Breaking News

Uncategorized

ಮಹಾಲಯ ಅಮಾವಾಸ್ಯೆ- ಏನಿದರ ಮಹತ್ವ?;

ಅಮಾವಾಸ್ಯೆ’ ಎಂದರೆ ‘ಅಮಾಯಾಂ ವಸತಃ’. ಸೂರ್ಯ ಚಂದ್ರರು ಒಂದೇ ಮನೆಯಲ್ಲಿರುವುದು (ಸರಳ ರೇಖೆಯಲ್ಲಿ) ಎಂದರ್ಥ. ಭಾದ್ರಪದ ಮಾಸದ ಅಮಾವಾಸ್ಯೆ ವಿಶೇಷವಾದದ್ದು. ಆದ್ದ ರಿಂದ ಇದನ್ನು ‘ಮಹಾಲಯ ಅಮಾವಾಸ್ಯೆ’ ಎಂದು ಕರೆದರು. ಈ ಅಮಾವಾಸ್ಯೆ ಪಿತೃಪಕ್ಷದ ಕೊನೆಯ ದಿನ ಬರುತ್ತದೆ. ಇದು ಗತಿಸಿದ ಹಿರಿಯರನ್ನು ನೆನೆದು ಅವರಿಗೆ ತರ್ಪಣ, ಎಡೆ ಹಾಗೂ ಶ್ರಾದ್ಧಗಳನ್ನು ಮಾಡುವ ದಿನ. ಶ್ರಾದ್ಧ ಪದವು ‘ಶ್ರದ್ಧಾ’ ಪದ ದಿಂದ ಬಂದಿದೆ. ಇದರಲ್ಲಿ ಪಾರ್ವಣ, ಆಮಾ, ಸಂಕಲ್ಪ ಹಾಗೂ …

Read More »

ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಈ ಹಿಂದಿನ ಆದೇಶದಂತೆ ಸೆ. 27ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅವಧಿ ಮುಂದುವರೆಯಲಿದೆ. ಈ ಹಿಂದೆ ಸೆ.14ರಂದು ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯ ಹಿನ್ನೆಲೆಯಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ನ್ಯಾಯಾಲಯವು​​ ನ್ಯಾಯಾಂಗ ಬಂಧನದ ಅವಧಿಯನ್ನು​ …

Read More »

ಹಗರಣಗಳ ಸರಮಾಲೆಯ ಖ್ಯಾತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಕಾಲದ ಹಗರಣಗಳ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ‌, ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡು ಓಡಾಡಿದ ಖ್ಯಾತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ದೂರಿದೆ.   ‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಹಗರಣ ನಡೆದಿದೆ. ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿನ ಕಮಿಷನ್, ಸ್ಟೀಲ್ ಬ್ರಿಡ್ಜ್ …

Read More »

ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆ – ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್‌ಡಿಬಿಗೆ ಘೋಷಿತ ಅನುದಾನ 3,000 ಕೋಟಿ ರೂಪಾಯಿಯಲ್ಲಿ ಕೇವಲ 1,500 ರೂಪಾಯಿ ಕೋಟಿ ಮಾತ್ರ ಬಿಡುಗಡೆ …

Read More »

ವಕ್ಫ್ ಆಸ್ತಿ ವರದಿ, 40% ಸರ್ಕಾರ ಹಗರಣ ಗಲಾಟೆ ನಡುವೆ ಮಳೆಗಾಲದ ಅಧಿವೇಶನ ಬಲಿ

ಬೆಂಗಳೂರು: ವಿಧಾನ ಪರಿಷತ್ (Vidhana Parishad) ಕಲಾಪದ (Session) ಕೊನೆ ದಿನವೂ ಗದ್ದಲ ಗಲಾಟೆಗೆ ಕಾರಣವಾಯ್ತು. 40% ಸರ್ಕಾರ, ವಕ್ಫ್ ಆಸ್ತಿ (Wakf Property) , BMS ಟ್ರಸ್ಟ್‌ ಹಗರಣದ ಗಲಾಟೆ ಸದನದಲ್ಲಿ ಸದ್ದು ಮಾಡಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸಭಾಪತಿಗಳು ಮುಂದೂಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು …

Read More »

