ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು. ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …
Read More »ಜೀವಂತ ನಾಗರಹಾವಿಗೆ ಹಾಲೆರೆದು ನಾಗರಪಂಚಮಿ ಆಚರಣೆ
ಹಾವೇರಿ: ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಜೀವಂತ ನಾಗರಹಾವಿಗೆ ಹಾಲೆರೆಯುವ ಮೂಲಕ ನಾಗರಪಂಚಮಿ ಆಚರಣೆ ನಡೆಯಿತು. ಆಡೂರು ಪಕ್ಕದ ಗ್ರಾಮದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಉರಗಪ್ರೇಮಿ ಕೃಷ್ಣರೆಡ್ಡಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಕೃಷ್ಣರೆಡ್ಡಿ ನಾಗರಹಾವು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲು ಹೋದಾಗ ಆಡೂರು ಗ್ರಾಮದ ಮಹಿಳೆಯರು ನಾಗರಪಂಚಮಿ ಆಚರಿಸುತ್ತಿದ್ದರು. ತಮ್ಮ ಮುಂದೆ ಜೀವಂತ ಹಾವು ಹಿಡಿದು ಹೋಗುತ್ತಿದ್ದ ಅವರಿಗೆ ಸ್ವಲ್ಪ ಹೊತ್ತು ಹಾವು ಬಿಡುವಂತೆ ತಿಳಿಸಿದ್ದಾರೆ. ನಾಗರಹಾವು ನೆಲದ ಮೇಲೆ …
Read More »ಅಕ್ರಮ-ಸಕ್ರಮ ಜಾರಿಗೆ ಪ್ರಯತ್ನ: ಆರ್. ಅಶೋಕ
ಬೆಂಗಳೂರು: ವಾಣಿಜ್ಯ ಕಟ್ಟಡಗಳನ್ನು ಹೊರಗಿಟ್ಟು ವಸತಿ ಕಟ್ಟಡಗಳಿಗೆ ಸೀಮಿತವಾಗಿ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು. ‘ನಕ್ಷೆ ಉಲ್ಲಂಘಿಸಿ ಹಾಗೂ ಅನುಮೋದನೆ ಇಲ್ಲದ ಬಡಾವಣೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ದಂಡ ವಿಧಿಸಿ ಸಕ್ರಮಗೊಳಿಸಲು ರೂಪಿಸಿದ್ದ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಉಳಿದಿದೆ. ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವುದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಿ ಯೋಜನೆ ಅನುಷ್ಠಾನಕ್ಕೆ ಅನುಮತಿ ಪಡೆಯಲು ಪ್ರಯತ್ನ …
Read More »ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.
*ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …
Read More »ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ ಯತ್ನ: ಯುವಕರು ಪೊಲೀಸ್ ವಶಕ್ಕೆ
ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾದಿಗ ಸಮಾಜದ ಯುವಕರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದಾಗ ಪೊಲೀಸರು ಮಧ್ಯಪ್ರವೇಶ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಗಂಗಾವತಿ ನಗರದ ಸೋಮನಾಥ ಕಂಪ್ಲಿ ಹಾಗೂ ಬಾಳಪ್ಪ ಕಾಮದೊಡ್ಡಿ ಎಂಬ ಯುವಕರು ಸದಾಶಿವ ವರದಿ ಅನುಷ್ಠಾನದ ಮೂಲಕ ಎಸ್ಸಿ ಮೀಸಲಾತಿ ಯನ್ನು …
Read More »ಸರ್ಕಾರದ ಮೇಲೆ ಒತ್ತಡ ತರಲು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ- ಲಕ್ಷ್ಮಣ್ ಸವದಿ
