ವಿಜಯನಗರ: ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಹಂತಕರನ್ನು ಸೆರೆ ಹಿಡಿಯುವಲ್ಲಿ ಹೊಸಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, …
Read More »ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಯಲ್ಲಿ ಕೇಂದ್ರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ ಎಂದು …
Read More »ಕಾರ್ಗತ್ತಲಲ್ಲಿದ್ದ ಕುಗ್ರಾಮದ ಜನರನ್ನು ಗೋವಾಗೆ ಕರೆದೊಯ್ದು ಸಮೀಕ್ಷೆ
ಕಾರವಾರ(ಉತ್ತರ ಕನ್ನಡ): ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕುಗ್ರಾಮವೊಂದರ ಜನರ ಗೋಳು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆ ಅಧಿಕಾರಿಗಳ ಕಿವಿ ತಲುಪಿದೆ. ಇಂಟರ್ನೆಟ್ ಇಲ್ಲದ ಕಾರಣ, ಮೂಲಭೂತ ಸೌಕರ್ಯದಿಂದ ವಂಚಿರಾದ ಗ್ರಾಮಸ್ಥರನ್ನು ಅಧಿಕಾರಿಗಳು ಪಕ್ಕದ ಗೋವಾ ರಾಜ್ಯಕ್ಕೆ ಕೊಂಡೊಯ್ದು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಹೌದು, ಕಳೆದ ಆರು ತಿಂಗಳಿನಿಂದ ಕಾರ್ಗತ್ತಲಲ್ಲಿ ಮುಳುಗಿದ್ದ ಕಾರವಾರ ತಾಲೂಕಿನ ಘೋಟೆಗಾಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮರಗಾಂವ್ ಎಂಬ ಕುಗ್ರಾಮದ ಜನರ ಗೋಳು ಇದೀಗ ಅಧಿಕಾರಿಗಳ …
Read More »ದಕ್ಷಿಣದಿಂದ ಉತ್ತರ ಕರ್ನಾಟಕಕ್ಕೆ ವಿಸ್ತರಿಸಿದ ದಸರಾ ಬೊಂಬೆ ಪ್ರದರ್ಶನ
ಹಾವೇರಿ: ದಸರಾ ಹಬ್ಬದ ವೇಳೆ ಮನೆಗಳಲ್ಲಿ ಬೊಂಬೆ ಕೂರಿಸುವ ಸಂಪ್ರದಾಯ ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಹಿಂದಿನಿಂದಲೂ ಇದೆ. ಉತ್ತರ ಕರ್ನಾಟಕದಲ್ಲಿ ಈ ಪದ್ಧತಿ ಇಲ್ಲ. ಆದರೆ ಶಿಗ್ಗಾಂವಿ ತಾಲೂಕು ಬಂಕಾಪುರದ ಗೃಹಿಣಿಯೊಬ್ಬರು ಮನೆಯಲ್ಲಿ ದಸರಾ ಬೊಂಬೆಗಳನ್ನು ಕೂರಿಸುವ ಮೂಲಕ ದಕ್ಷಿಣ ಕರ್ನಾಟಕದ ಸಂಪ್ರದಾಯವನ್ನು ಉತ್ತರ ಕರ್ನಾಟಕಕ್ಕೆ ಪರಿಚಯಿಸಿದ್ದಾರೆ. ಅಂದಹಾಗೆ ಅವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದಾರೆ. ಅಲ್ಲಿ ಮದುವೆಯಾಗಿ ಗಂಡನ ಮನೆಗೆ ಹೋಗುವ ಮಹಿಳೆಗೆ ತವರು ಮನೆಯಿಂದ ಬೊಂಬೆ ನೀಡುವ ಸಂಪ್ರದಾಯವಿದೆ. …
