Breaking News

Uncategorized

ಪ್ರೌಢಶಿಕ್ಷಣಕ್ಕಾಗಿ ರಾಜ್ಯದತ್ತ ಮುಖ ಮಾಡುವ ಹೊರನಾಡ ಕನ್ನಡಿಗ ವಿದ್ಯಾರ್ಥಿಗಳು

ಬೆಳಗಾವಿ: ಕರ್ನಾಟಕದಲ್ಲಿ ಕನ್ನಡದೊಂದಿಗೆ ಮರಾಠಿ ಮಾಧ್ಯಮ ಶಾಲೆಗಳಿಗೂ ಸರ್ಕಾರ ಸಮಾನ ಸೌಲಭ್ಯ ಕಲ್ಪಿಸುತ್ತಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ಈ ವಿಚಾರದಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಜ್ಯದ ಗಡಿಯಿಂದ ಐದೇ ಕಿ.ಮೀ. ಅಂತರದಲ್ಲಿ ಕೊಲ್ಹಾಪುರ ಜಿಲ್ಲೆಯ ಇಚಲಕರಂಜಿ ಪಟ್ಟಣವಿದೆ. ಉದ್ಯೋಗ ಅರಸಿ ಹೋಗಿ, ಕನ್ನಡಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ನೆಲೆಸಿದ್ದಾರೆ. ಅವರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ತೆರೆಯಲಾಗಿದೆ. ಆದರೆ, ಪ್ರೌಢಶಿಕ್ಷಣಕ್ಕಾಗಿ ಹೊರನಾಡ ಕನ್ನಡಿಗರ ಮಕ್ಕಳು ಕರ್ನಾಟಕದತ್ತಲೇ …

Read More »

ವಿಶ್ವದ ಅಗ್ರ ಉಲ್ಲೇಖಿತ ಸಂಶೋಧಕರಲ್ಲಿ ಕೆಎಲ್‌ಇಯ ಇಬ್ಬರಿಗೆ ಸ್ಥಾನ

ಹುಬ್ಬಳ್ಳಿ: ಕ್ಲಾರಿವೇಟ್‌ (ವೆಬ್‌ ಆಫ್ ಸೈನ್ಸ್‌ ಕೋರ್ ಕಲೆಕ್ಷನ್) ಗುರುತಿಸಿರುವ 2022ನೇ ಸಾಲಿನ ವಿಶ್ವದ ಅತಿ ಹೆಚ್ಚು ಉಲ್ಲೇಖಿತ ಅಗ್ರ ಸಂಶೋಧಕರ (ಹೈಲಿ ಸೈಟೆಡ್‌ ರಿಸರ್ಚರ್‌) ವಾರ್ಷಿಕ ಪಟ್ಟಿಯಲ್ಲಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವಾನ್ಸ್ಡ್‌ ಸೈನ್ಸಸ್‌ನ ಸಂಶೋಧನಾ ನಿರ್ದೇಶಕ ಪ್ರೊ. ತೇಜರಾಜ್ ಎಂ. ಅಮ್ಮಿನಬಾವಿ ಮತ್ತು ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ್ ಪಿ. ಶೆಟ್ಟಿ ಅವರು ಸ್ಥಾನ ಪಡೆದಿದ್ದಾರೆ. ಕಳೆದ ಒಂದು ದಶಕದಲ್ಲಿ ಬಹು ಉಲ್ಲೇಖಿತ ಪತ್ರಿಕೆಗಳ ಪ್ರಕಟಣೆಯ …

Read More »

