ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಂಗಳವಾರ(ಜೂನ್ 4) ಸಂಜೆ ತಡವಾಗಿ UGNEET-2024 ಫಲಿತಾಂಶ ಪ್ರಕಟಿಸಿದ್ದು, ಅಖಿಲ ಭಾರತ ಮಟ್ಟದಲ್ಲಿ ಮೊದಲ ರ್ಯಾಂಕ್ ಗಳಿಸಿದ 67 ಟಾಪರ್ಗಳಲ್ಲಿ ರಾಜ್ಯದ ಮೂವರು ಇದ್ದಾರೆ. ರಾಜ್ಯದ ಕಲ್ಯಾಣ್ ವಿ, ಸ್ಯಾಮ್ ಶ್ರೇಯಸ್ ಜೋಸೆಫ್ ಮತ್ತು ಅರ್ಜುನ್ ಕಿಶೋರ್ ಅವರು ಶೇ. 99.99 ಅಂಕ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಅಗ್ರ ಸ್ಥಾನ ಪಡೆದಿದ್ದಾರೆ. ಕರ್ನಾಟಕದಿಂದ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 89,088 …
Read More »ರಾಜೀನಾಮೆ ನೀಡಲು ಮುಂದಾದ ಮಹಾರಾಷ್ಟ್ರ ಡಿಸಿಎಂ! ಫಡ್ನವೀಸ್
ಮುಂಬೈ: ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ (Maharashtra state politics) ಮತ್ತೆ ಹೈಡ್ರಾಮಾ ಶುರುವಾಗಿದೆ. ಒಂದೆಡೆ ಏಕನಾಥ್ ಶಿಂಧೆ (Eknath Shinde) ಬಣದ ಶಿವಸೇನೆ (Shiva Sena) ನೂತನ ಸಂಸದರನ್ನು ಸೆಳೆಯಲು ಉದ್ಧವ್ ಠಾಕ್ರೆ (Uddhav Thackeray) ಬಣ ಪ್ರಯತ್ನಿಸುತ್ತಿದೆ ಎಂಬ ಮಾತು ಕೇಳಿ ಬಂದಿದೆ. ಅದರ ನಡುವೆ ಇದೀಗ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ (DCM) ಸ್ಥಾನಕ್ಕೆ ರಾಜೀನಾಮೆ ನೀಡಲು ದೇವೇಂದ್ರ ಫಡ್ನವೀಸ್ (Devendra Fadnavis) ಮುಂದಾಗಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ …
Read More »ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ
ನವದೆಹಲಿ: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಬುಧವಾರ ರಾಜೀನಾಮೆ ಸಲ್ಲಿಸಿದರು. ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆ ಪತ್ರ ಸ್ವೀಕರಿಸಿದ ದ್ರೌಪದಿ ಮುರ್ಮು ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೂ ಪ್ರಧಾನಿಯಾಗಿ ಮುಂದುವರಿಯುವಂತೆ ಅವರು ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ನಿನ್ನೆ ಕೇಂದ್ರ ಸಚಿವ ಸಂಪುಟವು 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿತ್ತು. ಪ್ರಸ್ತುತ …
Read More »ಅನ್ನಭಾಗ್ಯ; 25,386 ಪಡಿತರದಾರರು ವಂಚಿತ
ಹುಬ್ಬಳ್ಳಿ: ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಖಾತೆಯಲ್ಲಿ ಹೆಸರು ಹೊಂದಾಣಿಕೆ ಆಗದೆ ಕಾರಣ ಜಿಲ್ಲೆಯ 25,386 ಪಡಿತರದಾರರು ‘ಅನ್ನಭಾಗ್ಯ’ ಯೋಜನೆಯಿಂದ ವಂಚಿತರಾಗಿದ್ದಾರೆ. ಒಟ್ಟು 3.51 ಲಕ್ಷ ಜನ ಯೋಜನೆಯ ಲಾಭ ಪಡೆದಿದ್ದಾರೆ. 2023ರ ಜುಲೈನಿಂದ ಅನುಷ್ಠಾನಗೊಂಡ ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆಯುವ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿ ಅಕ್ಕಿ ಬದಲು ಪ್ರತಿ ಕೆಜಿಗೆ ₹34ರಂತೆ ಒಬ್ಬ ಸದಸ್ಯನಿಗೆ ₹170 ಅನ್ನು ಖಾತೆಗೆ …
Read More »ದಿಲ್ಲಿ ಗದ್ದುಗೆ ಏರಲು ‘NDA-INDIA’ ಭರ್ಜರಿ ಕಸರತ್ತು : ನಿತೀಶ್, ನಾಯ್ಡು ಮೇಲೆ ನಿಂತಿದೆ ಮೋದಿ ಭವಿಷ್ಯ!
