Breaking News

Uncategorized

ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.  ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …

Read More »

LPG ಗ್ರಾಹಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವ ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ ಗೆ (12 ಸಿಲಿಂಡರ್‌ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ …

Read More »

ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿ

ಗದಗ: ಜಿಲ್ಲೆಯ ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ. ಯಾಸ ಹಡಗಲಿ ಗ್ರಾಮದ ಯಲ್ಲಪ್ಪ ರಾಘವಪುರ, ಅರುಣ್ ವಾಲ್ಮೀಕಿ, ಪರಶುರಾಮ ಮುತ್ತಣ್ಣವರ್ ಮತ್ತು ಗವಿಸಿದ್ದ ಕಲ್ಲಿ ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿದ್ದರು. ಯಾಸ ಹಡಗಲಿ ಹಾಗೂ ಯಾವಗಲ್ ಸಂಪರ್ಕ ಕಲ್ಪಿಸುವ ಬೆಣ್ಣೆಹಳ್ಳ ಸೇತುವೆ ಕಾರ್ಯಭರದಿಂದ ಸಾಗಿತ್ತು. ಮಳೆಗಾಲ ಆರಂಭವಾದ್ದರಿಂದ ‘ಡೇ ಆಂಡ್ ನೈಟ್’ ಕೆಲಸ ಶುರುವಾಗಿತ್ತು. ಕೆಲಸ ಮಾಡ್ತಿದ್ದಂತಹ ಸಂದರ್ಭದಲ್ಲಿ ರಾತ್ರಿ 3 …

Read More »

ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ನೀಡುವಂತೆ ಸುಪ್ರೀಂ ಸೂಚನೆ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು, ಲೈಂಗಿಕ ಕಾರ್ಯಕರ್ತರ ಲಿಂಗದ ಗೌಪ್ಯತೆಯನ್ನು ಉಲ್ಲಂಘಿಸಬಾರದು. ಅವರ ಗುರುತನ್ನು ಬಹಿರಂಗಪಡಿಸಬಾರದು. ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವದಿಂದ ಕಾಣಬೇಕಿರುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದೆ ಎಂದು ಹೇಳಿದೆ. ಯುಐಡಿಎಐ ಪ್ರಮಾಣಪತ್ರದ ಆಧಾರದ ಮೇಲೆ …

Read More »

ದಿಗ್ಗಜ ನಟರ ವಿರುದ್ಧ ದೂರು ದಾಖಲು

ಸಮಾಜಕ್ಕೆ ಹಾನಿ ಮಾಡುವಂತಹ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟ, ನಟಿಯರು ಹಾಗೂ ಸಿಲೆಬ್ರಿಟಿಗಳ ಬಗ್ಗೆ ಅಲ್ಲಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಕನ್ನಡ ಸಿನಿಮಾ ರಂಗದಲ್ಲಿ ಹಣಕ್ಕಾಗಿ ಆನ್‌ಲೈನ್ ಆಟಗಳಿಗೆ ರೂಪದರ್ಶಿಯಾಗಿ ಕೆಲಸ ಮಾಡುತ್ತಿದ್ದ ಕಲಾವಿದರ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈಗಲೂ ಅದು ಮುಂದುವರಿದಿದೆ.  ಹಾಗೆಯೇ ಈ ವಿರೋಧದ ಅಲೆಯು ಬಾಲಿವುಡ್‌ನಲ್ಲೂ ಮುಂದುವರಿದಿದೆ. ಆನ್‌ಲೈನ್ ಜೂಜು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರ ಮೇಲೆ ಮುಂಬೈನಲ್ಲಿ ದೂರು ಕೊಟ್ಟಿದ್ದು, …

Read More »

