Breaking News

Uncategorized

ರಾಜ್ಯದ ನೌಕರರು, ಕುಟುಂಬದ ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ‘ಕ್ಯಾಶ್ ಲೆಸ್ ಚಿಕಿತ್ಸೆ’ ಯೋಜನೆ ಜಾರಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ ನೌಕರರು ಕುಟುಂಬದ ಸದಸ್ಯರಿಗೆ ಜನವರಿಯಿಂದ ಕ್ಯಾಶ್ ಲೆಸ್ ಚಿಕಿತ್ಸೆ ಯೋಜನೆ ಜಾರಿಯಾಗಲಿದೆ. ನೌಕರರಿಗೆ ಹಾಗೂ ಅವರ ಕುಟುಂಬದವರಿಗೆ ಇನ್ನೂ ಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೇವೆ ಸಿಗಲಿದೆ. ಮಾರಣಾಂತಿಕ ಕಾಯಿಲೆಗಳು ಸೇರಿ 1,226 ಆರೋಗ್ಯ ಸಮಸ್ಯೆಗಳಿಗೆ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಒಳಗೊಂಡಂತೆ ಸಂಪೂರ್ಣ ನಗದು ರಹಿತ ಚಿಕಿತ್ಸೆ ಸಿಗುವ ಕರ್ನಾಟಕ ರಾಜ್ಯ …

Read More »

ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ 2 ರೂ. ಹೆಚ್ಚಳ

ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 ರೂ. ಹೆಚ್ಚಳದ ಬಗ್ಗೆ ಮಾಹಿತಿ ನೀಡಿ, ಪ್ರತಿ ಲೀಟರ್ ನಂದಿನಿ ಹಾಲು ಮತ್ತು ಮೊಸರಿನ ದರ ಎರಡು ರೂಪಾಯಿ ಹೆಚ್ಚಳವಾಗಲಿದೆ. ಹೆಚ್ಚುವರಿ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ವಿವಿಧ ಹಾಲುಗಳ ದರ ಏರಿಕೆ ವಿವರ ನಂದಿನಿ ಟೋನ್ಡ್ ಹಾಲು …

Read More »

ಟಿಕೆಟ್ ಆಕಾಂಕ್ಷಿಗಳಿಗೆ ಪ್ರಮಾಣ ವಚನ ಬೋಧಿಸಿ ಅಚ್ಚರಿ ಮೂಡಿಸಿದ ಸಿಎಂ

ದಾವಣಗೆರೆ: ಹರಿಹರದಲ್ಲಿ ಬುಧವಾರ ಮಧ್ಯಾಹ್ನ ನಡೆದ ಬಿಜೆಪಿ ಜನ ಜನಸಂಕಲ್ಪ ಯಾತ್ರೆಯ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಎಲ್ಲ ಟಿಕೆಟ್ ಆಕಾಂಕ್ಷಿಗಳನ್ನು ನಿಲ್ಲಿಸಿ, ಟಿಕೆಟ್ ಯಾರಿಗೆ ಕೊಟ್ಟರೂ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವ ಪ್ರಮಾಣ ವಚನ ಬೋಧಿಸಿ ಅಚ್ಚರಿ ಮೂಡಿಸಿದರು.   ಕಾರ್ಯಕ್ರಮದ ವೇದಿಕೆಗೆ ಗಣ್ಯರು ಬರುತ್ತಿದ್ದಂತೆ ಕಾರ್ಯಕರ್ತರ ಗುಂಪುಗಳು ತಮ್ಮ ಮುಖಂಡರ ಫೋಟೋ, ಬಾವುಟ ಹಿಡಿದು ಕೇಕೆ ಹಾಕುತ್ತಿದ್ದರು. ಇದನ್ನು ಕಂಡ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲ …

Read More »

ಮಹಾರಾಷ್ಟ್ರದ ಒಂದು ಹಳ್ಳಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವುದಿಲ್ಲ: ದೇವೇಂದ್ರ ಫಡ್ನವೀಸ್