ನವದೆಹಲಿ : ನಿನ್ನೆ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್ ಡಿ ಎ ಈ ಬಾರಿ 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮೋದಿ ಹೇಳಿದರು. ಆದರೆ ಕೇವಲ 294 ಸ್ಥಾನಗಳನ್ನು ಪಡೆಯುವಲ್ಲಿ ಸಫಲವಾಯಿತು.ಅದೇ ರೀತಿ ಇಂಡಿಯಾ ಮೈತ್ರಿಕೂಟ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನ ಪಡೆದುಕೊಂಡು ಬಿಜೆಪಿಗೆ ಶೆಡ್ಡು ಹೊಡೆದಿದೆ ಇದೀಗ ದಿಲ್ಲಿ ಗದ್ದುಗೆ ಏರಲು ಎನ್.ಡಿ.ಎ ಹಾಗೂ ಇಂಡಿಯಾ ಮೈತ್ರಿ ಕೂಟ ಕಸರತ್ತು ನಡೆಸುತ್ತಿದ್ದು ಇಂದು ಎರಡು ಪಕ್ಷಗಳು ಮಹತ್ವದ ಸಭೆ …
Read More »ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಕರೆ ಮಾಡಿ ಇಂಡಿಯಾ ಬ್ಲಾಕ್ ಸೇರಲು ಆಫರ್ ನೀಡಿದ ಶರದ್ ಪವಾರ್
ನವದೆಹಲಿ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಚುನಾವಣಾ ಫಲಿತಾಂಶಗಳು ಎನ್ಡಿಎ ಮತ್ತು ಭಾರತ ಬಣದ ನಡುವೆ ಬಿಗಿಯಾದ ಸ್ಪರ್ಧೆಯನ್ನು ತೋರಿಸಿದ ನಂತರ ಗುರುವಾರ ಮಧ್ಯಾಹ್ನ ಈ ಕರೆಗಳನ್ನು ಮಾಡಿದರು, ಎನ್ಡಿಎ ಪ್ರತಿಪಕ್ಷಗಳ ಮೈತ್ರಿಕೂಟಕ್ಕಿಂತ ಸ್ವಲ್ಪ ಮೇಲುಗೈ ಸಾಧಿಸಿದೆ. ನಿತೀಶ್ …
Read More »ಸೋತಲ್ಲಿ ಸಚಿವರ ತಲೆದಂಡ ಸಾಧ್ಯವೇ: ಜಗದೀಶ ಶೆಟ್ಟರ್ ಪ್ರಶ್ನೆ
ಬೆಳಗಾವಿ: ‘ಕಾಂಗ್ರೆಸ್ ಸೋತ ಕಡೆಯಲೆಲ್ಲ ಸಚಿವರ ತಲೆದಂಡ ಸಾಧ್ಯವೇ? ಹೀಗೆ ತಲೆದಂಡ ಮಾಡಿದರೆ, ರಾಜ್ಯ ಸರ್ಕಾರವೇ ತಲೆದಂಡ ತೆರಬೇಕಾಗುತ್ತದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು. ‘ಸಚಿವರ ಮಕ್ಕಳು, ಬಂಧುಗಳಿಗೆ ಟಿಕೆಟ್ ಕೊಟ್ಟು ತಂತ್ರ ಹೂಡಿದ ಕಾಂಗ್ರೆಸ್ ಈಗ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಗೊತ್ತಿಲ್ಲ. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೇ ನನಗೆ 51 ಸಾವಿರ ಮತ ಮುನ್ನಡೆ ಸಿಕ್ಕಿದೆ. ಅವರ ಯಾವ ಗ್ಯಾರಂಟಿಗಳನ್ನೂ ಜನ ಒಪ್ಪಿಲ್ಲ’ …
Read More »ಬಿಟ್ ಕಾಯಿನ್ ಪ್ರಕರಣ: ಡಿವೈಎಸ್ಪಿ ಮತ್ತೆ ಪರಾರಿ
