Breaking News

Uncategorized

ಹೋಳಿಗೆ ದಾಸೋಹಕ್ಕೆ ನಟ ಸಾಯಿ ಕುಮಾರ್ ಹಾಗೂ ಸಚಿವ ಗೋವಿಂದ ಕಾರಜೋಳ ಚಾಲನೆ

ಬೆಳಗಾವಿ :ಕುಂದಾನಗರಿ ಬೆಳಗಾವಿಯಲ್ಲಿ ಮೂರು ವರ್ಷಗಳ ಬಳಿಕ ಅದ್ಧೂರಿ ಕನ್ನಡ ರಾಜ್ಯೋತ್ಸವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬರುವವರಿಗೆಲ್ಲಾ ಹೋಳಿಗೆ ಊಟ ಹಾಕಿಸಲು ನಿರ್ಧರಿಸಲಾಗಿದೆ. ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಈ ಬಾರಿ ಅದ್ದೂರಿಯಾಗಿ ರಾಜ್ಯೋತ್ಸವ ನಡೆಸಲು ತೀರ್ಮಾನಿಸಿದ್ದೇವೆ, ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು …

Read More »

ಬೆಳಗಾವಿಗೆ ಬರುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ವಾಪಸ್‌ ಕಳುಹಿಸಿದ ಪೊಲೀಸರು

ಚೀಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ. ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ …

Read More »

ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ.

ಬೆಂಗಳೂರು: ಶಿಕ್ಷಣ ಇಲಾಖೆಯಿಂದ (Education Department) ಹೊಸ ಪಿಯು ಕಾಲೇಜು ಪ್ರಾರಂಭಿಸಲು ಆದೇಶ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು‌ 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಲಾಗಿದೆ. ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಲಾದ ಸ್ಥಳಗಳ ಪಟ್ಟಿ ಈ ಕೆಳಗಿನಂತಿದೆ. 1.ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ. 2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ …

Read More »

ಬಿಲ್‌ ಪಾವತಿಗೆ ಶೇ.40 ಕಮಿಷನ್‌ ಬೇಡಿಕೆ; ಗುತ್ತಿಗೆದಾರನಿಂದ ದಯಾಮರಣಕ್ಕೆ ಅರ್ಜಿ

ಹುಬ್ಬಳ್ಳಿ: ಕೋವಿಡ್‌-19 ವೇಳೆ ಗ್ರಾ.ಪಂ.ಗಳಿಗೆ ಪರಿಕರ ಪೂರೈಸಿದ್ದ ಬಿಲ್‌ ಪಾವತಿಗೆ ಅಧಿಕಾರಿಗಳು ಶೇ.40ಕ್ಕಿಂತ ಹೆಚ್ಚಿನ ಕಮಿಷನ್‌ ಕೇಳಿ ಬಿಲ್‌ ತಡೆ ಹಿಡಿದಿದ್ದಾರೆ. ಈಗ ತಾನು ಸಾಲದಿಂದ ಕಂಗೆಟ್ಟಿದ್ದು, ಆದ್ದರಿಂದ ದಯಾಮರಣಕ್ಕೆ ಅವಕಾಶ ನೀಡುವಂತೆ ನಗರದ ಗುತ್ತಿಗೆದಾರರೊಬ್ಬರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.   ಕೇಶ್ವಾಪುರ ಸುಳ್ಳ ರಸ್ತೆ ಮನೋಜ ಪಾರ್ಕ್‌ ನಿವಾಸಿ, ಗುತ್ತಿಗೆದಾರ ಬಸವರಾಜ ಅಮರಗೋಳ ಅವರು ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 2020-21ರಲ್ಲಿ ಕೇಂದ್ರ …

Read More »

‘ಇನ್‌ಸ್ಪೆಕ್ಟರ್‌ ಹುದ್ದೆಗೆ ₹70 ರಿಂದ ₹80 ಲಕ್ಷ ಕೊಟ್ಟು ಬಂದರೆ ಹೃದಯಾಘಾತವಾಗದೆ ಇನ್ನೇನಾಗುತ್ತದೆ;M.T.B.

ಬೆಂಗಳೂರು: ‘ಇನ್‌ಸ್ಪೆಕ್ಟರ್‌ ಹುದ್ದೆಗೆ ₹70 ರಿಂದ ₹80 ಲಕ್ಷ ಕೊಟ್ಟು ಬಂದರೆ ಹೃದಯಾಘಾತವಾಗದೆ ಇನ್ನೇನಾಗುತ್ತದೆ’ ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೊವನ್ನು ಲಗತ್ತಿಸಿ ಟ್ವೀಟ್‌ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು, ‘ಈಗ ಸರ್ಕಾರವೇ ಸತ್ಯ ಹೇಳಿದೆ! ಸದ್ಯ, ಸಾವಿನಲ್ಲೂ ಸತ್ಯ ಹೇಳುವ ಧೈರ್ಯವನ್ನು ಸರ್ಕಾರ ಮಾಡಿದೆ. ಬೊಮ್ಮಾಯಿ ಸಂಪುಟದ ಸಚಿವರೇ ವಿಷಯ ಬಹಿರಂಗಪಡಿಸಿದ್ದಾರೆ. ಸಚಿವ ಎಂ.ಟಿ.ಬಿ. …

Read More »

ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ”

