Breaking News

Uncategorized

ಪ್ರಧಾನಿ ಮೋದಿ ಸೂಚನೆ ಮೇರೆಗೆ ಕರ್ನಾಟಕ – ಮಹಾರಾಷ್ಟ್ರ ರಾಜ್ಯಪಾಲರ ಸಭೆ

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಇಂದು ಕೊಲಾಪುರದಲ್ಲಿ ಉಭಯ ರಾಜ್ಯಗಳ ರಾಜ್ಯಪಾಲರ ಸಭೆ ನಡೆಯುತ್ತಿದ್ದು, ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಈ ಸಭೆ ನಡೆಯುತ್ತಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೊಲ್ಲಾಪುರಕ್ಕೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಾಯರಿ ಸ್ವಾಗತಿಸಿದರು. ಕೊಲ್ಲಾಪುರ ನಗರದ ಛತ್ರಪತಿ ಶಿವಾಜಿ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಬೆಳಗ್ಗೆ …

Read More »

ಸಾವಿನ ತನಿಖೆ ಎಲ್ಲ ಆಯಾಮದಲ್ಲೂ ನಡೆಯುತ್ತಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ: ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಬೆಳಗಾವಿ ಜಿಲ್ಲೆಗೆ ಗೃಹಸಚಿವ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್.ಅಶೋಕ, ಸಚಿವ ನಾರಾಯಣ ಗೌಡ ಹಂಪಿಯಿಂದ ನೇರವಾಗಿ ಬೆಳಗಾವಿ ಸುವರ್ಣ ಸೌಧದ ಹೆಲಿಪ್ಯಾಡ್‌ಗೆ ಆಗಮಿಸಿದ್ದಾರೆ. ಈ ವೇಳೆ, ನಾಲ್ವರು ಸಚಿವರನ್ನು ಶಾಸಕ ಅಭಯ ಪಾಟೀಲ್, ಮಾಜಿ ಶಾಸಕ ಸಂಜಯ ಪಾಟೀಲ್ ಸ್ವಾಗತಿಸಿಕೊಂಡರು.   ಪ್ರಧಾನಿಯಿಂದ ಲೋಕಾರ್ಪಣೆ: ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹಸಚಿವ ಆರಗ …

Read More »

ಗೋಕಾಕ ತಾಲೂಕಿನ ಫಾಲ್ಸ್ ದಲ್ಲಿ ಕಾಣಿಸಿಕೊಂಡ ಮೊಸಳೆ.

ಗೋಕಾಕ ಫಾಲ್ಸ್ ದಲ್ಲಿ ಮೊಸಳೆ ಪ್ರತ್ಯೇಕ್ಷ. (ನೇಗಿನಾಳ ತೋಟ ( ತಡಸಲ ತೋಟ ) ಕೆಳೆದ ನಾಲ್ಕು ದಿನಗಳ ಹಿಂದೆ ಕಾಣಿಸಿಕೊಂಡಿತ್ತು ಮೊಸಳೆ. ಮೊಸಳೆ ಪತ್ತೆ ಹಚ್ಚಲು ಅಯೂಬ್ ಖಾನ್ ಟೀಂ ಹಾಗೂ ಅರಣ್ಯ ಇಲಾಖೆ ಸತತ ಪ್ರಯತ್ನ. ಇಂದು ಮತ್ತೆ ಪ್ರತ್ಯೇಕ್ಷವಾದ ಮೊಸಳೆ  ಗೋಕಾಕ ತಾಲೂಕಿನ ಫಾಲ್ಸ್ ದಲ್ಲಿ ಕಾಣಿಸಿಕೊಂಡ ಮೊಸಳೆ. ಮೊಸಳೆ ಪತ್ತೆ ಹಚ್ಚಲು ಶೋಧ ಕಾರ್ಯ ಮುಂದುವರೆದಿದೆ.

Read More »

ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ.: ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿಯಿಂದ ಕಲ್ಲೋಳಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು. ಗುರುವಾರದಂದು ಲೋಕೋಪಯೋಗಿ ಇಲಾಖೆಯಿಂದ 9.60 ಕೋಟಿ ರೂ. ವೆಚ್ಚದ ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಅಭಿವೃದ್ಧಿಯಿಂದ ಕಲ್ಲೋಳಿಯಿಂದ ಸಂಚರಿಸುವ ತುಕ್ಕಾನಟ್ಟಿ ಮತ್ತು ರಾಯಬಾಗ ತಾಲೂಕಿನ ಗ್ರಾಮಗಳಿಗೆ …

Read More »

ಎಂಎಲ್‌ಸಿ ಚುನಾವಣೆ: ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಹಕ್ಕಿಲ್ಲ: ಹೈಕೋರ್ಟ್‌

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್‌ ವಿರುದ್ಧ ಕೇವಲ 6 ಮತಗಳ ಅಂತರದಿಂದ ಸೋತಿದ್ದ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಸಲ್ಲಿಸಿದ್ದ ಚುನಾವಣ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ …

Read More »

ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಎಂದು ಮಗು ಸಮೇತ ಪತ್ನಿಯನ್ನು ಹೊರಗಟ್ಟಿದ ಪತಿ.!

