ಬೆಂಗಳೂರು, ಜನವರಿ 20: 2023ರ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಗೂ ಮುನ್ನ ಮುಸ್ಲಿಂ ಮತದಾರರನ್ನು ಸೆಳೆಯಲು ಬಿಜೆಪಿ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ. ಎಲ್ಲಾ ಮುಸ್ಲಿಮರು ಕೆಟ್ಟವರು ಎಂದು ಬಿಜೆಪಿ ಎಂದಿಗೂ ಹೇಳಿಲ್ಲ. ಆದರೆ, ಕಾಂಗ್ರೆಸ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ಸಮುದಾಯವನ್ನು ಓಲೈಸುವ ರೀತಿಯಲ್ಲಿ ನಮ್ಮ ಪಕ್ಷ ಎಂದಿಗೂ ತುಷ್ಟೀಕರಣ ರಾಜಕಾರಣ ಮಾಡಿಲ್ಲ …
Read More »ಫೆ.2ರಂದು ಅಭ್ಯರ್ಥಿಗಳು ಅಂತಿಮ: ಡಿ.ಕೆ. ಶಿವಕುಮಾರ್
ಬಾಗಲಕೋಟೆ: ವಿಧಾನಸಭೆ ಚುನಾವಣೆಗೆ ರಾಜ್ಯದ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಚುನಾವಣ ಸಮಿತಿ ಸಭೆಯನ್ನು ಫೆ.2ರಂದು ಕರೆಯಲಾಗಿದೆ. ಸಭೆಯಲ್ಲಿ ಸುದೀಘ್ರವಾಗಿ ಚರ್ಚಿಸಿದ ಬಳಿಕ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅಭ್ಯರ್ಥಿ ಗಳನ್ನು ಬೇಗ ಘೋಷಿಸಲಾಗುವುದು. ಇದಕ್ಕಾಗಿ ಈಗಾಗಲೇ ರಾಜ್ಯದ ಎಲ್ಲ ಕ್ಷೇತ್ರಗಳಿಂದ ಆಕಾಂಕ್ಷಿಗಳ ಅರ್ಜಿ …
Read More »ಜನಾರ್ದನ ರೆಡ್ಡಿಯೇ ನಿಂತರೂ ಬಿಜೆಪಿಯಿಂದ ನಾನು ಸ್ಪರ್ಧಿಸುತ್ತೇನೆ: ಸೋಮಶೇಖರ ರೆಡ್ಡಿ
ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿಯವರೇ ಸ್ವತಃ ಬಂದು ನಿಂತರೂ ನಾನು ಸ್ಪರ್ಧಿಸುವೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಸವಾಲು ಹಾಕುವ ಮೂಲಕ ಬಹಿರಂಗವಾಗಿ ರಣಕಹಳೆ ಮೊಳಗಿಸಿದರು. ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ತಾಳ್ಮೆ ವಹಿಸಿದ್ದರೆ ಜನಾರ್ದನ ರೆಡ್ಡಿ ಪರಿಸ್ಥಿತಿ ಈ …
Read More »ಚುನಾವಣೆ ಸುಗ್ಗಿ ಆರಂಭ: ಇಂದು “ನಾ ನಾಯಕಿ’ ಕಾರ್ಯಕ್ರಮಕ್ಕಾಗಿ ಪ್ರಿಯಾಂಕಾ ಆಗಮನ
ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ನಲ್ಲಿ ವಿಧಾನಸಭೆ ಚುನಾವಣೆಗಾಗಿ ಭರದ ಸಿದ್ಧತೆ ನಡೆಯುತ್ತಿದೆ. ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಇದರಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ನಾಯಕರು ದಿಲ್ಲಿಗೆ ತೆರಳಲಿದ್ದಾರೆ. ಮಹಿಳೆಯರಿಗಾಗಿ ಸೋಮವಾರ ಕಾಂಗ್ರೆಸ್ ‘ನಾ ನಾಯಕಿ’ ಸಮಾವೇಶ ಏರ್ಪಡಿಸಿದ್ದು, ಪ್ರಿಯಾಂಕಾ ವಾದ್ರಾ ಭಾಗವಹಿಸಲಿದ್ದಾರೆ. ‘ರೈತ ಚೈತನ್ಯ’ ಕಾರ್ಯಕ್ರಮ ಹಮ್ಮಿಕೊಂಡಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ‘ರೈತ ಸಂಕ್ರಾಂತಿ’ …
Read More »5ಜಿ ಕಾಲದಲ್ಲೂ ಹಿಂಡಲಗಾ ಜೈಲಿನಲ್ಲಿ 2ಜಿ ಜಾಮರ್!
