Breaking News

Uncategorized

ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ-04:ಜಿಲ್ಲೆಯ ಹಲವು ಕಡೆಗಳಲ್ಲಿ ಇತ್ತೀಚಿಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮಾತ್ರ ಜಿಲ್ಲಾಡಳಿತದ ವತಿಯಿಂದ ಗುರುತಿನಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಅನಧಿಕೃತ ಪತ್ರಕರ್ತರ ಹಾವಳಿ ಹಾಗೂ “ಪ್ರೆಸ್” ಹೆಸರು ದುರ್ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಜತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ …

Read More »

ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ*

    *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು.   ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು.   ಕಹಾಮದ …

Read More »

ಮೊಹರಂ ಹಬ್ಬ ಹಿನ್ನಲೆ : ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ

ಹೊಸಪೇಟೆ : ಮೊಹರಂ ಹಬ್ಬ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯಾದ್ಯಂತ ಆ.07ರಂದು ಬೆಳಗ್ಗೆ 6ರಿಂದ ಆ.10ರ ರಾತ್ರಿ 10ಗಂಟೆಯವರೆಗೆ ಮದ್ಯ ಮಾರಾಟ …

Read More »

ಕ್ಯಾಮರಾಗೆ ಪೋಸ್ ಕೊಡುವಾಗ ಆಯತಪ್ಪಿ ಜಲಪಾತಕ್ಕೆ ಬಿದ್ದ ಯುವಕ- ವೈರಲ್ ವಿಡಿಯೋ

ದಿಂಡಿಗಲ್(ತಮಿಳುನಾಡು): ಧಾರಾಕಾರ ಮಳೆ ಹಿನ್ನೆಲೆಯಲ್ಲಿ ದಿಂಡಿಗಲ್​ನ ಪುಲ್ಲವೇಲಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಜಲಪಾತದ ಸೌಂದರ್ಯ ಕಣ್ತುಂಬಿಕೊಳ್ಳಲು ಸ್ಥಳೀಯರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಅಪಾಯ ಲೆಕ್ಕಿಸದೆ ಫೋಟೋ, ವಿಡಿಯೋಗೆ ಪೋಸ್ ಕೊಡಲು ಮುಂದಾದ ಯುವಕನೋರ್ವ ಆಯತಪ್ಪಿ ಪ್ರಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾನೆ. ಪರಮಕುಡಿಯ ಅಜಯ್ ಪಾಂಡಿಯನ್ ನಿನ್ನೆ ತನ್ನ ಸ್ನೇಹಿತನೊಂದಿಗೆ ಪುಲ್ಲವೇಲಿ ಜಲಪಾತ ನೋಡಲು ಬಂದಿದ್ದ. ಜಲಧಾರೆಯ ರುದ್ರ ರಮಣೀಯ ಸೌಂದರ್ಯ ನೋಡುತ್ತಾ ಮೈಮರೆತ ಆತ ಜಲಪಾತ …

Read More »

ಚೀಲ ಹರಿದು ರಸ್ತೆ ಪಾಲಾಗುತ್ತಿದ್ದ ಅಕ್ಕಿ ತಡೆದ ಸಂತೋಷ ಧರೇಕರ್

ಬೆಳಗಾವಿ ತಾಲೂಕಿನ ದೇಸೂರು ರೈಲು ನಿಲ್ದಾಣದಿಂದ ಗಣೇಶಪುರದ ಗೋಡೌನ್ ಕಡೆಗೆ ಅಕ್ಕಿಯನ್ನು ತುಂಬಿಕೊಂಡು ಒಂದು ಲಾರಿ ಹೋಗುತ್ತಿತ್ತು. ಈ ವೇಳೆ ಚೀಲ ಕಟ್ ಆಗಿ ದಾರಿಯುದ್ದಕ್ಕೂ ಅಕ್ಕಿ ಬೀಳುತ್ತಾ ಹೋಗುತ್ತಿತ್ತು. ಇದನ್ನು ಗಮನಿಸಿದ ಸಮಾಜಸೇವಕ ಸಂತೋಷ ಧರೇಕರ್ ವ್ಯರ್ಥವಾಗುತ್ತಿದ್ದ ಅಕ್ಕಿಯನ್ನು ತಡೆದಿದ್ದಾರೆ. ಹೌದು ಒಂದು ಅಗಳಿನ ಅನ್ನದ ಬೆಲೆ ಅದನ್ನು ಕಷ್ಟಪಟ್ಟು ಬೆಳೆದ ರೈತನಿಗೆ ಗೊತ್ತು. ಆದರೆ ಈ ರೀತಿ ಅಕ್ಕಿಯು ದಾರಿಯುದ್ದಕ್ಕೂ ಬೀಳುತ್ತಿರುವುದನ್ನು ಗಮನಿಸಿದ ಸಂತೋಷ ಧರೇಕರ್ ಈ …

Read More »

ಸಿದ್ದರಾಮಯ್ಯ ಅಮೃತ ಮಹೋತ್ಸವ: ಬೆಳಗಾವಿಯಲ್ಲಿ 3 ಕಿಮೀ ಉದ್ದದ ಫೋಟೋ ಬಯೋಗ್ರಫಿ ಸಿದ್ಧ..!

