Breaking News

Uncategorized

ಅಂಬೇಡ್ಕರ್ ಪ್ರತಿಮೆ ಧ್ವಂಸ – ಮಹಿಳೆಯರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ನಿಂದಿಸಿ ಕಿರುಚಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪೊಲೀಸರ ವಾಹನದ ಮೇಲೆ ಮಹಿಳೆಯರು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದ ಬಳಿಕ ಪರಿಸ್ಥಿತಿ ಅತೀರೇಕಕ್ಕೆ ತಲುಪಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ವೈರಲ್ ಆಗುತ್ತಿರುವ ವೀಡಿಯೋ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ (Ambedkar Nagar district) ಜಲಾಲ್‍ಪುರದಾಗಿದ್ದು (Jalalpur), ಇತ್ತೀಚೆಗಷ್ಟೇ ಬಿ.ಆರ್. ಅಂಬೇಡ್ಕರ್ ಪ್ರತಿಮೆ …

Read More »

ನಾಳೆಯಿಂದ – ಗುರುವಾರದವರೆಗೆ ಅಪ್ಪು ʼಗಂಧದ ಗುಡಿʼ ರಿಯಾಯಿತಿ ದರದಲ್ಲಿ ಪ್ರದರ್ಶನ

ಬೆಂಗಳೂರು: ಅಮೋಘ ವರ್ಷ ನಿರ್ದೇಶನದ ಅಪ್ಪು ಅಭಿನಯದ ʼಗಂಧದ ಗುಡಿʼ ಸಾಕ್ಷ್ಯ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿರಂಗ, ಪ್ರೇಕ್ಷಕರು ಸಾಕ್ಷ್ಯ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ನಮ್ಮ ನಾಡಿನ ಜೀವ ವೈವಿಧ್ಯತೆಯನ್ನು ಸಾರುವ ʼಗಂಧದ ಗುಡಿʼಯನ್ನು ಎಲ್ಲರೂ ನೋಡಬೇಕು ಮಕ್ಕಳಿಗೆ ಉಚಿತವಾಗಿ ಸಾಕ್ಷ್ಯ ಚಿತ್ರವನ್ನು ತೋರಿಸಬೇಕೆನ್ನುವ ಕೂಗು ಕೇಳಿ ಬಂದಿತ್ತು. ಈ ಮಾತಿಗೆ ಸ್ವತಃ ಅಪ್ಪು ಪತ್ನಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್ ಅವರು ಸ್ಪಂದಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ನಲ್ಲಿ …

Read More »

ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು

ಬೆಂಗಳೂರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.   ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.   ಖರ್ಗೆ …

Read More »

ಅಲೋಕ್ ಕುಮಾರ್ ಯಾರು?.. ಪೊಲೀಸರ ಜೊತೆಗೆ ಶಾಸಕ ರೇಣುಕಾಚಾರ್ಯ ವಾಗ್ವಾದ … ವಿಡಿಯೋ!

ದಾವಣಗೆರೆ: ಸಹೋದರ ಮಗ ಚಂದ್ರು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇದೇ ವೇಳೆ ರೇಣುಕಾಚಾರ್ಯ ಹೊನ್ನಾಳಿ ಪೊಲೀಸ್​ ಠಾಣೆಯ ಸಿಪಿಐ ಸಿದ್ದನಗೌಡರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.   ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಸೊರಟೂರು ಬಳಿಯ ತುಂಗಾ ಕಾಲುವೆಯಲ್ಲಿ ಮೃತ ಚಂದ್ರು ಶವದೊಂದಿಗೆ ಪತ್ತೆಯಾದ ಕಾರನ್ನು ಈಗಾಗಲೇ ಪೋಲಿಸರ ವಶದಲ್ಲಿದೆ. ಚಂದ್ರು ಶವವಾಗಿ ಪತ್ತೆಯಾದ ಕಾರನ್ನು ಹೊನ್ನಾಳಿ ಪೋಲಿಸ್ ಠಾಣೆ ಬಳಿ ನಿಲ್ಲಿಸಲಾಗಿದ್ದು, …

Read More »

ಹುಕ್ಕೇರಿ, ಸವದತ್ತಿ ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಇಲ್ಲ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿಲ್ಲ. ವಿಧಾನಸಭಾ ಚುನಾವಣೆಗೆ ಏಳು ತಿಂಗಳುಗಳು ಬಾಕಿ ಇರುವುದರಿಂದ ಉಪಚುನಾವಣೆ ಘೋಷಣೆ ಮಾಡಿಲ್ಲ ಎಂದು ಹೇಳಲಾಗಿದೆ.   ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ಯಲ್ಲಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಿರಲು ಕೇಂದ್ರ ಚುನಾವಣೆ ಆಯೋಗ ನಿರ್ಧರಿಸಿದಂತಿದೆ. ಬರುವ ವರ್ಷದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ” ಸಾರ್ವತ್ರಿಕ …

