ಬೆಂಗಳೂರು/ ಮೈಸೂರು: ರಾಜ್ಯದ ಹಲವೆಡೆ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ವಿವಿಧೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಕೆರೆ ಏರಿಗಳು ಒಡೆದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಕೃಷಿ ಜಮೀನಿನಲ್ಲಿ ನೀರು ನಿಂತು ಬೆಳೆಗಳು ಕೊಳೆಯಲಾರಂಭಿಸಿವೆ. ಮಡಿಕೇರಿ- ಚಟ್ಟಳ್ಳಿ ರಸ್ತೆ ಬದಿಯ ನಾಲ್ಕು ಸ್ಥಳದಲ್ಲಿ ಮಣ್ಣು ಕುಸಿದು ಅಪಾಯದ ಮುನ್ಸೂಚನೆ ನೀಡುತ್ತಿದೆ. ಸಿಡಿಲು ಬಡಿದು ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ರೈತ ಮಹಿಳೆ ವಿದ್ಯಾವತಿ ನರಸಪ್ಪ ಟೊಳ್ಳೆ (52) ಮತ್ತು ಯಾದಗಿರಿ ಜಿಲ್ಲೆಯ …
Read More »ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ..!
‘ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ನಟಿ ಸಂಜನಾ ಗಲ್ರಾನಿ. ಡ್ರಗ್ಸ್ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡ ಹಿನ್ನಲೆಯಲ್ಲಿ, ಗಂಡ ಹೆಂಡತಿ ನಾಯಕಿಯ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅದೇ ಸಮಯದಲ್ಲಿ ಬಹುದಿನದ ಗೆಳೆಯ, ಅಜೀಜ್ ಪಾಷಾ ಜೊತೆ ಸಂಜನಾ ಗಲ್ರಾನಿ ಮದುವೆ ಮಾಡಿಕೊಂಡಿದ್ದರು. ಇದರ ಫಲವಾಗಿ ಸಂಜನಾ ಗಲ್ರಾನಿ ಅವರಿಗೆ ಇಂದು, ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ …
Read More »ಕರ್ತವ್ಯ ಲೋಪ ಸಹಿಸೆನು: ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಬೆಂಗಳೂರು: ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಬುಧವಾರ ನಗರದ ಎಂಟು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಗಳು, ಎಸಿಪಿಗಳು ಹಾಗೂ ಇನ್ಸ್ಪೆಕ್ಟರ್ಗಳ ಮೊದಲ ಸಭೆ ನಡೆಸಿದ್ದಾರೆ. ಈ ವೇಳೆ ಈ ಹಿಂದಿನ ನಗರ ಪೊಲೀಸ್ ಆಯಕ್ತ ಕಮಲ್ ಪಂತ್ ಅವರು ಏನೆಲ್ಲ ಯೋಜನೆಗಳು ಹಾಗೂ ಕಾನೂನು ಸುವ್ಯವಸ್ಥೆ ತಡೆಯಲು ರೂಪಿಸಿರುವ ತಂತ್ರಗಳು ಯಥಾ ಪ್ರಕಾರ ಮುಂದುವರಿಸಬೇಕು. ಎಲ್ಲ ಮಾದರಿಯ ಅಪರಾಧಗಳ ನಿಯಂತ್ರಣಕ್ಕೆ ಸೂಚಿಸಿರುವ ತಂತ್ರಗಳು ಈಗಲೂ ಮುಂದುವರಿಯಲಿವೆ. ಅದರಲ್ಲಿ …
Read More »ಹೊಸ ಮಾದರಿಯಲ್ಲಿ ಭಾವಿ ಪತಿಗಾಗಿ ಹುಡುಕಾಟ ಫಲಕವನ್ನು ಹಿಡಿದು ಬೀದಿ ಬೀದಿಯಲ್ಲಿ ಮಹಿಳೆ ಅಲೆದಾಡುತ್ತಿದ್ದಾಳೆ.
ದುಬೈ: ಸುಡಾನ್ ಮೂಲದ ಯುವತಿಯೊಬ್ಬಳು ಹೊಸ ಮಾದರಿಯಲ್ಲಿ ಭಾವಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾಳೆ. ವರ ಬೇಕು ಎಂಬ ಭಿತ್ತಿ ಫಲಕವನ್ನು ಹಿಡಿದು ಸುಡಾನ್ನ ರಾಜಧಾನಿ ಖಾರ್ಟೂಮ್ನ ಬೀದಿ ಬೀದಿಯಲ್ಲಿ ಮಹಿಳೆ ಅಲೆದಾಡುತ್ತಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗಿದೆ. ಅದರಲ್ಲಿ ಯುವತಿ ಟ್ರಾಫಿಕ್ ಸಿಗ್ನಲ್ ಬಳಿ ಭಿತ್ತಿ ಫಲಕ ಹಿಡಿದು ನಿಂತಿದ್ದಾಳೆ. ನನಗೆ ವರ ಬೇಕಿದ್ದಾನೆ. ನಾನು ಮದುವೆಯಾಗಬೇಕಿದೆ. ನಾನು ಬಹುಪತ್ನಿತ್ವ ಸ್ವೀಕರಿಸಲೂ ಸಿದ್ಧಳಾಗಿದ್ದೇನೆ ಎಂಬ ಬರಹ ಯುವತಿ ಹಿಡಿದಿರುವ ಭಿತ್ತಿ …
Read More »ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ B.S.Y.ಭೇಟಿ
ಬೆಂಗಳೂರು, ಮೇ 17; ಚಾಮರಾಜಪೇಟೆ ಶಾಸಕ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಮಂಗಳವಾರಯಡಿಯೂರಪ್ಪನಿವಾಸಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹ ಈ ಸಂದರ್ಭದಲ್ಲಿ ಜೊತೆಗಿದ್ದರು. ಪುಲಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪುತ್ರಿಯ ವಿವಾಹದ ಆಮಂತ್ರಣ ನೀಡಲು ಜಮೀರ್ ಅಹ್ಮದ್ ಯಡಿಯೂರಪ್ಪ ಭೇಟಿ ಮಾಡಿದ್ದರು. ಮಂಗಳವಾರ ಬೆಳಗ್ಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ …
Read More »ಗ್ರಾಹಕರ ಅಚ್ಚುಮೆಚ್ಚಿನ ಹೋಂಡಾ ಶೈನ್ ಬೈಕನ್ನು ಕೇವಲ 6 ಸಾವಿರಕ್ಕೆ ಮನೆಗೆ ತರುವ ಅವಕಾಶ!