ಬೆಳಗಾವಿ: ವಿಚಕ್ಷಣೆಯಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ಬೆಳಗಾವಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರವೂ ಸೇರಿದಂತೆ ಜಿಲ್ಲೆಯ 52 ಕೇಂದ್ರಗಳಲ್ಲಿ ಶನಿವಾರ ಆರಂಭಗೊಂಡಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 11,199 ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 5,967 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಭಾರಿ ನಿಗಾ ಹಾಗೂ ‌ವಿಚಕ್ಷಣೆಯಲ್ಲಿ ಈ‌ ಪರೀಕ್ಷೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಚಟುವಟಿಕೆಗಳ ರೆಕಾರ್ಡಿಂಗ್ ಮಾಡಲಾಗುತ್ತಿದೆ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಮೊದಲಾದ …

Read More »

ಮೇ 21, 22ರಂದು ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ತೀರದಲ್ಲಿ ಗಂಟೆಗೆ 40ರಿಂದ 60 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.   ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ 115ಮಿ.ಮೀಗೂ ಅಧಿಕ ಮಳೆ ಸುರಿಯುವ ಸಾದ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ …

Read More »

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಇನ್ಮುಂದೆ ಸಿಗಲಿದೆ ‘ಬಲವರ್ಧಿತ ಅಕ್ಕಿ’

ಹಾವೇರಿ: ಪಡಿತರ ಚೀಟಿದಾರರಿಗೆ ಮೇ-2022ಮಾಹೆಗೆ ಪೋಷಕಾಂಶಯುಕ್ತ ಬಲವರ್ಧಿತ ಅಕ್ಕಯನ್ನು ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಹಾವೇರಿ ತಹಶೀಲ್ದಾರ ಎನ್.ಬಿ.ಗೆಜ್ಜಿ ಅವರು ತಿಳಿಸಿದ್ದಾರೆ. ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಪಡಿತರ ಚೀಟಿಗೆ ಉಚಿತವಾಗಿ 15 ಕೆ.ಜಿ.ಜೋಳ ಹಾಗೂ 20 ಕೆಜಿ ಅಕ್ಕಿ ಮತ್ತು ಪಿಎಂಕೆಎವೈ ಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಬಿಡುಗಡೆ ಮಾಡಲಾಗಿದೆ.   ಪಿ.ಎಚ್.ಎಚ್. (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಎನ್‍ಎಫ್‍ಎಸ್‍ಎ ಯೋಜನೆಯಡಿ ಉಚಿತವಾಗಿ …

Read More »

ವಿಧಾನಪರಿಷತ್‌ ಚುನಾವಣೆ| ಮುಹೂರ್ತ ಪ್ರಕಾರ ನಾಮಪತ್ರ ಸಲ್ಲಿಸಿದ ಹಣಮಂತ ನಿರಾಣಿ

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಜೂನ್‌ 13ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹಣಮಂತ ನಿರಾಣಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ 2 ಸೆಟ್ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು.   ಅವರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುಖಂಡ ಆರ್.ಎಸ್. ಮುತಾಲಿಕ್, ಪಕ್ಷದ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಮೊದಲಾದವರು …

Read More »

ರಾಜ್ಯದ ಹಲವೆಡೆ ಧಾರಾಕಾರ ಮಳೆ: ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು/ ಮೈಸೂರು: ರಾಜ್ಯದ ಹಲವೆಡೆ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ವಿವಿಧೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಕೆರೆ ಏರಿಗಳು ಒಡೆದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಕೃಷಿ ಜಮೀನಿನಲ್ಲಿ ನೀರು ನಿಂತು ಬೆಳೆಗಳು ಕೊಳೆಯಲಾರಂಭಿಸಿವೆ. ಮಡಿಕೇರಿ- ಚಟ್ಟಳ್ಳಿ ರಸ್ತೆ ಬದಿಯ ನಾಲ್ಕು ಸ್ಥಳದಲ್ಲಿ ಮಣ್ಣು ಕುಸಿದು ಅಪಾಯದ ಮುನ್ಸೂಚನೆ ನೀಡುತ್ತಿದೆ. ಸಿಡಿಲು ಬಡಿದು ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ರೈತ ಮಹಿಳೆ ವಿದ್ಯಾವತಿ ನರಸಪ್ಪ ಟೊಳ್ಳೆ (52) ಮತ್ತು ಯಾದಗಿರಿ ಜಿಲ್ಲೆಯ …

Read More »