ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಈ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ …
Read More »ಬೆಳಗಾವಿಯ ಮಾಡಂಗೇರಿ ಗ್ರಾಮದಲ್ಲಿ ಮನೆಗೋಡೆ ಕುಸಿದು ತಾಯಿ ಮಗು ಸ್ಥಳದಲ್ಲೇ ಸಾವು
ಬೆಳಗಾವಿ : ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಂಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಯಲ್ಲವ್ವ ಮಹಾದೇವ ಬಾಗಿಲದ (40), ಪ್ರಜ್ಬಲ್ ಮಹಾದೇವ ಬಾಗಿಲದ (5) ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳಿಂದ ಯರಗಟ್ಟಿ ತಾಲೂಕಿನಾದ್ಯಂತ ನಿರಂತರ ಮಳೆ ಆಗುತ್ತಿದ್ದು,ಇದರಿಂದ ಶಿಥಿಲಾವಸ್ಥೆಯಲ್ಲಿದ್ದ …
Read More »ಮಕ್ಕಳ ಅಶ್ಲೀಲ ದೃಶ್ಯ ಚಿತ್ರೀಕರಿಸಿ, ಸೋಶಿಯಲ್ ಮೀಡಿಯಾಕೆ ಹರಿಬಿಡುತ್ತಿದ್ದ ಭೂಪ.!
ಶಿವಮೊಗ್: ಸೊರಬ ತಾಲ್ಲೂಕಿನ ವಾಸಿಯಾದ ತಿಮ್ಮಪ್ಪ ಎಂಬ 42 ವರ್ಷದ ವಯಸ್ಸಿನ ವ್ಯಕ್ತಿಯು ಅಪ್ರಾಪ್ತ ವಯಸ್ಸಿನ ಬಾಲಕರ ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ.ಈ ಬಗ್ಗೆ ಸೈಬರ್ ಟಿಪ್ ಲೈನ್ ನಿಂದ ಬಂದ ದೂರಿನ ಮೇರೆಗೆ 12-01-2020 ರಂದು ಶಿವಮೊಗ್ಗ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ತನಿಖಾಧಿಕಾರಿ …
Read More »ಗೃಹ, ವಾಹನ ಸಾಲ ಬಡ್ಡಿದರ ಮತ್ತಷ್ಟು ಹೆಚ್ಚಳ: ರೆಪೋ ದರ ಮತ್ತೆ ಶೇ.0.50ರಷ್ಟು ಹೆಚ್ಚಳ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ (ಸೆಪ್ಟೆಂಬರ್ 30) ಸತತ ನಾಲ್ಕನೇ ಬಾರಿಗೆ ಶೇ.05ರಷ್ಟು ರೆಪೋ ದರವನ್ನು ತಕ್ಷಣವೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿದ್ದು, ಇದರೊಂದಿಗೆ ರೆಪೋ ದರ ಶೇ.5.9ಕ್ಕೆ ಏರಿಕೆಯಾದಂತಾಗಿದೆ. ಪ್ರಸಕ್ತ ಸಾಲಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನಾಲ್ಕನೇ ಬಾರಿಗೆ ರೆಪೋ ದರ ಹೆಚ್ಚಳ ಮಾಡಿದಂತಾಗಿದೆ. ರೆಪೋ ದರ ಹೆಚ್ಚಳದಿಂದ ಗೃಹ, ವಾಹನ ಸಾಲದ ಬಡ್ಡಿದರ ಮತ್ತಷ್ಟು ಏರಿಕೆಯಾಗಿದೆ. ಕೋವಿಡ್ ಬಳಿಕ ಆರ್ ಬಿಐ ಮೇ ತಿಂಗಳಿನಲ್ಲಿ ರೆಪೋ …
Read More »ಬೆಳಗಾವಿ: ಸಾಂಸ್ಕೃತಿಕ ಸಂಗಮ ದಾಂಡಿಯಾ
ಬೆಳಗಾವಿ: ನವರಾತ್ರಿ ಉತ್ಸವಕ್ಕೆ ಬೆಳಗಾವಿಗೆ ಬರಬೇಕು ನೀವು. ಈ ಒಂಬತ್ತು ದಿನಗಳ ಪ್ರತಿ ರಾತ್ರಿಗೂ ರಂಗು ತುಂಬುತ್ತದೆ ದಾಂಡಿಯಾ. ಕನ್ನಡ, ಮರಾಠಿ, ಗುಜರಾತಿ ಮೂರೂ ಸಂಸ್ಕೃತಿಗಳ ‘ಕೂಡಲಸಂಗಮ’ ಈ ಕೋಲಾಟ. ಬೆಳಗಾವಿ ನಗರದ ಪ್ರತಿ ಗಲ್ಲಿ, ರಸ್ತೆ, ಬಡಾವಣೆ, ಅಪಾರ್ಟ್ಮೆಂಟ್, ಮೈದಾನಗಳು, ಕಲ್ಯಾಣ ಮಂಟಪಗಳು… ಹೀಗೆ ಎಲ್ಲೆಲ್ಲಿ ಜಾಗವಿದೆಯೋ ಅಲ್ಲಿ ದಾಂಡಿಯಾ ಗುಂಗೇರಿದೆ. ಈಗೀಗ ಹಳ್ಳಿಗಳಿಗೂ ಹರಿದುಹೋಗಿರುವ ಈ ನೃತ್ಯ ಗ್ರಾಮೀಣ ಹೃದಯಗಳನ್ನೂ ಕುಣಿಸುತ್ತಿದೆ. ಸಾಂಪ್ರದಾಯಿಕ ಹಾಡು, ಸಿನಿಮಾ ಗೀತೆಗಳನ್ನು …
Read More »ಹೊಸೂರು ರಾಷ್ಟ್ರೀಯ ಹೆದ್ದಾರಿಯ RTO ಕಚೇರಿ ಮೇಲೆ ಲೋಕಾಯುಕ್ತ ಸಂಸ್ಥೆ ದಾಳಿ
