ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.
Read More »ಸ್ವ ಸಹಾಯ ಗುಂಪುಗಳಿಗೆ ಹಣಕಾಸು ನೆರವು; ಬೆಳಗಾವಿಯಲ್ಲಿ ಹೀಗೆ ಅರ್ಜಿ ಸಲ್ಲಿಸಿ
ಬೆಳಗಾವಿ: ಸ್ವ ಸಹಾಯ ಸಂಘಗಳ ಅಭಿವೃದ್ಧಿಗೆ ಪೂರಕವಾಗಿ ಹಣಕಾಸಿನ ನೆರವು ನೀಡಲು ಸರಕಾರವು ಮುಂದಾಗಿದೆ. ಯಾವುದೇ ಮಹಿಳಾ ಅಥವಾ ಪುರುಷ ಸದಸ್ಯರುಗಳುಳ್ಳ ಸ್ವ ಸಹಾಯ ಸಂಘಗಳು (Self Help Groups) ಧನ ಸಹಾಯ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. 2022-23 ನೇ ಸಾಲಿನ ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿಯಲ್ಲಿ ಸ್ವ ಸಹಾಯ ಗುಂಪುಗಳ ಸಾಮಾಜಿಕ ಕ್ರೋಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಬೆಳಗಾವಿಯ (Belagavi News) …
Read More »ಕಿಚ್ಚ ಸುದೀಪ್ ರಮ್ಮಿ ವಿವಾದ: ನಂದಕಿಶೋರ್ಗೆ ಯುವಕ ತಿರುಗೇಟು!
ಕಿಚ್ಚ ಸುದೀಪ್ಗೆ ವಿರುದ್ಧ ಅವಹೇಳನಕಾರಿ ವಿಡಿಯೋಗೆ ನಂದ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನಂದ ಕಿಶೋರ್ ಅಖಾಡಕ್ಕಿಳಿದಿದ್ದರು. ನಿನ್ನೆ (ಜುಲೈ 03) ಕಿಚ್ಚ ಸುದೀಪ್ ವಿರುದ್ಧ ತಿರುಗಿಬಿದ್ದಿದ್ದ ವ್ಯಕ್ತಿಯ ವಿರುದ್ಧ ನಂದ ಕಿಶೋರ್ ಕಿಡಿಕಾರಿದ್ದರು. ” ಸುದೀಪ್ ಅವರ ಸಾಧನೆ ದೊಡ್ಡದು. …
Read More »ಅಳಿಯನ ಜೊತೆ ಅತ್ತೆಯ ಲವ್ವಿ-ಡವ್ವಿ:
ಪ್ರೀತಿ ಪ್ರೇಮದ ಅಮಲಿನಲ್ಲಿ ಇಬ್ಬರೂ ತಮ್ಮ ಸಂಬಂಧಗಳನ್ನೇ ಮೆರೆತಿದ್ದಾರೆ. ಅಲ್ಲದೆ ಪ್ರೇಮ ಪಕ್ಷಿಗಳಾಗಿ ಜೊತೆ ಜೊತೆಯಾಗಿ ತಿರುಗಾಡಲಾರಂಭಿಸಿದ್ದರು.ಪ್ರೀತಿಗೆ ಕಣ್ಣಿಲ್ಲ ನಿಜ, ಆದರೆ ಪ್ರೀತಿಸೋರಿಗೆ ಬುದ್ದಿ ಇಲ್ವಾ? ಎಂಬ ಪ್ರಶ್ನೆ ಆಗಾಗ್ಗೆ ಮೂಡುತ್ತಿರುತ್ತದೆ. ಅದರಲ್ಲೂ ಕೆಲ ಪ್ರಕರಣಗಳಲ್ಲಿ ಹೀಗೂ ಇರುತ್ತಾರಾ ಎಂದೆನಿಸಿಬಿಡುತ್ತೆ. ಅಂತಹದೊಂದು ವಿಚಿತ್ರ ಪ್ರಕರಣವೊಂದು ರಾಜಸ್ಥಾನದ ಬಾರ್ಮರ್ನಿಂದ ವರದಿಯಾಗಿದೆ. ಈ ಪ್ರಕರಣದಲ್ಲಿ ಅತ್ತೆ ಮತ್ತು ಅಳಿಯನೇ ಪ್ರಮುಖ ಪಾತ್ರಧಾರಿಗಳು. ಅಂದರೆ ವರ್ಷಗಳ ಹಿಂದೆ ದರಿಯಾ ದೇವಿ (38) ತನ್ನ ಮಗಳನ್ನು …
Read More »ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಡಿ.ಕೆ. ಶಿವಕುಮಾರ್ ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್