ಸಾಲದ ಸುಳಿಯಲ್ಲಿ ಬಿಎಂಟಿಸಿ ನಿಗಮ : ಶ್ರೀರಾಮುಲು

ಬೆಂಗಳೂರು: ಬಿಎಂಟಿಸಿ (BMTC) ನಿಗಮ ಸಾಲದ ಸುಳಿಯಲ್ಲಿ ಸಿಲುಕಿದೆ ಅಂತ ಖುದ್ದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಒಪ್ಪಿಕೊಂಡಿದ್ದಾರೆ. ವಿಧಾನ ಪರಿಷತ್ (Vidhan Parishad) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಗೋವಿಂದ್ ರಾಜು (Govida Raju) ಬದಲಾವಣೆ ಯುಬಿ ವೆಂಕಟೇಶ ಬಿಎಂಟಿಸಿ ಸಾಲದ ಬಗ್ಗೆ ಪ್ರಶ್ನೆ ಕೇಳಿದರು. ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಶ್ರೀರಾಮುಲು ಅವರು, 5 ವರ್ಷಗಳಲ್ಲಿ ಬಿಎಂಟಿಸಿ 1,324 ಕೋಟಿ ಸಾಲ ಮಾಡಿದೆ. ಸಾಲವನ್ನು ಬಸ್ ಖರೀದಿ, …

Read More »

ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ

ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ.   ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ …

Read More »

ಮಹಾರಾಷ್ಟ್ರದ ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ರವೀನಾ ಟಂಡನ್

ಮುಂಬಯಿ: ಬಾಲಿವುಡ್ ನಟಿ ರವೀನಾ ಟಂಡನ್ ಅವರು ಮಹಾರಾಷ್ಟ್ರದ ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ಗುರುವಾರ ನೇಮಕಗೊಂಡಿದ್ದಾರೆ. “ಮಹಾರಾಷ್ಟ್ರಕ್ಕೆ ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ರವೀನಾ ಅವರ ಉತ್ಸಾಹ ಮತ್ತು ವನ್ಯಜೀವಿಗಳ ಮೇಲಿನ ಪ್ರೀತಿ ಮತ್ತು ಅವರ ಸಂರಕ್ಷಣೆಗೆ ನಾವು ಅನೇಕ ಸಂದರ್ಭಗಳಲ್ಲಿ ಸಾಕ್ಷಿಯಾಗಿದ್ದೇವೆ” ಎಂದು ಮಹಾರಾಷ್ಟ್ರ ಅರಣ್ಯ ಸಚಿವ ಸುಧೀರ್ ಮುಂಗಂತಿವಾರ್ ಹೇಳಿದ್ದಾರೆ.     ಇದು ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ಸೇವೆ ಸಲ್ಲಿಸಲು ಒಂದು ಗೌರವ ಎಂದು ಟಂಡನ್ ಬಣ್ಣಿಸಿ “ಮಹಾರಾಷ್ಟ್ರ …

Read More »

ಭಾರತಕ್ಕೆ ನಕಲಿ ನೋಟು ತಲುಪಿಸುತ್ತಿದ್ದ ಪಾಕಿಸ್ತಾನ ಐಎಸ್‌ ಐ ಏಜೆಂಟ್‌ ನೇಪಾಳದಲ್ಲಿ ಹತ್ಯೆ!

ಭಾರತಕ್ಕೆ ಭಾರೀ ಪ್ರಮಾಣದಲ್ಲಿ ನಕಲಿ ನೋಟುಗಳ ಸರಬರಾಜು ಮಾಡುತ್ತಿದ್ದ ಪಾಕಿಸ್ತಾನದ ಐಎಸ್‌ ಐ ಏಜೆಂಟ್‌ ನೇಪಾಳದಲ್ಲಿ ಗುಂಡಿನ ದಾಳಿಯಲ್ಲಿ ಹತ್ಯೆಗೊಳಗಾಗಿದ್ದಾನೆ. ಐಎಸ್‌ ಐ ಏಜೆಂಟ್‌ ಲಾಲ್‌ ಮೊಹಮದ್‌ (55) ಅಲಿಯಾಸ್‌ ಮೊಹಮದ್‌ ಧೀರಜ್ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸೆಪ್ಟೆಂಬರ್‌ 19ರಂದು ಹತ್ಯೆಗೊಳಗಾಗಿದ್ದಾನೆ. ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಸಿಸಿಟಿವಿ ದೃಶ್ಯಗಳು ಭಾರತದ ಮಾಧ್ಯಮಗಳಿಗೆ ಲಭ್ಯವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶಗಳಲ್ಲಿ ತಯಾರಿಸುತ್ತಿದ್ದ ನಕಲಿ ನೋಟುಗಳನ್ನು ನೇಪಾಳಕ್ಕೆ ರವಾನಿಸಿ, ಅಲ್ಲಿಂದ ಭಾರತಕ್ಕೆ ತಲುಪಿಸುವ ಕೆಲಸವನ್ನು ಲಾಲ್‌ …

Read More »

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …

Read More »