Breaking News

Uncategorized

ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 40 ವರ್ಷ ಕಠಿಣ ಶಿಕ್ಷೆ

ಮೈಸೂರು: ನಗರದಲ್ಲಿರುವ ಚಲನಚಿತ್ರ ನಟರೊಬ್ಬರ ಫಾರ್ಮ್​ಹೌಸ್​ನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಬಿಹಾರ ಮೂಲದವನಿಗೆ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶೈಮಾ ಖಮ್ರೋಜ್​ ಅವರು 40 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದ್ದಾರೆ.   ಬಿಹಾರ ಮೂಲದ ನಾಜೀಮ್​ ಶಿಕ್ಷೆಗೆ ಗುರಿಯಾದ ಅಪರಾಧಿ. ಶಿಕ್ಷೆ ಜತೆಗೆ 51 ಸಾವಿರ ರೂ. ದಂಡ ವಿಧಿಸಿದ್ದಾರೆ. ತಿ.ನರಸೀಪುರ ರಸ್ತೆಯ ಫಾರ್ಮ್​ಹೌಸ್​ನಲ್ಲಿ ನಾಜೀಮ್​ ಕುದುರೆಗಳಿಗೆ ಲಾಳ ಕಟ್ಟುವ ಕೆಲಸ ಮಾಡಿಕೊಂಡಿದ್ದ. ಕುಟುಂಬದೊಂದಿಗೆ …

Read More »

ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಅವಿರೋಧವಾಗಿ ಆಯ್ಕೆ

ಖಾನಾಪೂರ ತಾಲೂಕಿನ ನಂದಗಡದಲ್ಲಿರುವ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ 17 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅರವಿಂದ್ ಪಾಟೀಲ್ ಅವರು ತಾಲೂಕಾ ಮಾರ್ಕೆಟಿಂಗ್ ಸೂಸೈಟಿಯ ಅಭಿವೃದ್ಧಿಗೆ ಸತತ ಪರಿಶ್ರಮ ಪಟ್ಟಿದ್ದು ಹಾಲಿ ಅಧ್ಯಕ್ಷರಾದ ಶ್ರೀಶೈಲ ಮಾಟೋಳ್ಳಿ ಅವರು ಎರಡು ವರ್ಷಗಳ ಅವಧಿಯ ನಂತರ ರಾಜೀನಾಮೆ ನೀಡಿದ್ರು. ಖಾಲಿ ಇದ್ದ ಈ ಸ್ಥಾನಕ್ಕೆ ಇನ್ನಿತರ ನಿರ್ದೇಶಕರು …

Read More »

ನಂದಿನಿ ಹಾಲಿನ ದರ ಇಂದು ಪರಿಷ್ಕರಣೆ ಸಂಭವ, 2-3 ರೂ. ಏರಿಕೆ?

K.M.F.ನಂದಿನಿ ಹಾಲಿನ ದರದಲ್ಲಿ (Nandini milk price) ಲೀಟರ್‌ಗೆ 2-3 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ 5ಕ್ಕೆ ಪಶುಸಂಗೋಪನೆ ಸಚಿವರ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಲಿದ್ದಾರೆ. ಕಳೆದ ವಾರದ ಆದೇಶಕ್ಕೆ ಸಿಎಂ ತಡೆ ಹಿಡಿದಿದ್ದರು. ಆಗ ಪ್ರತಿ ಲೀಟರ್ ಹಾಲಿನ ಮೇಲೆ 3 ರೂಪಾಯಿ ಏರಿಕೆ ಮಾಡಲಾಗಿತ್ತು. ಪ್ರತಿ ಕೆಜಿ ಮೊಸರಿನ ಮೇಲೆ 3 ರೂಪಾಯಿ ಏರಿಸಲಾಗಿತ್ತು. ಈ‌ ಹಿನ್ನೆಲೆ ಇಂದು ಸಂಜೆ 5‌ …

Read More »

ಶ್ರೀರಾಮುಲು ರಕ್ತ ಪವಿತ್ರ, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಾನೆ: ಸಿಎಂ ಬೊಮ್ಮಾಯಿ

ಬಳ್ಳಾರಿ: ಶ್ರೀರಾಮುಲು ರಕ್ತ ಪವಿತ್ರ ರಕ್ತ, ಹಿಂದೆ ಅವರ ಬಗ್ಗೆ ಹಗುರವಾಗಿ ಮಾತಾಡಿದ್ರಿ. ರಾಮುಲು ಅನ್ನು ಪೆದ್ದ ಅಂದ್ರು, ರಾಮುಲು ಈ ಸಮುದಾಯದ ಹೃದಯ ಸಾಮ್ರಾಟ. ರಾಮುಲುಗೆ ಪೆದ್ದ ಅಂತೀಯಾ ಸಿದ್ದರಾಮಣ್ಣಾ? ನೀನ್ ಬಾಳ ಬುದ್ಧಿವಂತ ಅಲ್ವಾ? ನೀನು ಮುಖ್ಯಮಂತ್ರಿಯಾಗಿದ್ದೆ, ಮುಂದೊಂದು ದಿನ ಅವಕಾಶ ಬಂದ್ರೆ ಶ್ರೀರಾಮುಲು ಕೂಡ‌ ಮುಖ್ಯಮಂತ್ರಿ ಆಗ್ತಾನೆ. ಸಾಮಾಜಿಕ ನ್ಯಾಯ ಕೊಡೋದು ಬಿಜೆಪಿ ಮಾತ್ರ ಎಂದು ಕಾಂಗ್ರೆಸ್​ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಬಳ್ಳಾರಿಯಲ್ಲಿ …

