Breaking News

Uncategorized

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ.   ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …

Read More »

BPL’ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ!

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ನೀಡುತ್ತಿದ್ದ ಜೋಳ, ರಾಗಿ ವಿತರಣೆ ಆಗಸ್ಟ್ ನಂತರ ಸ್ಥಗಿತಗೊಳ್ಳಲಿದೆ.   ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ವಿತರಣೆ ಮಾಡುತ್ತಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿ, 1 ಲಕ್ಷ ಮೆಟ್ರಿಕ್ ಟನ್ ಜೋಳ, …

Read More »

ಧಾರಾಕಾರ ಮಳೆಗೆ ಬೈಲಹೊಂಗಲ ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಬೈಲಹೊಂಗಲ ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ. ಹೌದು ಯರಗೊಪ್ಪ ಗ್ರಾಮದ ಜನತಾ ಪ್ಲಾಟ್‍ನಲ್ಲಿರುವ ಈರಪ್ಪ ಚಂದುಗೋಳ ಎಂಬುವರ ಮನೆಗೋಡೆ ಮಳೆಯಿಂದ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದರೂ ಸ್ಥಳಕ್ಕೆ ಪಿಡಿಒ ಸೇರಿ ಇತರೆ ಯಾವುದೇ ಅಧಿಕಾರಿಗಳು ಭೇಟಿ ನೀಡದೇ ಇರೋದು ಸಧ್ಯ ತೀವ್ರ ಟೀಕೆಗೆ ಗುರಿಯಾಗಿದೆ. ಗೋಡೆ ಬಿದ್ದ ಮನೆಯಲ್ಲೇ ಕುಟುಂಬಸ್ಥರು ವಾಸಿಸುತ್ತಿದ್ದಾರೆ. …

Read More »

ಬಿಗ್​ಬಾಸ್ ಫೀವರ್ ಶುರು​: 9ನೇ ಸೀಸನ್​ನಲ್ಲಿ ಯಾರೆಲ್ಲ ಡೊಡ್ಮನೆ ಪ್ರವೇಶಿಸಲಿದ್ದಾರೆ? ಇಲ್ಲಿದೆ ಸಂಭವನೀಯ ಪಟ್ಟಿ​.

ಬೆಂಗಳೂರು: ಹೌದು ಸ್ವಾಮಿ… ಈ ಪದ ಕೇಳಿದರೆ ಥಟ್​ ಅಂತಾ ನೆನಪಾಗುವುದು ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​. ಈಗಾಗಲೇ ಯಶಸ್ವಿ 8 ಆವೃತ್ತಿಗಳನ್ನು ಮುಗಿಸಿದ್ದು, 9 ನೇ ಆವೃತ್ತಿಯ ಬಿಗ್​ಬಾಸ್ ಶೋಗೆ ಭರ್ಜರಿ ತಯಾರಿ ನಡೆದಿದೆ.​ ಭರಪೂರ ಮನರಂಜನೆಯ ಜೊತೆಗೆ ವಿವಾದಗಳನ್ನು ಹುಟ್ಟು ಹಾಕುವ ಬಿಗ್​ಬಾಸ್​, ಕಿರುತೆರೆ ಲೋಕದ ಜನಪ್ರಿಯ ಶೋಗಳಲ್ಲಿ ಒಂದೆಂದರೆ ತಪ್ಪಾಗಲಾರದು. ಪ್ರೀತಿ, ಸ್ನೇಹ ಸಂಬಂಧಗಳಿಗೆ ಈ ಶೋ ಬೆಸುಗೆಯಾಗುತ್ತದೆ. ಇಲ್ಲಿ ನಗು, ಕಣ್ಣೀರು, ಕೋಪ, ಮುನಿಸು …

Read More »

