Breaking News

Uncategorized

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  *ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಸಂಪಾದಿಸಲು ಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸಂಪಾದಿಸಲು ಸಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಜೀವನಾಂಶ ಕೋರಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ, ಜೆ.ಎಂ. ಖಾಜಿ ಅವರಿದ್ದ ಪೀಠ ಈ ಕುರಿತಾಗಿ ಆದೇಶ ನೀಡಿದೆ.   ಪತ್ನಿಯಿಂದ ಶಾಶ್ವತ ಜೀವನಾಂಶ ನೀಡಬೇಕೆಂದು ಪತಿ ಕೋರಿದ್ದರು. 1994 ರಿಂದಲೂ ಪತಿ, ಪತ್ನಿ ಬೇರೆಯಾಗಿ ವಾಸಿಸುತ್ತಿದ್ದರು. ಸೆಕ್ಯೂರಿಟಿ ಗಾರ್ಡ್ ಆಗಿದ್ದ ಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಜೀವನಾಂಶ ಕೋರಿದ್ದರು. ಕೆಲಸ ಬಿಟ್ಟಿರುವುದಾಗಿ …

Read More »

ಸೋನಿಯಾ ಗಾಂಧಿಗೆ ಸಂಕಷ್ಟದ ಸುರಿಮಳೆ; ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ಸಮನ್ಸ್

ದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ED) ಸೋಮವಾರ, ಜುಲೈ 12ರಂದು ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಜುಲೈ 21 ರಂದು ಏಜೆನ್ಸಿಯ (Enforcement Directorate) ಮುಂದೆ ಹಾಜರಾಗುವಂತೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕಿಯಾದ ಸೋನಿಯಾ ಗಾಂಧಿಗೆ (Sonia Gandhi) ಸೂಚಿಸಲಾಗಿದೆ. ಪ್ರಕರಣದಲ್ಲಿ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಸೋನಿಯಾ ಗಾಂಧಿ ಸಲ್ಲಿಸಿದ್ದ ಮನವಿಯನ್ನು ಫೆಡರಲ್ ಏಜೆನ್ಸಿ ಈ …

Read More »

ವರುಣನ ಆರ್ಭಟ: ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರೆದಿದ್ದು. ಕ್ಷಣಕ್ಷಣಕ್ಕೂ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಹೀಗಾಗಿ ಮತ್ತೊಮ್ಮೆ ಪ್ರವಾಹ ಎದುರಾಗುತ್ತದೆ ಎನ್ನುವ ಭೀತಿ ನದಿ ತೀರದ ಜನರಲ್ಲಿ ಆವರಿಸಿದೆ.   ಮಹಾರಾಷ್ಟ್ರದ ಘಟ್ಟ ಪ್ರದೇಶದ ಹೆಚ್ಚು ಮಳೆ ಬಿಳುವ ಕೋಯ್ನಾ, ಮಹಾಬಲೇಶ್ವರ, ನವಜಾ. ಪಾಟಗಾಂವ,ಕಾಳಮ್ಮವಾಡಿ ಮತ್ತು ಕೊಲ್ಲಾಪೂರ ಸೇರಿದಂತೆ ಚಿಕ್ಕೋಡಿ ಸುತ್ತಮುತ್ತ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು. ಕೃಷ್ಣಾ ನದಿಗೆ …

Read More »

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಸಮಸ್ಯೆಗಳನ್ನು ಕೇಂದ್ರ ಸರಕಾರಕ್ಕೆ ಮುಟ್ಟಿಸುವ ನಿಟ್ಟಿನಲ್ಲಿ ಸಂಸದರು ಈ ಕುರಿತಂತೆ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಿ ಸಂಸದರಿಗೆ ಮನವಿಯನ್ನು ಸಲ್ಲಿಸಿದರು. ಹೌದು ಇಂದು ಬೆಳಗಾವಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಬೇಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು …

Read More »

ಲಂಕಾ ಸಮಸ್ಯೆ ಭಾರತ ಸರಕಾರಕ್ಕೂ ಸವಾಲು

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿದೆ. ಇದೇ ಸಂದರ್ಭದಲ್ಲಿ ಜಾಕ್ರೋಶಕ್ಕೆ ಹೆದರಿ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದ್ದಾರೆ. ಇತ್ತ ಅವರ ನಿವಾಸಕ್ಕೆ ಮುತ್ತಿಗೆ ಹಾಕಿರೋ ಸಾವಿರಾರು ಪ್ರತಿಭಟನಾಕಾರರು, ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಅಲ್ಲದೇ ಅಧ್ಯಕ್ಷರು ಮತ್ತು ಪ್ರಧಾನಿ ರಾಜೀನಾಮೆ ನೀಡೋವರೆಗೆ ಸ್ಥಳದಿಂದ ತೊರೆಯೋದಿಲ್ಲ ಎಂದು ಘೋಷಿಸಿದ್ದಾರೆ. ಈ ಮಧ್ಯೆ ಗೋಟಬಯ ನಿವಾಸದಲ್ಲಿ ಕೋಟ್ಯಂತರ ರೂ ಹಣ ಕೂಡ ಪತ್ತೆಯಾಗಿದೆ.   ಶ್ರೀಲಂಕಾ ಅಧ್ಯಕ್ಷ ಗೋಟಬೊಯ …

