ಸದಾಕಾಲ ಗಡಿ-ಭಾಷೆ ವಿವಾದದ ಹೆಸರಿನಲ್ಲಿ ಹೋರಾಟ ಮಾಡುತ್ತಿದ್ದ ಎಂಇಎಸ್ ಇದೀಗ ಹಲಗಾ-ಮಚ್ಛೆ ರಿಂಗ್ ರೋಡ್ ನಿರ್ಮಾಣ ವಿರೋಧಿಸಿ ಇದೇ ನ.28ರಂದು ಪ್ರತಿಭಟನೆಗೆ ನಿರ್ಧರಿಸಿದೆ. ಹೌದು ಬೆಳಗಾವಿಯ ರಿಂಗ್ ರೋಡ್ ನಿರ್ಮಾಣಕ್ಕೆ ಬೆಳಗಾವಿ ಸುತ್ತಮುತ್ತಲಿನ ಬಹಳಷ್ಟು ರೈತರು ಫಲವತ್ತಾದ ಜಮೀನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ ರಿಂಗ್ ರೋಡ್ ನಿರ್ಮಾಣಕ್ಕೆ ಸಾಕಷ್ಟು ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ಮಾಡಿದ್ದಾರೆ. ಇದೀಗ ಎಂಇಎಸ್ ಕೂಡ ಇದೇ ನ.28ರಂದು ಧರಣಿ ನಡೆಸಲು ಮುಂದಾಗಿದೆ. ಈ …
Read More »ಕಾರವಾರ: ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಅವಕಾಶ ನೀಡಿ ಎಂದು ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಜಿಲ್ಲೆಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಮರಳು ಕಾರ್ಮಿಕರ ಸಂಘವು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಹಸಿರು ಪೀಠದ ಆದೇಶದಂತೆ ಕರಾವಳಿಯಲ್ಲಿ ಕಳೆದ 2022ರ ಮೇ 18 ರಂದು ಸಾಂಪ್ರದಾಯಿಕವಾಗಿ ಮರಳುದಿಬ್ಬ ತೆರವುಗೊಳಿಸಿ ಸಾಗಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದ ಜಿಲ್ಲೆಯಲ್ಲಿ ಮರಳು ತೆಗೆಯುವುದು ಸ್ಥಗಿತವಾಗಿದೆ. ಜಿಲ್ಲೆಯ ಜನರಿಗೆ ಮರಳು ಲಭ್ಯವಾಗುತ್ತಿಲ್ಲ. ಸದ್ಯ ಮಂಗಳೂರಿನ ಕೆಲವು ಗುತ್ತಿಗೆದಾರರು …
Read More »ಬಣಜಿಗರಿಗೆ ಅವಹೇಳನ ಆರೋಪ: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಪ್ರತಿಭಟನೆ
ಹೊಸಪೇಟೆ (ವಿಜಯನಗರ): ಬಣಜಿಗರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದುರು ಸೇರಿದ ಸಂಘದವರು ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮನವಿ ಪತ್ರ ಸಲ್ಲಿಸಿದರು. ಇತ್ತೀಚೆಗೆ ವಿಜಯಪುರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರು ವಿನಾಕಾರಣ ಬಣಜಿಗ ಸಮಾಜದ ಬಗ್ಗೆ …
Read More »Pro Kabaddi | ಕಬಡ್ಡಿ: ಯೋಧಾಸ್ಗೆ ಗೆಲುವು
ಪುಣೆ : ಪ್ರದೀಪ್ ನರ್ವಾಲ್ (22 ಪಾಯಿಂಟ್ಸ್) ಅವರ ಮಿಂಚಿನ ಆಟದ ನೆರವಿನಿಂದ ಯು.ಪಿ.ಯೋಧಾಸ್ ತಂಡ ಪ್ರೊ ಕಬಡ್ಡಿ ಲೀಗ್ನಲ್ಲಿ ಸುಲಭ ಗೆಲುವು ಪಡೆಯಿತು. ಬಾಳೇವಾಡಿಯ ಶಿವಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಯೋಧಾಸ್ 50-31 ರಲ್ಲಿ ದಬಾಂಗ್ ಡೆಲ್ಲಿ ತಂಡವನ್ನು ಮಣಿಸಿತು. ವಿಜಯಿ ತಂಡ ವಿರಾಮದ ವೇಳೆಗೆ 29-14 ರಲ್ಲಿ ಮುನ್ನಡೆಯಲ್ಲಿತ್ತು. ಪೈರೇಟ್ಸ್- ತಲೈವಾಸ್ ಪಂದ್ಯ ಟೈ: ಪಟ್ನಾ ಪೈರೇಟ್ಸ್ ಮತ್ತು ತಮಿಳ್ ತಲೈವಾಸ್ …
Read More »ದೆಹಲಿ ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮವಿತ್ತ ಹುಬ್ಬಳ್ಳಿ ಮಹಿಳೆ
ನವದೆಹಲಿ: ಕರ್ನಾಟಕದ ಹುಬ್ಬಳ್ಳಿಗೆ ತೆರಳಬೇಕಾಗಿದ್ದ ಮಹಿಳೆ ರಾಷ್ಟ್ರ ರಾಜಧಾನಿ ನವದೆಹಲಿ ವಿಮಾನ ನಿಲ್ದಾಣದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಂಗಳವಾರ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಈ ಘಟನೆ ನಡೆದಿದೆ. ಈ ಮೂಲಕ ನವದೆಹಲಿ ವಿಮಾನ ನಿಲ್ದಾಣಕ್ಕೆ ಅತ್ಯಂತ ಯುವ ಪ್ರಯಾಣಿಕರೊಬ್ಬರು ಆಗಮಿಸಿದಂತೆ ಆಗಿದೆ. ವಿಮಾನಕ್ಕಾಗಿ ಮಹಿಳೆ ಪತಿಯ ಜತೆಗೆ ಕಾಯುತ್ತಿದ್ದರು. ತುಂಬು ಗರ್ಭಿಣಿಯಾಗಿದ್ದ ಅವರು ಶೌಚಾಲಯಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿಯೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಸಮೀಪದಲ್ಲಿಯೇ …
