ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆ ಧಾರವಾಡದ ಕಲಾವಿದನೋರ್ವ ವಿಶೇಷವಾಗಿ ಕಲಾ ನಮನ ಸಲ್ಲಿಸಿದ್ದಾರೆ. ಕಾರಿನ ಮೇಲೆ ಬಿದ್ದ ಧೂಳಿನಲ್ಲಿ ಅವರ ಭಾವಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ. ಕೆಲಗೇರಿ ಗಾಯತ್ರಿಪುರ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ಲತಾ ಮಂಗೇಶ್ಕರ್ ಅವರ ನಿಧನದ ವಿಷಯ ತಿಳಿದು ಕಾರಿನ ಮೇಲೆ ಬಿದ್ದ ಡಸ್ಟ್ನಲ್ಲಿ ಗಾನ ಕೋಗಿಲೆಯ ಭಾವಚಿತ್ರ ಬಿಡಿಸಿ ಡಸ್ಟ್ ಆರ್ಟ್ ಮೂಲಕ ಕಲಾ ನಮನ ಸಲ್ಲಿಸಿದ್ದಾರೆ. ಸುಮಾರು …
Read More »ಬೆಳಗಾವಿ ಬೆಂಗಳೂರಿಗೆ ಅತಿಹೆಚ್ಚು ಸಚಿವ ಸ್ಥಾನ ನೀಡಿದ್ದಾರೆ: ಅಸಮಾಧಾನ ಹೊರಹಾಕಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ರಾಜ್ಯ ಸರಕಾರ ಮಂತ್ರಿಗಿರಿ ಹಂಚಿಕೆ ವಿಚಾರದಲ್ಲಿ ಭೌಗೋಳಿಕವಾಗಿ ಅಸಮತೋಲನ ಮಾಡಿದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿ ಹಾಗೂ ಬೆಂಗಳೂರಿಗೆ ಹೆಚ್ಚು ಮಂತ್ರಿ ಸ್ಥಾನಗಳನ್ನು ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಸಚಿವ ಸಂಪುಟ ರಚನೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ಇದು ಅವರ ವಿವೇಚನೆಗೆ ಬಿಟ್ಟಿದ್ದು. ಅದನ್ನು ಪ್ರಶ್ನೆಮಾಡುವ ನೈತಿಕ ಹಕ್ಕು ನನಗಿಲ್ಲ. ಆದರೆ ಭೌಗೋಳಿಕವಾಗಿ ಸಚವ ಸ್ಥಾನ …
Read More »ನೀವು ಸಿಧು ಹೃದಯ ಕತ್ತರಿಸಿ ನೋಡಿ ರಕ್ತ ಬರುತ್ತೆ, ಪಂಜಾಬ್ ಬರುತ್ತೆ.. ರಾಹುಲ್ ಗಾಂಧಿ
ಎಐಸಿಸಿ ವರಿಷ್ಠ ರಾಹುಲ್ ಗಾಂಧಿಯವರು ಪಂಜಾಬ್ ಕಾಂಗ್ರೆಸ್ ಸಿಎಂ ಅಭ್ಯರ್ಥಿಯನ್ನಾಗಿ ಚರಣ್ಜೀತ್ ಸಿಂಗ್ ಚನ್ನಿಯವರನ್ನು ಘೋಷಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯವರು ಈ ಬಾರಿ ಸಿಎಂ ಆಗಬೇಕು ಎಂದಿದ್ದ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಿಗೆ ಶಾಕ್ ನೀಡಿದ್ದಾರೆ. ಇನ್ನು, ಸಿಎಂ ಅಭ್ಯರ್ಥಿ ಅನೌನ್ಸ್ ಮಾಡಿದ ಬಳಿಕ ಮಾತಾಡಿದ ರಾಹುಲ್ ಗಾಂಧಿಯವರು, ಪಂಜಾಬ್ ಕಾಂಗ್ರೆಸ್ನಲ್ಲಿ ನಾಯಕರಿಗೇನು ಕೊರತೆ ಇಲ್ಲ ಎಂದಿದ್ದರು. ಚನ್ನಿ, ನವಜೋತ್ ಸಿಂಗ್ ಸಿಧು ಕೂಡ …
Read More »ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!
