Breaking News

Uncategorized

ಚುನಾವಣೆ ನೀತಿ ಸಂಹಿತೆಗೂ ಮೊದಲೇ ವರದಿ; ನೌಕರರ ಸಂಘ ಕೋರಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆಯ ನೀತಿಸಂಹಿತೆ ಜಾರಿಗೊಳ್ಳುವ ಮೊದಲು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗಕ್ಕೆ ಮನವಿ ಸಲ್ಲಿಸಿದೆ. ನೌಕರರ ವೇತನ ಹಾಗೂ ಭತ್ಯೆಗಳ ಹೆಚ್ಚಳಕ್ಕೆ ಹಿಂದಿನ ವೇತನ ಆಯೋಗಗಳು ಎರಡು ಹಂತಗಳಲ್ಲಿ ವರದಿ ನೀಡಿವೆ. ಅದರಂತೆ 7ನೇ ವೇತನ ಆಯೋಗವೂ ಫೆಬ್ರುವರಿ ಅಂತ್ಯದ ಒಳಗೆ ವೇತನ ನಿಗದಿ ಸೌಲಭ್ಯದ (ಫಿಟ್‌ಮೆಂಟ್‌) ಪ್ರಥಮ ಹಂತದ ವರದಿ ಸಲ್ಲಿಸಬೇಕು. ರಾಜ್ಯ ಸರ್ಕಾರಿ ನೌಕರರು ಹಾಲಿ ಪಡೆಯುತ್ತಿರುವ …

Read More »

ಡಂಭಾಚಾರದ ವಿರುದ್ಧ ಧ್ವನಿ ಎತ್ತಿದ ಚೌಡಯ್ಯ

ಬೆಳಗಾವಿ: ಅಂಬಿಗರ ಚೌಡಯ್ಯನವರಿಗೆ ಇನ್ನೊಂದು ಹೆಸರು ನಿಜಶರಣರು. ಆಗಿನ ಕಾಲದಲ್ಲಿ ಯಾವುದೇ ವಿಷಯಕ್ಕೆ ರಾಜಿಯಾಗದೇ ಸತ್ಯ ಮತ್ತು ನಿಷ್ಠುರತನದಿಂದ ತಮ್ಮ ವಿಚಾರಗಳನ್ನು ಸಮಾಜಕ್ಕೆ ತಿಳಿಸಿದವರು. ಸಮಾನತೆ ಪ್ರತಿಪಾದಿಸುವ ಮೂಲಕ ಎಲ್ಲರ ಗಮಸೆಳೆದರು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.   ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನರ ಪಾಲಿಕೆ ವತಿಯಿಂದ ಶನಿವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ …

Read More »

ವಿಧಾನಸಭೆ ಚುನಾವಣೆ | ಪ್ರತಿ ಜಿಲ್ಲೆಗೂ ಪ್ರತ್ಯೇಕ ಪ್ರಣಾಳಿಕೆ ಬೊಮ್ಮಾಯಿ

ಬೆಂಗಳೂರು: ಪ್ರತಿ ಜಿಲ್ಲೆಗಳಿಂದಲೂ ಮಾಹಿತಿ ತರಿಸಿಕೊಂಡು ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.   ‘ಪ್ರಣಾಳಿಕೆ ಸಿದ್ಧಪಡಿಸುವುದು, ಬಜೆಟ್‌ ಅಧಿವೇಶನ, ಪಕ್ಷದ ಸಂಘಟನೆ, ಜನ ಸಂಕಲ್ಪ ಯಾತ್ರೆಯ ಮುಂದುವರಿಕೆ, ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಲಾಗಿದೆ. ಶನಿವಾರದಿಂದ (ಜ.21) ಪ್ರಾರಂಭವಾಗುವ ಬೂತ್‌ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ …

Read More »

ದೇವೇಗೌಡರ ಧೂಳಿಗೂ ಸಮಾನವಲ್ಲ ನಳಿನ್ ಕುಮಾರ್ ಕಟೀಲ್‍:H.D.K.