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ

ಮುಂಬಯಿ : ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅನುಕ್ರಮವಾಗಿ ಲೀಟರ್‌ಗೆ 5 ಮತ್ತು ಲೀಟರ್‌ಗೆ 3 ರೂಪಾಯಿ ಇಳಿಕೆ ಮಾಡುವುದಾಗಿ ಸಿಎಂ ಏಕನಾಥ್ ಶಿಂಧೆ ಗುರುವಾರ ಘೋಷಿಸಿದ್ದಾರೆ. ಹೊಸ ಸರ್ಕಾರದ ಎರಡನೇ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ಮಂತ್ರಾಲಯದಲ್ಲಿ ನಡೆದ ಸಂಪುಟ ಸಭೆಯ ನಂತರ ಶಿಂಧೆ ಸುದ್ದಿಗಾರರಿಗೆ ತಿಳಿಸಿದರು.   ಬೆಲೆ ಇಳಿಕೆಯ ನಂತರ, ಮುಂಬೈನಲ್ಲಿ …

Read More »

ADGP ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಆಗ್ರಹ; ಡೈರಿಯ ಬಗ್ಗೆಯೂ ತನಿಖೆಯಾಗಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೀಡಾಗಿರುವ ಹಿರಿಯ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.   ಪಿಎಸ್‌ಐ ಅಕ್ರಮದಲ್ಲಿ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮೃತ್ ಪೌಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಬಂಧನವಾಗಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಹಗರಣದಲ್ಲಿ ಭಾಗಿಯಾಗಿರುವ ರಾಜಕಾರಣಿಗಳ ಬಗ್ಗೆ ಬಯಲಾಗಲಿದೆ. ಪ್ರಕರಣದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗುತ್ತದೆ. “ಉಪ್ಪು …

Read More »

ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಮೃತದೇಹ ಪತ್ತೆ; ಸತ್ತ ಮಹಿಳೆ ಬದುಕಿರುವುದಾದರೂ ಹೇಗೆ?

ಉಡುಪಿ: ಬೈಂದೂರು ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟಿದ್ದಾರೆ ಎನ್ನಲಾಗಿದ್ದ ಮಹಿಳೆ ಬದುಕುಳಿದಿರುವುದು ಗೊತ್ತಾಗಿದ್ದು, ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ ಯಾರದು ಎಂಬುದು ಯಕ್ಷಪ್ರಶ್ನೆಯಾಗಿದೆ.   ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಬಳಿ ಒತ್ತಿಣೆಯ ಹೆನ್ ಬೇರು ಎಂಬಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಕಾರಿನೊಳಗೆ ಮೃತದೇಹ ಪತ್ತೆಯಾಗಿತ್ತು.   ಕಾರಿನ ಹಿಂಬದಿ ಸೀಟಿನಲ್ಲಿ …

Read More »

2000 ರೂ ಲಂಚ: ಎಸಿಬಿ ಬಲೆಗೆ ಬಿದ್ದ ಎಫ್ ಡಿಸಿ

ಬೆಳಗಾವಿ – ಹೆಚ್ಚುವರಿ ವೇತನ ಬಡ್ತಿ ಆದೇಶಕ್ಕಾಗಿ 2 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕನೋರ್ವ ಎಸಿಬಿ ಬಲೆಗೆ ಬಿದ್ದಿದ್ದಾನೆ. ದಿನಾಂಕ: 14.07.2022 ರಂದು ಫಿಲ್ಯಾದಿ ಸಂತೊಷ ಚೌದರಿ (ಸಾಃ ಮನೆ ನಂ.830, ಗುನ್ಯಾಳಕರ ಕಲ್ಯಾಣ ಮಂಟಪ ರೊಡ್, ರಹೀಮ್ ನಗರ, ವಿಜಯಪೂರ) ಇವರು ಎಸಿಬಿ ಪೊಲೀಸ್ ಠಾಣೆ ಬೆಳಗಾವಿಗೆ ಹಾಜರಾಗಿ ತಮ್ಮ ಪಿರ್ಯ್ಯಾದಿ ನೀಡಿದ್ದರಲ್ಲಿ, ಫಿರಾದಿಯ ತಾಯಿ ಕೆ.ಎಸ್.ಕುಳಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, …

Read More »

ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ

ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,58,000 ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಹುಕ್ಕೇರಿ ಪಟ್ಟಣದ ವಿದ್ಯಾ ಜ್ಯುವೆಲರಿ ಶಾಪ್‌ನಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಂಗಡಿ ಮಾಲೀಕರು ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …

Read More »