ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ (ಸೆಪ್ಟೆಂಬರ್ 30) ಸತತ ನಾಲ್ಕನೇ ಬಾರಿಗೆ ಶೇ.05ರಷ್ಟು ರೆಪೋ ದರವನ್ನು ತಕ್ಷಣವೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿದ್ದು, ಇದರೊಂದಿಗೆ ರೆಪೋ ದರ ಶೇ.5.9ಕ್ಕೆ ಏರಿಕೆಯಾದಂತಾಗಿದೆ. ಪ್ರಸಕ್ತ ಸಾಲಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನಾಲ್ಕನೇ ಬಾರಿಗೆ ರೆಪೋ ದರ ಹೆಚ್ಚಳ ಮಾಡಿದಂತಾಗಿದೆ. ರೆಪೋ ದರ ಹೆಚ್ಚಳದಿಂದ ಗೃಹ, ವಾಹನ ಸಾಲದ ಬಡ್ಡಿದರ ಮತ್ತಷ್ಟು ಏರಿಕೆಯಾಗಿದೆ. ಕೋವಿಡ್ ಬಳಿಕ ಆರ್ ಬಿಐ ಮೇ ತಿಂಗಳಿನಲ್ಲಿ ರೆಪೋ …
Read More »ಬೆಳಗಾವಿ: ಸಾಂಸ್ಕೃತಿಕ ಸಂಗಮ ದಾಂಡಿಯಾ
ಬೆಳಗಾವಿ: ನವರಾತ್ರಿ ಉತ್ಸವಕ್ಕೆ ಬೆಳಗಾವಿಗೆ ಬರಬೇಕು ನೀವು. ಈ ಒಂಬತ್ತು ದಿನಗಳ ಪ್ರತಿ ರಾತ್ರಿಗೂ ರಂಗು ತುಂಬುತ್ತದೆ ದಾಂಡಿಯಾ. ಕನ್ನಡ, ಮರಾಠಿ, ಗುಜರಾತಿ ಮೂರೂ ಸಂಸ್ಕೃತಿಗಳ ‘ಕೂಡಲಸಂಗಮ’ ಈ ಕೋಲಾಟ. ಬೆಳಗಾವಿ ನಗರದ ಪ್ರತಿ ಗಲ್ಲಿ, ರಸ್ತೆ, ಬಡಾವಣೆ, ಅಪಾರ್ಟ್ಮೆಂಟ್, ಮೈದಾನಗಳು, ಕಲ್ಯಾಣ ಮಂಟಪಗಳು… ಹೀಗೆ ಎಲ್ಲೆಲ್ಲಿ ಜಾಗವಿದೆಯೋ ಅಲ್ಲಿ ದಾಂಡಿಯಾ ಗುಂಗೇರಿದೆ. ಈಗೀಗ ಹಳ್ಳಿಗಳಿಗೂ ಹರಿದುಹೋಗಿರುವ ಈ ನೃತ್ಯ ಗ್ರಾಮೀಣ ಹೃದಯಗಳನ್ನೂ ಕುಣಿಸುತ್ತಿದೆ. ಸಾಂಪ್ರದಾಯಿಕ ಹಾಡು, ಸಿನಿಮಾ ಗೀತೆಗಳನ್ನು …
Read More »ಹೊಸೂರು ರಾಷ್ಟ್ರೀಯ ಹೆದ್ದಾರಿಯ RTO ಕಚೇರಿ ಮೇಲೆ ಲೋಕಾಯುಕ್ತ ಸಂಸ್ಥೆ ದಾಳಿ
ಆನೇಕಲ್(ಬೆಂಗಳೂರು): ಹೊಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಟಿಒ ಕಚೇರಿ ಮೇಲೆ ದಿಡೀರ್ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಸಂಸ್ಥೆ ಸದ್ದು ಮಾಡಿದೆ. ಎರಡು ಜೀಪುಗಳಲ್ಲಿ ಆಗಮಿಸಿರುವ ಅಧಿಕಾರಿಗಳು 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ತಪಾಸಣೆ ನಡೆಸಿದೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶೀಲನೆಯಲ್ಲಿ ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತರು ಖಾಸಗಿ ವ್ಯಕ್ತಿಗಳನ್ನೂ ಕೂಡ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಲೆಕ್ಕಪತ್ರಗಳಲ್ಲಿ ನಮೂದಾದ ಹಣಕ್ಕಿಂತ ಮೂರು ಪಟ್ಟು ನಗದು …
Read More »ಮಾತನಾಡಲು ಅವಕಾಶವಿಲ್ಲ, ಪಾದಯಾತ್ರೆ ಬಿಟ್ಟು ನಮಗೆ ಬೇರೆ ದಾರಿಯಿಲ್ಲ; ರಾಹುಲ್ ಗಾಂಧಿ