ಆನೇಕಲ್(ಬೆಂಗಳೂರು): ಹೊಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಟಿಒ ಕಚೇರಿ ಮೇಲೆ ದಿಡೀರ್ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಸಂಸ್ಥೆ ಸದ್ದು ಮಾಡಿದೆ. ಎರಡು ಜೀಪುಗಳಲ್ಲಿ ಆಗಮಿಸಿರುವ ಅಧಿಕಾರಿಗಳು 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ತಪಾಸಣೆ ನಡೆಸಿದೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶೀಲನೆಯಲ್ಲಿ ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತರು ಖಾಸಗಿ ವ್ಯಕ್ತಿಗಳನ್ನೂ ಕೂಡ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಲೆಕ್ಕಪತ್ರಗಳಲ್ಲಿ ನಮೂದಾದ ಹಣಕ್ಕಿಂತ ಮೂರು ಪಟ್ಟು ನಗದು …
Read More »ಮಾತನಾಡಲು ಅವಕಾಶವಿಲ್ಲ, ಪಾದಯಾತ್ರೆ ಬಿಟ್ಟು ನಮಗೆ ಬೇರೆ ದಾರಿಯಿಲ್ಲ; ರಾಹುಲ್ ಗಾಂಧಿ
ಚಾಮರಾಜನಗರ: ನಮ್ಮ ವಿಚಾರಗಳನ್ನು ಹೇಳಲು ಅವಕಾಶವಿಲ್ಲ. ಸಂಸತ್ತಿನಲ್ಲಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತದೆ, ವಿಧಾನಸಭೆಗಳಲ್ಲೂ ಮಾತನಾಡಲು ಅವಕಾಶವಿಲ್ಲ. ಆದ್ದರಿಂದ ಪಾದಯಾತ್ರೆ ಬಿಟ್ಟು ಬೇರೆ ದಾರಿ ನಮಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಗುಂಡ್ಲುಪೇಟೆಯ ಮೂಲಕ ಶುಕ್ರವಾರ ರಾಜ್ಯ ಪ್ರವೇಶಿಸಿದ ‘ಭಾರತ್ ಜೋಡೋ ಯಾತ್ರೆ’ಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ. ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು …
Read More »ದಸರಾ ಹಿನ್ನೆಲೆ KSRTCಯಿಂದ 2000 ಹೆಚ್ಚುವರಿ ಬಸ್ ಸೇವೆ
ಬೆಂಗಳೂರು: ಕೋವಿಡ್ ನಂತರ ಅದ್ಧೂರಿಯಾಗಿ ನಡೆಯುತ್ತಿರುವ ಮೈಸೂರು ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೊತೆಗೆ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಸಾರಿಗೆ ಬಸ್ ಸೇವೆಗಳನ್ನು ಒದಗಿಸಿದ್ದು, ಕಳೆಗುಂದಿರುವ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದೆ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ …
Read More »ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ: ಗುಂಡ್ಲುಪೇಟೆ ಶಾಸಕ
ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ ಆಗಿದೆ. ಇದೊಂದು ಹುಚ್ಚನ ಮದುವೆ ಇದ್ದಂತೆ ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಲೇವಡಿ ಮಾಡಿದ್ದಾರೆ. ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ಈಗ ಫೇಸ್ ವ್ಯಾಲ್ಯೂ ಇಲ್ಲ. ಜನರಿಗೆ ಈಗಾಗಲೇ ಅವರ ಕ್ಷಮತೆ ಬಗ್ಗೆ ಅರ್ಥವಾಗಿದೆ. ಇವರ ಕೈಯಲ್ಲಿ ದೇಶ ನಡೆಸಲು ಆಗ್ತಾ ಇಲ್ಲ ಎಂಬುದು ಗೊತ್ತಾಗಿದೆ. ಅವರ ಯಾತ್ರೆಯಿಂದ ಬಿಜೆಪಿಗೆ ಯಾವುದೇ ರೀತಿ ನಷ್ಟ ಇಲ್ಲ …
Read More »ಕಟೀಲ್ ಬಫೂನ್ ಇದ್ದಂತೆ: ಅವರ ಮೆದುಳು-ನಾಲಿಗೆಗೆ ಸಂಪರ್ಕವೇ ಇರಲ್ಲ; ಎಂ.ಬಿ.ಪಾಟೀಲ್
ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಅವರು `ಬಫೂನ್’ ಇದ್ದಂತೆ. ಅವರಿಗೆ ನಾಲಿಗೆ ಮತ್ತು ಮದುಳಿಗೆ ಸಂಪರ್ಕವೇ ಇಲ್ಲದಿದ್ದು, ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಅವರು ವ್ಯಂಗ್ಯವಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ನಾಲಿಗೆ-ಮೆದುಳಿಗೆ ಸಂಪರ್ಕವಿಲ್ಲದಂತೆ ಮಾತನಾಡುತ್ತಾರೆ. ಅವರು ಒಂದು ರೀತಿ `ಬಫೂನ್’ ಇದ್ದಂತೆ. …
Read More »