Breaking News

Uncategorized

ಬಡವರ ಊಟಕ್ಕೆ ಕಲ್ಲು ಹಾಕ್ತಾ ಬೊಮ್ಮಾಯಿ ಸರ್ಕಾರ?: 40 ಇಂದಿರಾ ಕ್ಯಾಂಟೀನ್ ಕ್ಲೋಸ್

ಬೆಂಗಳೂರು: ಬಡವರಿಗಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಳ್ಳು ನೀರು ಬಿಟ್ಟಿದೆ. ಬೆಂಗಳೂರಿನ 40 ಇಂದಿರಾ ಕ್ಯಾಂಟೀನ್​ಗಳನ್ನು ಮುಚ್ಚಲಾಗಿದೆ. ಆರ್ ಆರ್ ನಗರ ವಲಯದಲ್ಲಿ ಒಟ್ಟು 8 ಕ್ಯಾಂಟೀನ್​ಗಳನ್ನು ಕ್ಲೋಸ್ ಮಾಡಲಾಗಿದೆ. ಬಿಬಿಎಂಪಿಯಿಂದ ಸಬ್ಸಿಡಿ ಹಣ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎನ್ನುವ ಕಾರಣವನ್ನು ನೀಡಿ ಸಾಕಷ್ಟು ಕಡೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ.   ಹಾಗೂ ಕೆಲವೇ …

Read More »

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

ಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ. ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು. ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು. ಬಿಜೆಪಿ ಕಾರ್ಯಕರ್ತರು …

Read More »

BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್‍ ರೇಪ್’ ಗೆ ಯತ್ನ : ಕಾಮುಕರು ಅಂದರ್

ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ …

Read More »

BREAKING NEWS: ಸ್ವಾಮೀಜಿಗಳಾಯ್ತು ಈಗ ಶಾಸಕರ ಸರದಿ; ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಗೆ ಯತ್ನ!

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಬಸವಲಿಂಗ ಸ್ವಾಮೀಜಿ ಪ್ರಕರಣ ಬೆನ್ನಲ್ಲೆ ರಾಜ್ಯದ ಮತ್ತೋರ್ವ ರಾಜಕಾರಣಿಗೆ ಹನಿಟ್ರ್ಯಾಪ್ ಯತ್ನಿಸಲಾಗಿದೆ. ಹನಿಟ್ರ್ಯಾಪ್‍ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಹೌದು ಚಿತ್ರದುರ್ಗದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಗೆ ಹನಿಟ್ರ್ಯಾಪ್‍ಗೆ ಯತ್ನ ನಡೆದಿದೆ. ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು ಸಿಲುಕಿಸುವ ಯತ್ನ ಮಾಡಲಾಗಿದೆ. ಬೆತ್ತಲೆಯಾಗಿದ್ದ ಯುವತಿಯೊಬ್ಬಳು ಶಾಸಕರಿಗೆ ವೀಡಿಯೋ ಕಾಲ್ …

Read More »

ಸೋಲುವ ಭೀತಿಯಲ್ಲಿದ್ದ ಪಂದ್ಯವನ್ನು ಭಾರತದ ಕಡೆ ತಿರುಗಿಸಿದ್ದು ಕನ್ನಡಿಗ ರಾಹುಲ್

ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿದೆ. ತಂಡದ ಸೆಮಿಫೈನಲ್ ಹಾದಿ ಸುಲಭವಾಗಿದ್ದು, ಮುಂದಿನ ಎದುರಾಳಿ ಜಿಂಬಾಬ್ವೆ ವಿರುದ್ಧ ಗೆಲುವು ಸಾಧಿಸಬೇಕಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಕೆಎಲ್ ರಾಹುಲ್ ಇಂದಿನ ಪಂದ್ಯದಲ್ಲಿ ಮಿಂಚು ಹರಿಸಿದರು. ಸತತವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದ ಉಪನಾಯಕ ಬಾಂಗ್ಲಾ ವಿರುದ್ಧ ಫಾರ್ಮ್‌ಗೆ ಮರಳಿದರು. ನಾಯಕ ರೋಹಿತ್ ಶರ್ಮಾ ಔಟಾದ ನಂತರ ವಿರಾಟ್ ಕೊಹ್ಲಿ ಜೊತೆಗೂಡಿ …