ಬೆಂಗಳೂರು: ಬಿಟ್ ಕಾಯಿನ್ (ಬಿಟಿಸಿ) ಹಗರಣದ ಸಾಕ್ಷ್ಯಗಳನ್ನು ನಾಶಪಡಿಸಿದ್ದ ಪ್ರಕರಣದ ಆರೋಪಿಯಾಗಿರುವ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರ ಮತ್ತೆ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಎಸ್ಐಟಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ. ಬಿಟ್ ಕಾಯಿನ್ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಬಂಧಿಸಿದ್ದ ಅಂದಿನ ಸಿಸಿಬಿ ಪೊಲೀಸರು, ಆತನಿಂದ ಹಲವು ವಸ್ತುಗಳನ್ನು ಜಪ್ತಿ ಮಾಡಿ ಸಾಕ್ಷ್ಯ ನಾಶಪಡಿಸಿದ್ದರು. ಈ ಸಂಬಂಧ ಅಂದಿನ ಸಿಸಿಬಿ ಇನ್ಸ್ಪೆಕ್ಟರ್ಗಳಾಗಿದ್ದ ಶ್ರೀಧರ್ …
Read More »9 ಸ್ಥಾನ ಗೆಲುವಿಗೆ ಸಿದ್ಧರಾಮಯ್ಯ ಆಡಳಿತ ಕಾರಣ: ಶಾಸಕ ಬಸವರಾಜ ರಾಯರಡ್ಡಿ
ಯಲಬುರ್ಗಾ: ‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿರುವುದನ್ನು ಮೆಚ್ಚಿಕೊಂಡು ರಾಜ್ಯದ ಜನ ಬೆಂಬಲಿಸಿದ್ದರಿಂದ 9 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ’ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ನಿರೀಕ್ಷೆಯಂತೆ ಫಲಿತಾಂಶ ಪ್ರಕಟಗೊಂಡಿದೆ. ಇನ್ನೆರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕಿತ್ತು. ಆದರೆ ಸಾಧ್ಯವಾಗಿಲ್ಲ. ಮುಖ್ಯವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ತರ ಸಾಧನೆಯಾಗಿದೆ. …
Read More »ಲೋಕಸಭಾ ಚುನಾವಣೆ ಫಲಿತಾಂಶ: ಬೆಳಗಾವಿಯಲ್ಲಿ ತಮ್ಮ ತಾಕತ್ತು ತೋರಿಸಿದ ಜಾರಕಿಹೊಳಿ ಬ್ರದರ್ಸ್
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅಂಬರೀಶ್ ಸೋಲು ಕಂಡಿದ್ದಾರೆ. ಮೃಣಾಲ್ ಸೋಲಿಸಲು ಜಾರಕಿಹೊಳಿ ಸಹೋದರರು ಸೈಲೆಂಟ್ ಆಗಿ ಸೂತ್ರ ಹೆಣೆದಿದ್ದರು. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಜಗದೀಶ್ ಶೆಟ್ಟರ್ ಗೆಲ್ಲಿಸುವಲ್ಲಿ ಜಾರಕಿಹೊಳಿ ಸಹೋದರರ ಯಶಸ್ವಿ ಆಗಿದ್ದಾರೆ. ಬೆಳಗಾವಿ, ಜೂನ್ 04: ರಾಜ್ಯದ ಪ್ರಭಾವಿ ರಾಜಕೀಯ ಕುಟುಂಬಗಳಲ್ಲಿ ಬೆಳಗಾವಿಯ ಜಾರಕಿಹೊಳಿ ಕುಟುಂಬವೂ …
Read More »
Laxmi News 24×7