Breaking News

Uncategorized

ಭೂಮಾಪಕರ ನೇಮಕಾತಿಗೆ ತಕ್ಷಣ ಕ್ರಮನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಪ್ರತಿಕ್ರಿಯೆ

ಭೂಮಾಪಕರ ನೇಮಕಾತಿಗೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ; ಕಂದಾಯ ಸಚಿವ ಕೃಷ್ಣ ಭೈರೇಗೌಡ ಅನುಮತಿ ಸಿಗುತ್ತಲೇ ನಿಪ್ಪಾಣಿಯಲ್ಲಿ ಸಹಾಯಕ ಭೂದಾಖಲೆಗಳ ನಿರ್ದೇಶಕರ ಕಛೇರಿ ಸ್ಥಾಪನೆ; ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಪ್ರತಿಕ್ರಿಯೆ ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಭೂಮಾಪಕರ ಕೊರತೆಯ ಬಗ್ಗೆ ಶಾಸಕ ಶಶಿಕಲಾ ಜೊಲ್ಲೆ ಅವರು ಪ್ರಶ್ನೆ ಎತ್ತಿದರು. ಈ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಉತ್ತರ ನೀಡಿ, ರಾಜ್ಯದಲ್ಲಿ ಭೂಮಾಪಕರ ಕೊರತೆ ಇದೆ ಎಂಬುದು ಸರಕಾರದ …

Read More »

:ಸ್ಥಳೀಯಜನಪ್ರತಿನಿಧಿಗಳ ಗೌರವಧನ ಕುರಿತು ಸದನದಲ್ಲಿ ಚರ್ಚಿಸಿದ ಎಮ್‌ಎಲ್‌ಸಿ ಸುನೀಲಗೌಡ ಪಾಟೀಲ

ವಿಜಯಪುರ :ಸ್ಥಳೀಯ ಜನಪ್ರತಿನಿಧಿಗಳ ಗೌರವಧನ ಕುರಿತು ಸದನದಲ್ಲಿ ಚರ್ಚಿಸಿದ ಎಮ್‌ಎಲ್‌ಸಿ ಸುನೀಲಗೌಡ ಪಾಟೀಲ : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮಾಡಿದ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಒಪ್ಪಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ …

Read More »

ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ.

ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ. ಕೆ.ಎನ್.ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜಣ್ಣ ಅವರನ್ನು ವಜಾ ಮಾಡಿರುವುದು ಹೈಕಮಾಂಡ್ ನಿರ್ಧಾರ. ಈ ಬಗ್ಗೆ ರಾಜಣ್ಣ ಅವರೇ …

Read More »

ಗರ್ಭ ಧರಿಸಿದ ಬಸವಿ ಹಸುವಿಗೆ ಸೀಮಂತ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸ ಶೀಡೆನೂರು ಗ್ರಾಮದಲ್ಲಿ ಮೂರು ವರ್ಷದ ಹಿಂದೆ ಬಸವಿ ಕರು ಬಿಡಲಾಗಿತ್ತು. ಈ ಕರುವನ್ನು ಎಲ್ಲರೂ ಗೌರಿ ಎಂದು ಮುದ್ದಾಗಿ ಕರೆಯುತ್ತಿದ್ದರು. ಗೌರಿಗೆ ಮೂರು ವರ್ಷ ತುಂಬಿದ್ದರೂ ಗರ್ಭ ಧರಿಸಿಲ್ಲಾ ಎನ್ನುವ ಬೇಸರದಲ್ಲಿದ್ದ ಜನರು ಇದೀಗ ಮರಿ ಗೌರಿಯ ಸಂಭ್ರಮದಲ್ಲಿದ್ದಾರೆ. ಹಸುವಿಗೆ ಸೀಮಂತ: ಜನರ ಬಯಕೆಯಂತೆ ಗೌರಿ ಗರ್ಭ ಧರಿಸಿದ್ದು, ಗ್ರಾಮಸ್ಥರು ಗೌರಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಗೌರಿಗೆ ಅರಿಶಿಣ ಕುಂಕುಮ ಹಚ್ಚಿ, ಹೊಸ ಸೀರೆ …

