Breaking News

Uncategorized

ಎಲ್ಲಾ ನಿಯಮ ಗಾಳಿಗೆ ತೂರಿ ರಾಷ್ಟ್ರ ಧ್ವಜ ತಯಾರಿಕೆಗೆ ಅವಮಾನ ಮಾಡಲಾಗುತ್ತಿದೆ

ದೇಶಕ್ಕೆ ಈಗ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆದ್ರೆ ಕೇಂದ್ರ ಸರ್ಕಾರದ ಒಂದು ನಿರ್ಧಾರ ಖಾದಿ ಪ್ರೇಮಿಗಳು ಖಾದಿ ಗ್ರಾಮೋದ್ಯೋಗ ಸಂಸ್ಥೆಗಳ ಪಾಲಿಗೆ ಕಂಟಕವಾಗಿದೆ. ಹರಘರ ತಿರಂಗ ಹೆಸರಿನಲ್ಲಿ ರಾಷ್ಟ್ರ ಧ್ವಜಕ್ಕೆ ಇರುವ ಗೌರವ ಕಡಿಮೆ ಮಾಡಲು ಹೊರಟ್ಟಿರುವದು ಖಾದಿ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ದೇಶಕ್ಕೆ ಗೌರವ ಸಿಗುವದು ಆ ರಾಷ್ಟ್ರದ ರಾಷ್ಟ್ರ ಧ್ಬಜದಿಂದ.ಅಂತ ಒಂದು ರಾಷ್ಟ್ರ ಧ್ವಜ ತಯಾರಾಗುವದು ಹುಬ್ಬಳ್ಳಿಯ ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ …

Read More »

ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ.

ಬೆಳಗಾವಿ, : ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.   ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ …

Read More »

ಬೆಳಗಾವಿ: ಭಾರಿ ಮಳೆಗೆ ನಾಲ್ಕು ಸೇತುವೆಗಳು ಮುಳುಗಡೆ, ಸಂಚಾರ್ ಬಂದ್

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೆಳಹಂತದ ನಾಲ್ಕು ಸೇತುವೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೇತುವೆ ಎರಡು ಬದಿಗೆ ಪೊಲೀಸರು ಬ್ಯಾರಿಕೇಡ್ ಹಾಕಿ ಜನರ ಓಡಾಟವನ್ನು ಬಂದ್ ಮಾಡಿದ್ದಾರೆ. ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಗೆ ಕಟ್ಟಲಾದ ಕಾರದಗಾ-ಭೋಜ್, ವೇದಗಂಗಾ ನದಿಯಿಂದ ಭೋಜವಾಡಿ ಕುನ್ನೂರ-ಸಿದ್ನಾಳ ಅಕ್ಕೋಳ ಸೇತುವೆ ಹಾಗೂ ಜತ್ರಾಟ-ಭೀಮಶಿ‌ ಸೇತುವೆಗಳು ಜಲಾವೃತವಾಗಿವೆ. ಸದ್ಯ ಮಹಾರಾಷ್ಟ್ರ ಘಟ್ಟ ಪ್ರದೇಶ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಕೃಷ್ಣಾ …

Read More »

ಬೆಳಗಾವಿಯಲ್ಲಿ 75 ಮೀ ಉದ್ದದ ಧ್ವಜ ಹಿಡಿದು 7.5 ಕಿ.ಮಿ ಪಾದಯಾತ್ರೆ

ಆಜಾದಿಕಾ ಅಮೃತಮಹೋತ್ಸವ ಪ್ರಯುಕ್ತ ದಾಲ್ಮಿಯಾ ಭಾರತ್ ಫೌಂಡೇಶನ್ ದೀಕ್ಷಾ ಬೆಳಗಾವಿ ವತಿಯಿಂದ 7.5 ಕಿಮಿ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 75 ಮೀಟರ್ ಉದ್ದದ ರಾಷ್ಟ್ರಧ್ವಜದೊಂದಿಗೆ 7.5 ಕಿ.ಮಿ ಕಾಲ್ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಕಾಲ್ನಡಿಗೆಯಲ್ಲಿ 75 ಜನ ಭಾಗಿಯಾಗಿದ್ದರು. ಇಂದು ಮುಂಜಾನೆ 7:50ಕ್ಕೆ 75 ಜನ ಕೈಯ್ಯಲ್ಲಿ 75 ಮೀ ರಾಷ್ಟ್ರಧ್ವಜವನ್ನು ಹಿಡಿದು ಮಾನವ ಸರಪಳಿಯನ್ನು ರಚಿಸಿ ಕಣಬರ್ಗಿಯ ಸಿದ್ದೇಶ್ವರ ದೇವಸ್ಥಾನಕ್ಕೆ ತಲುಪಿದರು

Read More »

ಹೆಣ ಕಂಡ್ರೆ ಓಡೋಡಿ ಬರೋ ಶೋಭಾ ಕರಂದ್ಲಾಜೆ ಸಮಸ್ಯೆಗಳಿಗೆ ಬಾಯಿ ಬಿಡಲ್ಲ ಯಾಕೆ?