ಗಡಿ ವಿಚಾರದಲ್ಲಿ ಕರ್ನಾಟಕದ ನಿಲುವು ಸ್ಪಷ್ಟ: ಎಚ್‌.ಕೆ.ಪಾಟೀಲ

ಹುಬ್ಬಳ್ಳಿ: ‘ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಅನಗತ್ಯ, ಸಮಂಜಸವಲ್ಲದ ಹಾಗೂ ಬೇಜವಾಬ್ದಾರಿಯ ಹೇಳಿಕೆಗಳನ್ನು ಕೊಡುವುದು, ನಿಲುವುಗಳನ್ನು ತಾಳುವುದು ಮಾಡುತ್ತಿದೆ. ಆದರೆ, ಈ ವಿಚಾರದಲ್ಲಿ ಕರ್ನಾಟಕದ ನಿಲುವು ಸ್ಪಷ್ಟವಾಗಿದೆ. ಯಥಾಸ್ಥಿತಿ ಇಲ್ಲವೇ ಮಹಾಜನ್‌ ವರದಿ ಎಂಬುದಕ್ಕೆ ಕರ್ನಾಟಕ ಬದ್ಧವಾಗಿದೆ. ಅದರಲ್ಲಿ ರಾಜಿಯಿಲ್ಲ’ ಎಂದು ಶಾಸಕ ಹಾಗೂ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಎಚ್‌.ಕೆ.ಪಾಟೀಲ ಸ್ಪಷ್ಟಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ರಾಜ್ಯ ಸರ್ಕಾರದ ನಿರ್ಣಯ ಮಾತ್ರವಲ್ಲ, ಕರ್ನಾಟಕದ ಮಹಾಜನತೆಯ …

Read More »

ಅವಧಿ ಮುಗಿದ 16 ಟೋಲ್‌ ರದ್ದತಿಗೆ ಆಗ್ರಹ

ದಾವಣಗೆರೆ: ರಾಜ್ಯದಾದ್ಯಂತ ವಿವಿಧ ಹೆದ್ದಾರಿಗಳಲ್ಲಿ ಇರುವ 42 ಟೋಲ್‌ಗೇಟ್‌ಗಳ ಪೈಕಿ 16 ಟೋಲ್‌ಗೇಟ್‌ಗಳ ಅವಧಿ ಪೂರ್ಣಗೊಂಡಿದ್ದು, ಅವುಗಳನ್ನು ರದ್ದು ಮಾಡಬೇಕು ಎಂದು ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್‌. ಷಣ್ಮುಖಪ್ಪ ಆಗ್ರಹಿಸಿದರು. ಭಾನುವಾರ ಇಲ್ಲಿ ನಡೆದ ಲಾರಿ ಮಾಲೀಕರ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು. ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ ಬಳಿಯ ಟೋಲ್‌ಗೇಟ್‌ ಸಹಿತ 16 ಟೋಲ್‌ಗೇಟ್‌ಅವಧಿ ಮುಗಿದಿದೆ. ಹೆದ್ದಾರಿ ನಿರ್ಮಾಣಕ್ಕೆ ಖರ್ಚು ಮಾಡಿದ ಹತ್ತುಪಟ್ಟು ಹಣ …

Read More »

ಬಾಗಲಕೋಟೆ ಪ್ರಕ್ಷುಬ್ಧ; ಸರ್ವಧರ್ಮ ಸೌಹಾರ್ದ ಭಾವೈಕ್ಯತಾ ಸಮಾವೇಶಕ್ಕೆ ಟಿಪ್ಪು ಕರಿನೆರಳು!

ಬಾಗಲಕೋಟೆ: ಇಳಕಲ್ ನಗರದಲ್ಲಿ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಆಯೋಜನೆಯಾಗಿದ್ದ ಸರ್ವಧರ್ಮ ಸೌಹಾರ್ದ ಭಾವೈಕ್ಯತೆ ಸಮಾವೇಶವನ್ನು ತಹಸೀಲ್ದಾರ್ ಬಸವರಾಜ ಮೇಳವಂಕಿ ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ. ಸರ್ವಧರ್ಮ ಸೌಹಾರ್ದ ಭಾವೈಕ್ಯತಾ ಸಮಾವೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದಾರ್ಶನಿಕರ ಭಾವಚಿತ್ರವಿರುವ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ದಾರ್ಶನಿಕರ ಭಾವಚಿತ್ರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇದರಿಂದ ಕಾನೂನು ಸುವ್ಯಸ್ಥೆಗೆ ದಕ್ಕೆ ಆಗಬಾರದೆಂದು ಮುಂಜಾಗರೂಕತೆಯಿಂದ …

Read More »

ಕಾರಲ್ಲಿ ಶವ ಪತ್ತೆ: ಅಂದು ಶಾಸಕರ ತಮ್ಮನ ಮಗ, ಇಂದು ಎಎಸ್‌ಐ ಪುತ್ರ.

