Breaking News

Uncategorized

ಹನುಮ ಮಾಲೆ ಧರಿಸಿ ಅಂಜನಾದ್ರಿ ಬೆಟ್ಟಕ್ಕೆ ಹೊರಟ ಮುಸ್ಲಿಂ ಭಕ್ತ

ವಿಜಯಪುರ: ದೇಶದೆಲ್ಲೆಡೆ ಜಾತಿ ಹೆಸರಲ್ಲಿ ಮತೀಯ ಸಂಘರ್ಷಗಳೇ ವಿಜೃಂಭಿಸಿ, ಸುದ್ದಿಯಾಗುತ್ತಿವೆ. ಈ ಹಂತದಲ್ಲೇ ಬಸವ ಜನ್ಮಭೂಮಿ ಮುಸ್ಲಿಂ ಭಕ್ತನೊಬ್ಬ ಹನುಮ ಮಾಲಾ ಧರಿಸಿ ಹನುಮ ಜನ್ಮಭೂಮಿ ಅಂಜನಾದ್ರಿ ಬೆಟ್ಟಕ್ಕೆ ಹೊರಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.   ಬಸವೇಶ್ವರ ಜನ್ಮಭೂಮಿಯಾದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ಜಾಫರ್ ಬೆಣ್ಣೆ ಎಂಬವರೇ ಭಾವೈಕ್ಯತೆ ಮೆರೆದ ಹನುಮಭಕ್ತ. ಹಣೆಗೆ ಗಂಧ, ತಿಲಕ ಇರಿಸಿ, ಕೇಸರಿ ವಸ್ತ್ರ ಧರಿಸಿ, ಕೊರಳಲ್ಲಿ ಹನುಮ ಮಾಲಾ ಧರಿಸಿ, …

Read More »

ಉಗಾರ ಹೆಸ್ಕಾಂ ಇಲಾಖೆಯ ಕಚೇರಿ ಎದರು ಪ್ರತಿಭಟನೆ ಕೈಗೊಂಡ ರೈತ ಮುಖಂಡ ಸುರೇಶ್ ಚೌಗುಲೆ,ರಾಜು ಕಾಗೆ

ಕಾಗವಾಡ ತಾಲೂಕಿನ ಶಿರಗುಪ್ಪಿ, ಶೇಡಬಾಳ, ಉಗಾರ, ಮಂಗಸೂಳಿ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮದ ರೈತರು, ರೈತ ಮುಖಂಡ ಸುರೇಶ್ ಚೌಗುಲೆ ಇವರ ನೇತೃತ್ವದಲ್ಲಿ, ಮಾಜಿ ಶಾಸಕ ರಾಜು ಕಾಗೆ ಇವರ ಮುಖ್ಯ ಉಪಸ್ಥಿತಿಯಲ್ಲಿ ಗುರುವಾರ ರಂದು ಉಗಾರ ಹೆಸ್ಕಾಂ ಇಲಾಖೆಯ ಕಚೇರಿ ಎದರು ಪ್ರತಿಭಟನೆ ಕೈಗೊಂಡಿದರು. ಪ್ರತಿದಿನ ರೈತರ ಪಂಪ್ಸೆಟ್‍ಗಳಿಗೆ 6 ಗಂಟೆ ವಿದ್ಯುತ್ ಪೂರೈಸುತಿದಾರೆ. ಇದರಿಂದ ರೈತರ ಬೆಳೆಗಳು ಕಮರಿ ಹೋಗುತ್ತಿವೆ ಇನ್ನುಳಿದ ತಾಲೂಕಗಳಲ್ಲಿ 7 ಗಂಟೆ ವಿದ್ಯುತ …

Read More »

ಲಂಚ ಪಡೆಯಿತ್ತಿದ್ದಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಅಧಿಕಾರಿ ಲೋಕಾಯುಕ್ತ ಬಲೆಗೆ

ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಬಿದಿದ್ದಾನೆ. ವಿಜಯಪುರ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾ ಬಲೆಗೆ ಬಿದಿದ್ದು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚ‌ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಹೆಚ್ಚುವರಿ ಯಾಗಿ ಸಿಕ್ಕ 39 ಸಾವಿರ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ‌ ಎಸ್ಪಿ ಅನೀತಾ ಹದ್ದನ್ನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Read More »

