು, ಟ್ರ್ಯಾಕ್ಟರ್‌ಗಳ ಸಾಲು ಗ್ರಾಮೀಣ ಸೊಗಡು ಸೂಸಿತು. ಇಡೀ ಊರಿಗೆ ಊರೇ ಸಂಭ್ರಮದಲ್ಲಿ ಮಿಂದೆದ್ದರೆ, ನೂರಾರು ಮಕ್ಕಳು ತಮ್ಮ ಪ್ರತಿಭೆ ಅನಾವರಣಗೊಳಿಸಿ ಬೀಗಿದರು.   ಮಾಸ್ತಮರ್ಡಿಯಲ್ಲಿ ಸೋಮವಾರದಿಂದ ಆರಂಭಗೊಂಡ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಇಂತಹ ದೃಶ್ಯಕಾವ್ಯಕ್ಕೆ ಸಾಕ್ಷಿಯಾಯಿತು. ಮಕ್ಕಳಲ್ಲಿ ಕಲಿಕೆ ಬಗ್ಗೆ ಪ್ರೇರಣೆ ತುಂಬಲು …

Read More »

ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ‘ಅತ್ಯುತ್ತಮ’ ಪ್ರಶಸ್ತಿ

ಬೆಳಗಾವಿ: ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ಕರ್ನಾಟಕದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಲಭಿಸಿದೆ. ಭಾರತ ಸರಕಾರದ  ಗೃಹ ಸಚಿವಾಲಯ ಪ್ರತಿ ವರ್ಷ ಉತ್ತಮ ಪೊಲೀಸ್ ಠಾಣೆಗಳನ್ನು ನಿರ್ಧರಿಸುತ್ತಿದ್ದು ಕಳೆದ ವರ್ಷದಲ್ಲಿನ ಉತ್ತಮ ನಿರ್ವಹಣೆ ಹಾಗೂ ಕಾರ್ಯನಿರ್ವಹಣೆ ಪರಿಗಣಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.   ದೇಶಾದ್ಯಂತ ಪೊಲೀಸ್ ಠಾಣೆಗಳ ಶ್ರೇಯಾಂಕ ನಿರ್ಧಾರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ಪ್ರಕ್ರಿಯೆಯಾಗಿದೆ. ಅಪರಾಧ ದರ, ತನಿಖೆ, ಪ್ರಕರಣಗಳ ವಿಲೇವಾರಿ, ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವೆಯ ವಿತರಣೆ ಸೇರಿದಂತೆ 165 …

Read More »

(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್‌.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …

Read More »

ಆಂಧ್ರದ ರಾಜ್ಯಪಾಲರಾಗಿ ಕನ್ನಡಿಗ ನಜೀರ್

ಬೆಂಗಳೂರು: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಎಸ್. ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.   ‘ನೂತನವಾಗಿ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್‌. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ …

Read More »

ಚುನಾವಣ ಸೇತುವೆ ಮೇಕೆದಾಟು

ಬೆಂಗಳೂರು ನಗರ ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವ ಯೋಜನೆಯಾದ ಮೇಕೆದಾಟು ಯೋಜನೆ ಈ ಬಾರಿಯ ಚುನಾವಣ ಅಸ್ತ್ರವಾಗುವ ಸಾಧ್ಯತೆಗಳಿವೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ರಾಜಕೀಯ ಮತ್ತು ಭಾವನಾತ್ಮಕ ಸಂಘರ್ಷಕ್ಕೆ ಕಾರಣವಾಗುವ ಮೇಕೆದಾಟು ಯೋಜನೆ ರಾಜಕೀಯ ಪಕ್ಷಗಳಿಗೆ ಆಯಾ ಸಂದರ್ಭದಲ್ಲಿ ರಾಜಕೀಯ ದಾಳ ಮತ್ತು ಚುನಾವಣ ಅಸ್ತ್ರವೂ ಆಗಿರುತ್ತದೆ. ಈ ಬಾರಿಯೂ ಅಷ್ಟೇ ದಕ್ಷಿಣ ಕರ್ನಾಟಕದಲ್ಲಿ ಮೇಕೆದಾಟು ಯೋಜನೆಯನ್ನು ಚುನಾವಣೆ ಅಸ್ತ್ರವನ್ನಾಗಿಸಲು ಎಲ್ಲ ಪಕ್ಷಗಳು ಪ್ರಯತ್ನಿಸಿವೆ. …

Read More »

ಶಿವಮೊಗ್ಗ ಏರ್ ಪೋರ್ಟ್ ಗೆ ‘ಕುವೆಂಪು’ ಹೆಸರಿಡಲು ನಿರ್ಧಾರ : B.S ಯಡಿಯೂರಪ್ಪ

ಶಿವಮೊಗ್ಗ : ಶಿವಮೊಗ್ಗ ಏರ್ ಪೋರ್ಟ್ ಗೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಶಿವಮೊಗ್ಗ ಏರ್ ಪೋರ್ಟ್ ಗೆ ನನ್ನ ಹೆಸರು ಇಡಬೇಡಿ ಎಂದು ಈಗಾಗಲೇ ಮನವಿ ಮಾಡಿದ್ದೇನೆ. ಶಿವಮೊಗ್ಗ ಏರ್ ಪೋರ್ಟ್ ಗೆ ಕುವೆಂಪು ಹೆಸರಿಡುವಂತೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ಫೆ.27 ರಂದು ಶಿವಮೊಗ್ಗ ಏರ್ ಪೋರ್ಟ್ ಗೆ ಮೋದಿ ಬರುತ್ತಾರೆ. ಮೋದಿ …

Read More »