Read More »

ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಿ

ಬೆಳಗಾವಿ : ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕೇಂದ್ರೀಯ ಬಸ್‌ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸೈಕಲ್‌ ರ್‍ಯಾಲಿ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೂಟದ ಅಧ್ಯಕ್ಷ ಆರ್‌. …

Read More »

ಹವಾಮಾನ ಪ್ರತಿಕೂಲ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ರಾಷ್ಟ್ರದ ರಾಜಧಾನಿಯ ಹವಾಮಾನ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಸಾಗಿದೆ. ಗಾಳಿಯ ಗುಣಮಟ್ಟ ಅಪಾಯಕಾರಿ ಹಂತ ತಲುಪಿರುವ ಹಿನ್ನೆಲೆಯಲ್ಲಿ 8 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ದೆಹಲಿಯ ಹವಾಮಾನ ಸಿಗರೇಟ್ ಹೊಗೆಗಿಂತ ಮಾರಕವಾಗಿದೆ ಎಂದು ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ. ತಂಬಾಕಿನ ಹೊಗೆಯಷ್ಟೇ ಅಪಾಯಕಾರಿಯಾಗಿರುವ ಈ ಹವೆ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ವಿಶ್ವದ ಅತ್ಯಂತ ಮಾಲಿನ್ಯ …

Read More »

1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ(ಹಂತ-4)ಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.   ನಾಗನೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು …

Read More »

ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಪ್ರಭಾಕರ ಕೋರೆ

ಚಿಕ್ಕೋಡಿ(ನ.05): ಅಖಂಡ ಕರ್ನಾಟಕವಾಗಬೇಕೆಂದು ಕನಸು ಕಂಡವರು ಉತ್ತರ ಕರ್ನಾಟಕದ ಜನ. ಆದರೆ ಅಭಿವೃದ್ಧಿ ದೃಷ್ಟಿಯಿಂದ ಉತ್ತರ ಕರ್ನಾಟಕ ಹೆಚ್ಚು ಅನ್ಯಾಯಕ್ಕೆ ಒಳಗಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು. ಅವರು ಬುಧವಾರ ತಾಲೂಕಿನ ಚಿಂಚಣಿ ಗ್ರಾಮದ ಗಡಿ ಕನ್ನಡಿಗರ ಬಳಗದಿಂದ ಶ್ರೀಅಲ್ಲಮಪ್ರಭು ಸಿದ್ದಸಂಸ್ಥಾನಮಠದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡರತ್ನ ಡಾ.ಪ್ರಭಾಕರ ಕೋರೆ ಹಾಗೂ ನನ್ನ ಸಂಗೀತ ವ್ಯಾಸಂಗ ಗ್ರಂಥಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, …

Read More »

ರಿಷಬ್ – ರಜನಿಕಾಂತ್ ಭೇಟಿಯಾದಾಗ ‘ಕಾಂತಾರ’ ಬಗ್ಗೆ ಚರ್ಚಿಸಿದ್ದು ಕನ್ನಡದಲ್ಲಾ, ತಮಿಳಿನಲ್ಲಾ?

ಕಾಂತಾರ ಸದ್ಯ ವಿಶ್ವದಾದ್ಯಂತ ಭರ್ಜರಿಯಾಗಿ ಸದ್ದು ಮಾಡುತ್ತಿದೆ. ಈ ಚಿತ್ರ ಈ ಪರಿ ಗೆಲ್ಲಲಿದೆ ಎಂದು ಯಾರೂ ಊಹಿಸಿರಲಿಲ್ಲ. ಸ್ವತಃ ಕಾಂತಾರ ಚಿತ್ರತಂಡ ಕೂಡ ಈ ಚಿತ್ರ ಇಷ್ಟರ ಮಟ್ಟಿಗೆ ಚಿತ್ರ ಜನರಿಗೆ ಇಷ್ಟವಾಗಲಿದೆ ಎಂದು ಊಹಿಸಿರಲಿಲ್ಲ. ಚಿತ್ರವನ್ನು ಪ್ಯಾನ್ ಇಂಡಿಯಾ ಬಿಡುಗಡೆ ಮಾಡದಿರುವುದೇ ಇದಕ್ಕೆ ಸಾಕ್ಷಿ. ಹೀಗೆ ಕನ್ನಡದಲ್ಲಿ ಮಾತ್ರ ಬಿಡುಗಡೆಗೊಂಡ ಕಾಂತಾರ ಚಿತ್ರವನ್ನು ಪ್ಯಾನ್ ಇಂಡಿಯಾ ಬಿಡುಗಡೆ ಮಾಡಬೇಕು ಎಂಬ ಕೂಗು ಹೆಚ್ಚಾದ ಬಳಿಕ ಹೊಂಬಾಳೆ ಫಿಲ್ಮ್ಸ್ …

Read More »