ಮುಂಬೈ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ನಡುವೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕದ ಮರಾಠಿ ಭಾಷಿಕ ಭಾಗಗಳನ್ನು ತಮ್ಮ ರಾಜ್ಯಕ್ಕೆ ಸೇರಿಸಲಾಗುವುದು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಒಂದೇ ಒಂದು ಹಳ್ಳಿಯೂ ಕರ್ನಾಟಕಕ್ಕೆ ಹೋಗುವುದಿಲ್ಲ. ಬದಲಾಗಿ ಬೆಳಗಾವಿ-ಕಾರವಾರ-ನಿಪ್ಪಾಣಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನೂ ನಮ್ಮ ರಾಜ್ಯಕ್ಕೆ ತರಲು ರಾಜ್ಯ ಸರ್ಕಾರ ಹೋರಾಟ ನಡೆಸಲಿದೆ ಎಂದರು.   ಕರ್ನಾಟಕದೊಂದಿಗಿನ ಗಡಿ ವಿವಾದದ ಬಗ್ಗೆ ಮುಂದುವರಿಯಲು …

Read More »

ಕರ್ನಾಟಕ-ಭಾರತ್‌ ಗೌರವ್‌ ಕಾಶಿ ದರ್ಶನ ಮೂರನೇ ಟ್ರಿಪ್‌ ಜನವರಿಯಲ್ಲಿ: ಸಚಿವೆ ಜೊಲ್ಲೆ

ಬೆಂಗಳೂರು: ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಪ್ರವಾಸಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು, ಇಂದು ಎರಡನೇ ಟ್ರಿಪ್‌ನ ಯಾತ್ರಾರ್ಥಿಗಳಿಗೆ ಆತ್ಮೀಯವಾಗಿ ಬಿಳ್ಕೊಡುಗೆ ನೀಡಲಾಗಿದೆ. ಉತ್ತರ ಭಾರತದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿರುವುದರಿಂದ ಡಿಸೆಂಬರ್‌ ತಿಂಗಳ ಬದಲಾಗಿ ಜನವರಿ ತಿಂಗಳಿನಲ್ಲಿ ಮುಂದಿನ ಟ್ರಿಪ್‌ಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.   ಬುಧವಾರ ಬೆಂಗಳೂರಿನಲ್ಲಿ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲು …

Read More »

ರಾಮತೀರ್ಥ ನಗರದಲ್ಲಿ ಮುಸ್ಲಿಂ ಸಮುದಾಯದ ಸ್ಮಶಾನಕ್ಕೆ ಜಮೀನು ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳಗಾವಿಯ ರಾಮತೀರ್ಥ ನಗರದಲ್ಲಿ ಮುಸ್ಲಿಂ ಸಮುದಾಯದ ಸ್ಮಶಾನಕ್ಕೆ ಜಮೀನು ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ರಾಮರ್ತೀರ್ಥ ನಗರ ಮುಸ್ಲಿಂ ಬಾಂಧವರು ಮುಸ್ಲಿಂ ಕಮ್ಯುನಿಟಿ ವೆಲ್‍ಫೇರ್ ಸೊಸೈಟಿ ನೇತೃತ್ವದಲ್ಲಿ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. : ಈ ವೇಳೆ ಮಾತನಾಡಿದ ಮುಸ್ಲಿಂ ಕಮ್ಯುನಿಟಿ ವೆಲ್‍ಫೇರ್ ಸೊಸೈಟಿ ಅಧ್ಯಕ್ಷ ಮಹಮ್ಮದ್ ಜಮೀರುಲ್ಲಾ ಮಾತನಾಡಿ ರಾಮತೀರ್ಥ ನಗರದಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು …

Read More »

ಯಮಕನಮರಡಿ ಮತಕ್ಷೇತ್ರದ ಕಡೋಲಿ‌‌, ಕೇದನೂರ, ಮನ್ನಿಕೇರಿ ಹಾಗೂ ಹಂದಿಗನೂರ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ

ಯಮಕನಮರಡಿ ಮತಕ್ಷೇತ್ರದ ಕಡೋಲಿ‌‌ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇದನೂರ, ಮನ್ನಿಕೇರಿ ಹಾಗೂ ಹಂದಿಗನೂರ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಯಿತು. ಮಣ್ಣಿಕೇರಿ ಗ್ರಾಮದಲ್ಲಿ 15 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಮತ್ತು 25 ಲಕ್ಷ ರೂ. ಸಿಸಿ ರಸ್ತೆ, ಕೇದನೂರ ಗ್ರಾಮದಲ್ಲಿ 3.50 ಕೋಟಿ ರೂ. ವೆಚ್ಚದಲ್ಲಿ ಕೇದನೂರ ದಿಂದ ಹೈವೆ ರಸ್ತೆವರೆಗೆ ಡಾಂಬರೀಕರಣ, ಬ್ರಹ್ಮಲಿಂಗ ಗಲ್ಲಿ 20 ಲಕ್ಷ ರೂ. ಸಿ.ಸಿ. ರಸ್ತೆ, …

