Breaking News

Uncategorized

ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?

ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ.   ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …

Read More »

ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್‌ ಜಾರಕಿಹೊಳಿ

  ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್‌ ಪಾಟೀಲ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …

Read More »

ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು

ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಸೈನ್ಯ ಸೇರಲು ಬಯಸುವವರು ರೈಲು, ಬಸ್‌ ಸುಡುತ್ತಾರೆಯೇ? ಕೇಂದ್ರ ಸಚಿವ ಜೋಶಿ ಪ್ರಶ್ನೆ

ಹೊಸಪೇಟೆ (ವಿಜಯನಗರ): ‘ಸೈನ್ಯ ಸೇರಲು ಬಯಸುವವರು ರೈಲು ಗಾಡಿ, ಬಸ್‌ ಸುಡುತ್ತಾರೆಯೇ?’ ಹೀಗೆಂದು ಪ್ರಶ್ನಿಸಿದ್ದು ಕೇಂದ್ರ ಗಣಿ ಮತ್ತು ಕಲ್ಲಿದ್ದಲ್ಲು ಖಾತೆ ಸಚಿವ ಪ್ರಹ್ಲಾದ್‌ ಜೋಶಿ. ಹಂಪಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.   ‘ಎಲ್ಲದಕ್ಕೂ ವಿರೋಧ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಇದರಲ್ಲಿ ಕೆಲವು ಸಮಾಜ ವಿದ್ರೋಹಿ ಶಕ್ತಿಗಳು ಕೂಡಿಕೊಂಡಿವೆ. ಟೂಲ್‌ ಕಿಟ್‌ ಬಂದಿದ್ದನ್ನು ಗಮನಿಸಿರಬಹುದು. ಬಿಹಾರದಲ್ಲಿ ಮೊದಲು ಗಲಭೆ ಆರಂಭಗೊಂಡಿತ್ತು. ಅನಂತರ ಉತ್ತರ …

Read More »

ಬೆಳಗಾವಿಯಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ 6 ತಿಂಗಳಲ್ಲಿ ಲೋಕಾರ್ಪಣೆ

ಬೆಳಗಾವಿ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬೆಳಗಾವಿ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿಯ ಚೆನ್ನಮ್ಮಾಜಿ ವೃತ್ತದ ಸಮೀಪದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡಲಾಗುತ್ತಿರುವ 4 ಅಂತಸ್ತಿನ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಇಂದು ಬೆಳಗಾವಿಯ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗುತ್ತಿಗೆದಾರರು, …

Read More »

ಬೆಂಗಳೂರಲ್ಲಿ ಪ್ರಧಾನಿ ಮೋದಿ, ಖರ್ಚಾಗಿದ್ದು ಎಷ್ಟು ಕೋಟಿ?

ಬೆಂಗಳೂರು: ರಾಜ್ಯಕ್ಕೆ 2 ದಿನ ಪ್ರವಾಸಕ್ಕೆ ಆಗಿಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವವಾಗಿ ಸ್ವಾಗತ ಮಾಡಲಾಯಿತು. ಅಷ್ಟೇ ಪ್ರೀತಿಯಿಂದ ಅವರಿಗೆ ಬೀಳ್ಕೊಡಲಾಗಿದೆ. ರಾಜ್ಯ ರಾಜಧಾನಿಗೆ ಪ್ರಧಾನಿ ಮೋದಿ ಅವರು ಭೇಟಿ ಹಿನ್ನೆಲೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ? ಪ್ರಧಾನಿ ಆಗಮನದ ಹಿನ್ನೆಲೆ ರಸ್ತೆಯ ಥಳಕು-ಬಳಕಿಗಾಗಿ ಮತ್ತು ಮೂಲ ಸೌಕರ್ಯಕ್ಕಾಗಿ ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಬರೋಬ್ಬರಿ 24 ಕೋಟಿ ರೂ. ಖರ್ಚು ಮಾಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಪ್ರಧಾನಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು   ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …

Read More »

ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ,: ಪ್ರಧಾನಿ ಮೋದಿ

ಮೈಸೂರು: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.   ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು …

Read More »

ಅಗ್ನಿ ಪತ ಬಂದ್ ಕರೆ ಟುಸ್ಸ್ ಆಗಿದೆ ಎಲ್ಲವೂ ಎಂದಿನಂತೆ ಶುರು…

ಬೆಳಗಾವಿ: ಅಗ್ನಿಪಥ ಯೋಜನೆ ವಿರೋಧಿಸಿ ಸೋಮವಾರ ಬೆಳಗಾವಿ ಬಂದ್ ಕರೆ ನೀಡಿದ ಕಾರಣ, ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಬೆಳಿಗ್ಗೆಯೇ ಕ್ಷಿಪ್ರಕಾರ್ಯ ಪಡೆ, ನಗರ ಪೊಲೀಸರು, ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿಕೊಂಡು ನಗರದ ಪ್ರಮುಖ ವೃತ್ತ, ಚೌಕ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪರೇಡ್ ನಡೆಸಿದರು.   ಇಲ್ಲಿನ ರಾಣಿ ಚನ್ನಮ್ಮ ವೃತ್ತ, ಕಾಲೇಜ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್ಯ ರೋಡ್, ಖಡೇಬಜಾರ್ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಶಸ್ತ್ರಸಜ್ಜಿತ ಪಡೆಗಳು …

Read More »