ಚಾಮರಾಜನಗರ: ನಮ್ಮ ವಿಚಾರಗಳನ್ನು ಹೇಳಲು ಅವಕಾಶವಿಲ್ಲ. ಸಂಸತ್ತಿನಲ್ಲಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತದೆ, ವಿಧಾನಸಭೆಗಳಲ್ಲೂ ಮಾತನಾಡಲು ಅವಕಾಶವಿಲ್ಲ. ಆದ್ದರಿಂದ ಪಾದಯಾತ್ರೆ ಬಿಟ್ಟು ಬೇರೆ ದಾರಿ ನಮಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಗುಂಡ್ಲುಪೇಟೆಯ ಮೂಲಕ ಶುಕ್ರವಾರ ರಾಜ್ಯ ಪ್ರವೇಶಿಸಿದ ‘ಭಾರತ್ ಜೋಡೋ ಯಾತ್ರೆ’ಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ. ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು …
Read More »ದಸರಾ ಹಿನ್ನೆಲೆ KSRTCಯಿಂದ 2000 ಹೆಚ್ಚುವರಿ ಬಸ್ ಸೇವೆ
ಬೆಂಗಳೂರು: ಕೋವಿಡ್ ನಂತರ ಅದ್ಧೂರಿಯಾಗಿ ನಡೆಯುತ್ತಿರುವ ಮೈಸೂರು ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೊತೆಗೆ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಸಾರಿಗೆ ಬಸ್ ಸೇವೆಗಳನ್ನು ಒದಗಿಸಿದ್ದು, ಕಳೆಗುಂದಿರುವ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದೆ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ …
Read More »ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ: ಗುಂಡ್ಲುಪೇಟೆ ಶಾಸಕ
ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ ಆಗಿದೆ. ಇದೊಂದು ಹುಚ್ಚನ ಮದುವೆ ಇದ್ದಂತೆ ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಲೇವಡಿ ಮಾಡಿದ್ದಾರೆ. ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ಈಗ ಫೇಸ್ ವ್ಯಾಲ್ಯೂ ಇಲ್ಲ. ಜನರಿಗೆ ಈಗಾಗಲೇ ಅವರ ಕ್ಷಮತೆ ಬಗ್ಗೆ ಅರ್ಥವಾಗಿದೆ. ಇವರ ಕೈಯಲ್ಲಿ ದೇಶ ನಡೆಸಲು ಆಗ್ತಾ ಇಲ್ಲ ಎಂಬುದು ಗೊತ್ತಾಗಿದೆ. ಅವರ ಯಾತ್ರೆಯಿಂದ ಬಿಜೆಪಿಗೆ ಯಾವುದೇ ರೀತಿ ನಷ್ಟ ಇಲ್ಲ …
Read More »ಕಟೀಲ್ ಬಫೂನ್ ಇದ್ದಂತೆ: ಅವರ ಮೆದುಳು-ನಾಲಿಗೆಗೆ ಸಂಪರ್ಕವೇ ಇರಲ್ಲ; ಎಂ.ಬಿ.ಪಾಟೀಲ್
ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಅವರು `ಬಫೂನ್’ ಇದ್ದಂತೆ. ಅವರಿಗೆ ನಾಲಿಗೆ ಮತ್ತು ಮದುಳಿಗೆ ಸಂಪರ್ಕವೇ ಇಲ್ಲದಿದ್ದು, ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಅವರು ವ್ಯಂಗ್ಯವಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ನಾಲಿಗೆ-ಮೆದುಳಿಗೆ ಸಂಪರ್ಕವಿಲ್ಲದಂತೆ ಮಾತನಾಡುತ್ತಾರೆ. ಅವರು ಒಂದು ರೀತಿ `ಬಫೂನ್’ ಇದ್ದಂತೆ. …
Read More »ಭೂ ಪರಿವರ್ತನೆ ಸರಳ ಕ್ರಮ: ಸಚಿವ ಆರ್.ಅಶೋಕ್
ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೊಳಿಸಲಾಗುವುದು. ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಹೇಳಿದರು. ಇದರಿಂದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸಹಕಾರಿಯಾಗಲಿದೆ. ನಗರ ಪ್ರದೇಶದಲ್ಲಿ ಭೂ ಪರಿವರ್ತನೆಗೆ …
Read More »ಸರ್ಕಾರ ಮಾಡಬೇಕಾದ ಕೆಲಸವನ್ನು ನಟಿ ಲೀಲಾವತಿ ಮಾಡಿದ್ದಾರೆ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು: ಸರ್ಕಾರ ಮಾಡುವ ಕೆಲಸವನ್ನು ಹಿರಿಯ ನಟಿ ಲೀಲಾವತಿ ಅವರು ಮಾಡಿದ್ದಾರೆ. ಆಸ್ಪತ್ರೆಗೆ ಬೇಕಾದ ಸೌಕರ್ಯಗಳು, ಸೌಲಭ್ಯಗಳು, ಸಿಬ್ಬಂದಿಗಳನ್ನು ಒದಗಿಸುವ ಪ್ರಾಮಾಣಿಕ ಕೆಲಸ ಸರ್ಕಾರದಿಂದ ಮಾಡುತ್ತೇವೆ. ಆಸ್ಪತ್ರೆಯ ಉದ್ಘಾಟನೆಗೆ ಬರದಿದ್ದರೆ ನಮ್ಮ ಹುದ್ದೆಯ ಘನತೆಗೆ ಚ್ಯುತಿ ಬರುತ್ತಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಸೋಲದೇವನಹಳ್ಳಿ ಗ್ರಾಮದಲ್ಲಿ ಹಿರಿಯ ನಟಿ ಲೀಲಾವಲಿ ಅವರು ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಈ ಭಾಗದಲ್ಲಿ ಪಶುವೈದ್ಯಕೀಯ ಆಸ್ಪತ್ರೆ ಆಗಬೇಕಾಗಿದೆ …
Read More »ಕಾರಲ್ಲಿ ಅತ್ಯಾಚಾರ, ವಿಷ ಕುಡಿದು ಆತ್ಮಹತ್ಯೆ ಯತ್ನ.. ಇದು ಲವ್, ಸೆಕ್ಸ್, ದೋಖಾ ಸ್ಟೋರಿ
ಠಾಣೆ (ಮಹಾರಾಷ್ಟ್ರ): ಇಲ್ಲಿನ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿಯ ಜೀವನದಲ್ಲಿ ಲವ್ ಸೆಕ್ಸ್ ದೋಖಾ ಹಿಂದಿ ಚಲನಚಿತ್ರದ ರೀತಿಯಲ್ಲಿ ಘಟನೆಗಳು ಘಟಿಸಿದ್ದು ಅಚ್ಚರಿಯಾದರೂ ನಿಜ. ಈ ಯುವತಿಯು ಒಬ್ಬಾತನ ಪ್ರೀತಿಯ ಬಲೆಗೆ ಬಿದ್ದಿದ್ದಳು. ಪ್ರೀತಿಯ ನಾಟಕವಾಡುತ್ತಲೇ ಆತ ಅನೇಕ ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಆದರೆ, ಇದೆಲ್ಲ ಸಾಕು ನಾವಿನ್ನು ಲಗ್ನವಾಗೋಣ ಎಂದಾಗ ಮಾತ್ರ ಆತ ತನ್ನ ಅಸಲಿ ಬಣ್ಣ ತೋರಿಸಲಾರಂಭಿಸಿದ್ದ. ಹೀಗಾಗಿ ಯುವತಿಯು ಬೇರೆ ದಾರಿ ಕಾಣದೇ ಆನ್ಲೈನ್ ಮೂಲಕ ವಿಷ …
Read More »
Laxmi News 24×7