Read More »ವರುಣನ ಅಬ್ಬರಕ್ಕೆ ಕೊಚ್ಚಿಹೋದ ಸೇತುವೆ, ಸಂಕಷ್ಟಕ್ಕೆ ಸಿಲುಕಿದ ರೈತರು
ಚಿಕ್ಕೋಡಿ: ನಿರಂತರ ಮಳೆಯ ಹಿನ್ನೆಲೆ ಅಗ್ರಾಣಿ ಹಳ್ಳಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಸಂಬರಗಿ – ಆಜೂರ ಗ್ರಾಮಗಳ ನಡುವಿನ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿಕೊಂಡು ಹೋಗಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಈ ಕಳಪೆ ಗುಣಮಟ್ಟದ ಕಾಮಗಾರಿಗೆ ಯಾರು ಹೊಣೆ ಎಂದು ಸ್ಥಳೀಯರು ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಸಮೀಪ ಅಗ್ರಾಣಿ ಹಳಕ್ಕೆ ಅಡ್ಡಲಾಗಿ ಬ್ರಿಡ್ಜ್ ಕಂ ಬಾಂದಾರ್ …
Read More »5 ನಗರ ಪಾಲಿಕೆಗಳ ಕ್ಷೇತ್ರ ಪುನರ್ವಿಂಗಡನೆ ಕರಡು ಅಧಿಸೂಚನೆ ಪ್ರಕಟ, ಆಕ್ಷೇಪಣೆಗೆ 15 ದಿನ ಕಾಲಾವಕಾಶ
ಬೆಂಗಳೂರು: ಬೆಂಗಳೂರಿನ ಐದು ಹೊಸ ನಗರ ಪಾಲಿಕೆಗಳ ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆ ಪ್ರಕಟಿಸಲಾಗಿದ್ದು, ನಾಗರಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಿದೆ. ಐದು ಪಾಲಿಕೆಗಳಾಗಿ ವಿಂಗಡಣೆ: ಸರ್ಕಾರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸಿದೆ. ಈ ಸಂಬಂಧ ವಾರ್ಡ್ಗಳ ಪುನರ್ …
Read More »ದಸರಾ ಪಟ್ಟದ ಗೊಂಬೆಗಳೊಂದಿಗೆ 20 ದೇಶದ ಗೊಂಬೆಗಳ ವಯ್ಯಾರ: ವಿದೇಶ ಸುತ್ತಿ ಬೊಂಬೆಗಳ ಸಂಗ್ರಹಿಸುವುದೇ ದಂಪತಿಯ ಹವ್ಯಾಸ
ದಾವಣಗೆರೆ: ದಸರಾ ಹಬ್ಬದಂದು ಬೊಂಬೆಗಳನ್ನು ಕೂರಿಸುವುದು ಈ ನೆಲದ ಸಂಪ್ರದಾಯ. ಆದರೆ, ಯಾವತ್ತಾದರೂ ನೀವು ವಿದೇಶಿ ಬೊಂಬೆಗಳನ್ನು ಕೂರಿಸಿದ್ದೀರಾ?. ಆದರೆ, ದಾವಣಗೆರೆಯಲ್ಲಿನ ದಂಪತಿಯೊಬ್ಬರು ವಿದೇಶಿ ಬೊಂಬೆಗಳನ್ನು ಕೂರಿಸಿ ದಸರಾ ಆಚರಿಸುತ್ತಿದ್ದಾರೆ. ಆಫ್ರಿಕಾ ಖಂಡದ ಹಲವು ವಿಶೇಷ ಬೊಂಬೆಗಳನ್ನು ತಂದು ಕಳೆದ 13 ವರ್ಷಗಳಿಂದ ದಸರಾ ಹಬ್ಬ ಆಚರಿಸುತ್ತಿದ್ದಾರೆ. ಈ ಗೊಂಬೆ ಕೂರಿಸುವ ಪದ್ಧತಿಯು 18ನೇ ಶತಮಾನದಿಂದ ನಡೆದುಕೊಂಡು ಬಂದಿದೆ. ಇದಕ್ಕೆ ಅದರದ್ದೇ ಆದ ಮಹತ್ವವಿದೆ. ದೇಶ – ವಿದೇಶಗಳನ್ನು ಸುತ್ತುವ ಹವ್ಯಾಸ …