ಅಥಣಿ(ಬೆಳಗಾವಿ) : ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ವಿಶೇಷ ಕಾನೂನು ತರುವ ಅವಶ್ಯಕತೆಯಿದೆ. ಕೆಲವು ದುಷ್ಕ ಶಕ್ತಿಗಳನ್ನು ಮಟ್ಟಹಾಕಲು ಈಗಿರುವ ಕಾನೂನು ಸಾಲದು ಮುಂಬರುವ ಅಧಿವೇಶನದಲ್ಲಿ ವಿಶೇಷ ಕಾನೂನು ರಚನೆ ಮಾಡಿ ತಪ್ಪಿತಸ್ಥರಿಗೆ ತಕ್ಷಣ ಶಿಕ್ಷೆ ನೀಡುವಂತ ಕಾನೂನು ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ಮಾಡುತ್ತಿದ್ದಾರೆಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ಪಟ್ಟಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವ, ದೇಶ ವಿರೋಧಿ ಚಟುವಟಿಕೆ …
Read More »ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ
ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …
Read More »ಡಿ.ಕೆ.ಶಿವಕುಮಾರ್ ವಿರುದ್ಧವೇ ಜಮೀರ್ ದೂರು
ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆ ಹೈಕಮಾಂಡ್ಗೆ ತಲುಪಿದ ಬೆನ್ನಲ್ಲೇ ಈಗ ಮಾಜಿ ಸಚಿವ ಜಮೀರ್ ಅಹಮದ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೇ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಹುಟ್ಟುಹಬ್ಬ ವಿಚಾರದಲ್ಲಿ ನಾನು ರಾಜ್ಯವ್ಯಾಪಿ ಪ್ರವಾಸ ಮಾಡಿ ಮುಸ್ಲಿಮರನ್ನು ಕಾಂಗ್ರೆಸ್ ಪರವಾಗಿ ಒಟ್ಟು ಸೇರಿಸುತ್ತಿದ್ದೇನೆ. ವೈಯಕ್ತಿಕ ಅಭಿಪ್ರಾಯ ವಾಗಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದಿದ್ದನ್ನೇ ಮುಂದಿಟ್ಟು ನನ್ನನ್ನು ವಿಲನ್ನಂತೆ ಬಿಂಬಿಸಲಾಗಿದೆ. …
Read More »ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು?
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ಗೆ ಮೊದಲೇ ಸಾವಿನ ಸುಳಿವು ಸಿಕ್ಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಕಾರಣ, ಪ್ರವೀಣ್ ಸಹೋದರ ರಂಜಿತ್ ನೀಡಿರುವ ಸ್ಫೋಟಕ ಮಾಹಿತಿ. ಕಳೆದ ಹಲವು ದಿನಗಳಿಂದ ಪ್ರವೀಣ್ಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಕರೆಗಳು ಬರುತ್ತಿದ್ದವು. ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ತಿಳಿಸಲಾಗಿತ್ತು ಎಂದಿದ್ದಾರೆ. ಬೆಳ್ಳಾರೆಯಲ್ಲಿ ದೊಡ್ಡ ಮಟ್ಟದಲ್ಲಿ ಚಿಕನ್, ಮಟನ್ ದಂಧೆ ನಡೆಯುತ್ತಿದೆ. …
Read More »ಬೆಂಗಳೂರು: ‘ಸುಂದರಿ ಪತ್ನಿ’ ಮೇಲೆ ಆಯಸಿಡ್ ಹಾಕಿದ್ದ ಪತಿಗೆ ಕಠಿಣ ಶಿಕ್ಷೆ!
ಬೆಂಗಳೂರು: ಪತ್ನಿಯ ಮೇಲೆ ಆಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ, ಕಠಿಣ ಶಿಕ್ಷೆ ಮತ್ತು 25 ಸಾವಿರ ರು ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೌಂದರ್ಯ ತಮ್ಮ ವೈವಾಹಿಕ ಜೀವನವನ್ನು ಹಾಳು ಮಾಡುತ್ತದೆ ಎಂದು ಹೆದರಿದ 44 ವರ್ಷದ ಆಟೋ ಡ್ರೈವರ್ ತನ್ನ ಪತ್ನಿಯ ಮೇಲೆ ಆಯಸಿಡ್ ಸುರಿದಿದ್ದ. 2017ರ ಜುಲೈ 14ರಂದು ಕೆಂಪೇಗೌಡನಗರದ ಸನ್ಯಾಸಿಪಾಳ್ಯದ ಮನೆಯಲ್ಲಿ ಮಂಜುಳಾ ಮೇಲೆ ಆರೋಪಿ ಚೆನ್ನೇಗೌಡ ಆಸಿಡ್ ಎರಚಿದ್ದ. ಆಕೆ …
Read More »