ಮ.ಹಾ.ರಾಷ್ಟ್ರದ ಗಡಿ ಉಸ್ತುವಾರಿ ಸಚಿವರಿಗೆ ಬೆಳಗಾವಿ ಪ್ರವೇಶಿಸದಂತೆ ಸಿಎಂಗೆ ಮನವಿ: ಕರವೇ

ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿ.6 ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಒಂದಲ್ಲ ಒಂದು ನೆಪದಲ್ಲಿ ಭೇಟಿ ನೀಡುವ ಮೂಲಕ ಇಲ್ಲಿನ ಎಂಇಎಸ್ ಹಾಗೂ ಶಿವಸೇನೆಯ ಕಾರ್ಯಕರ್ತರನ್ನು ಬೆಂಬಲಿಸಿ ಕರ್ನಾಟಕ ಸರಕಾರದ ವಿರುದ್ಧ ಪ್ರಚೋದನೆ ನೀಡುವ ಉದ್ದೇಶವಾಗಿದೆ. ಅವರು ಗಡಿಭಾಗದಲ್ಲಿ ಪ್ರವೇಶ ಮಾಡದಂತೆ ನೋಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರವೇ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದರು.     ಗಡಿ ಸಂರಕ್ಷಣಾ …

Read More »

ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಚೋರ್ಲಾ ಘಾಟ್‍ನಲ್ಲಿ ಅಪಘಾತ

ಪಣಜಿ: ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಚೋರ್ಲಾ ಘಾಟ್‍ನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಮಹಾರಾಷ್ಟ್ರ ನೋಂದಣಿ ಹೊಂದಿದ ಕಾರೊಂದು ಡಿ.1ರ ರಾತ್ರಿ ಚೋರ್ಲಾ ಘಾಟ್‍ನಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಚೋರ್ಲಾ ಘಾಟ್‍ನಲ್ಲಿ ಕಾರು ಆಳವಾದ ಕಂದಕಕ್ಕೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರ ಮೂಲದ ನೂರ್ ಶೇಖ್ ಮತ್ತು ಸುಧೀರ್ ಕುಮಾರ್ ಮೃತಪಟ್ಟವರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ …

Read More »

ನಾನು ಮತ್ತು ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: 2023ರ ಚುನಾವಣೆಯಲ್ಲಿ ನಾನು ಮತ್ತು ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎಂದು ಹೇಳುವ ಮೂಲಕ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತರೆ ಪಕ್ಷಗಳ ಸೇರ್ಪಡೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದರು.   ತಾಲೂಕಿನ ರಾಜಾಪುರ ಗ್ರಾಮದಲ್ಲಿ ಗುರುವಾರ ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಗಳ ಹಾಲುಮತ ಕುರುಬ ಸಮಾಜ ಬಾಂಧವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾನು ಮತ್ತು …

Read More »

ಪ್ರತಿಬಂಧಕಾಜ್ಞೆ ಹೊರಡಿಸುವ ಬಗ್ಗೆ ಸಿಎಂ ಸುಳಿವು…

ಬೆಳಗಾವಿ-ಡಿ.6ರಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವದ್ವಯರ ಭೇಟಿ ವಿಚಾರವಾಗಿ ಪ್ರತಿಬಂಧಕಾಜ್ಞೆ ಹೊರಡಿಸುವ ಬಗ್ಗೆ ಪರೋಕ್ಷವಾಗಿ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ದೊಡಮಂಗಡಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಿಎಂ ಸುಳಿವು ನೀಡಿದ್ದಾರೆ. ಈಗಾಗಲೇ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳಿಸಿದ್ದಾರೆ.ಎರಡೂ ರಾಜ್ಯಗಳ ಮಧ್ಯೆ ಈ ರೀತಿ ಪರಿಸ್ಥಿತಿ ಇರುವಾಗ ಅವರು ಬರೋದು ಸೂಕ್ತ ಅಲ್ಲ. ಬರಬಾರದು ಅನ್ನೋ ಸಂದೇಶ …

Read More »

