Breaking News

Uncategorized

ಮಹಾರಾಷ್ಟ್ರ ಹಳ್ಳಿಗಳಿಗೆ ರಾಜ್ಯದ ಗಂಗೋದಕ; ಜತ್ತ ತಾಲೂಕಿನ 42 ಹಳ್ಳಿಗಳಿಗೆ ಕುಡಿಯುವ ನೀರು

ಬೆಂಗಳೂರು: ಪದೇಪದೆ ಗಡಿ ವಿವಾದವನ್ನು ಕೆಣಕುತ್ತಿರುವ ಮಹಾರಾಷ್ಟ್ರವನ್ನು ಭಾವನಾತ್ಮಕವಾಗಿ ಕಟ್ಟಿ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಆ ಮೂಲಕ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಹೊಡೆದುರುಳಿಸುವ ಕಡೆ ಗಮನ ಹರಿಸಿದೆ. ಮಹಾಜನ ವರದಿ ಸಂಸತ್ತಿನಲ್ಲಿ 1970ರಲ್ಲಿ ಮಂಡನೆಯಾಗಿದೆ ಹೊರತು ಇನ್ನೂ ಅಂಗೀಕಾರವಾಗಿಲ್ಲ. ಆದರೆ, ಮಹಾರಾಷ್ಟ್ರ ಮಾತ್ರ ಆಗಾಗ ಗಡಿ ವಿಚಾರವನ್ನು ಕೆದಕುತ್ತಲೇ ಇರುತ್ತದೆ. ಆದ್ದರಿಂದಲೇ ಮತ್ತೆ ಚಕಾರ ಎತ್ತದಂತೆ ಮಾಡಲುಸರ್ಕಾರದ ಹಂತದಲ್ಲಿ ಚರ್ಚೆ ನಡೆದಿದೆ. ಜತ್ತ ತಾಲೂಕಿಗೆ ರಾಜ್ಯದಿಂದ ನೀರು: ಮಹಾರಾಷ್ಟ್ರದ …

Read More »

ಆಧಾರ್ ಕಾರ್ಡ್ ಇದ್ದರೆ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ : ರಾಜ್ಯ ಸರ್ಕಾರ ಸುತ್ತೋಲೆ

ಬೆಂಗಳೂರು : ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ಸೂಕ್ತ ದಾಖಲೆಗಳು ಇಲ್ಲದಿದ್ದರೆ ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ. ಎಲ್ಲ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಕೈಗಟಕುವ ದರದಲ್ಲಿ …

Read More »

ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜುಗಳ ಸ್ಥಾಪನೆ ಇಲ್ಲ : C.M. ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಮುಸ್ಲೀಂ ಸಮುದಾಯದ ( Muslim community ) ಮಹಿಳೆಯರಿಗೆ ಸರ್ಕಾರದಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದ್ರೇ ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ( College ) ಸ್ಥಾಪನೆ ಚರ್ಚೆಯಾಗಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಹೇಳಿದ್ದಾರೆ.     ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ …

Read More »

ಅವ್ರಿವ್ರು ಸಹಾಯ ಮಾಡಿದ್ರು ಅನ್ನೋದೆಲ್ಲಾ ಸುಳ್ಳು.. ಆ ಪರಿಸ್ಥಿತಿ ನನಗಿನ್ನೂ ಬಂದಿಲ್ಲ”-ರವಿಚಂದ್ರನ್!

ಕ್ರೇಜಿಸ್ಟಾರ್ ರವಿಚಂದ್ರನ್ ಅವರದ್ದು ಏನೇ ಇದ್ದರೂ ನೇರ ನುಡಿ. ಎದುರಿಗೆ ಅದೆಷ್ಟೇ ದೊಡ್ಡ ಮಂದಿ ಇದ್ದರೂ, ಕ್ರೇಜಿ ಸ್ಟಾರ್ ಯಾರಿಗೂ ಕ್ಯಾರೇ ಅನ್ನೋದಿಲ್ಲ. ತಮ್ಮ ಮನಸ್ಸಿಗೆ ಅನಿಸಿದ್ದನ್ನು ಹಾಗೇ ಹೇಳಿ ಬಿಡುತ್ತಾರೆ. ಇದು ಇತ್ತೀಚೆಗಷ್ಟೇ ಬಂದಿಲ್ಲ. ಮೊದಲಿನಿಂದಲೂ ಕ್ರೇಜಿಸ್ಟಾರ್ ಇದ್ದಿದ್ದೇ ಹೀಗೆ.   ಸ್ಯಾಂಡಲ್‌ವುಡ್‌ನಲ್ಲಿ ಇದ್ದಿದ್ದು ಇದ್ದಂಗೆ ಮಾತಾಡೋ ಕೆಲವೇ ಕೆಲವು ನಟರಲ್ಲಿ ರವಿಚಂದ್ರನ್ ಕೂಡ ಒಬ್ಬರು. ಇತ್ತೀಚೆಗೆ ಕ್ರೇಜಿಸ್ಟಾರ್ ತಿಲಲಕ್ಷದೀಪೋತ್ಸವ ಅನ್ನೋ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಭಾಗವಹಿಸಿದ್ದರು. ಈ ವೇಳೆ …