Read More »ದಿನಕ್ಕೆ 10 ಲೀ. ಹಾಲು, ಪ್ರತಿ ಊಟಕ್ಕೆ 1200 ರೂ. ಮೌಲ್ಯದ ತರಕಾರಿ; 72 ಸದಸ್ಯರನ್ನು ಹೊಂದಿರುವ ಅವಿಭಕ್ತ ಕುಟುಂಬ
ಇಡೀ ಜಗತ್ತೇ ವಿಭಕ್ತ ಕುಟುಂಬ ಮಾರ್ಗದತ್ತ ಸಾಗುತ್ತಿರುವಾಗ ಮಹಾರಾಷ್ಟ್ರದ ಸೊಲ್ಲಾಪುರದ ಅಪರೂಪದ ಕುಟುಂಬವೊಂದು ಒಂದೇ ಸೂರಿನಡಿ 72 ಸದಸ್ಯರನ್ನು ಹೊಂದಿದ್ದು ಕಣ್ಮನ ಸೆಳೆಯುತ್ತಿದೆ. ಹಿರಿಯರು, ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಹಾರಾಷ್ಟ್ರದ ಕುಟುಂಬದ ನಾಲ್ಕು ತಲೆಮಾರುಗಳು ಒಂದೇ ಸೂರಿನಡಿ ವಾಸಿಸುತ್ತಿವೆ. ಇದು ಸುಂದರವಾದ ಭಾರತೀಯ ಅವಿಭಕ್ತ ಕುಟುಂಬದ ಉದಾಹರಣೆಯಾಗಿದೆ. ವ್ಯಾಪಾರ ವಹಿವಾಟು ನಡೆಸುತ್ತಿರುವ ಡೊಯಿಜೋಡೆ ಕುಟುಂಬದಲ್ಲಿ 72 ಜನರಿಗೆ ಪ್ರತಿದಿನ 10 ಲೀಟರ್ ಹಾಲು ಬೇಕಾಗುತ್ತದೆ. ಪ್ರತಿ ಊಟಕ್ಕೆ …
Read More »ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು
ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …
Read More »‘ಮುಂಬೈ ವಿರುದ್ಧ ಆಡಲಾರೆ.’: ಐಪಿಎಲ್ ತೊರೆದ ಕೈರನ್ ಪೊಲಾರ್ಡ್
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ ಶ್ರೇಷ್ಠ ವಿದೇಶಿ ಆಟಗಾರರಲ್ಲಿ ಒಬ್ಬರಾದ ಕೈರನ್ ಪೊಲಾರ್ಡ್ ಅವರು ಐಪಿಎಲ್ ಗೆ ವಿದಾಯ ಹೇಳಿದ್ದಾರೆ. ಐಪಿಎಲ್ ನಲ್ಲಿ ಇದುವರೆಗೆ ಕೇವಲ ಮುಂಬೈ ಇಂಡಿಯನ್ಸ್ ಗೆ ಆಡಿರುವ ಪೊಲಾರ್ಡ್ ಕಳೆದ 13 ಸೀಸನ್ ಗಳಲ್ಲಿ ಮುಂಬೈ ತಂಡದ ಆಧಾರ ಸ್ಥಂಭವಾಗಿದ್ದಾರೆ. ಕಳೆದ ಸೀಸನ್ ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಪೊಲಾರ್ಡ್ ಅವರನ್ನು ಈ ಬಾರಿ ಫ್ರಾಂಚೈಸಿ ಉಳಿಸಿಕೊಳ್ಳುವುದಿಲ್ಲ ಎಂಬ ವದಂತಿಗಳ ನಡುವೆ …
Read More »ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡಿ ಹುಕ್ಕೇರಿ ಹಿರೇಮಠ ಶ್ರೀ ಗೋವಾ ಸಿಎಂಗೆ ಮನವಿ
ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದಿಂದ ಎರಡು ಎಕರೆ ಜಾಗ ಕೊಡುವುದಾಗಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕಳೆದ ಬಾರಿ ಇದೇ ವೇದಿಕೆಯಲ್ಲಿ ಭರವಸೆ ನೀಡಿದ್ದರು. ಆದರೆ ಅದು ಈಡೇರಿಲ್ಲ ಎಂದು ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಗೋವಾದ ಬಿಚೋಲಿಯ ಹೀರಾಬಾಯಿ ಸಭಾಗೃಹದಲ್ಲಿ ಕರ್ಮಭೂಮಿ ಕನ್ನಡ ಸಂಘ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ಕನ್ನಡಿಗರ 14 …
Read More »ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ., ಕೋಲಾರದಿಂದ ಸ್ಪರ್ಧೆ ಮಾಡಿದರೂ ಸೋಲು ಖಚಿತ.: ಕಾರಜೋಳ
ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ಕ್ಷೇತ್ರ ಸಿಗುವುದಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ನಡೆಸಿದರೂ ಸೋಲುವುದು ಖಚಿತ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ. ಕೋಲಾರದಿಂದ ಸ್ಪರ್ಧೆ ಮಾಡಿದರೂ ಅವರ ಸೋಲು ಖಚಿತ. ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ ಪರಿಸ್ಥಿತಿ ಯಾವ ರೀತಿ ಬಂದಿದೆ …
Read More »