ವಿಜಯಪುರ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ”ದೇವೇಗೌಡರ ಧೂಳಿಗೂ ಸಮಾನವಲ್ಲದ ನೀವು ಮಾತನಾಡಬೇಕಿದ್ದರೆ ಎಚ್ಚರಿಕೆ ಇರಲಿ” ಎಂದು ಕಿಡಿ ಕಾರಿದ್ದಾರೆ.   ದೇವೇಗೌಡರ ಕುಟುಂಬ ಅಧಿಕಾರಕ್ಕಾಗಿ ಚಪ್ಪಲಿಯಲ್ಲಿ ಹೊಡೆದಾಡುತ್ತಿದೆ ಎಂದು ಹೇಳಿಕೆ ನೀಡಿದ್ದ ನಳಿನ್ ಕುಮಾರ್ ವಿರುದ್ಧ ವಿಜಯಪುರ ನಗರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ವಾಗ್ದಾಳಿ ನಡೆಸಿ, ದೇವೇಗೌಡರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಲು ನಿಮಗೆ ಯೋಗ್ಯತೆ ಇಲ್ಲ ಎಂದು ಹರಿಹಾಯ್ದರು. ದೇವೇಗೌಡರ …

Read More »

ಶ್ರೀರಾಮ ಸೇನೆ ಮುಖಂಡನ ಮೇಲೆ ಗುಂಡು: ತನಿಖೆ ಸಿಐಡಿಗೆ ಒಪ್ಪಿಸಿ ಎಂದ ಮುತಾಲಿಕ

ಬೆಳಗಾವಿ: ‘ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಮುರಿಯಬೇಕು ಎಂಬ ಉದ್ದೇಶದಿಂದಲೇ ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತಕರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಅಥವಾ ಸಿಐಡಿಗೆ ಒಪ್ಪಿಸಬೇಕು’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಆಗ್ರಹಿಸಿದರು.   ‘ಈ ಗುಂಡಿನ ದಾಳಿ ವೈಯಕ್ತಿಕ ದ್ವೇಷದಿಂದ ನಡೆದಿದೆ ಎಂದು ಹೇಳುವ ಮೂಲಕ ಪೊಲೀಸರು ದಾರಿ ತಪ್ಪಿಸುತ್ತಿದ್ದಾರೆ. ಇದರಲ್ಲಿ ರಾಜಕೀಯ ಷಡ್ಯಂತ್ರ …

Read More »

ಚುನಾವಣೆ ಹತ್ತಿರದಲ್ಲಿ ಬದಲಾದ ಬಿಜೆಪಿ ವರಸೆ: ಕರ್ನಾಟಕದಲ್ಲಿ ಮುಸ್ಲಿಮರಿಗೆ ಟಿಕೆಟ್‌?

ಬೆಂಗಳೂರು, ಜನವರಿ 20: 2023ರ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಗೂ ಮುನ್ನ ಮುಸ್ಲಿಂ ಮತದಾರರನ್ನು ಸೆಳೆಯಲು ಬಿಜೆಪಿ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ. ಎಲ್ಲಾ ಮುಸ್ಲಿಮರು ಕೆಟ್ಟವರು ಎಂದು ಬಿಜೆಪಿ ಎಂದಿಗೂ ಹೇಳಿಲ್ಲ. ಆದರೆ, ಕಾಂಗ್ರೆಸ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ಸಮುದಾಯವನ್ನು ಓಲೈಸುವ ರೀತಿಯಲ್ಲಿ ನಮ್ಮ ಪಕ್ಷ ಎಂದಿಗೂ ತುಷ್ಟೀಕರಣ ರಾಜಕಾರಣ ಮಾಡಿಲ್ಲ …

Read More »

ಫೆ.2ರಂದು ಅಭ್ಯರ್ಥಿಗಳು ಅಂತಿಮ: ಡಿ.ಕೆ. ಶಿವಕುಮಾರ್‌

ಬಾಗಲಕೋಟೆ: ವಿಧಾನಸಭೆ ಚುನಾವಣೆಗೆ ರಾಜ್ಯದ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಚುನಾವಣ ಸಮಿತಿ ಸಭೆಯನ್ನು ಫೆ.2ರಂದು ಕರೆಯಲಾಗಿದೆ. ಸಭೆಯಲ್ಲಿ ಸುದೀಘ್ರವಾಗಿ ಚರ್ಚಿಸಿದ ಬಳಿಕ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅಭ್ಯರ್ಥಿ ಗಳನ್ನು ಬೇಗ ಘೋಷಿಸಲಾಗುವುದು. ಇದಕ್ಕಾಗಿ ಈಗಾಗಲೇ ರಾಜ್ಯದ ಎಲ್ಲ ಕ್ಷೇತ್ರಗಳಿಂದ ಆಕಾಂಕ್ಷಿಗಳ ಅರ್ಜಿ …