Read More »

ಫ್ರೀಡಂ ಪಾರ್ಕ್‌ನಲ್ಲಿ ಕಬ್ಬು ಬೆಳೆಗಾರ ಪ್ರತಿಭಟನೆ: ಇಟ್ಟಿಗೆ ಹೊತ್ತು ಆಕ್ರೋಶ

ಬೆಂಗಳೂರು: ಕಬ್ಬಿಗೆ ‘ನ್ಯಾಯ ಸಮ್ಮತ ಹಾಗೂ ಪ್ರೋತ್ಸಾಹದಾಯಕ ದರ’ (ಎಫ್‌ಆರ್‌ಪಿ) ನಿಗದಿಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಬುಧವಾರ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು.   ಅರೆಬೆತ್ತಲೆಯಾಗಿ ತಲೆಯ ಮೇಲೆ ಸಿಮೆಂಟ್‌ ಇಟ್ಟಿಗೆ ಹೊತ್ತು ಪ್ರತಿಭಟಿಸಿದರು. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಗುರುವಾರ ಸಂಜೆಯೊಳಗೆ ಕಬ್ಬು ಬೆಳೆಗಾರರ ಬೇಡಿಕೆ …

Read More »

ಗಡಿ ವಿವಾದ: ರಾಜಕೀಯ ಮಾತುಕತೆ ಸಾಧ್ಯವಿಲ್ಲ- H.K.ಪಾಟೀಲ

ಗದಗ: ‘ಗಡಿ ವಿಷಯವಾಗಿ ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆದಿದೆ. ಅಲ್ಲಿನ ಕೆಲವು ರಾಜಕಾರಣಿಗಳು ಈ ವಿಷಯವನ್ನು ಅನವಶ್ಯಕವಾಗಿ ಎತ್ತಿದ್ದಾರೆ. ಯಥಾ ಸ್ಥಿತಿ ಕಾಯ್ದುಕೊಳ್ಳುವುದು ಇಲ್ಲವೇ ಮಹಾಜನ ವರದಿ ಜಾರಿಗೆ ಆಗ್ರಹಿಸಬೇಕು ಎಂಬುದು ರಾಜ್ಯದ ನಿಲುವಾಗಿದೆ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್.ಕೆ.ಪಾಟೀಲ ಒತ್ತಾಯಿಸಿದರು.   ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಈಗಾಗಲೇ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಈ ಕುರಿತು ಸರ್ನಾನುಮತದ ನಿರ್ಣಯ ಮಾಡಿದ್ದೇವೆ. ಯಾವುದೇ …

Read More »

ಗೋಕರ್ಣಕ್ಕೆ ವಿದೇಶಿ ಪ್ರವಾಸಿಗರ ಆಗಮನ: ಕೋವಿಡ್‌ ಕಾರಣದಿಂದ ಮಂಕಾಗಿದ್ದ ಟೂರಿಸಂ

ಗೋಕರ್ಣ: ‍ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಗೋಕರ್ಣಕ್ಕೆ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರಲು ಆರಂಭಿಸಿದ್ದಾರೆ. ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ನೆಲಕಚ್ಚಿದ್ದ ಪ್ರವಾಸೋದ್ಯಮವು, ವಿದೇಶಿಗರ ಬರುವಿಕೆಯಿಂದ ಹೊಸ ಹುರುಪು ಹುಟ್ಟಿಸಿದೆ.   ಶಿವನ ನಾಡಿಗೆ ವಿದೇಶಿಗರು ಮನಸೋತಿದ್ದಾರೆ. ಇಲ್ಲಿಯ ಪ್ರಾಕೃತಿಕ ಸೌಂದರ್ಯ, ಸಂಪ್ರದಾಯಬದ್ಧ ಆಚರಣೆಗಳು ಪ್ರತಿ ವರ್ಷವೂ ಬರುವಂತೆ ಪೇರೇಪಿಸುತ್ತಿದೆ. ಓಂ ಬೀಚ್, ಕುಡ್ಲೆ ಬೀಚ್ ಹಾಗೂ ಮೇನ್ ಬೀಚ್‌ಗಳಲ್ಲಿ ವಿದೇಶಿಗರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಬ್ರಿಟನ್, ಫ್ರಾನ್ಸ್, ಇಟಲಿ, …

Read More »

ಚುನಾವಣೆ ಬರುತ್ತಿದ್ದಂತೆ ಕಾಂಗ್ರೆಸ್ ಟೂಲ್‌ಕಿಟ್ ಸುದ್ದಿಗಳು ಆರಂಭವಾಗಿವೆ: ಬಿಜೆಪಿ

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ನ ಟೂಲ್‌ಕಿಟ್ ಸುದ್ದಿಗಳು ಆರಂಭವಾಗಿವೆ. ಅದರಲ್ಲಿ ಒಂದು ‘ಪ್ರತ್ಯೇಕ ಮುಸ್ಲಿಂ ಕಾಲೇಜು’ ಸುದ್ದಿ ಎಂದು ಬಿಜೆಪಿ ಆರೋಪಿಸಿದೆ. ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್‌ಗೆ ಕೆಲಸವೂ ಇಲ್ಲ’ ಎಂದು ಕಿಡಿಕಾರಿದೆ.   ಪ್ರತ್ಯೇಕ ಕಾಲೇಜು ತೆರೆಯುವ ಬಗ್ಗೆ ಚರ್ಚೆಯಾಗಿಲ್ಲ: ಸಿಎಂ ಬೊಮ್ಮಾಯಿ ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು, …

Read More »

ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿಗೆ ಥಳಿತ: ಪೊಲೀಸರಿಂದ ರಾಜ್ಯ ದ್ರೋಹ -ಎಚ್‌ಡಿಕೆ

ಬೆಂಗಳೂರು: ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಬುಧವಾರ ನಡೆದ ಕಾಲೇಜು ಹಬ್ಬದಲ್ಲಿ ಕನ್ನಡ ಧ್ವಜ ಹಿಡಿದು ಕುಣಿದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು …

Read More »

ಟಿಳಕವಾಡಿಯ ರೈಲ್ವೆ ಮೂರನೇ ಗೇಟ ಮೇಲ್ಸೇತುವೆಯಲ್ಲಿ ,ಕಾರು- ಬೈಕುಗಳ ಮಧ್ಯೆ ಡಿಕ್ಕಿ: ಮೂವರಿಗೆ ಗಾಯ

ಬೆಳಗಾವಿ: ಇಲ್ಲಿನ ಟಿಳಕವಾಡಿಯ ರೈಲ್ವೆ ಮೂರನೇ ಗೇಟಿನ ರಸ್ತೆ ಮೇಲ್ಸೇತುವೆಯಲ್ಲಿ ಗುರುವಾರ ಕಾರ್ ಹಾಗೂ ಎರಡು ಬೈಕುಗಳ ಮಧ್ಯೆ ಮುಖಿಮುಖಿ ಡಿಕ್ಕಿ ಸಂಭವಿಸಿ ಮೂವರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಕಡೆಯಿಂದ ಗೋವಾ ಕಡೆಗೆ ಹೊರಟಿದ್ದ ಕಾರ್ ಎದುರಿನಿಂದ ಬರುತ್ತಿದ್ದ ಎರಡು ಬೈಕುಗಳಿಗೆ ಗುದ್ದಿತು. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಪುಟಿದು, ರಸ್ತೆ ತಡೆಯ ಮೇಲಿಂದ ಹಾರಿ 15 ಅಡಿ ಅಂತರದಿಂದ ಕೆಳಗೆ ಬಿದ್ದರು. ಕಾರ್ ಕೂಡ ರಸ್ತೆ …

Read More »