ಬೆಳಗಾವಿ: 5G ಕಾಲಕ್ಕೆ ನಾವೆಲ್ಲ ಬಂದಿದ್ದರೂ, ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾತ್ರ ಇನ್ನೂ 2ಜಿ ಜಾಮರ್ ಕಾರ್ಯನಿರ್ವಹಿಸುತ್ತಿದೆ. ತಂತ್ರಜ್ಞಾನ ಅಪ್ಡೇಟ್ ಮಾಡದ ಕಾರಣ ಖೈದಿಗಳು ಅಕ್ರಮ ಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಕೊಂಡಿದ್ದಾರೆ. ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹೋದ ಹಿನ್ನೆಲೆಯಲ್ಲಿ ತನಿಖೆ ನಡೆದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದು ಎಲ್ಲರನ್ನೂ ಆಶ್ಚರ್ಯಕ್ಕೆ ಈಡು ಮಾಡಿದೆ. ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮಂಗಳೂರು ಮೂಲದ …
Read More »ಬೆಳಗಾವಿ-ಸಿಕಂದರಾಬಾದ್ ರೈಲು, ಮಂತ್ರಾಲಯ ಭಕ್ತರಿಗೆ ಅನುಕೂಲ
ಬೆಳಗಾವಿ, ಜನವರಿ 15; ನೈಋತ್ಯ ರೈಲ್ವೆಬೆಳಗಾವಿ-ಸಿಕಂದರಾಬಾದ್-ಬೆಳಗಾವಿ ವಿಶೇಷ ರೈಲು ಘೋಷಣೆ ಮಾಡಿದೆ. ಈ ರೈಲು ಸೇವೆಯಿಂದಾಗಿ ಪುಣ್ಯ ಕ್ಷೇತ್ರ ಮಂತ್ರಾಲಯಕ್ಕೆ ಪ್ರಯಾಣ ಮಾಡಲು ಭಕ್ತರಿಗೆ ಅನುಕೂಲವಾಗಲಿದೆ. ಬೆಳಗಾವಿಯ ಬಿಜೆಪಿ ಸಂಸದೆ ಮಂಗಲ ಸುರೇಶ್ ಅಂಗಡಿ ರೈಲು ಸಂಚಾರದ ಬಗ್ಗೆ ಫೇಸ್ಬುಕ್ ಮೂಲಕ ಮಾಹಿತಿ ನೀಡಿದ್ದಾರೆ. ಬೆಳಗಾವಿ-ಸಿಕಂದರಾಬಾದ್-ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 17ರಂದು ಪ್ರಾರಂಭವಾಗಲಿದೆ. ಮಂಗಲ ಸುರೇಶ್ ಅಂಗಡಿ ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕರಿಗೆ ಬೆಳಗಾವಿ-ಸಿಕಂದರಾಬಾದ್ ನಡುವೆ …
Read More »ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. C.M.
ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, …
Read More »ಬಿಜೆಪಿಗೆ ಬಿಗ್ ಶಾಕ್ : ಹಳ್ಳಿ ಹಕ್ಕಿ ‘ವಿಶ್ವನಾಥ್’ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್..!
ರಾಯಚೂರು : ಬಿಜೆಪಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ (H.Vishwanath ) ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ತೊರೆದು ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ . ಈ ಕುರಿತು ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು ನನ್ನ ರಕ್ತವೇ ಕಾಂಗ್ರೆಸ್ ಎಂದಿದ್ದಾರೆ. ಉತ್ತರಾಯಣದಂದು …
Read More »ಸಿದ್ದರಾಮಯ್ಯ ಕ್ಷೇತ್ರ ಘೋಷಣೆ: ಕೋಲಾರವೇ ಅಂತಿಮ?
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು(ಜ.8) ತಾವು ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಆಪ್ತ ಮೂಲಗಳ ಪ್ರಕಾರ, ಸೋಮವಾರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಆ ಬಳಿಕ ನೇರವಾಗಿ ಕೋಲಾರಕ್ಕೆ ತೆರಳಲಿದ್ದಾರೆ. ಆ ಬಳಿಕ ಅಲ್ಲಿನ ಸ್ಥಳೀಯ ಮುಖಂಡರ ಜತೆ ಸೇರಿ ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಲಿದ್ದಾರೆ …
Read More »ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಯಾದವಾಡ. (ತಾ-ಮೂಡಲಗಿ)- ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ ಬೇಗನೇ ಸಾರ್ವಜನಿಕ ಸೇವೆಗೆ ಅರ್ಪಣೆ ಮಾಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತೀಚಿಗೆ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಪರಿಶೀಲನೆ ಮಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮದಲ್ಲಿ ಹೊಸ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಯಾದವಾಡ ಗ್ರಾಮದಲ್ಲಿ ನಿರ್ಮಾಣ ಮಾಡುತ್ತಿರುವ ಈ …
Read More »
Laxmi News 24×7