ಮಗು ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಹಾಗೂ ಇದರಿಂದ ಕುಟುಂಬಕ್ಕೆ ಅಪಶಕುನವಾಗಲಿದೆ ಎಂಬ ಮೂಢ ನಂಬಿಕೆಗೆ ಜೋತುಬಿದ್ದ ವ್ಯಕ್ತಿಯೊಬ್ಬ ಮಗು ಹಾಗೂ ಪತ್ನಿಯನ್ನು ಮನೆಯಿಂದ ಹೊರಗಟ್ಟಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.   ಪ್ರಕರಣದ ವಿವರ: ಚನ್ನಪಟ್ಟಣದ ಮಂಜುನಾಥ ಬಡಾವಣೆಯ ವಿನಯ್ ಎಂಬಾತ 2019ರಲ್ಲಿ ಶೃತಿ ಎಂಬವರೊಂದಿಗೆ ವಿವಾಹವಾಗಿದ್ದು, ದಂಪತಿಗೆ ವರ್ಷಗಳ ಬಳಿಕ ಮಗು ಜನಿಸಿತ್ತು. ಮಗು ಮೂಲಾ ನಕ್ಷತ್ರದಲ್ಲಿ ಜನಿಸಿರುವುದರಿಂದ ಕುಟುಂಬಕ್ಕೆ ಕೇಡಾಗಲಿದೆ ಎಂಬ ಮೂಢನಂಬಿಕೆಯಿಂದ ವಿನಯ್ ಮತ್ತು …

Read More »

ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ಜನಾಕ್ರೋಶ: ಜನಪರವಾಗಿರೋದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ?

ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಜನಪರವಾಗಿರೋದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸರ್ಕಾರವನ್ನು ಪ್ರಶ್ನಿಸಲಾಗುತ್ತಿದೆ. ಬೆಳಗಾವಿ: ಜನರ ಮನಸ್ಸು ಗೆದ್ದ ಪ್ರಮಾಣಿಕ, ದಕ್ಷ ಆಡಳಿತಗಾರರಾಗಿದ್ದ ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜನರ ಪರವಾಗಿ ಇರುವುದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸಾಮಾಜಿಕ ಜಾಲತಾಣದಲ್ಲಿ ಚಿಕ್ಕೋಡಿ ಜನರು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡರ ದಿಡೀರ್ ವರ್ಗಾವಣೆ ಮಾಡಿರುವ ಸರ್ಕಾರದ ವಿರುದ್ಧ ಜನರು …

Read More »

ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹೆಚ್ಚು ಒತ್ತುವ ನೀಡುವ ವಿಷಯಗಳ ಮೇಲೆ ಕೇಂದ್ರೀಕರಿಸುವ ಬದಲು ಧ್ಯಾನವನ್ನು …

Read More »

ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಕೊಟ್ಟರೂ ಬೇಡ ಎನ್ನುತ್ತಿದ್ದಾರಂತೆ ಶಾಸಕರು

ಬೆಂಗಳೂರು, : ರಾಜ್ಯದಲ್ಲೀಗ ಮತ್ತೆ ಸಂಪುಟ ವಿಸ್ತರಣೆಯ ಸರ್ಕಸ್ ಪ್ರಾರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿಯೇ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ. ಆದರೆ, ಸಚಿವಾಕಾಂಕ್ಷಿಗಳಲ್ಲಿ ಮಾತ್ರ ಮೊದಲಿನ ಉತ್ಸಾಹ ಕಾಣುತ್ತಿಲ್ಲ. ಎಲ್ಲರ ಚಿತ್ತ ಈಗಾಗಲೇ ಚುನಾವಣೆಯತ್ತ ಬೀರಿದ್ದು, ಸಚಿವ ಸ್ಥಾನ ಯಾರಿಗೆ ಬೇಡ ಎಂಬ ವಾತಾವರಣ ನಿರ್ಮಾಣವಾಗಿದೆಯಂತೆ. ಹೌದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಸಮೀಪಿಸುತ್ತಿದೆ. ಸಚಿವ ಸಂಪುಟ ವಿಸ್ತರಣೆ ಎಂಬುದು ಗಜಪ್ರಸವವವಾಗಿ ಹತ್ತಾರು ಬಾರಿ ದೆಹಲಿಗೆ ಹೋಗಿ …

Read More »

ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    *ಮೂಡಲಗಿ*: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ ಕರ್ನಾಟಕ ರಾಜ್ಯೋತ್ಸವದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಪ್ರತಿಯೊಬ್ಬರೂ ಕನ್ನಡ ಭಾಷೆ, ನಾಡು, ನುಡಿಯ ಬಗ್ಗೆ ಅಭಿಮಾನ ಗೌರವವನ್ನು ಹೊಂದಿರಬೇಕು ಎಂದರು. ಮೂಡಲಗಿಯ ರಾಜ್ಯೋತ್ಸವದ …

Read More »