Breaking News

Uncategorized

ಎಸಿಬಿಯ ಅರ್ಧದಷ್ಟು ಹುದ್ದೆಗಳು ಲೋಕಾಯುಕ್ತಕ್ಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸ್‌ ಮತ್ತು ಆಡಳಿತ ವಿಭಾಗದಲ್ಲಿನ ಒಟ್ಟು ಮಂಜೂರಾದ ಹುದ್ದೆಗಳ ಪೈಕಿ ಅರ್ಧದಷ್ಟನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನವೆಂಬರ್‌ 19ರಂದು ಆದೇಶ ಹೊರಡಿಸಿದೆ. ಎಸಿಬಿಯಲ್ಲಿ 121 ಪೊಲೀಸ್‌ ಅಧಿಕಾರಿಗಳು, 324 ಕಾನ್‌ಸ್ಟೆಬಲ್‌ಗಳು ಮತ್ತು ಆಡಳಿತ ವಿಭಾಗದಲ್ಲಿನ ವಿವಿಧ ವೃಂದದ 79 ಹುದ್ದೆಗಳ ಮಂಜೂರಾತಿ ಇತ್ತು. ಈ ಎಲ್ಲ ಹುದ್ದೆಗಳನ್ನೂ ಲೋಕಾಯುಕ್ತದಲ್ಲಿ ವಿಲೀನಗೊಳಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ …

Read More »

ಕೋಳೂರು ಬಸವನಗೌಡ ನಿಧನ

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಕೋಳೂರು ಬಸವನಗೌಡ (89) ಶುಕ್ರವಾರ ನಗರದ ತಮ್ಮ ಮನೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು. 1999ರಿಂದ 2004ರವರೆಗೆ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಬಸವನ ಗೌಡ ಪ್ರತಿನಿಧಿಸಿದ್ದರು. ಕಾಂಗ್ರೆಸ್‌ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅವರು ಆಯ್ಕೆಯಾಗಿದ್ದರು. ಅವರಿಗೆ ಪತ್ನಿ ಕಾಮಾಕ್ಷಮ್ಮ, ವೀರ ಶೈವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಬಿ.ಟಿ. ಪಾಟೀಲ್ ಸೇರಿದಂತೆ ಇಬ್ಬರು ಪುತ್ರರು ಹಾಗೂ …

Read More »

ಮಾಹಿತಿ ಕಳವಿನಲ್ಲಿ ಕೇಂದ್ರವೂ ಶಾಮೀಲು: ಸುರ್ಜೇವಾಲಾ

ಬೆಂಗಳೂರು: ‘ಮತದಾರರ ಮಾಹಿತಿ ಕಳವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೇರವಾಗಿ ಭಾಗಿಯಾಗಿದೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಶುಕ್ರವಾರ ಆರೋಪಿಸಿದರು.   ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್‌ ಮತ್ತು ಅವರ ಆಪ್ತರ ಬ್ಯಾಂಕ್‌ ಖಾತೆಗಳಿಗೆ ಕೇಂದ್ರ ಸರ್ಕಾರದ ಸಿಟಿಜನ್‌ ಸರ್ವಿಸ್‌ ಸೆಂಟರ್‌ ಬ್ಯಾಂಕ್‌ ಖಾತೆಯಿಂದ ಹಣ …

Read More »

ಕಿತ್ತೂರು ತಹಶೀಲ್ದಾರ್‌ ಲೋಕಾಯುಕ್ತ ಬಲೆಗೆ: ಹಲವು ದಾಖಲೆ, ₹10 ಲಕ್ಷ ನಗದು ವಶ

ಬೆಳಗಾವಿ: ಲಂಚ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲೇ ಸಿಕ್ಕಿಬಿದ್ದ ಚನ್ನಮ್ಮನ ಕಿತ್ತೂರು ತಹಶೀಲ್ದಾರ್ ಮನೆ ಹಾಗೂ ಕಚೇರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ತಡರಾತ್ರಿಯೂ ಜಾಲಾಡಿದರು. ಹಲವು ದಾಖಲೆಗಳು ಹಾಗೂ ₹10 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.   ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಅವರ ಮನೆಯಲ್ಲಿ ರಾತ್ರಿಯಿಡೀ ಶೋಧಕಾರ್ಯ ನಡೆಸಲಾಯಿತು. ಆರೋಪಿಗಳು ಬೆಳಗಾವಿಗೆ: ಶುಕ್ರವಾರ ₹2 ಲಕ್ಷ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ತಹಶೀಲ್ದಾರ್‌ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ …

Read More »

ಗೋಕಾಕ ತಾಲೂಕಿನ ಖನಗಾವ ಗ್ರಾಮದ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅ ನ್ನಸಂತರ್ಪಣೆ ಕಾರ್ಯ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಖನಗಾವ ಗ್ರಾಮದ ಡಿ. ಜೀ. ಹಟ್ಟಿಯ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …

Read More »

ವಿಧಾನಸಭಾ ಚುನಾವಣೆ: ಸಮಾವೇಶಗಳತ್ತ ಜನರ ನಿರಾಸಕ್ತಿ, ಚಿಂತೆಯಲ್ಲಿ ಬಿಜೆಪಿ!

ರಾಜ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಹಲವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಜನರ ಹಾಜರಾತಿ ಕಡಿಮೆಯಾಗಿರುವುದು ಪಕ್ಷವು ಚಿಂತೆಗೊಳಗಾಗುವಂತೆ ಮಾಡಿದೆ. ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಹಲವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಜನರ ಹಾಜರಾತಿ ಕಡಿಮೆಯಾಗಿರುವುದು ಪಕ್ಷವು ಚಿಂತೆಗೊಳಗಾಗುವಂತೆ ಮಾಡಿದೆ. ಬಳ್ಳಾರಿಯಲ್ಲಿ ನಡೆದ ಪಕ್ಷದ ಎಸ್ಸಿ/ಎಸ್ಟಿ ಸಮಾವೇಶದಲ್ಲಿ ಜನಸಂದಣಿ ನಿರೀಕ್ಷೆಗಿಂತ ಐದನೇ ಒಂದು ಭಾಗಕ್ಕಿಂತ ಕಡಿಮೆ ಇತ್ತು. ನಿರೀಕ್ಷಿತ ಸಂಖ್ಯೆ ಸುಮಾರು 3 ರಿಂದ 4 ಲಕ್ಷದಷ್ಟಿದ್ದರೆ, 60,000 ಕ್ಕಿಂತ ಕಡಿಮೆ ಜನರು ಸಮಾವೇಶದಲ್ಲಿ ಹಾಜರಿದ್ದರು. …

Read More »

ನಿಪ್ಪಾಣಿ, ಬೆಳಗಾವಿ ಬಿಟ್ಟುಕೊಟ್ಟರೆ, ಕೆಲ ಪ್ರದೇಶ ಕೊಡಲು ಯೋಚಿಸಬಹುದು: ಪವಾರ್

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಎನ್‌ಸಿಪಿ ವರಿಷ್ಠ ಶರದ್‌ ಪವಾರ್, ‘ನಿಪ್ಪಾಣಿ, ಬೆಳಗಾವಿ ಸೇರಿದಂತೆ ಕೆಲ ಊರುಗಳನ್ನು ಬಿಟ್ಟು ಕೊಡಲು ಕರ್ನಾಟಕ ಒಪ್ಪಿದರೆ, ಅದಕ್ಕೆ ಪ್ರತಿಯಾಗಿ ಕೆಲ ಪ್ರದೇಶಗಳನ್ನು ಬಿಟ್ಟು ಕೊಡುವ ಬಗ್ಗೆ ನಾವೂ ಯೋಚಿಸಬಹುದು’ ಎಂದು ಹೇಳಿದ್ದಾರೆ.   ‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದಿಂದ ಬಿಜೆಪಿ ಪಲಾಯನ ಮಾಡಲು ಸಾಧ್ಯವಿಲ್ಲ’ ಎಂದೂ ಅವರು ಪ್ರತಿಪಾದಿಸಿದರು. ವಿರೋಧ ಪಕ್ಷಗಳ ಈ ಟೀಕೆಗಳಿಗೆ ತಿರುಗೇಟು ನೀಡಿರುವ ಉಪಮುಖ್ಯಮಂತ್ರಿ …