Read More »

ಜನಾರ್ದನ ರೆಡ್ಡಿಯೇ ನಿಂತರೂ ಬಿಜೆಪಿಯಿಂದ ನಾನು ಸ್ಪರ್ಧಿಸುತ್ತೇನೆ: ಸೋಮಶೇಖರ ರೆಡ್ಡಿ

ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿಯವರೇ ಸ್ವತಃ ಬಂದು ನಿಂತರೂ ನಾನು ಸ್ಪರ್ಧಿಸುವೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಸವಾಲು ಹಾಕುವ ಮೂಲಕ ಬಹಿರಂಗವಾಗಿ ರಣಕಹಳೆ ಮೊಳಗಿಸಿದರು.   ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ತಾಳ್ಮೆ ವಹಿಸಿದ್ದರೆ ಜನಾರ್ದನ ರೆಡ್ಡಿ ಪರಿಸ್ಥಿತಿ ಈ …

Read More »

ಚುನಾವಣೆ ಸುಗ್ಗಿ ಆರಂಭ: ಇಂದು “ನಾ ನಾಯಕಿ’ ಕಾರ್ಯಕ್ರಮಕ್ಕಾಗಿ ಪ್ರಿಯಾಂಕಾ ಆಗಮನ

ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ವಿಧಾನಸಭೆ ಚುನಾವಣೆಗಾಗಿ ಭರದ ಸಿದ್ಧತೆ ನಡೆಯುತ್ತಿದೆ. ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಇದರಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ನಾಯಕರು ದಿಲ್ಲಿಗೆ ತೆರಳಲಿದ್ದಾರೆ. ಮಹಿಳೆಯರಿಗಾಗಿ ಸೋಮವಾರ ಕಾಂಗ್ರೆಸ್‌ ‘ನಾ ನಾಯಕಿ’ ಸಮಾವೇಶ ಏರ್ಪಡಿಸಿದ್ದು, ಪ್ರಿಯಾಂಕಾ ವಾದ್ರಾ ಭಾಗವಹಿಸಲಿದ್ದಾರೆ. ‘ರೈತ ಚೈತನ್ಯ’ ಕಾರ್ಯಕ್ರಮ ಹಮ್ಮಿಕೊಂಡಿರುವ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ‘ರೈತ ಸಂಕ್ರಾಂತಿ’ …

Read More »

5ಜಿ ಕಾಲದಲ್ಲೂ ಹಿಂಡಲಗಾ ಜೈಲಿನಲ್ಲಿ 2ಜಿ ಜಾಮರ್!

ಬೆಳಗಾವಿ: 5G ಕಾಲಕ್ಕೆ ನಾವೆಲ್ಲ ಬಂದಿದ್ದರೂ, ಬೆಳಗಾವಿ ‌ಹಿಂಡಲಗಾ ಜೈಲಿನಲ್ಲಿ ಮಾತ್ರ ಇನ್ನೂ 2ಜಿ ಜಾಮರ್ ಕಾರ್ಯನಿರ್ವಹಿಸುತ್ತಿದೆ. ತಂತ್ರಜ್ಞಾನ ಅಪ್ಡೇಟ್‌ ಮಾಡದ ಕಾರಣ ಖೈದಿಗಳು ಅಕ್ರಮ ಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಕೊಂಡಿದ್ದಾರೆ.   ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹೋದ ಹಿನ್ನೆಲೆಯಲ್ಲಿ ತನಿಖೆ ನಡೆದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದು ಎಲ್ಲರನ್ನೂ ಆಶ್ಚರ್ಯಕ್ಕೆ ಈಡು ಮಾಡಿದೆ. ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್​ ಗಡ್ಕರಿಗೆ ಮಂಗಳೂರು ಮೂಲದ …

Read More »