ಗದಗ: ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಡಿ.ಕೆ. ಶಿವಕುಮಾರ್ ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ. ಆದರೆ, ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಯಾರೂ ವಿರೋಧ ಮಾಡಿಲ್ಲ. ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಮೀಡಿಯಾ ಮುಂದೆ ಬಂದು ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಇದೆಲ್ಲ ಕಟ್ಟುಕಥೆ ಎಂದು ಗದಗದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನಾನು 25 ವರ್ಷದಿಂದ ಪರಿಚಯ ಇದ್ದೇನೆ. ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಅಂತ ಅವತ್ತಿನಿಂದಲೂ ಅದನ್ನೇ ಹೇಳ್ತಿದ್ದಾರೆ. …
Read More »ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು.: ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ
ಬೆಳಗಾವಿಯ ರಾಮತೀರ್ಥ ನಗರ ಸೇರಿದಂತೆ ಮುಂತಾದ ಕಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಗರಸೇವಕ ಹಣಮಂತ ಕೊಂಗಾಲಿ ಮನವಿ ಮಾಡಿಕೊಂಡಿದ್ದಾರೆ. ಹೌದು ರಾಮತೀರ್ಥ ನಗರ, ಶಿವಬಸವ ನಗರ, ಶ್ರೀನಗರ ಮಹಾಂತೇಶ ನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಮಿತಿ ಮೀರಿದೆ. ಆದಷ್ಟು ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು. ಸಂತಾನ ಹರಣ ಚಿಕಿತ್ಸೆ ಮತ್ತು ಸಾಕಾಣಿಕೆ ಕೇಂದ್ರಗಳನ್ನು ಪಾಲಿಕೆ ಅಡಿಯಲ್ಲಿ ಸ್ಥಾಪಿಸಿ …
Read More »ವೇಶ್ಯಾವಾಟಿಕೆಯ ಮಹಿಳೆಗೆ ಊರು ಬಿಟ್ಟು ಹೋಗುವಂತೆ ಗದರಿದ ಎಸ್ಪಿ..
ಕೊಪ್ಪಳ: ವೇಶ್ಯಾವಾಟಿಕೆ ನಡೆಸಿ ಸಿಕ್ಕಿಬಿದ್ದಿದ್ದ ಮಹಿಳೆಯೊಬ್ಬರಿಗೆ ಎಸ್ಪಿಯೊಬ್ಬರು ಊರು ಬಿಟ್ಟು ಹೋಗುವಂತೆ ಗದರಿದ್ದು, ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿದ್ದು ಹಲವರ ಗಮನ ಸೆಳೆದಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಎಚ್ಚರಿಕೆ ನೀಡಿದ್ದಾರೆ. ಆರೋಪಿಗಳ ಪರೇಡ್ ವೇಳೆ ತಪ್ಪಿತಸ್ಥರ ವಿಚಾರಣೆ ನಡೆಸಿದ ಎಸ್ಪಿ ಅರುಣಾಂಶು ಗಿರಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರಿಗೆ ಈ ಎಚ್ಚರಿಕೆ ನೀಡಿದ್ದಾರೆ. ಒಂದಕ್ಕಿಂತ ಹೆಚ್ಚು ಸಲ ವೇಶ್ಯಾವಾಟಿಕೆ ಅಪರಾಧದಲ್ಲಿ ಸಿಕ್ಕಿಬಿದ್ದಿದ್ದರಿಂದ ಆಕೆಗೆ ಅವರು ಹೀಗೆ ಗದರಿದ್ದಾರೆ. …
Read More »ಕರ್ನಾಟಕದ ಸಿನಿ ಶೆಟ್ಟಿಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ!