Read More »

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮತ್ತೊಂದು ಗುಡ್ ನ್ಯೂಸ್ : 1,915 ಕೋಟಿ ರೂ. `GST’ ಹಣ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು 2022 ರ ಏಪ್ರಿಲ್ ನಿಂದ ಜೂನ್ ವರೆಗಿನ ಉಳಿದ ಜಿಎಸ್ಟಿ ಪರಿಹಾರಕ್ಕಾಗಿ ನವೆಂಬರ್ 25 ರಂದು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2022-23ನೇ ಸಾಲಿನಲ್ಲಿ ಮೇಲೆ ತಿಳಿಸಿದ ಮೊತ್ತ ಸೇರಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಬಿಡುಗಡೆಯಾದ ಒಟ್ಟು ಪರಿಹಾರದ ಮೊತ್ತ ಈಗ 1,15,662 ಕೋಟಿ ರೂ ಆಗಿದೆ. ಇದೇ ವೇಳೆಕರ್ನಾಟಕಕ್ಕೆ 1,915 ಕೋಟಿ GST ಹಣ …

Read More »

ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಮರಾಠ ಅಭ್ಯರ್ಥಿಯೇ ಸಜ್ಜಾಗಿದ್ದಾರೆ.: ರಮೇಶ ಜಾರಕಿಹೊಳಿ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿಯಿಂದ ಮರಾಠ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಜ್ಜಾಗಿದ್ದಾರೆ. ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ ಅವರು, ಹಿಂಡಲಗಾ ಗ್ರಾ.ಪಂ. ಅಧ್ಯಕ್ಷ ನಾಗೇಶ ಮನ್ನೋಳಕರ ಅವರನ್ನು ಜತೆಗೆ ಕರೆದೊಯ್ದು ಮರಾಠ ಸಮಾಜದ ಮುಖಂಡನೆಂದು ಪರಿಚಯಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠ ಸಮುದಾಯ ಮತಗಳು ನಿರ್ಣಾಯಕವಾಗಿದ್ದು, ಸುಮಾರು ಒಂದೂವರೆ ಲಕ್ಷದಷ್ಟು ಮರಾಠಿ ಮತದಾರರು ಇರುವ …

Read More »

ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮ ಪ್ರಕರಣ: ತರಬೇತಿ ಕೇಂದ್ರದ ಮಾಲೀಕನ ಸೆರೆ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕರ ಹುದ್ದೆ ಲಿಖೀತ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗೋಕಾಕನ ಕೋಚಿಂಗ್‌ ಸೆಂಟರ್‌ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ, ಗೋಕಾಕನ ಅಗಸ್ತ್ಯ ಕೋಚಿಂಗ್‌ ಸೆಂಟರ್‌ ಮಾಲೀಕ ಬಾಳೇಶ ಕೆಂಚಪ್ಪ ಕಟ್ಟಿಕಾರ(26) ಎಂಬಾತನನ್ನು ಬಂ ಧಿಸಲಾಗಿದೆ. ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕರ ಹುದ್ದೆ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್‌ ಡಿವೈಸ್‌, ಮೈಕ್ರೋಚಿಪ್‌ ಕೊಟ್ಟು ಉತ್ತರಗಳನ್ನು ಹೇಳಿ ಬರೆಯಿಸುತ್ತಿದ್ದ ಆರೋಪದ ಮೇಲೆ ಬಾಳೇಶನನ್ನು ಬಂಧಿಸಲಾಗಿದೆ. ಪರೀಕ್ಷೆ …

Read More »