Breaking News

Uncategorized

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಅವರು ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು …

Read More »

ಮ.ಹಾ. ಸಚಿವರು ಬೆಳಗಾವಿಗೆ ಆಗಮಿಸಿದ್ರೆ ಆಗುವ ಅನಾಹುತಕ್ಕೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತವೇ ಹೊಣೆ: ದೀಪಕ ಗುಡಗನಟ್ಟಿ ಎಚ್ಚರಿಕೆ

ಡಿ.3ರಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಆಗಮಿಸಿದ್ರೆ ಆ ಸಂದರ್ಭದಲ್ಲಿ ಆಗುವ ಅನಾಹುತಕ್ಕೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತವೇ ಹೊಣೆ ಆಗುತ್ತದೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬುಧವಾರ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಪದಾಧಿಕಾರಿಗಳು ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. …

Read More »

ರಸ್ತೆಯಲ್ಲಿ ಹೋಗೋ ನಾಯಿ ಕೂಡ ಜೆಡಿಎಸ್ ಗೆ ಹೋಗಲ್ಲ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ, ನ.30: ‘ರಸ್ತೆಯಲ್ಲಿ ಹೋಗೋ ನಾಯಿ ಕೂಡ ಜೆಡಿಎಸ್ ಗೆ ಹೋಗಲ್ಲ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಸೇರುತ್ತಾರೆಂಬ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಶಾಸಕ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ರಮೇಶ್ ಜಾರಕಿಹೊಳಿಯವರು ಈ ಸರ್ಕಾರ ತಂದವರು. ಅವರು ಯಾಕೆ ಬಿಜೆಪಿ ಬಿಟ್ಟು ಹೋಗ್ತಾರೆ? ಬಿಜೆಪಿ ಬಿಟ್ಟು ಏನು ಇಲ್ಲದಿರುವ ಜೆಡಿಎಸ್ ಗೆ ಯಾಕೆ ಹೋಗುತ್ತಾರೆ? ಇಬ್ರಾಹಿಂಗೆ …

Read More »

ಬಿಜೆಪಿ ಕ್ರಿಮಿನಲ್ ಅಪರಾಧಗಳನ್ನು ತೊಳೆಯುವ ವಾಷಿಂಗ್ ಮಷಿನ್-ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ನವೆಂಬರ್‌ 30: ರೌಡಿಶೀಟರ್​ ಸೈಲೆಂಟ್​ ಸುನೀಲ ಬಿಜೆಪಿ ನಾಯಕರ ಜೊತೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿರುವುನ್ನು ಕಾಂಗ್ರೆಸ್‌ ಅಸ್ತ್ರವನ್ನಾಗಿ ಮಾಡಿಕೊಂಡಿದ್ದು, ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಗಡಿಪಾರು ಆಗಿದ್ದ ವ್ಯಕ್ತಿಯನ್ನೇ ಪಕ್ಷದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಿದ್ದ ಬಿಜೆಪಿಗೆ ಪುಡಿ ರೌಡಿಗಳೆಲ್ಲ ದೇವರುಗಳಂತೆ ಕಾಣುವುದು ಸಹಜ ವಿಚಾರವೇ. ದೋ ನಂಬರ್ ದಂಧೆ ಮಾಡುವವರೇ ಬಿಜೆಪಿಗೆ ಅದರ್ಶಪುರುಷರು. ಕ್ರಿಮಿನಲ್‌ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ ಲಜ್ಜೆಗೇಡಿತನದ ಪರಮಾವಧಿಯನ್ನು ತಲುಪಿದೆ ಎಂದು ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ ಕಿಡಿಕಾರಿದೆ.   …

Read More »

ತಾನೇ ತೋಡಿದ ಗುಂಡಿಗೆ ಬಿದ್ದ ಮ.ಹಾ.ಸರ್ಕಾರ..!

ವಿಜಯಪುರ: ಮಹಾರಾಷ್ಟ್ರ ಗಡಿ ಅಧ್ಯಾಯ ಅಂತಿಮಗೊಂಡಿದ್ದರೂ ಅನವಶ್ಯಕವಾಗಿ, ತಮ್ಮ ರಾಜಕೀಯ ವಿಷಯಗಳನ್ನು ಮರೆಮಾಚಲು ಕ್ಯಾತೆ ತೆಗೆಯಲಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರಕ್ಕೆ ತನ್ನ ಅಸ್ತ್ರವೇ ತಿರುಗುಬಾಣವಾಗಿದೆ. ಸೋಲಾಪುರದಲ್ಲಿ ಕನ್ನಡಿಗರೇ ಹೆಚ್ಚಿದ್ದಾರೆ. ಅಕ್ಕಲಕೋಟೆ ಹಾಗೂ ಜತ್ತ ತಾಲೂಕಿನಲ್ಲಿ ಕನ್ನಡಿಗರಿದ್ದಾರೆ. ಈ ಎಲ್ಲ ಕನ್ನಡಿಗರು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕೆಂದು ಹೋರಾಟ ಆರಂಭಿಸಿದ್ದು, ಇದೀಗ ಮಹಾರಾಷ್ಟ್ರಕ್ಕೆ ತನ್ನ ಅಸ್ತ್ರವೇ ಮುಳ್ಳಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು …

Read More »

ಕರ್ನಾಟಕ ವಿಧಾನಸಭಾ ಚುನಾವಣೆಗೆ’ ಭರ್ಜರಿ ತಯಾರಿ : 224 ‘ನೋಂದಣಿ ಅಧಿಕಾರಿ’ಗಳ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ( Karnataka Assembly Election 2023 ) ಹಿನ್ನಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ( Central Election Commission – CEC ) ಭರ್ಜರಿ ತಯಾರಿಯನ್ನು ನಡೆಸಿದೆ. ಮುಂಬರುವಂತ ಚುನಾವಣೆಗೂ ಮುನ್ನವೇ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ( Assistant Electoral Registration Officer – AERO ) ನೇಮಿಸಿ ಆದೇಶಿಸಿದೆ.   ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ …

Read More »

ಬಸ್ ಇಲ್ಲ ಪಾಠಕ್ಕಿಂತ ಪ್ರತಿಭಟನೆಯೇ ಅನಿವಾರ್ಯ…!