ಮುಂಬೈ (ಮಹಾರಾಷ್ಟ್ರ): ಭಾನುವಾರ ಇಲ್ಲಿ ನಡೆದ ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022’ ಪ್ರಶಸ್ತಿ ಗೆದ್ದರು. ಒಟ್ಟು 31 ಫೈನಲಿಸ್ಟ್ಗಳನ್ನು ಹಿಂದಿಕ್ಕಿದ ಅವರು ಅದ್ಭುತ ಸ್ಥಾನಮಾನ ಪಡೆದರು. ರಾಜಸ್ಥಾನದ ರೂಬಲ್ ಶೇಖಾವತ್ ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮಿದರೆ, ಉತ್ತರ ಪ್ರದೇಶದ ಶಿಂತಾ ಚೌಹಾನ್ ಎರಡನೇ ರನ್ನರ್ ಅಪ್ ಗೌರವಕ್ಕೆ ಪಾತ್ರರಾದರು. ಪ್ರತಿ ಬಾರಿಯಂತೆ ಈ ವರ್ಷದ …
Read More »ಆ ದುಷ್ಟ ಶಿಕ್ಷಕನಿಗೆ ಜೀವಮಾನದಲ್ಲೇ ಅವನು ಜೈಲಿನಿಂದ ಹೊರಗೆ ಬರದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು : ಶಿವರಾಜ ತಂಗಡಗಿ
ಕೊಪ್ಪಳ: ನೆರೆಮನೆಯ ಮಹಿಳೆಯರು ಮತ್ತು ಮಕ್ಕಳ ಜೊತೆಗೆ ಶಿಕ್ಷಕ ಕಾಮದಾಟವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿಶಿಕ್ಷಕನ ವಿರುದ್ಧ ಎಫ್ಐಆರ್ದಾಖಲಾಗಿದೆ. ಈ ಬಗ್ಗೆ ಮಾಜಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ಆತನಿಗೆ ಸಾಮಾನ್ಯ ಶಿಕ್ಷೆ ಆಗಬಾರದು. ಆತನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಿದ್ದಾರೆ. ನನ್ನ ಕ್ಷೇತ್ರದಲ್ಲಿ ಇಂತಹ ಒಬ್ಬ ದುಷ್ಟ ಶಿಕ್ಷಕನಿದ್ದಾನೆ ಎನ್ನುವುದೇ ಖೇದಕರ ಸಂಗತಿಯಾಗಿದೆ. ಒಬ್ಬ ಶಿಕ್ಷಕನಾಗಿ ಆ ವ್ಯಕ್ತಿ ಅಂತಹ ಕೃತ್ಯದಲ್ಲಿ ತೊಡಗಿದ್ದು ಖಂಡನೀಯ. ಯಾರು …
Read More »ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಹಿತ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ
ಖಾನಾಪುರ: ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಾಳಿ ಬಳಿ ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ಕಾರು ಚಾಲಕ ಸಾಗರ ಬಿಡಕರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಇನ್ನೊಬ್ಬ ಬಾಲಕನಾಗಿದ್ದು ಹೆಸರು ತಿಳಿದುಬರಬೇಕಿದೆ. ಅಳ್ನಾವರದ ಗಿರೀಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ, ರೇಮಾಕಾಂತ ಪಾಲ್ಕರ್, ವಿಠ್ಠಲ ಕಾಕಡೆ ಅವರಿಗೆ ಗಂಭೀರ ಗಾಯಗಳಾಗಿವೆ. …
Read More »
Laxmi News 24×7