Breaking News

Uncategorized

ಪಿಎಸ್‌ಐ ಕವಿತಾ ಬಸವರಾಜ್ ಹೊರಟ್ಟಿ ಅವರ ಮಧ್ಯೆ ಮಾತಿನ ಚಕಮಕಿ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದ ಶಾರದಾ ಹೈಸ್ಕೂಲ್‌ಗೆ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಹಾಗೂ ಮಹಿಳಾ ಪಿಎಸ್‌ಐ ಕವಿತಾ ಬಂದಿದ್ದು, ಅವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಚುನಾವಣಾಧಿಕಾರಿ ಮಾಡಿದ ಆದೇಶವನ್ನು ತಮ್ಮ ಬೆಂಬಲಿಗರು ಪಾಲನೆ ಮಾಡುತ್ತಿಲ್ಲ, ಮತಗಟ್ಟೆ ಕೇಂದ್ರದಿಂದ 200 ಮೀಟರ್ ದೂರದಲ್ಲಿರಬೇಕು ಎಂದು ಪಿಎಸ್‌ಐ ಹೇಳುತ್ತಿದ್ದಂತೆ ಹೊರಟ್ಟಿ ಅವರು ಪಿಎಸ್‌ಐ ಕವಿತಾ ಅವರಿಗೆ, ಯಾರ‍್ರೀ ಅವಾ ಡಿಸಿ? ಎಂದು ಆವಾಜ್ ಹಾಕಿದ್ದಾರೆ. 1 ಟೇಬಲ್ …

Read More »

ವಾಯುವ್ಯ ಶಿಕ್ಷಕರ, ಶೇ.42 ಪದವೀಧರರ ಮತದಾನ ಮಧ್ಯಾಹ್ನ 2 ಗಂಟೆವರೆಗೆ ಶೇ.59.74

ವಾಯುವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಚುರುಕಿನಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗಾವಿಯ ವಾಯುವ್ಯ ಶಿಕ್ಷಕರ ಮತದಾನವು ಮಧ್ಯಾಹ್ನ 2 ಗಂಟೆವರೆಗೆ ಶೇ.59.74ರಷ್ಟಾಗಿದೆ. ಅದೇ ರೀತಿ ವಾಯುವ್ಯ ಪದವೀಧರ ಮತದಾನವು ಶೇ.42ರಷ್ಟಾಗಿದೆ. ಇನ್ನು ಧಾರವಾಡ ಪಶ್ಚಿಮ ಶಿಕ್ಷಕರ ಮತದಾನವು ಶೇ.38.86ರಷ್ಟು ಮತದಾನ ಆಗಿದೆ.

Read More »

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಗೆಲ್ಲುತ್ತದೆ ಎಂದ ಜೆಡಿಎಸ್ ಎಂಎಲ್‌ಸಿ

 ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲ್ಲುತ್ತಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಹೇಳಿದರು. ಆಪ್ತ ಕೀಲಾರ ಜಯರಾಂ ಅವರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ವಿರುದ್ಧ ಸಿಡಿದೆದ್ದಿರುವ ಮರಿತಿಬ್ಬೇಗೌಡ ಅವರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ನ ಮಧು ಮಾದೇಗೌಡ ಗೆದ್ದೇ ಗೆಲ್ತಾರೆ. ಕ್ಷೇತ್ರದಲ್ಲಿ ಅವರ …

Read More »

ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ ಪ್ರಕರಣ – ಮೂವರು ದುಷ್ಕರ್ಮಿಗಳು ವಶಕ್ಕೆ

ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ್ದ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇಶಪಾಂಡೆ ಗಲ್ಲಿಯ ಮೊಹ್ಮದ್ ಶೋಯೆಬ್ ಅಬ್ದುಲ್ ಗಫರ್ ಹಕೀಮ್, ಅಮನ್ ಮೊಕಾಶಿ ಹಾಗೂ ಅರ್ಬಾಜ್ ಮೊಕಾಶಿ ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೇಶಪಾಂಡೆ ಗಲ್ಲಿಯ ಕಾಂಪ್ಲೆಕ್ಸ್‌ಗೆ ನುಗ್ಗಿ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇತು …

Read More »

ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ಹಣ ಹಂಚಿಕೆ

ಮಂಡ್ಯ: ನಾಳೆ 2 ಪದವೀಧ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮತದಾರರನ್ನು ಓಲೈಸಿಕೊಳ್ಳೋದಕ್ಕಾಗಿ, ಅಭ್ಯರ್ಥಿಗಳು ಹಣ, ಹೆಂಡದ ಹೊಳೆಯನ್ನೇ ಹರಿಸುತ್ತಿರೋದಾಗಿ ತಿಳಿದು ಬಂದಿದೆ. ಮಂಡ್ಯದಲ್ಲಿ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಮತದಾರರಿಗೆ 2000 ಸಾವಿರ ರೂ ಹಂಚಿಕೆ ಮಾಡಿರೋದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪದವೀಧರ ಚುನಾವಣೆಯ ಮತದಾರರಿಗೆ ರೂ.2000 ಹಣವನ್ನು ಕವರ್ ನಲ್ಲಿ ಇರಿಸಿ, ಮತದಾರರಿಗೆ ಹಂಚಿದಂತ ವೀಡಿಯೋ, ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ …

Read More »

ಪ್ರತಿನಿತ್ಯ 3 ಕೆಜಿ ಅನ್ನ, 4 ಕೆಜಿ ರೊಟ್ಟಿ, 3.5 ಕೆಜಿ ಮಾಂಸ ತಿನ್ನುವ ಇಬ್ಬರು ಹೆಂಡಿರ ಗಂಡನ ಕಣ್ಣೀರ ಕತೆಯಿದು!

ಪಟನಾ: ನೀವು ಮೇಲೆ ನೋಡುತ್ತಿರುವ ವ್ಯಕ್ತಿಯ ಹೆಸರು ಮೊಹಮ್ಮದ್​ ರಫಿಕ್​ ಅದ್ನಾನ್. ವಯಸ್ಸು 30 ವರ್ಷ. ಈತ ಬಿಹಾರ ಮೂಲದವನು. 200 ಕೆಜಿ ತೂಕವಿದ್ದಾನೆ. ಸಾಮಾನ್ಯ ಬೈಕ್​ ಆತನ ಭಾರವನ್ನು ತಡೆಯುವುದೇ ಇಲ್ಲ. ಹೀಗಾಗಿ ಸದಾ ಬುಲೆಟ್ ಗಾಡಿಯಲ್ಲೇ ಈತ ಓಡಾಡುತ್ತಾನೆ. ಪ್ರತಿದಿನ ಮಾಂಸಾಹಾರ ಸೇರಿದಂತೆ ದಿನವೊಂದಕ್ಕೆ 14 ರಿಂದ 15 ಕೆಜಿ ಆಹಾರ ತಿನ್ನುತ್ತಾನೆ ಅಂದರೆ, ಈತನಿಗಿಂತ ಸುಖ ಪುರುಷ ಮತ್ಯಾರು ಇಲ್ಲ ಅಂತಾ ನೀವು ಅಂದುಕೊಳ್ಳಬಹುದು. ಆದರೆ, ಈತನ …

Read More »

ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

ರಾಜ್ಯದಕಲ್ಲಿ ಕಳೆದ 10 ದಿನಗಳಿಂದ ಕೋವಿಡ್ 19 ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊವಿಡ್ ಪಾಸಿಟಿವಿಟಿ ದರ ಈಗಾಗಲೇ 2.14% ರಷ್ಟಿದೆ. ಹಾಗಾಗಿ ಈ ಕೂಡಲೇ ಕೊವಿಡ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ …

Read More »

ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಗೆ ಸಿದ್ದರಾಮಯ್ಯ ಕೊಟ್ಟ ಸಲಹೆ

ಬೆಂಗಳೂರು, ಜೂನ್ 10: ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳುವುದು ಹೇಗೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವ್ಯಂಗ್ಯವಾಗಿ ಸಲಹೆಯನ್ನು ನೀಡಿದ್ದಾರೆ. ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ವಿಚಾರದಲ್ಲಿ ಸಾಲುಸಾಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ತಕ್ಷಣದಿಂದಲೇ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ. “ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು …

Read More »

ಬೆಳಗಾವಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಮಹಾಲಕ್ಷ್ಮೀ ದೇವಿ ದೇವಸ್ಥಾನ ಜಾಗವನ್ನು ಅನಧಿಕೃತವಾಗಿ ದೇವಸ್ಥಾನದ ಪೂಜಾರಿ ಮಾರಾಟ ಮಾಡಿದ್ದಾನೆ.

ಬೆಳಗಾವಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಮಹಾಲಕ್ಷ್ಮೀ ದೇವಿ ದೇವಸ್ಥಾನ ಜಾಗವನ್ನು ಅನಧಿಕೃತವಾಗಿ ದೇವಸ್ಥಾನದ ಪೂಜಾರಿ ಮಾರಾಟ ಮಾಡಿದ್ದಾನೆ. ದೇವಸ್ಥಾನ ಜಾಗ ದೇವಸ್ಥಾನಕ್ಕೆ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಬೆಳಗಾವಿ ಗ್ರಾಮೀಣ ಠಾಣೆ ಎಸಿಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹೌದು ಹೊನ್ಯಾಳ ಗ್ರಾಮದಲ್ಲಿ 700-800 ವರ್ಷಗಳ ಹಿಂದೆ ಸ್ಥಾಪನೆ ಆಗಿರುವ ಹೊನ್ಯಾಳ ಗ್ರಾಮದಲ್ಲಿ 4 ಎಕರೆ 28 ಗುಂಟೆ ಜಮೀನಿನಲ್ಲಿ ಗ್ರಾಮದೇವಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಪಯೋಗ ಮಾಡಿಕೊಂಡು …

Read More »