Read More »

ಟೆಲಿಕಾಂ’ ಕ್ಷೇತ್ರಕ್ಕೂ ಎಂಟ್ರಿಯಾಗಲು ಮುಂದಾದ ಅದಾನಿ ಗ್ರೂಪ್.! ಮತ್ತೆ ದರ ಸಮರದ ಸಾಧ್ಯತೆ

ಇದೇ ಜುಲೈ 26ರ ಶುಕ್ರವಾರದಂದು 5g ಸೇವೆಗಳನ್ನು ಒದಗಿಸುವ ಸ್ಪೆಕ್ಟ್ರಮ್ ಹರಾಜು ಮಾಡಲಾಗುತ್ತಿದ್ದು, ಇದರಲ್ಲಿ ದೇಶದ ಮೂರು ಪ್ರಮುಖ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಪಾಲ್ಗೊಳ್ಳುವುದು ಖಚಿತವಾಗಿತ್ತು. ಆದರೆ ಮತ್ತೊಂದು ಕಂಪನಿಯ ಅರ್ಜಿಯು ಸಲ್ಲಿಕೆಯಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.   ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದ್ದು, ದೇಶದ ಅತ್ಯಂತ ಸಿರಿವಂತ ವ್ಯಕ್ತಿಗಳ ಪೈಕಿ ಒಬ್ಬರಾದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಸಹ …

Read More »

ಭೂಕಂಪನ: ಬಿರುಕು ಬಿಟ್ಟ ಮನೆ ಗೋಡೆ; ಬತ್ತಿ ಹೋದ ಬಾವಿ!

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೂ ಕಂಪನದಿಂದಾಗಿ ತಿಕೋಟಾ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದ್ದಾರೆ. ತಿಕೋಟಾ ತಾಲ್ಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು ಭಾಗಶಃ ಹಾನಿಯಾಗಿದೆ. ಇದೇ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ, ಅರಕೇರಿ ಗ್ರಾಮದ ಸುತ್ತಲಿನ ತಾಂಡಾಗಳಲ್ಲಿ ಮತ್ತು ಮಜರೆ ಗ್ರಾಮದಲ್ಲಿ ಅಂದಾಜು 48 ಮನೆಗಳ ಗೋಡೆಗಳಲ್ಲಿ ಅಲ್ಪ …

Read More »

ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್

ಇತ್ತಿಚೆಗೆ ಬೆಳಗಾವಿಯ ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ಕಳಪೆ ಗುಣಮಟ್ಟದ ಬಿಸಿಯೂಟದ ಬಗ್ಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ತಾಲೂಕಾ ಪಂಚಾಯತಿ ಕಾರ್ಯಾಲಯದ ಅಕ್ಷರ ದಾಸೋಹ ವಿಭಾಗದಿಂದ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಹೌದು ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಳಪೆ ಗುಣಮಟ್ಟದ ಬೇಳೆ ಮತ್ತು ಅಕ್ಕಿಯನ್ನು ಬಳಸಿರುವುದು …

Read More »

ಸಿದ್ದರಾಮಯ್ಯ ಸ್ಪರ್ಧೆ: ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು..!!

ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ದಾವಣಗೆರೆಯಲ್ಲಿ ಮಾಡಲು ನಿರ್ಧರಿಸಿದ್ದು ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಬೆಂಬಲವನ್ನು ಸೂಚಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ರವರು, ಎಐಸಿಸಿ ಹಾಗೂ ಕೆಪಿಸಿಸಿ ಮೂಲಕ ಯಾವೆಲ್ಲ ಹೋರಾಟಗಳನ್ನು ಮಾಡಲಾಯಿತೋ ಮತ್ತೆ ಆ ಎಲ್ಲರನ್ನು ಹುಮ್ಮಸ್ಸು ಮಾಡುವ ಕಾರ್ಯಗಳನ್ನು ಮಾಡಲಾಗುತ್ತಿದೆ. ಸಿದ್ದರಾಮೋತ್ಸವ ಕಾರ್ಯಕ್ರಮ ಮೊದಲು ಪಕ್ಷದಿಂದ ದೂರವಾಗಿತ್ತು. ಆದರೆ ಅದಕ್ಕೆ …

Read More »