ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು. ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.
Read More »ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ: ಸಿಎಂ ಬಸವರಾಜ್ ಬೊಮ್ಮಾಯಿ.
ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ: ಸಿಎಂ ಬಸವರಾಜ್ ಬೊಮ್ಮಾಯಿ. ರಾಜ್ಯದಲ್ಲಿ ಮಳೆ ಪ್ರವಾಹ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ. ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ. ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ನೀರಿನ ಪ್ರಮಾಣಕ್ಕೆ ತಕ್ಕಂತೆ …
Read More »ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ
ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.
Read More »ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ
ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು …
Read More »ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …
Read More »ಬೆಳಗಾವಿಯಲ್ಲಿ ಮನೆ ಗೋಡೆ ಕುಸಿದು ಬಾಲಕ ಸಾವು ಪ್ರಕರಣ : ಕೆಲವೇ ಗಂಟೆಗಳಲ್ಲಿ ಪರಿಹಾರ ನೀಡಿದ ಡಿಸಿ
ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ 5 ಲಕ್ಷ ರೂಪಾಯಿ ಪರಿಹಾರ ತಲುಪಿಸಿದ್ದಾರೆ. ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಮನೆಯ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದ. ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ …
Read More »ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೆಎಂಎಫ್ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …
Read More »200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ
ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ. ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …
Read More »BPL’ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ!
ಬೆಂಗಳೂರು : ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ನೀಡುತ್ತಿದ್ದ ಜೋಳ, ರಾಗಿ ವಿತರಣೆ ಆಗಸ್ಟ್ ನಂತರ ಸ್ಥಗಿತಗೊಳ್ಳಲಿದೆ. ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ವಿತರಣೆ ಮಾಡುತ್ತಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿ, 1 ಲಕ್ಷ ಮೆಟ್ರಿಕ್ ಟನ್ ಜೋಳ, …
Read More »ಧಾರಾಕಾರ ಮಳೆಗೆ ಬೈಲಹೊಂಗಲ ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಬೈಲಹೊಂಗಲ ತಾಲೂಕಿನ ಯರಗೊಪ್ಪ ಗ್ರಾಮದಲ್ಲಿ ಮನೆಗೋಡೆ ಕುಸಿದಿದೆ. ಹೌದು ಯರಗೊಪ್ಪ ಗ್ರಾಮದ ಜನತಾ ಪ್ಲಾಟ್ನಲ್ಲಿರುವ ಈರಪ್ಪ ಚಂದುಗೋಳ ಎಂಬುವರ ಮನೆಗೋಡೆ ಮಳೆಯಿಂದ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದರೂ ಸ್ಥಳಕ್ಕೆ ಪಿಡಿಒ ಸೇರಿ ಇತರೆ ಯಾವುದೇ ಅಧಿಕಾರಿಗಳು ಭೇಟಿ ನೀಡದೇ ಇರೋದು ಸಧ್ಯ ತೀವ್ರ ಟೀಕೆಗೆ ಗುರಿಯಾಗಿದೆ. ಗೋಡೆ ಬಿದ್ದ ಮನೆಯಲ್ಲೇ ಕುಟುಂಬಸ್ಥರು ವಾಸಿಸುತ್ತಿದ್ದಾರೆ. …
Read More »
Laxmi News 24×7