Read More »

ಆತ್ಮಹತ್ಯೆ ತಡೆಯುವ ಫ್ಯಾನ್‌; ಅನಾಹುತ ತಪ್ಪಿಸುವಂಥ ಹೊಸ ಸಾಧನ ಅಭಿವೃದ್ಧಿ

ಬೆಂಗಳೂರು: ಆತ್ಮಹತ್ಯೆಯನ್ನು ತಪ್ಪಿಸುವಂಥ ವಿನೂತನ ತಂತ್ರಜ್ಞಾನದ ಫ್ಯಾನೊಂದು ಮಾರುಕಟ್ಟೆಗೆ ಬಂದಿದೆ!ಈಗೀಗ ಆತ್ಮಹತ್ಯೆಗೆ ಶರಣಾಗುವಂಥ ಪ್ರಕರಣಗಳು ಹೆಚ್ಚುತ್ತಿರುತ್ತವೆ. ಇದನ್ನು ತಪ್ಪಿಸುವ ಉಪಕರಣವೊಂದನ್ನು ಅಭಿವೃದ್ಧಿಪಡಿಸಲಾಗಿದೆ. ಈ ತಂತ್ರಜ್ಞಾನ ಅಳವಡಿಸಿದರೆ ಅನಾಹುತವನ್ನು ಅನಾಯಾಸವಾಗಿ ತಪ್ಪಿಸಬಹುದು. ಜತೆಗೆ ಅನಾಹುತ ಸಂಭವಿಸುವ ಮುನ್ನವೇ ಸಂಬಂಧ ಪಟ್ಟವರ ಮೊಬೈಲ್‌ಗೆ ಸಂದೇಶ ಕೂಡ ಹೋಗುತ್ತದೆ! “ಸೇಫ್ಹ್ಯಾಲೋ’ ಎಂಬ ಸಂಸ್ಥೆ ಇದನ್ನು ಅಭಿವೃದ್ಧಿಪಡಿಸಿದ್ದು, ನಗರದ ಅರಮನೆ ಮೈದಾನದಲ್ಲಿ ನಡೆಯು ತ್ತಿರುವ ಜಾಗತಿಕ ಹೂಡಿಕೆದಾರರ ಸಮಾ ವೇಶದ ಪ್ರದರ್ಶನ ಮಳಿಗೆಯಲ್ಲಿ ಇದನ್ನು ಕಾಣಬಹುದು. ಹೇಗೆ ಕೆಲಸ ಮಾಡುತ್ತದೆ? …

Read More »

ಕಾಮಗಾರಿ ಇಲ್ಲ; ಪೇಂಟಿಂಗ್‌ ಮಾತ್ರ; ಮೊರ್ಬಿ ಸೇತುವೆಯ ಕಾಮಗಾರಿ ರಹಸ್ಯ ಬಯಲು

ಮೊರ್ಬಿ: 141 ಮಂದಿಯ ಸಾವಿಗೆ ಕಾರಣವಾದ ಗುಜರಾತ್‌ನ ಮೊರ್ಬಿ ಸೇತುವೆ ದುರಂತದ ಕುರಿತು ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಸೇತುವೆ ನಿರ್ವಹಣೆಯಲ್ಲಿ ಗಂಭೀರ ಲೋಪ ಬಯಲಾಗಿದೆ. ನ್ಯಾಯಾಲಯಕ್ಕೆ ಈ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. 143 ವರ್ಷ ಹಳೆಯ ಕೇಬಲ್‌ ಬ್ರಿಡ್ಜ್ ಅನ್ನು ನವೀಕರಣಗೊಳಿಸುವ ಮೊದಲು ಮತ್ತು ನಂತರ ಅದರ ಬಾಳುವಿಕೆಯ ಬಗ್ಗೆ ಅಧ್ಯಯನ ನಡೆಸಲಾಗಿಲ್ಲ. ತುಂಡಾದ ಕೇಬಲ್‌ ಸೇರಿದಂತೆ ಸೇತುವೆಯ ಅನೇಕ ಕೇಬಲ್‌ಗ‌ಳು ತುಕ್ಕು ಹಿಡಿದಿವೆ. ನವೀಕರಣ ಸಂದರ್ಭದಲ್ಲಿ ಕೇಬಲ್‌ಗ‌ಳ …

Read More »

ಭದ್ರತಾ ದಾರ’ ತಯಾರಿ: ಪಾಕ್‌-ಚೀನದ ನೆರಳೂ ಬೀಳುವಂತಿಲ್ಲ!

ನವದೆಹಲಿ: ಕರೆನ್ಸಿ ನೋಟುಗಳ ಮುದ್ರಣಕ್ಕಾಗಿ 3 ಲಕ್ಷ ಕಿಲೋಮೀಟರ್‌ ಉದ್ದದ “ಬಣ್ಣ ಬದಲಿಸುವಂಥ ಭದ್ರತಾ ದಾರ’ವನ್ನು ತಯಾರಿಸಲು ದೇಶವು ಜಾಗತಿಕ ಕಂಪನಿಗಳನ್ನು ಸಂಪರ್ಕಿಸಿದ್ದು, ಅವುಗಳಿಗೆ ಹಲವು ಷರತ್ತುಗಳನ್ನೂ ಸರ್ಕಾರ ವಿಧಿಸಿದೆ. ಭದ್ರತಾ ದಾರ ತಯಾರಿ ಪ್ರಕ್ರಿಯೆಯು ಸಂಪೂರ್ಣ ಭದ್ರತಾ ವಲಯದೊಳಗೆ ನಡೆಯಬೇಕು. ಪಾಕಿಸ್ತಾನ ಮತ್ತು ಚೀನಗೆ ಸಂಬಂಧಿಸಿದವರು ಇದರ ಹತ್ತಿರವೂ ಸುಳಿಯಬಾರದು. ಈ ಎರಡು ದೇಶಗಳ ನಾಗರಿಕರು ಅಥವಾ ಈ ಹಿಂದೆ ಪಾಕಿಸ್ತಾನ ಅಥವಾ ಚೀನದಲ್ಲಿ ಕೆಲಸ ಮಾಡಿರುವವರು, ಅಲ್ಲಿ …

Read More »

ಮನೆ ಮನೆಗೆ ಬುದ್ಧ, ಬಸವ-ಅಂಬೇಡ್ಕರ್: ಸತೀಶ್ ಜಾರಕಿಹೊಳಿಯಿಂದ ವಿನೂತನ ಕಾರ್ಯಕ್ರಮ

ಬೆಳಗಾವಿ: ಹರ್ ಘರ್ ತಿರಂಗಾ, ಮನೆಮನೆಗೂ ಕನ್ನಡ ಧ್ವಜ ಅಭಿಯಾನ ಆಯ್ತು. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ ಆಯೋಜಿಸಿದ್ದಾರೆ.   ಇದೇ ನ. 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಮಾವೇಶ ಮಾಡಿ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.   ಇನ್ನು ಈ ಬಗ್ಗೆ ಇಂದು(ನ.02) ನಿಪ್ಪಾಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಗೋಕಾಕ: ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪಪ್ರಾಚಾರ್ಯ ಎಮ್ ಬಿ ಬಳಗಾರ ಮಾತನಾಡುತ್ತಿರುವದು.

ಗೋಕಾಕ: ಪ್ರತಿ ಮನೆ ಮನೆಯಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ನಾವೆಲ್ಲ ಕಾರ್ಯಪ್ರವೃತ್ತರಾಗಬೇಕೆಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಎಮ್ ಬಿ ಬಳಗಾರ ಹೇಳಿದರು. ಅವರು, ಮಂಗಳವಾರದಂದು ಸಂಜೆ ನಗರದ ಬಸವ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ ತಾಲೂಕ ಘಟಕ ಮತ್ತು ಭಾವಯಾನ ಮಹಿಳಾ ಸಾಹಿತ್ಯ ಮತ್ತು ಸಂಸ್ಕøತಿಕ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು …

Read More »