Read More »

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿ

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು. 2024ರಲ್ಲಿ ಭಾರತೀಯ ಜನತಾ ಪಕ್ಷವೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದು, ಅದನ್ನು ಜನಾದೇಶವೆಂದು ಸ್ವೀಕರಿಸಲಾಗಿದೆ. ಆದರೆ 2019ರಲ್ಲಿ ಜನ ವಿರೋಧಿ ನೀತಿಯಿಂದ ಸೋಲನ್ನು ಅನುಭವಿಸಿ ಅದನ್ನು ಮತಗಳ್ಳತನ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಲಾಯಿತು. ಹಾಗಾದರೆ …

Read More »

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ …

Read More »

ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ

ಆಗಸ್ಟ್​ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು. ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು. 

Read More »

ರಾಜ್ಯ ಶಿಕ್ಷಣ ನೀತಿ ಅಂತಿಮ ವರದಿ ಸಲ್ಲಿಕೆ: ಕನ್ನಡ, ಆಂಗ್ಲ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸು

ರಾಜ್ಯ ಶಿಕ್ಷಣ ನೀತಿ ಅಂತಿಮ ವರದಿ ಸಲ್ಲಿಕೆ: ಕನ್ನಡ, ಆಂಗ್ಲ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸು ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು, ಮಾತೃ ಭಾಷೆ ಕನ್ನಡ ಹಾಗೂ ಇಂಗ್ಲಿಷ್​ ದ್ವಿಭಾಷಾ ನೀತಿಯನ್ನು ಅನುಷ್ಠಾನಗೊಳಿಸುವ ಶಿಫಾರಸಿನೊಂದಿಗೆ ಒಟ್ಟು 97 ಶಿಫಾರಸುಗಳನ್ನು ಮಾಡಿದೆ. ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ಅಕ್ಟೋಬರ್​ 11, 2023ರಂದು ಆದೇಶ ಹೊರಡಿಸಿ ಶಿಕ್ಷಣ ನೀತಿಯನ್ನು ರೂಪಿಸಲು …

Read More »

ಬಾಲಕನ ಅಪಹರಿಸಿ ಬರ್ಬರ ಹತ್ಯೆ ಪ್ರಕರಣ: ಕಿಡ್ನಾಪ್‌ಗೆ ಒಂದು ತಿಂಗಳು ಹಿಂದೆಯೇ ಸಂಚು

ಬಾಲಕನ ಅಪಹರಿಸಿ ಬರ್ಬರ ಹತ್ಯೆ ಪ್ರಕರಣ: ಕಿಡ್ನಾಪ್‌ಗೆ ಒಂದು ತಿಂಗಳು ಹಿಂದೆಯೇ ಸಂಚು ಬೆಂಗಳೂರು: ಹುಳಿಮಾವು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಾಲಕನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಮುಖ ಆರೋಪಿ ಗುರುಮೂರ್ತಿ, ಒಂದು ತಿಂಗಳ ಹಿಂದೆಯೇ ಬಾಲಕನ ಅಪಹರಣಕ್ಕೆ ಸಂಚು ರೂಪಿಸಿದ್ದ ಎಂಬುದು ಪೊಲೀಸ್​ ತನಿಖೆಯಲ್ಲಿ ಬಯಲಾಗಿದೆ. ಜುಲೈ 30ರ ಸಂಜೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಹೋಗುತ್ತಿದ್ದ ಅರಕೆರೆ ಶಾಂತಿನಿಕೇತನ್ …

Read More »

ಶಿರಸಿಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃದ್ದಿ: ಸಚಿವ ದಿನೇಶ್ ಗುಂಡೂರಾವ್

ಶಿರಸಿ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃದ್ದಿ: ಸಚಿವ ದಿನೇಶ್ ಗುಂಡೂರಾವ್ ಕಾರವಾರ: ಕಾರವಾರದ ಜಿಲ್ಲಾ ಆಸ್ಪತ್ರೆಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಲೀನ ಮಾಡಿರುವುದರಿಂದ, ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃಧ್ದಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿರಸಿಯಲ್ಲಿನ …

Read More »