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಕಾಂಗ್ರೆಸ್​ ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ. ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ ಮೇಲಿಂದ ಮೇಲೆ ಅನ್ಯಾಯವೆಸಗುತ್ತಿದೆ ಎಂದು ಕಾಂಗ್ರೆಸ್ (Congress) ಆಕ್ರೋಶ ವ್ಯಕ್ತಪಡಿಸಿದೆ. ಪತ್ರಿಕೆಯೊಂದರ ‘ರೈತರಿಗೂ ಬಡ್ಡಿ ಬರೆ’ ಎಂಬ ವರದಿಯ ತುಣುಕೊಂದನ್ನು ಟ್ವೀಟ್ (Tweet) ಮಾಡಿರುವ ಕಾಂಗ್ರೆಸ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹೆಣ ಕಂಡರೆ ಓಡೋಡಿ ಬರ್ತಾರೆ, ಸಮಸ್ಯೆ ಕೇಳಲ್ಲ ಯಾಕೆ? ‘ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ …

Read More »

ಎಸ್‌ಪಿ ನಾಯಕರ ಕಾರ್​ಗೆ ಡಿಕ್ಕಿ ಹೊಡೆದು 500 ಮೀಟರ್‌ಗಳವರೆಗೆ ಎಳೆದೊಯ್ದ ಟ್ರಕ್!

ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಬೆಳಕಿಗೆ ಬಂದಿದೆ. ಮೈನಪುರಿಯಲ್ಲಿ ಎಸ್‌ಪಿ ನಾಯಕರ ಕಾರ್​ಗೆ ಟ್ರಕ್​ ಡಿಕ್ಕಿ ಹೊಡೆದಿದ್ದಲ್ಲದೇ, ಆ ಕಾರನ್ನು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಎಸ್‌ಪಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರ್​ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಟಾವಾ ಮೂಲದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೈನ್​ಪುರಿ ಎಸ್​ಪಿ ಕಮಲೇಶ್ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.

Read More »

ಕಾರ್ಯಕರ್ತರ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯ

ಬೈಲಹೊಂಗಲ: ಜೆಡಿಎಸ್‌ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೋರಾಟ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಡಿವೈಎಸ್ಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ತೆರಳಿ ಅಸಮಾಧಾನ ಹೊರ ಹಾಕಿದರು.   ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಪೊಲೀಸರು ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವುದು ಬಿಟ್ಟು ಜೆಡಿಎಸ್‌ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು ಅಕ್ಷಮ್ಯ …

Read More »

ಕಲುಷಿತ ನೀರು ಸೇವನೆ, 84 ಮಂದಿ ಆಸ್ಪತ್ರೆಗೆ ದಾಖಲು

ಬಳ್ಳಾರಿ : ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದಳು. ಈ ಘಟನೆ ಮಾಸುವ ಮುನ್ನವೇ ಇದೇ ರೀತಿಯ ಪ್ರಕರಣಗಳು ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮದಲ್ಲೂ ನಡೆದಿದೆ. ಗ್ರಾಮದಲ್ಲಿ ಕಳೆದ ಶುಕ್ರವಾರದಿಂದ ಇದುವರೆಗೆ ಒಟ್ಟು 84 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥರನ್ನು ಈಗಾಗಲೇ ಸಂಡೂರು ತಾಲೂಕು ಆಸ್ಪತ್ರೆ, ಬಳ್ಳಾರಿಯ ವಿಮ್ಸ್, …

Read More »

ರಾಜ್ಯದ ಸಂಸದರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ,

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗಲಿದ್ದು ಕಾರ್ಯತಂತ್ರ ನಡೆಯುತ್ತಿದೆ. ಹಿರಿಯ ಸಂಸದರಿಗೆ ಟಿಕೆಟ್ ನೀಡುವುದು ಬಹುತೇಕ ಅನುಮಾನ. ಹೊಸ ಮುಖಗಳಿಗೆ ಈಗಾಗಲೇ ಸದ್ದಿಲ್ಲದೇ ಶೋಧ ಶುರುವಾಗಿದೆ. 70-75 ವರ್ಷ ದಾಟಿದ ಸಂಸದರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೊಕ್ ನೀಡುವುದು ಖಚಿತವಾಗಿದ್ದು, ಯುವಕರತ್ತ ಕೇಸರಿ ಪಕ್ಷದ ಹೈಕಮಾಂಡ್ ಮನಸ್ಸು ಮಾಡಿದೆ. ಮೂಲಗಳ ಪ್ರಕಾರ, ಆರರಿಂದ ಏಳು ಲೋಕಸಭಾ ಕ್ಷೇತ್ರದ ಹಾಲಿ ಎಂಪಿಗಳನ್ನು ಕೈ ಬಿಡುವ ಸಾಧ್ಯತೆ …

Read More »

ತುಂಬಿ ಹರಿಯುತ್ತಿದ್ದ ಸಾತಿಹಳ ಸೇತುವೆ ಮೇಲೆ ಬಸ್‌ ಚಾಲಕನ ದುಸ್ಸಾಹಸ;

ವಿಜಯಪುರ:ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ನಿರಂತರವಾಗಿ ವರುಣ ಅಬ್ಬರದಿಂದ ಸೇತುವೆಗಳೆಲ್ಲ ತುಂಬಿ ಹರಿಯುತ್ತಿದೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಳ ಗ್ರಾಮದ ಸೇತುವೆ ಫುಲ್‌ ಜಲಾವೃತಗೊಂಡಿದೆ. ಈ ವೇಳೆ ಬಸ್‌ ಚಾಲಕನೊಬ್ಬ ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬಸ್‌ ಚಲಾಯಿಸುತ್ತಿದ್ದು, ದುಸ್ಸಾಹಸಕ್ಕೆ ಇಳಿದಿದ್ದಾನೆ. ಗ್ರಾಮದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ …

Read More »