Read More »ರಾಜಧಾನಿಯಲ್ಲಿ ರಸ್ತೆಗಳ ಸ್ಥಿತಿಗತಿ ಅರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಾಏಕಿ ನಗರ ಪ್ರದಕ್ಷಿಣೆ
ಬೆಂಗಳೂರು: ರಾಜಧಾನಿಯಲ್ಲಿ ರಸ್ತೆಗಳ ಸ್ಥಿತಿಗತಿ ಅರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಾಏಕಿ ನಗರ ಪ್ರದಕ್ಷಿಣೆ ಕೈಗೊಂಡು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದಲ್ಲಿ ರಸ್ತೆಗುಂಡಿಗಳಿಂದ ರಸ್ತೆಗಳು ಹಾಳಾಗಿವೆ. ಘನ ತ್ಯಾಜ್ಯಗಳ ಸಮರ್ಪಕ ನಿರ್ವಹಣೆ ಕೊರತೆ ಹಾಗೂ ಮಳೆಪೀಡಿತ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಸಮಸ್ಯೆ ಅರಿಯಲು ಸಿದ್ದರಾಮಯ್ಯ ಅವರು ಸಿಟಿ ರೌಂಡ್ಸ್ ಕೈಗೊಂಡರು. ರಸ್ತೆ ಗುಂಡಿ ಮುಚ್ಚದಿರುವುದು, ರಸ್ತೆ ಬದಿಯಲ್ಲಿ ಘನತ್ಯಾಜ್ಯ ಇರುವುದು ಹಾಗೂ ವೈಟ್ ಟಾಪಿಂಗ್ ರಸ್ತೆ ಸಮರ್ಪಕವಾಗಿ ನಿರ್ವಹಣೆ ಕಂಡು ಬರದ ಹಿನ್ನೆಲೆಯಲ್ಲಿ …
Read More »ಲಿಂಗಾಯತರು ‘ಲಿಂಗಾಯತ ಧರ್ಮ’ ಎಂದು ಬರೆಸಿರಿ
ಲಿಂಗಾಯತರು ‘ಲಿಂಗಾಯತ ಧರ್ಮ’ ಎಂದು ಬರೆಸಿರಿ ರಾಜ್ಯದಲ್ಲಿ ಸರ್ಕಾರ ಜಾತಿಗಣತಿ ಪ್ರಾರಂಭಿಸಿದ್ದು, ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳನ್ನು ಸಮೀಕ್ಷೆ ಮಾಡುವುದು ಇದರ ಉದ್ದೇಶವಾಗಿದೆ. ತರಾತುರಿಯಲ್ಲಿ ನಡೆಯುತ್ತಿರುವ ಈ ಸಮೀಕ್ಷೆಯಿಂದಾಗಿ ಜನರಲ್ಲಿ, ಅದರಲ್ಲೂ ವಿಶೇಷವಾಗಿ ಲಿಂಗಾಯತರಲ್ಲಿ ಸಾಕಷ್ಟು ಗೊಂದಲವುಂಟಾಗಿದೆ. ಸಣ್ಣ ಸಣ್ಣ ಸಮುದಾಯಗಳು ಲಿಂಗಾಯತ ಧರ್ಮದಿಂದ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ ಅಖಂಡ ಲಿಂಗಾಯತ ಸಮಾಜವನ್ನು ಗಟ್ಟಿಯಾಗಿ ಉಳಿಸಿಕೊಳ್ಳಲು ಎಲ್ಲರೂ ತಮ್ಮ ಪ್ರತಿಷ್ಠೆಯನ್ನು ಬದಿಗಿರಿಸಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಾಗಿದೆ. ಸಂವಿಧಾನದ ಕಲಂ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಗ್ರಾಮದ ಶ್ರೀ ಸದ್ಗುರು ಸಿದ್ಧಾರೂಢ ಮಹಾರಾಜರು ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »