ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ. ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ …
Read More »ಮಹಾರಾಷ್ಟ್ರದ ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ರವೀನಾ ಟಂಡನ್
ಮುಂಬಯಿ: ಬಾಲಿವುಡ್ ನಟಿ ರವೀನಾ ಟಂಡನ್ ಅವರು ಮಹಾರಾಷ್ಟ್ರದ ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ಗುರುವಾರ ನೇಮಕಗೊಂಡಿದ್ದಾರೆ. “ಮಹಾರಾಷ್ಟ್ರಕ್ಕೆ ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ರವೀನಾ ಅವರ ಉತ್ಸಾಹ ಮತ್ತು ವನ್ಯಜೀವಿಗಳ ಮೇಲಿನ ಪ್ರೀತಿ ಮತ್ತು ಅವರ ಸಂರಕ್ಷಣೆಗೆ ನಾವು ಅನೇಕ ಸಂದರ್ಭಗಳಲ್ಲಿ ಸಾಕ್ಷಿಯಾಗಿದ್ದೇವೆ” ಎಂದು ಮಹಾರಾಷ್ಟ್ರ ಅರಣ್ಯ ಸಚಿವ ಸುಧೀರ್ ಮುಂಗಂತಿವಾರ್ ಹೇಳಿದ್ದಾರೆ. ಇದು ವನ್ಯಜೀವಿ ಸೌಹಾರ್ದ ರಾಯಭಾರಿಯಾಗಿ ಸೇವೆ ಸಲ್ಲಿಸಲು ಒಂದು ಗೌರವ ಎಂದು ಟಂಡನ್ ಬಣ್ಣಿಸಿ “ಮಹಾರಾಷ್ಟ್ರ …
Read More »ಭಾರತಕ್ಕೆ ನಕಲಿ ನೋಟು ತಲುಪಿಸುತ್ತಿದ್ದ ಪಾಕಿಸ್ತಾನ ಐಎಸ್ ಐ ಏಜೆಂಟ್ ನೇಪಾಳದಲ್ಲಿ ಹತ್ಯೆ!
ಭಾರತಕ್ಕೆ ಭಾರೀ ಪ್ರಮಾಣದಲ್ಲಿ ನಕಲಿ ನೋಟುಗಳ ಸರಬರಾಜು ಮಾಡುತ್ತಿದ್ದ ಪಾಕಿಸ್ತಾನದ ಐಎಸ್ ಐ ಏಜೆಂಟ್ ನೇಪಾಳದಲ್ಲಿ ಗುಂಡಿನ ದಾಳಿಯಲ್ಲಿ ಹತ್ಯೆಗೊಳಗಾಗಿದ್ದಾನೆ. ಐಎಸ್ ಐ ಏಜೆಂಟ್ ಲಾಲ್ ಮೊಹಮದ್ (55) ಅಲಿಯಾಸ್ ಮೊಹಮದ್ ಧೀರಜ್ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸೆಪ್ಟೆಂಬರ್ 19ರಂದು ಹತ್ಯೆಗೊಳಗಾಗಿದ್ದಾನೆ. ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಸಿಸಿಟಿವಿ ದೃಶ್ಯಗಳು ಭಾರತದ ಮಾಧ್ಯಮಗಳಿಗೆ ಲಭ್ಯವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶಗಳಲ್ಲಿ ತಯಾರಿಸುತ್ತಿದ್ದ ನಕಲಿ ನೋಟುಗಳನ್ನು ನೇಪಾಳಕ್ಕೆ ರವಾನಿಸಿ, ಅಲ್ಲಿಂದ ಭಾರತಕ್ಕೆ ತಲುಪಿಸುವ ಕೆಲಸವನ್ನು ಲಾಲ್ …
Read More »ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …
Read More »ಮನೆಯ ಸಿಲಿಂಡರ್ ಸ್ಫೋಟ
ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಸಿಲಿಂಡರ್ ಸ್ಫೋಟವಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ. ಕರಗುಪ್ಪಿ-ಯಲ್ಲಾಪುರ ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬುವವರ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ. ಶೇ.೫೦ರಷ್ಟು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು …
Read More »ಯಕ್ಷಗಾನಕ್ಕೆ ಅಡ್ಡಿಯಾದೀತೆಂದು ಆಜಾನ್ ಕಿರಿಕಿರಿ ಸಹಿಸಲಾಗದು-ಪ್ರಮೋದ್ ಮುತಾಲಿಕ್
ಮಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮೇಲೆ ನಿಷೇಧ ಹೇರಿರುವುದು ಸುಪ್ರೀಂ ಕೋರ್ಟ್. ಈ ಆದೇಶದಿಂದ ಯಕ್ಷಗಾನಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಮುಸ್ಲೀಮರ ಆಜಾನ್ನಿಂದ ನಿತ್ಯವೂ ಆಗುವ ಕಿರಿಕಿರಿಯನ್ನು ಸಹಿಸಲಾಗದು’ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಕ್ಷಗಾನ ಪ್ರತಿನಿತ್ಯ ನಡೆಯುವುದಿಲ್ಲ. ಅದಕ್ಕೆ ಧ್ವನಿವರ್ಧಕ ಬಳಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವುದನ್ನು ಎಂದಾದರೆ, ಅದನ್ನು ತಡೆಯಲು ಕ್ರಮವಹಿಸಬೇಕು’ ಎಂದರು. ‘ಮಸೀದಿಗಳಲ್ಲಿ …
Read More »ಸರಕಾರಕ್ಕೆ ತಾಕತ್ತು ಇದ್ದರೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕನ ಮೇಲೆ ಇಡಿ, ಐಟಿ ದಾಳಿ ನಡೆಸಿ:A.A.P. ಭಾಸ್ಕರ್ ರಾವ್
ಸರಕಾರ ದರ್ಪದಿಂದ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ೪೦% ವ್ಯವಹಾರ ಗಡಿ ದಾಟಿ ಹೈದರಾಬಾದ್ ಹೋಗಿ ಪೋಸ್ಟರ್ ಹಾಕಿ ಮಾನ ಮರ್ಯಾದೆ ತೆಗೆದುಕೊಂಡಿದೆ ಎಂದು ಆಮ್ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು. ಇಂದು ಮಂಗಳವಾರ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್ ರವರು, ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಸಹಾಯವಾಗಿ ಸಿಎಂ ಹೇಳುತ್ತಾರೆ. ಇದನ್ನು ನಾವು ಮಾಡಿಲ್ಲ ಎನ್ನುತ್ತಾರೆ. ಆದರೆ ಬೆಳಗಾವಿ …
Read More »ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ
*ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್ಎಫ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್ಎಸ್ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ …
Read More »ಈಗಲೇ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಿಲ್ಲ: ಬಿ.ಸಿ.ನಾಗೇಶ್ ಸ್ಪಷ್ಟನೆ
ಬೆಳಗಾವಿ: ರಾಜ್ಯದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್ ಹಾಗೂ ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಧ್ಯ 276 ಕೆಪಿಎಸ್ಗಳಿವೆ. ಮತ್ತೆ ತ್ವರಿತವಾಗಿ ಕೆಪಿಎಸ್ ಹಾಗೂ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿದರೆ, ಭಾಷಾ ಶಿಕ್ಷಕರ ಕೊರತೆ ಎದುರಾಗುತ್ತದೆ. ಅಂತಹ ಪ್ರಯತ್ನಕ್ಕೆ ಮಂದಾಗುವುದಿಲ್ಲ. …
Read More »ಇನ್ನೂ ಈಡೇರದ ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆ
ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳದ ಬೇಡಿಕೆಗೆ ವರ್ಷ ಕಳೆದರೂ “ಪರಿಶೀಲನೆ ಹಂತ’ದಿಂದ ಮುಕ್ತಿ ಸಿಕ್ಕಿಲ್ಲ. ಗೌರವಧನ ಪರಿಷ್ಕರಣೆಯ ಪ್ರಸ್ತಾವ ಪರಿಶೀಲನೆಯಲ್ಲಿದೆ ಎಂದು ಕಳೆದ ವರ್ಷ ಸರಕಾರ ಸದನದಲ್ಲಿ ಹೇಳಿತ್ತು. ಈಗ ಮತ್ತೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಈ ಬಾರಿಯಾದರೂ ಈಡೇರೀತೇ ಎಂಬುದು ಸುಮಾರು 99 ಸಾವಿರ ಗ್ರಾ. ಪಂ. ಪ್ರತಿನಿಧಿಗಳ ನಿರೀಕ್ಷೆ. ಗ್ರಾ.ಪಂ. ಸದಸ್ಯರ ಗೌರವಧನ 2017ರಲ್ಲಿ ಪರಿಷ್ಕರಿಸಿದ್ದು, ಅಧ್ಯಕ್ಷರಿಗೆ 1,000 ರೂ. ಗಳಿಂದ …
Read More »
Laxmi News 24×7