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಸುವರ್ಣಸೌಧದ ಎದುರು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ ವೀರವನಿತೆಯ ವೇಷಭೂಷಣದಲ್ಲಿ ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಇದರಲ್ಲಿ ಭಾಗಿಯಾಗಿದ್ದರು. ಸಂಸದೆ ಮಂಗಲ ಅಂಗಡಿ, ಸಚಿವ ಶಶಿಕಲಾ …

Read More »

ಸೈಕ್ಲಿಂಗ್‍: ಲಾಯಪ್ಪ, ಪ್ರೀತಿ ಪ್ರಥಮ

ಚನ್ನಮ್ಮನ ಕಿತ್ತೂರು: ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ನಡೆದ ರಾಜ್ಯಮಟ್ಟದ ಸೈಕ್ಲಿಂಗ್‍ನ ಪುರುಷರ ವಿಭಾಗ(24 ಕಿ.ಮೀ.)ದಲ್ಲಿ ಲಾಯಪ್ಪ ಮುಧೋಳ ಪ್ರಥಮ ಸ್ಥಾನ ಗಳಿಸಿದರು. ಪ್ರಭು ಕಾಲತಿಪ್ಪಿ, ಯಲ್ಲೇಶ ಹುಡೇದ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಮಹಿಳೆಯರ ವಿಭಾಗದ(14 ಕಿ.ಮೀ.) ಸ್ಪರ್ಧೆಯಲ್ಲಿ ಪ್ರೀತಿ ಹಳಬರ ಮೊದಲ ಸ್ಥಾನ ಗಳಿಸಿದರೆ, ಅಮೂಲ್ಯ ಪೂಜೇರಿ ದ್ವಿತೀಯ, ಕಾವೇರಿ ಕಾರದಗಿ ತೃತೀಯ ಸ್ಥಾನ ಪಡೆದುಕೊಂಡರು. ಪುರುಷರ ಇಂಡಿಯನ್ ಮೇಡ್ ಸೈಕ್ಲಿಂಗ್(24 ಕಿ.ಮೀ.) ಸ್ಪರ್ಧೆಯಲ್ಲಿ …

Read More »

ಸ್ತಗಿತ ಹೊಂದಿದ್ದ ವಾಟ್ಸ್ ಆ್ಯಪ್ ಪುನರ್ ಆರಂಭ ಗ್ರಹಣ ಹಿಡಿದಿತ್ತು ಅಂತ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳ ಸುರಿಮಳೆ

lಮುಂಬೈ: ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಈ ಬಗ್ಗೆ ಇದುವರೆಗೂ ವಾಟ್ಸಪ್ ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವಿಶ್ವದಾದ್ಯಂತ ಮಧ್ಯಾಹ್ನ ಸುಮಾರು 12.30ರಿಂದ ವಾಟ್ಸಪ್ ಕಾರ್ಯ ನಿರ್ವಹಿಸುತ್ತಿಲ್ಲ. ವಾಟ್ಸಪ್ ನಲ್ಲಿ ಮೆಸೇಜ್ ಗಳು ಕಳುಹಿಸಲು ಸಾಧ್ಯವಾಗದ ಕಾರಣಕ್ಕೆ ತಾವು ಮೊಬೈಲ್ ರಿ ಸ್ಟಾರ್ಟ್ ಮಾಡಿರುವುದಾಗಿ …

Read More »

ಬಸ್‌ ಪ್ರಯಾಣ ದರ ದುಬಾರಿ: ಒಂದು ಸಾವಿರ ಪ್ರಕರಣ ದಾಖಲು

  ಬೆಂಗಳೂರು: ಬಸ್‌ ಪ್ರಯಾಣ ದರ ದುಬಾರಿ ಆಗಿರುವುದರಿಂದ ಕಾರ್ಯಾಚರಣೆ ನಡೆಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ರಾಜ್ಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ.   ‘ಬೆಂಗಳೂರಿನಲ್ಲೇ 450 ಪ್ರಕರಣಗಳನ್ನು ದಾಖಲಿಸಲಾಗಿದ್ದು, ರಾಜ್ಯದ ವಿವಿಧೆಡೆಯೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಟ್ಟಾರೆ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಪ್ರಯಾಣ ದರ ಹೆಚ್ಚಳವಷ್ಟೇ ಅಲ್ಲದೇ, ದಾಖಲೆಗಳು ಸಮರ್ಪಕವಾಗಿ ಇಲ್ಲದ ಪ್ರಕರಣಗಳೂ ಇದರಲ್ಲಿ ಸೇರಿವೆ’ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ವಿವರಿಸಿದರು. ‘ದಸರಾ …

Read More »

ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ

ಚಿತ್ರದುರ್ಗ : ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಿವೇಶನದ ಸಮಸ್ಯೆ ಹಿನ್ನೆಲೆ‌ ಸಹಾಯ ಮಾಡುವ ನೆಪದಲ್ಲಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೋದರ ಮಾವನ ಮಗನಾದ ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧವೇ ಯುವತಿ ಠಾಣೆಯಲ್ಲಿ ದೂರು ನೀಡಿದ್ದಾರೆ, ಘಟನೆ ವಿವರ : ದೂರುದಾರ ಯುವತಿಗೆ ಉಮೇಶ್ ಸೋದರ ಮಾವನ ಮಗನಾಗಬೇಕು, ಉಮೇಶ್ ಕಳೆದ ಐದು ವರ್ಷದ ಹಿಂದೆ ದಾವಣಗೆರೆಯಲ್ಲಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು …

Read More »