Read More »

ಒತ್ತಡದ ಮಧ್ಯೆ ಆರೋಗ್ಯ ಕಾಪಾಡಿಕೊಳ್ಳಿ: ರಾಜೇಂದ್ರ ಕಲಘಟಗಿ

ಬೆಳಗಾವಿ: ‘ಪ್ರತಿದಿನವೂ ನಿಯಮಿತ ಹಾಗೂ ಸಮತೋಲನದ ಆಹಾರ ಸೇವನೆ, ಸಮಯಕ್ಕೆ ಸರಿಯಾಗಿ ವಾಯುವಿಹಾರ, ಯಾವುದೇ ಒತ್ತಡ ಪರಿಸ್ಥಿತಿಯಲ್ಲಿಯೂ ಹೊರಗಿನ ಪದಾರ್ಥ ಸೇವಿಸದೇ ಇರುವುದೇ ನನ್ನ ಆರೋಗ್ಯದ ಗುಟ್ಟು. ಪೊಲೀಸ್‌ ಪಡೆ ಸೇರಿದವರು ಇಂಥ ಜೀವನಶೈಲಿ ರೂಢಿಸಿಕೊಳ್ಳುವುದು ಅಗತ್ಯ’ ಎಂದು ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಕಿವಿಮಾತು ಹೇಳಿದರು.   ನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ …

Read More »

ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ ನಡೆದ ತಮ್ಮ 23ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ ಅಭಿಮಾನಿಗಳಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸಕ್ಕೆ …

Read More »

ಶಾಸಕರಿಗೆ ಹಣದ ಆಮಿಷ ಪ್ರಕರಣ ಬಿ.ಎಲ್.ಸಂತೋಷ್‌ಗೆ ಸಮನ್ಸ್ ಜಾರಿ

ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್‌ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ತೆಲಂಗಾಣ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಈ ಸಮನ್ಸ್ ಜಾರಿ ಮಾಡಿದೆ. ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ. 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್​.ಸಂತೋಷ್​ಗೆ ಸಮನ್ಸ್ ಜಾರಿಗೊಳಿಸಿರುವ ಎಸ್‌ಐಟಿ, ತಪ್ಪಿದರೆ ಬಂಧನದ ಎಚ್ಚರಿಕೆಯನ್ನೂ …

Read More »

ಇಂದಿನಿಂದ ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ

ಬೆಂಗಳೂರು: ಪರಂಪರಾಗತ ಆಚಾರ ವಿಚಾರಗಳು, ಸಂಸ್ಕೃತಿ-ಸಾಹಿತ್ಯ ಪ್ರಕಾರಗಳ ಜತೆಗೆ ಈ ನಾಡಿನ ಕಲೆಗಳಾದಿಗಳು ಒಂದೆಡೆ ಕೇ೦ದ್ರೀಕೃತವಾಗುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಲಕ್ಷದೀಪೋತ್ಸವ ನೆರವೇರಲಿದೆ.   ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನೆರವೇರಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನ, …

Read More »

ಮುಂದಿನ C.M.ನಾನೇ: H.D.K.

ಮಳವಳ್ಳಿ: ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಬಸವ ತತ್ವಗಳನ್ನು ಪಾಲನೆ ಮಾಡಲು ಮುಂದಾಗಬೇಕು. ಈಗ ನಿರ್ಮಾಣವಾಗಲಿರುವ ಬಸವ ಭವನಕ್ಕೆ ಮುಂದಿನ ಮುಖ್ಯಮಂತ್ರಿಯಾಗಿ ಅನುದಾನ ನೀಡುವೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.   ತಾಲೂಕಿನ ಶೆಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಉಪ್ಪನಹಳ್ಳಿ(ಕನ್ನಹಳ್ಳಿ)-ಮೂಗನಕೊಪ್ಪಲು ಬಳಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಬಸವ ಭವನ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಸವ ಭವನಕ್ಕೆ …

Read More »

ಪ್ರತಿ ಕ್ಷೇತ್ರಕ್ಕೆ ಐದಕ್ಕಿಂತ ಹೆಚ್ಚು ಆಕಾಂಕ್ಷಿಗಳು!

ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ವಲಯದಲ್ಲಿ ಹೊಸ ಶಕ್ತಿ ಮತ್ತು ಹುರುಪು ಕಾಣಿಸಿಕೊಂಡಿದೆ. ವಾತಾವರಣ ನಮ್ಮ ಪರವಾಗಿದೆ ಎಂಬ ವಿಶ್ವಾಸದಿಂದ ಟಿಕೆಟ್‌ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಮುಗಿ ಬಿದ್ದಿದ್ದಾರೆ. ಒಂದೊಂದು ಕ್ಷೇತ್ರಕ್ಕೆ ಕನಿಷ್ಠ ಐದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಟಿಕೆಟ್‌ ಬಯಸಿ ಅರ್ಜಿ ಸಲ್ಲಿಸಿದ್ದು ಯಾರಿಗೆ ಟಿಕೆಟ್‌ ನೀಡಬೇಕೆಂಬ ಧರ್ಮ ಸಂಕಟ ಪಕ್ಷದ ವರಿಷ್ಠರಿಗೆ ಎದುರಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ ಅರಭಾವಿ, ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, …

Read More »