ದಿಬ್ಬ ಏರುವಾಗ ನಿಯಂತ್ರಣ ತಪ್ಪಿದ ಸಾರಿಗೆ ಬಸ್

ಹುಬ್ಬಳ್ಳಿ: ದಿಬ್ಬ ಏರುವಾಗ ತಾಂತ್ರಿಕ ಸಮಸ್ಯೆಯಿಂದ ಚಾಲಕನ ನಿಯಂತ್ರಣ ತಪ್ಪಿದ ನಗರ ಸಾರಿಗೆ ಬಸ್ ಕಂದಕಕ್ಕೆ ಉರುಳಿದ್ದು, ಚಾಲಕ ಹಾಗೂ ನಿರ್ವಾಹಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಇಲ್ಲಿನ ಗೋಕುಲ ರಸ್ತೆ ಮೊರಾರ್ಜಿ ನಗರದಲ್ಲಿ ಸಿಬಿಟಿಯಿಂದ ಆರ್.ಎಂ. ಲೋಹಿಯಾ ನಗರಕ್ಕೆ ತೆರಳುತ್ತಿದ್ದ ನಗರ ಸಾರಿಗೆ ಬಸ್‌ ಬೆಳಗ್ಗೆ 11.30 ರ ಸುಮಾರಿಗೆ ದಿಬ್ಬ ಏರುವಾಗ ತಾಂತ್ರಿಕ ಸಮಸ್ಯೆಯಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಹಿಂಬದಿಯಾಗಿ ಚಲಿಸಿ ರಸ್ತೆ ಪಕ್ಷದ ಕಂದಕಕ್ಕೆ ಜಾರಿದೆ. …

Read More »

ಯುವಕನಿಗೆ ಮದ್ವೆ ಆಸೆ ಹುಟ್ಟಿಸಿ ಹಾಸನದ ಮಹಿಳೆ ಹೀಗಾ ಮಾಡೋದು?

ವಿಜಯಪುರ: ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಗೆ ಈಕೆ ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ತಾನು ಐಎಎಸ್​ ಪಾಸ್​ ಮಾಡಿರುವೆ, ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಆಗುವೆ. ನೀನಂದ್ರೆ ನನಗಿಷ್ಟ, ನಿನ್ನನ್ನೇ ಮದ್ವೆ ಆಗುವೆ ಎಂದೆಲ್ಲ ಹೇಳಿದ್ದಳು. ಈಕೆಯ ಮಾತಿಗೆ ಮರುಳಾದ ಯುವಕ ಮಾನಸಿಕ ಹಿಂಸೆ ಅನುಭವಿಸಿದ್ದು ಮಾತ್ರವಲ್ಲ, ಬರೋಬ್ಬರಿ 39 ಲಕ್ಷ ಹಣ ಕಳೆದುಕೊಂಡಿದ್ದಾನೆ. ಏನಿದು ಪ್ರಕರಣ?: ಸಿಂದಗಿ ತಾಲೂಕಿನ ಬಗಲೂರ ಗ್ರಾಮದ ನಿವಾಸಿ ಪರಮೇಶ್ವರ ನಾನಾಗೌಡ ಹಿಪ್ಪರಗಿ ಎಂಬಾತ ಮಂಜುಳಾ ಕೆ.ಆರ್​. ಎಂಬ ಫೇಸ್​ಬುಕ್​ ಖಾತೆಯಿಂದ …

Read More »

ಶಾಲೆಯಲ್ಲೇ ಹೃದಯಾಘಾತವಾಗಿ ಕುಸಿದುಬಿದ್ದು 13 ವರ್ಷದ ಬಾಲಕನ ಸಾವು!

ಹುಬ್ಬಳ್ಳಿ: ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ ಹುಡುಗ ಇನ್ನೂ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ.   ಕೇವಲ 13 ವರ್ಷ ವಯಸ್ಸಿನ ಬಾಲಕನೊಬ್ಬ ತಾನು ಕಲಿಯುತ್ತಿದ್ದ ಶಾಲೆಯಲ್ಲೇ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಈ ಘಟನೆ ಸಮೀಪದ ಕಲಘಟಗಿಯಲ್ಲಿ ನಡೆದಿದೆ. ಮಕ್ತುಮ್ ಮಹ್ಮದ್‌ರಫಿ ಮನಿಯಾರ್ (13) ಮೃತಪಟ್ಟ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ. ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಸರ್ಕಾರಿ …

Read More »