ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ …
Read More »ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!
ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband) ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ ಜಗಳವಾಡಿದ್ದಾನೆ. …
Read More »ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ
ಬೆಳಗಾವಿ: ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಕನ್ನಡದ ಹಲವು ಸಾಹಿತಿಗಳು, ಕವಿಗಳು ತಮ್ಮ ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ. ಈಗ ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ. 9ನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ‘ಶಬ್ದಗಳು’ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ …
Read More »ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ
ಬೆಳಗಾವಿ – ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ ಪಾಟೀಲ ನೇತೃತ್ವದ ತಂಡ ಅಶೋಕನಗರ ಇಎಸ್ಐ ಆಸ್ಪತ್ರೆಯ ಸಮೀಪ ದಾಳಿ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ, ೧) ಸರ್ಫರಾಜ ಸಜರ ಮುಲ್ಲಾ, (೩೫) ಸಾ: ನ್ಯೂ ಗಾಂಧಿನಗರ ಬೆಳಗಾವಿ. ೨) ಜಾಫರ ಹುಸೇನಸಾಬ ಸೊಲ್ಲಾಪೂರ, (೨೪) ಸಾ: ವಡ್ಡರವಾಡಿ ಬೆಳಗಾವಿ, ೩) ನರೇಶ …
Read More »ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು.
ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …
Read More »ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ.
ಬಿ.ವೈ.ವಿಜಯೇಂದ್ರಗೆ ಒಳ್ಳೆಯ ಭವಿಷ್ಯವಿದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕನಾಗಿ ಹೊರ ಹೊಮ್ಮುತ್ತಾನೆ. ಯಡಿಯೂರಪ್ಪನವರು, ಸಂಘ ಪರಿವಾರ, ಪಕ್ಷದ ಹಿರಿಯರ ಆಶೀರ್ವಾದ ಅವರ ಮೇಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ವಿಜಯೇಂದ್ರಗೆ ಎಂಎಲ್ಸಿ ಟಿಕೆಟ್ ತಪ್ಪಿದ ವಿಚಾರಕ್ಕೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ನಗರ ಬಿಜೆಪಿ ಕಚೇರಿಯಲ್ಲಿ ಉತ್ತರಿಸಿದ ಸಚಿವ ಮುರುಗೇಶ್ ನಿರಾಣಿ ರಾಜ್ಯದ ಉಪಾಧ್ಯಕ್ಷನಾಗಿ ವಿಜಯೇಂದ್ರ ಸಧ್ಯ ಕೆಲಸ ಮಾಡುತ್ತಿದ್ದಾನೆ. ಯುವಕನಾಗಿ ಇರೋದರಿಂದ ಇಡೀ …
Read More »ಡಾ.ರಾಜ್ಕುಮಾರ್ ಅಕಾಡೆಮಿಯಿಂದ 8 ಮಂದಿ U.P.S.C. ಪಾಸ್:
ಕೇಂದ್ರ ಲೋಕಸೇವಾ ಆಯೋಗ (UPSC) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪರೀಕ್ಷೆಯನ್ನು ನಡೆಸಿತ್ತು. 2021ನೇ ಸಾಲಿನ ಈ ಪರೀಕ್ಷೆಯ ಫಲಿತಾಂಶ ಇಂದು ( ಮೇ 30) ಪ್ರಕಟವಾಗಿದೆ. ಈ ಅತ್ಯುನ್ನತ ಪರೀಕ್ಷೆಯಲ್ಲಿ ದೇಶದ ಸುಮಾರು 685 ಮಂದಿ ತೇರ್ಗಡೆಯಾಗಿದ್ದಾರೆ. 2021ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ಕರ್ನಾಟಕದಿಂದ 27 ಮಂದಿ ತೇರ್ಗಡೆಯಾಗಿದ್ದರ ಬಗ್ಗೆ ಇದೂವರೆಗೂ ಮಾಹಿತಿ ಸಿಕ್ಕಿದೆ. ವಿಶೇಷ ಅಂದರೆ ಇವರಲ್ಲಿ ಡಾ.ರಾಜ್ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ …
Read More »PSI ಪರೀಕ್ಷೆಯಲ್ಲಿ ಅಕ್ರಮ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ಕೊನೆಗೂ ಅರೆಸ್ಟ್! ಗಂಡನೂ ಸಿಕ್ಕಿಬಿದ್ದ
: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ದಂಪತಿ ಕೊನೆಗೂ ಸಿಕ್ಕಿಬಿದ್ದಿದ್ದಾರೆ. 2021ರ ಅಕ್ಟೋಬರ್ 3ರಂದು ನಡೆದ 545 ಎಸ್ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ದಟ್ಟವಾಗಿ ಕೇಳಿಬಂದ ಹಿನ್ನೆಲೆ ಏಪ್ರಿಲ್ 7ರಂದು ಅಕ್ರಮ ಕುರಿತು ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದರು. ಎಫ್ಐಆರ್ ದಾಖಲಿಸಿಕೊಂಡು ತನಿಖೆ …
Read More »ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಮಾತನಾಡಿದಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್
ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್ ಮಾತನಾಡಿ ಸಮಸ್ಯೆ ಎಲ್ಲಕಡೆಯು ಇದೆ ಆದ್ರೆ ನಾವು ಸುಮಾರು ಕಡೆ ಮಂದಿರ ಗಳನ್ನ ಕೇಡವಿದ್ದರೆ, ಹಾಗೂ ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದರೆ ನಾವು ಪ್ರೀತಿಯಿಂದ ಇರುತ್ತೇವೆ. ನಾವು ಯಾವುದೇ ಕಾರಣಕ್ಕೂ ಕೋಮು ಗಲಭೆಗೆ ಪ್ರಚೋದನೆ ಮಾಡಲ್ಲ ನಾವು ಸರ್ಕಾರದ ಗಮನಕ್ಕೆ ತಂದಿದ್ದೇವೆ . ವಿವಾದ ನಡೆದ ಜಾಗ 900sqft ಗಿಂತಲೂ ಕಡಿಮೆ ಇದೆ ಇವಾಗ ಆಶ್ರಯ …
Read More »ರಾಕೇಶ್ ಟಿಕಾಯತ್, ಯುದ್ಧ್ವೀರ್ ಸಿಂಗ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ವ್ಯಕ್ತಿಗೆ ಥಳಿತ
ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ (Rakesh Tikait) ಮತ್ತು ಯುದ್ಧ್ವೀರ್ ಸಿಂಗ್ ( Yudhvir Singh ) ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುದ್ಧ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrashekar) ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ …
Read More »