ಹೊನ್ನಾಳಿ: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯರ ಸಹೋದರನ ಪುತ್ರ ಚಂದ್ರಶೇಖರ್ ಕಾರು ಹೇಗೆ ಅಪಘಾತಕ್ಕೀಡಾಗಿತ್ತು ಎಂದು ಪೊಲೀಸರು ವಿಶ್ಲೇಷಿಸಿದ್ದರೋ ಥೇಟ್ ಅದೇ ಮಾದರಿಯ ಇನ್ನೊಂದು ಅಪಘಾತ ಹೊನ್ನಾಳಿ ತಾಲೂಕಿನ ಮಾಸಡಿ ಬಳಿ ಸಂಭವಿಸಿದ್ದು ತೀವ್ರ ಕುತೂಹಲ ಮೂಡಿಸಿದೆ.   ಎರಡೂ ಪ್ರಕರಣಗಳಲ್ಲಿ ಒಂದಕ್ಕೊಂದು ಹೋಲಿಕೆ ಕಾಣುತ್ತಿವೆ. ಮೇಲಾಗಿ ಇವೆರಡೂ ನಡೆದಿದ್ದು ಹೊನ್ನಾಳಿ ತಾಲೂಕಿನಲ್ಲೇ! ಆ ಕಾರು ನೀರಿಗೆ ಬಿದ್ದಿತ್ತು. ಈ ಕಾರು ಕೂಡ ನೀರಿಗೆ ಬಿದ್ದಿದೆ. ಅಲ್ಲಿಯೂ ಏರ್ ಬ್ಯಾಗ್ ಓಪನ್ ಆಗಿತ್ತು, …

Read More »

ಸೋಲ್ಲಾಪುರವೇನು ಕೊಲ್ಲಾಪುರವೂ ಒಂದು ಕಾಲಕ್ಕೆ ಕನ್ನಡ ಸೀಮೆಯೇ ಆಗಿತ್ತು!

ಸೋಲ್ಲಾಪುರವೇನು ಕೊಲ್ಲಾಪುರವೂ ಒಂದು ಕಾಲಕ್ಕೆ ಕನ್ನಡ ಸೀಮೆಯೇ ಆಗಿತ್ತು! 20ನೇ ಶತಮಾನ ಕಾಲಿಡುವ ಸಮಯದಲ್ಲೂ ಬ್ರಿಟಿಷರು ಕೊಲ್ಲಾಪುರ ಜಿಲ್ಲೆಯನ್ನು ಕರ್ನಾಟಕ ಪ್ರಾಯಂತ್ಯದಲ್ಲೇ ಗುರುತಿಸಿದ್ದರು. ಆಗ ಬ್ರಿಟಿಷರ ಪ್ರತಿನಿಧಿಯನ್ನು ಕೊಲ್ಲಾಪುರದಲ್ಲಿ ಇಟ್ಟಿದ್ದರು. ಈ ರಾಜಕೀಯ ಏಜೆಂಟ್ ಜೊತೆ ಪತ್ರ ವ್ಯವಹಾರ ನಡೆಸುವಾಗ ವಿಳಾಸದಲ್ಲಿ ಕೊಲ್ಲಾಪುರ ರಾಜಕೀಯ ಏಜೆಂಟ್, ಕರ್ನಾಟಕ ಪ್ರಾಂತ್ಯ ಎಂದೇ ಬರೆಯುತ್ತಿದ್ದರು. ಕರ್ನಾಟಕದ ಬದಲು ಕರವೀರ ಇಲಾಖಾ ಎಂದು ಕೊಲ್ಲಾಪುರವನ್ನು ಕರೆಯುತ್ತಿದ್ದುದೂ ಇದೆ. ಅಂದರೆ ಇಪ್ಪತ್ತನೇ ಶತಮಾನದ ಉದಯದ ತನಕ …

Read More »

ಸರ್ಕಾರಕ್ಕೆ ಮೀಸಲು ಸಂಕಷ್ಟ: ಜ. 23ರ ಗಡುವು ಕೊಟ್ಟ ಒಕ್ಕಲಿಗ ಸಮುದಾಯ; ಶ್ರೀಗಳ ನೇತೃತ್ವದಲ್ಲಿ ಹಕ್ಕೊತ್ತಾಯ ಪತ್ರ