ಹೋಂಡಾ ಶೈನ್ ಬಹುತೇಕರ ಅಚ್ಚುಮೆಚ್ಚಿನ ಬೈಕ್ ಆಗಿ ಗುರುತಿಸಿಕೊಂಡಿದೆ. ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಮಾರಾಟದಲ್ಲಿ ಪ್ರಬಲವಾಗಿ ಬೆಳೆದ ಬೈಕ್ ಇದಾಗಿದೆ. ಇದುವರೆಗೆ 10 ಮಿಲಿಯನ್ಗಿಂತಲೂ ಹೆಚ್ಚು ಗ್ರಾಹಕರು ಈ ಬೈಕ್ ಅನ್ನು ಖರೀದಿಸಿದ್ದಾರೆ. ಆದರೀಗ ಈ ಬೈಕಿನ ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು, ಹೋಂಡಾ ದ್ವಿಚಕ್ರ ವಾಹನಗಳು ಈ ಬೈಕನ್ನು ಸುಲಭವಾದ ಹಣಕಾಸಿನಲ್ಲಿ ಒದಗಿಸುತ್ತಿವೆ ಮತ್ತು ಕೇವಲ 5,999 ರೂಪಾಯಿ ಡೌನ್ ಪಾವತಿಯೊಂದಿಗೆ ಹೊಸ …
Read More »ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ
ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …
Read More »ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದ M.L.A
ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷದ ಶಾಸಕರೊಬ್ಬರು ತಮ್ಮ ಕ್ಷೇತ್ರದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ಬಿಹಾರದ ಭಾಗಲ್ಪುರ್ ಜಿಲ್ಲೆಯ ಫತೇಪುರ್ ಗ್ರಾಮದಲ್ಲಿ ನಡೆದ ಮದುವೆಯ ಆರತಕ್ಷತೆ ಸಮಾರಂಭದಲ್ಲಿ, ಜೆಡಿಯು ಶಾಸಕ ಗೋಪಾಲ್ ಮಂಡಲ್ ಅವರು ಬಾಲಿವುಡ್ನ ಫೇಮಸ್ ದಿಲ್ಬರ್, ದಿಲ್ಬರ್ ಸಾಂಗ್ಗೆ ಧರಿಸಿದ್ದ ಕುರ್ತಾವನ್ನು ಮೇಲಕ್ಕೆ ಎತ್ತಿ ಡ್ಯಾನ್ಸ್ …
Read More »‘ಟೊಮೆಟೋ’ ಜ್ವರದ ಭೀತಿ.. ಕರಾವಳಿ ಜಿಲ್ಲೆಯಲ್ಲಿ ಹೈ-ಅಲರ್ಟ್
ಉಡುಪಿ: ಕೇರಳದಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೊನಾ ಭೀತಿ ನಡುವೆ ಇದೀಗ ಟೊಮೆಟೋ ಜ್ವರ ಆತಂಕ ಮೂಡಿಸಿದೆ. ಇದರ ನಡುವೆ ಉಡುಪಿ ಜಿಲ್ಲೆಯಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು.. ಟೊಮೆಟೋ ಜ್ವರ ಪತ್ತೆಯಾಗಿಲ್ಲ. ಮಕ್ಕಳಲ್ಲಿ ಜ್ವರ …
Read More »ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್ ಟವರ್ ಏರಿದವಳ ರಕ್ಷಿಸಿತು ಜೇನ್ನೊಣ!
ಕೇರಳ: ಆತ್ಮಹತ್ಯೆ ಮಾಡಿಕೊಳ್ಳಲು ಟವರ್ ಏರಿದ ಯುವತಿಯೊಬ್ಬಳನ್ನು ಜೇನ್ನೊಣಗಳು ರಕ್ಷಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿಯ ಆಲಪ್ಪುಳ ಕರಾವಳಿಯ ಕಾಯಂಕುಲಂನಲ್ಲಿ ಇಂಥದ್ದೊಂದು ಅಚ್ಚರಿಯ ಘಟನೆ ಜರುಗಿದೆ. ಮಗುವನ್ನು ಕರೆದುಕೊಂಡು ಹೋಗಿದ್ದ ಪತಿ, ಮಗುವನ್ನು ನೋಡಲು ಬಿಡುತ್ತಿಲ್ಲ ಎನ್ನುವ ಕಾರಣಕ್ಕೆ, ಪತಿಯ ಮೇಲಿನ ಸಿಟ್ಟಿನಿಂದ ಯುವತಿ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿದ್ದಳು. ಪತಿ ಮಗುವನ್ನು ತೋರಿಸದೇ ಹೋದರೆ ಅಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಇದನ್ನು ನೋಡಿದ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕ …
Read More »
Laxmi News 24×7