ಸಂಚಾರ ಮಾಡಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಮಸ್ಯೆ ಹೇಳ ತೀರದಾಗಿದೆ. ತರಗತಿಗೆ ಹಾಜರಾಗುವುದಕ್ಕಿಂತ ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕಾಗಿ ಪರದಾಡುತ್ತಿರುವುದೇ ಹೆಚ್ಚಾಗಿದೆ. ಹೌದು.. ಬಸ್‌ಗಾಗಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಬ್ಯಾಪೂರ ಗ್ರಾಮದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಬಸ್ ಬಿಡದ ಸಾರಿಗೆ ಇಲಾಖೆ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಆಗುತ್ತಿದೆ. ಬಸ್ ಬರದ ಕಾರಣ ತರಗತಿಯಿಂದ ದೂರ ಉಳಿಯುತ್ತಿದ್ದೇವೆ. …

Read More »

ಬೆಳೆಸಾಲದ ಪ್ರಮಾಣ ಶೇ.10 ರಷ್ಟು ಹೆಚ್ಚಳ?; D.C. ನಿತೇಶ್ ಪಾಟೀಲ

ಕಳೆದ ಸಾಲಿನಲ್ಲಿ ಶಿಫಾರಸ್ಸು ಮಾಡಲಾಗಿರುವ ಅಲ್ಪಾವಧಿ ಬೆಳೆಸಾಲದ ಪ್ರಮಾಣವನ್ನು 2023-24 ನೇ ಸಾಲಿಗಾಗಿ ಪ್ರತಿಯೊಂದು ಬೆಳೆಗೆ ಶೇ.10ರಷ್ಟು ಹೆಚ್ಚಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. 2023-24 ನೇ ಸಾಲಿಗಾಗಿ ಬೆಳೆ ಬೆಳೆಯಲು ಬೆಳೆಸಾಲ ಪ್ರಮಾಣ ನಿಗದಿಪಡಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ನ.30) ನಡೆದ ಜಿಲ್ಲಾ ಮಟ್ಟದ ತಾಂತ್ರಿಕ ತಜ್ಞರ ಸಮಿತಿ ಸಭೆಯಲ್ಲಿ …

Read More »

ದೇಶಕ್ಕೆ ಅನ್ನಹಾಕುವ ಅನ್ನದಾತನ ಕಷ್ಟ ಹೇಳ ತೀರದಾಗಿದೆ.

ದೇಶಕ್ಕೆ ಅನ್ನಹಾಕುವ ಅನ್ನದಾತನ ಕಷ್ಟ ಹೇಳ ತೀರದಾಗಿದೆ. ಕೃಷಿ ಕಾಯಕದಲ್ಲಿ ತನಗೆ ಸಾಥ್ ನೀಡುತ್ತಿದ್ದ ಸಾರಥಿಯ ಸಂಕಷ್ಟದಿಂದ ಕಣ್ಣೀರು ಹಾಕುವಂತಾಗಿದೆ. ರೈತ ಸಮುದಾಯದ ಜೀವನಾಡಿ ಜಾನುವಾರುಗಳಿಗೆ ಗಂಟು ಬಿದ್ದಿರುವ ಚರ್ಮ ಗಂಟು ರೋಗ ಧಾರವಾಡ ಜಿಲ್ಲೆಯಲ್ಲಿ ಉಲ್ಬಣಗೊಂಡಿದೆ. ಅಷ್ಟಕ್ಕೂ ಏನಿದು ಸಮಸ್ಯೆ ಅಂತೀರಾ ಈ ಸ್ಟೋರಿ ನೋಡಿ.. ಒಕ್ಕಲಿಗ ಒಕ್ಕಿದರೇ ಉಕ್ಕುವುದು ಜಗವೆಲ್ಲ. ಒಕ್ಕಲಿಗ ಒಕ್ಕದಿದ್ದರೇ ಬಿಕ್ಕುವುದು ಜಗವೆಲ್ಲ ಎಂಬುವಂತ ಮಾತು ಅಕ್ಷರಶಃ ಸತ್ಯ. ಆದರೆ ಈಗ ಒಕ್ಕುವ ರೈತನ …

Read More »

ಗಡಿ ವಿಚಾರಣೆ ಸುಪ್ರೀಂಕೋರ್ಟನಲ್ಲಿ ನಡೆಯಲೇ ಇಲ್ಲ..!

ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಇಂದು ಸುಪ್ರೀಂಕೋರ್ಟ್‍ನಲ್ಲಿ ನಡೆಯಬೇಕಿದ್ದ ವಿಚಾರಣೆ ನಡೆದಿಲ್ಲ ಎನ್ನಲಾಗುತ್ತಿದೆ. ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗಿರುವುದರಿಂದ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇಂದು ಅಂತಿಮ ವಿಚಾರಣೆ ನಡೆದಿಲ್ಲ.

Read More »