ಬೆಂಗಳೂರು: ಎಸ್ಸಿ-ಎಸ್ಟಿ ಮೀಸಲು ಪ್ರಮಾಣ ಹೆಚ್ಚಳ ಮಾಡಲು ಸರ್ಕಾರ ಒಂದು ಹೆಜ್ಜೆ ಮುಂದಿಡುತ್ತಿದ್ದಂತೆ ಉಳಿದ ಸಮುದಾಯಗಳು ಮೀಸಲು ಬುಟ್ಟಿಗೆ ಕೈಹಾಕಿ ಹೆಚ್ಚು ಪಾಲು ಪಡೆಯಲು ಅಥವಾ ಮೀಸಲು ಕೆಟಗರಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಯತ್ನಿಸಿವೆ. ಪಂಚಮಸಾಲಿ ಸಮುದಾಯ ಸರ್ಕಾರಕ್ಕೆ ಡಿ.19ರ ಗಡುವು ನೀಡಿದ್ದರೆ, ಕುರುಬ, ಈಡಿಗ, ಬಿಲ್ಲವ ಬಲಿಜ, ವಿಶ್ವಕರ್ಮ ಮೊದಲಾದ ಸಮುದಾಯಗಳೂ ಬೇಡಿಕೆ ಈಡೇರಿಕೆಗೆ ಗಡುವಿನ ಹೋರಾಟ ನಡೆಸಿವೆ. ಇನ್ನೊಂದೆಡೆ ರಾಜ್ಯದಲ್ಲಿ ಪ್ರಬಲ ಒಕ್ಕಲಿಗ ಸಮುದಾಯವೂ ಈಗಿರುವ …

Read More »

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮುಂದಿನ ಸಿಎಂ ಆಗುವ ಸರಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮುಂದಿನ ಸಿಎಂ ಆಗುವ ಸರಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು ನನಗೆ ಯತ್ನಾಳ ಮೇಲೆ ಭಾರಿ ಪ್ರೀತಿ ಇದೆ ಎನ್ನೋ ಮೂಲಕ ಯತ್ನಾಳ ಬಗ್ಗೆ ಸಿಎಂ ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ. ಹಿಂದೂ ಬಿಟ್ಟು ಬಸವತತ್ವವನ್ನು ಶಾಸಕ ಯತ್ನಾಳ ಪಾಲನೆ ಮಾಡಬೇಕು, ಅಂದಾಗ ಮಾತ್ರ ಶಾಸಕ ಯತ್ನಾಳ ಮುಂದಿನ ಸಿಎಂ ಆಗುವ ಸರಕು ನೀವು ಎಂದು …

Read More »

ಕಣ್ಮನ ಸೆಳೆಯಿತು ಬೆಳಗಾವಿಯಲ್ಲಿ ಆಯೋಜಿಸಿದ್ದ ಕ್ಯಾಟ್ ಶೋ ,ಬೆಕ್ಕು ಪ್ರಿಯರು ನಾನಾ ತರಹದ ಬೆಕ್ಕುಗಳನ್ನು ನೋಡಿ ಪುಳಕಿತರಾದರು.

ಬೆಳಗಾವಿಯಲ್ಲಿ ಆಯೋಜಿಸಿದ್ದ ಕ್ಯಾಟ್ ಶೋ ಕುಂದಾನಗರಿ ಜನರ ಕಣ್ಮನ ಸೆಳೆಯಿತು. ಬೆಕ್ಕು ಪ್ರಿಯರು ನಾನಾ ತರಹದ ಬೆಕ್ಕುಗಳನ್ನು ನೋಡಿ ಪುಳಕಿತರಾದರು. ಒಂದಕ್ಕಿಂತ ಒಂದು ಸುಂದರ, ಡಿಫರೆಂಟ್ ಬೆಕ್ಕುಗಳು. ಮುದ್ದಾದ ಬೆಕ್ಕುಗಳನ್ನು ಮುಗಿ ಬಿದ್ದು ನೋಡುತ್ತಿರುವ ಜನ. ಹೌದು ನೀವು ನೋಡುತ್ತಿರುವ ಈ ದೃಶ್ಯ ಬೆಳಗಾವಿಯ ಭಾಗ್ಯ ನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕ್ಯಾಟ್ ಶೋದಲ್ಲಿ.   ಹೌದು ಫೆಲೈನ್ ಕ್ಲಬ್ ಆಫ್ ಇಂಡಿಯಾ, ಮಾರ್ಸ ಇಂಡಿಯಾ ಸಹಯೋಗದಲ್ಲಿ ರವಿವಾರ …

Read More »