ಬೆಂಗಳೂರು: ನಗರದ ಲುಂಬಿನಿ ಗಾರ್ಡನ್ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ. ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Read More »ಭೀಕರವಾಗಿ ಮರಕ್ಕೆ ಗುದ್ದಿದ ಕಾರು; ಐದು ವರ್ಷದ ಮಗು ಸೇರಿ ಮೂರು ಸಾವು
ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಂದಾಪುರ ಮೂಲದ ಧೃತಿ (5), ಗೀತಾ(32), ಶಾರದಾ (60) ಮೃತ ದುರ್ದೈವಿಗಳು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಹೊಸದುರ್ಗ ಪೊಲೀಸ್ …
Read More »ವಸತಿ ಸಹಿತ ಉದ್ಯಮಶೀಲತಾ ತರಬೇತಿ ನೀಡಲು ಮುಂದಾದ ಸತೀಶ್ ಜಾರಕಿಹೊಳಿ
ಬೆಳಗಾವಿ: ಸತೀಶ್ ಜಾರಕಿಹೊಳಿ ಫೌಂಡೇಷನ್ ನಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಯೋಗ ಅರಸುತ್ತಿರುವ ಮತ್ತು ಸ್ವಯಂ ಉದ್ಯೋಗ ಮತ್ತು ಉದ್ದಿಮೆ ಸ್ಥಾಪಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಗೆ ಮೂರು ದಿನಗಳ ಕಾಲ ಉಚಿತ ವಸತಿ ಸಹಿತ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಇದೇ ಫೆ. 12 ರಿಂದ 14ರವರೆಗೆ ನಡೆಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಕುರಿತು, ಬ್ಯಾಂಕ್ ಗಳಲ್ಲಿ ಸಿಗುವ ಸಾಲ ಸೌಲಭ್ಯಗಳ ಬಗ್ಗೆ, ಮಾರುಕಟ್ಟೆ ಸಮೀಕ್ಷೆ, ಉದ್ದಿಮೆಯ …
Read More »ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ.
ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ …
Read More »ಗೋಕಾಕ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ವೃದ್ಧೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್ಐ ವಾಲೀಕರ
ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್ಐ ವಾಲಿಕಾರ ಅವರಿಗೆ ವಿಷಯ …
Read More »ರಾಜಕೀಯ ದುರುದ್ದೇಶ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ರಮೇಶ ಜಾರಕಿಹೊಳಿ ಆರೋಪ ಮುಕ್ತ.!!
ರಾಜಕೀಯ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ಕ್ಲೀನ್ ಚೀಟ್.ರಾಜಕೀಯ ದುರುದ್ದೇಶ ದಿಂದ ಆರೋಪ ಮಾಡಲಾದ ಸಿಡಿ ಪ್ರಕರಣದ ಸುಳಿಯಿಂದ ಹೊರಗಡೆ ಬಂದ ಶಾಸಕರಾದ ರಮೇಶ ಜಾರಕಿಹೊಳಿ ಆರೋಪದಿಂದ ಮುಕ್ತ ಮುಕ್ತ. ಸುಧೀರ್ಘ ಎಂಟು ತಿಂಗಳ ಕಾಲ ನ್ಯಾಯಾಲಯದಲ್ಲಿ ನಡೆದ ಹೋರಾಟ.ಪ್ರಕರಣದಲ್ಲಿ ಸಾಕ್ಷಾಧಾರ ಕೊರತೆ ಹಿನ್ನೆಲೆ ನ್ಯಾಯ ದೇವತೆ ಸಾಹುಕಾರ ರಮೇಶ ಜಾರಕಿಹೊಳಿ ಅವರಿಗೆ ಕ್ಲೀನ್ ಚೀಟ್ ನೀಡಿದೆ.ಎಸ್.ಐ.ಟಿ ಅಂತಿಮ ವರದಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಂಪೂರ್ಣ ತನಿಖೆಯನ್ನು ಪರಿಗಣಿಸಿ ಎಸ್.ಐ.ಟಿ. ಬಿ-ರಿಪೋರ್ಟ್ …
Read More »ಅಟ್ಟಾಡಿಸಿ ಜೀಪ್ ಹರಿಸಿ ಕೊಲೆ
ವಿಜಯಪುರ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ಜೀಪ್ ಹರಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ನಡೆದಿದೆ. ಶೋಭಾ ಸೋಮನಿಂಗ ಮೊಗದರೆ (45) ಕೊಲೆಯಾದ ಮಹಿಳೆ. ಸಾಗರ ಖತಾರ ಮತ್ತು ಮಾರುತಿ ಥೋರತ ಕೊಲೆ ಮಾಡಿದ ಆರೋಪಿಗಳು. ಕಬ್ಬು ಕಟಾವು ಮಾಡಲು ಒಂದು ತಂಡವನ್ನು ಕರೆತರುತ್ತೇವೆ ಎಂದು ಕೊಲೆಯಾದ ಮಹಿಳೆಯ ಪತಿ ಸೋಮನಿಂಗನಿಂದ ಆರೋಪಿಗಳು 45 ಲಕ್ಷ ರೂ. ಹಣ ಪಡೆದಿದ್ದರು. ಆರೋಪಿ ಮಾರುತಿ …
Read More »