Read More »

ಕ್ಷುಲ್ಲಕ ಕಾರಣಕ್ಕಾಗಿ ಓರ್ವನ ಮೇಲೆ ಸುಮಾರು ನಾಲ್ವರು ಜನರ ಗುಂಪು ಮಾರಣಾಂತಿಕವಾಗಿ ಹಲ್ಲೆ

ಕ್ಷುಲ್ಲಕ ಕಾರಣಕ್ಕಾಗಿ ಓರ್ವನ ಮೇಲೆ ಸುಮಾರು ನಾಲ್ವರು ಜನರ ಗುಂಪು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಭಾಗ್ಯನಗರ ಮೊದಲನೇ ಕ್ರಾಸ್‍ನಲ್ಲಿರುವ ದತ್ತ ಮಂದಿರ ಹತ್ತಿರ ಈ ಘಟನೆ ನಡೆದಿದ್ದು. ಅಶೀಶ್ ಶೆಣವೆ ಎಂಬ ವ್ಯಕ್ತಿ ಹಲ್ಲೆಗೆ ಒಳಗಾದವರು. ಹಲ್ಲೆಗೆ ಒಳಗಾದ ಅಶೀಶ್ ಕಸ ಚೆಲ್ಲಲು ಹೋಗಿದ್ದರು ಈ ಸಂದರ್ಭದಲ್ಲಿ ಆಯ ತಪ್ಪಿ ಅಲ್ಲಿ ಹೋಗುವ ದ್ವಿಚಕ್ರ ವಾಹನಕ್ಕೆ ಅವನ …

Read More »

ನಮ್ಮ ಮಾಸಾಶನ 5 ಸಾವಿರ ರೂಪಾಯಿಗೆ ಹೆಚ್ಚಿಸಿ ದಿವ್ಯಾಂಗರ ಪ್ರತಿಭಟನೆ

ಮಾಸಾಶನ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ದಿವ್ಯಾಂಗರು ಪ್ರತಿಭಟನೆ ನಡೆಸಿದರು. ಹೌದು ಬುಧವಾರ ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಅಂಗವಿಕಲರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ದಿವ್ಯಾಂಗ ಉಮೇಶ ರೊಟ್ಟಿ ಅವರು ದೈಹಿಕವಾಗಿ ಶೇ.75ರಿಂದ ಶೇ.100ರಷ್ಟು ಅಂಗವಿಕಲತೆ ಇರುವ ಜನರಿಗೆ ಪ್ರಸ್ತುತ ಈಗಿರುವ ಮಾಸಾಶನ 1400 ರೂಪಾಯಿ ಯಾವುದಕ್ಕೂ …

Read More »

ಕಾರ್ತಿಕ ಅಮವಾಸ್ಯೆ ನಿಮಿತ್ಯ ಬೆಳಗಾವಿಯ ಪಂಚವಟಿ ಸೋನ್ಯಾ ಮಾರುತಿ ಮಂದಿರದಲ್ಲಿ ಮಹಾಪ್ರಸಾದ

ಬೆಳಗಾವಿಯ ಪಂಚವಟಿ ಸೋನ್ಯಾ ಮಾರುತಿ ಮಂದಿರದಲ್ಲಿ ಕಾರ್ತಿಕ ಅಮವಾಸ್ಯೆ ನಿಮಿತ್ಯ ಮಹಾಪ್ರಸಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೌದು ಬುಧವಾರ ಕಾರ್ತಿಕ ಅಮವಾಸ್ಯೆ ನಿಮಿತ್ಯ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಪಂಚವಟಿ ಸೋನ್ಯಾ ಮಾರುತಿ ಮಂದಿರದಲ್ಲಿ ಆಂಜನೇಯನಿಗೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಪುನಸ್ಕಾರ ಮಾಡಲಾಯಿತು. ಈ ವೇಳೆ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು. ಬಳಿಕ ಉತ್ತರ ಶಾಸಕ ಅನಿಲ್ ಬೆನಕೆ ಆಗಮಿಸಿ ಹಣಮಂತ ದೇವರ ದರ್ಶನ …

Read More »