ಬೆಳಗಾವಿ : ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನದ ಸಂದರ್ಭದಲ್ಲಿ ಪ್ರದರ್ಶಿಸಲು ಸಿದ್ದರಾಮಯ್ಯರ ಜೀವನದ ವಿವಿಧ 500 ಫೋಟೋಗಳನ್ನು ಬಳಸಿ 3000 ಮೀಟರ್ (3 ಕಿಮೀ) ಉದ್ದದ ಫೋಟೋ ಬಯೋಗ್ರಫಿ ಸಿದ್ಧಪಡಿಸಲಾಗಿದೆ. ಜಿಲ್ಲೆಯ ಸವದತ್ತಿ ಪಟ್ಟಣದ ಕಾಂಗ್ರೆಸ್ ಮುಖಂಡ ಸೌರಭ್ ಚೋಪ್ರಾ ಮಾರ್ಗದರ್ಶನದಲ್ಲಿ ಆನಂದ ಚೋಪ್ರಾ ಅಭಿಮಾನಿ ಬಳಗ ಸಿದ್ದರಾಮಯ್ಯ ರಾಜಕೀಯ ಜೀವನದ ಫೋಟೋಗಳನ್ನು ಬಳಸಿ ಬಯೋಗ್ರಫಿ ತಯಾರಿಸಿದೆ. ಇದಕ್ಕೆ ಸುಮಾರು 500 ಫೋಟೋಗಳನ್ನು ಬಳಸಿಕೊಳ್ಳಲಾಗಿದ್ದು, 3 ಸಾವಿರ …

Read More »

ಕಳ್ಳತನ ಪ್ರಕರಣ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಳಗಾವಿ: ಸುಮಾರು ಒಂದು ತಿಂಗಳ ಹಿಂದೆ ಯರಗಟ್ಟಿ ಪಟ್ಟಣದಲ್ಲಿ ನಡೆದ ಕಿರಾಣಿ ಅಂಗಡಿ ಕಳ್ಳತನ ಮತ್ತು ಮನೆ ಕಳ್ಳತನ ಮಾಡಲು ಪ್ರಯತ್ನ ಮಾಡಿದ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ 51,000/- ರೂ ಮೊತ್ತದ ಕಿರಾಣಿ ಅಂಗಡಿಯ ಮಾಲನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 2,00,000/- ರೂ ಮೌಲ್ಯದ ಅಷೆ ಟಂಟಂ ವಾಹನವನ್ನು ಹಾಗೂ ಒಂದು ರಾಡ್ ಸೇರಿದಂತೆ ಒಟ್ಟು-2,51,000/- ರೂ ಮೌಲ್ಯದ ವಸ್ತುಗಳನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ರಾಮದುರ್ಗ ಡಿ.ಎಸ್.ಪಿ …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ರಾಹುಲ್ ಜಾರಕಿಹೊಳಿ ವತಿಯಿಂದ ಹಾಲು ಹಣ್ಣು ವಿತರಣೆ

ದಿನಾಂಕ 02-08-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಸುಪುತ್ರರಾದ ಯುವ ಪ್ರೇಮಿಗಳಾದ ರಾಹುಲ್ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ವತಿಯಿಂದ ಆಯೋಜಿಸಿದ ಬಸವ ಪಂಚಮಿ ನಿಮಿತ್ಯ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿ ಮಾತನಾಡಿ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ …

Read More »

ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ: ಗೋಕಾಕ

ಗೋಕಾಕ :ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೋಕಾಕದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಚಿಕ್ಕ ಮಕ್ಕಳ ವೈದ್ಯರಾದ ಡಾ ಗೋಪಾಲ ಹೊಂಗಲ ಮತ್ತು ಡಾ ಸಂಜೀವಿನಿ ಉಮರಾಣಿ ಯವರು ತಾಯಂದಿರಿಗೆ ಎದೆಹಾಲಿನ ಮಹತ್ವ ಬಗ್ಗೆ ಹೇಳಿದರು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹುಟ್ಟಿದ ಪ್ರತಿ ಮಗುವೂ ಬದುಕಬೇಕು, ತಾಯಿಯೂ ಆರೋಗ್ಯವಾಗಿ ಇರಬೇಕು ಎಂಬುದು ಎಲ್ಲರ ಆಸೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು …

Read More »

ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ

  ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …

Read More »