Breaking News

Uncategorized

ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ

ಕಾರಾಗೃಹ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತಾ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಬೆಂಗಳೂರು. ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೌಶಲ್ಯ …

Read More »

ಪಿಎಸಿಎಲ್‌ ಹಗರಣ : ಇನ್‌ಸ್ಪೆಕ್ಟರ್ ಬಿ.ಕೆ.ಕಿಶೋರ್‌ ಕುಮಾರ್‌ ಅಮಾನತು

ಆನೇಕಲ್ : ಪಿಎಸಿಎಲ್‌ ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಭೂಮಾರಾಟದ ತನಿಖೆ ನಡೆಯುತ್ತಿದ್ದು ಆಂತರಿಕ ಭದ್ರತಾ ವಿಭಾಗದ ಇನ್‌ಸ್ಪೆಕ್ಟರ್‌ ಬಿ.ಕೆ.ಕಿಶೋರ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.   ಅಮಾನತು ಆದೇಶವನ್ನು ಇವರ ಕುಟುಂಬಕ್ಕೆ ತಲುಪಿಸಲಾಗಿದೆ ಎನ್ನಲಾಗಿದೆ. ಪರ್ಲ್ಸ್‌ ಆಗ್ರೊಟೆಕ್‌ ಕಾರ್ಪೊರೇಷನ್‌ ಲಿಮಿಟೆಟ್ ಕಂಪನಿಗೆ ಸೇರಿದ ಆನೇಕಲ್‌ ತಾಲ್ಲೂಕಿನ ಎಂ.ಮೇಡಹಳ್ಳಿಯ 12.30 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಾರಾಟ ಮಾಡಲಾಗಿತ್ತು. ಈ …

Read More »

ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆಂಧ್ರ ಪ್ರದೇಶಕ್ಕೆ ಪ್ರವೇಶ

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ. ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಪಡೆದಿರುವ ಯಾತ್ರೆಯು ಇದೀಗ ಆಂಧ್ರಪ್ರದೇಶ ತಲುಪಿದ್ದು, ಆಂಧ್ರಪ್ರದೇಶದಲ್ಲಿ ಯಾವ ರೀತಿ ಸದ್ದು ಮಾಡಲಿದೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …

Read More »

ಬ್ಯಾಂಕನ ಕೀ ಮುರಿದು ಹಣ ದೋಚಿದ ಆರೋಪಿಗಳ ಹೆಡೆಮುರಿ ಕಟ್ಟಿ ನಾಲ್ವರು ಆರೋಪಿಗಳನ್ನು ಚಿಕ್ಕೋಡಿ ಪೋಲಿಸರು ಬಂಧಿಸಿದ್ದಾರೆ.

ಫೈನಾನ್ಸ ಬ್ಯಾಂಕನ ಕೀ ಮುರಿದು ಹಣ ದೋಚಿದ ಆರೋಪಿಗಳ ಹೆಡೆಮುರಿ ಕಟ್ಟಿ ನಾಲ್ವರು ಆರೋಪಿಗಳನ್ನು ಚಿಕ್ಕೋಡಿ ಪೋಲಿಸರು ಬಂಧಿಸಿದ್ದಾರೆ.   ಚಿಕ್ಕೋಡಿ ಪಟ್ಟಣದ ಫೀನ್ ಕೇರ್ ಸ್ಮಾಲ್ ಫೈನಾನ್ಸ ಬ್ಯಾಂಕಿನ ಕೀಲಿ‌ ಮುರಿದು 6.47,096 ರೂಗಳನ್ನು ದರೋಡೆ ಮಾಡಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.ಬಂಧಿತರನ್ನು ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದ ರಮೇಶ ಕುಟ್ನಪ್ಪಾ ನಾಯಿಕ(29),ಜಮಖಂಡಿ ತಾಲೂಕಿನ‌ ಮುತ್ತೂರ ಗ್ರಾಮದ ಬಸವರಾಜ ಉಮೇಶ ಕುಂಚನೂರೆ(28),ರಬಕವಿ ತಾಲೂಕಿನ …

Read More »

ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಗೆ ಸ್ವಾಗತಿಸಲಾಯಿತು.: ಅನಿಲ್ ಬೆನಕೆ

ಬೆಳಗಾವಿ,  ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡರು.   ನಂತರ ಮಾತನಾಡಿದ ಅವರು, ಈ ಬಾರಿ ರಾಜ್ಯಾದ್ಯಂತ ವೀರಜ್ಯೋತಿಯು ಸಂಚಾರ ಮಾಡುತ್ತಿರುವುದು ವಿಶೇಷ ಸಂಗತಿಯಾಗಿದೆ ಎಂದರು.   ಈ‌ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.   ಬ್ರಿಟೀಷರ ವಿರುದ್ಧ …

Read More »

ಬೆಳಗಾವಿಯ ಅಭಿವೃದ್ಧಿಗೆ ಗವಿಮಠಗಲಿ ಧ್ವನಿ- ಸರಜೂ ಕಾಟ್ಕರ್

ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರದಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯಲ್ಲಿ ಪ್ರಾ. ಬಿಎಸ್. ಗವಿಮಠ ಅವರ ಸಮಗ್ರ ಸಾಹಿತ್ಯದ ಕುರಿತು ವಿಚಾರ ಸಂಕಿರವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಎಚ್‌ಬಿ ರಾಜಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಡಾ. ಸರಜೂ ಕಾಟ್ಕರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಬಸವರಾಜ್ ಜಗಜಂಪಿ ಅವರು ಉಪಸ್ಥಿತರಿದ್ಧರು. ಈ ವೇಳೆ ಮಾತನಾಡಿದ ಸರಜೂ ಕಾಟ್ಕರ್ …

Read More »

ಚುನಾವಣಾ ಬಾಂಡ್‌ಗಳು ಪಾರದರ್ಶಕ ವಿಧಾನ: ಕೇಂದ್ರ ಸರ್ಕಾರ

ನವದೆಹಲಿ: ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳ ದೇಣಿಗೆ ಸಂಗ್ರಹಕ್ಕೆ ಪಾರದರ್ಶಕ ವಿಧಾನವಾಗಿದೆ. ಇದರ ಮೂಲಕ ಕಪ್ಪು ಹಣ ಅಥವಾ ಲೆಕ್ಕವಿಲ್ಲದ ಹಣ ಪಡೆಯುವುದು ಅಸಾಧ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಕೇಂದ್ರ ಸರ್ಕಾರ ಹೇಳಿದೆ.   ನಿಧಿ ಸಂಗ್ರಹದಲ್ಲಿ ಪಾರದರ್ಶಕತೆ ತರಲು ರಾಜಕೀಯ ಪಕ್ಷಗಳು ದೇಣಿಗೆ ರೂಪದಲ್ಲಿ ನಗದು ಸ್ವೀಕರಿಸುವ ಬದಲಾಗಿ ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಆರೋಪಿಸುವ ವಾದದಲ್ಲಿ ಅರ್ಥವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. …

Read More »

BIG BREAKING ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ ಕಡ್ಡಾಯ: ಮೊದಲೇ ಹಣ ಕಟ್ಟಿ ವಿದ್ಯುತ್ ಬಳಸಿ

ಬೆಂಗಳೂರು: ವಿದ್ಯುತ್ ಪ್ರಿಪೇಯ್ಡ್ ವ್ಯವಸ್ಥೆ ಶೀಘ್ರವೇ ಜಾರಿ ಆಗಲಿದೆ. ರಾಜ್ಯದಾದ್ಯಂತ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ಉಳಿಸಿಕೊಳ್ಳಲು 2023ರ ಒಳಗೆ ಮೀಟರ್ ಬದಲಾವಣೆ ಮಾಡುವ ಹೊಸ ಯೋಜನೆ ಜಾರಿಗೊಳಿಸಲಾಗುವುದು.   ವಿದ್ಯುತ್ ಗ್ರಾಹಕರು ಮೊದಲು ಹಣ ಕಟ್ಟಿ ನಂತರ ವಿದ್ಯುತ್ ಬಳಸುವ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಇಂಧನ ಇಲಾಖೆ ಸಿದ್ಧತೆ ನಡೆಸಿದೆ. ಪ್ರಸ್ತುತ ಗ್ರಾಹಕರು ಬಳಕೆ ಮಾಡುವ …

Read More »

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ. 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರ್‌ ನಲ್ಲಿ ಬಂದ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ.   ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ …

Read More »