Breaking News

Uncategorized

ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ!

ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ! ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಭರ್ಜರಿ ಸಿದ್ಧತೆ ಆರಂಭವಾಗಿದೆ. ಮೈತ್ರಿ ಪಕ್ಷಗಳ ನಡುವೆ ಉತ್ತಮ ಸಮನ್ವಯ ಸಾಧಿಸಲು ‘ಗೋವಾ ಮೈತ್ರಿ ಸಮಿತಿ’ ರಚಿಸಲಾಗಿದ್ದು, ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಗೋವಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, …

Read More »

ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಿ,

ಬೆಳಗಾವಿವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಿ, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ವಾಲ್ಮೀಕಿ ನಿಗಮದ ಹಣ ದುರ್ಬಳಕೆಯು …

Read More »

ರಾಯರ ಹುಂಡಿಯಲ್ಲಿ ವಿಚಿತ್ರ ಪತ್ರ: “ಸ್ವಾಮಿ, ನನ್ನನ್ನ ಆ ಹುಡುಗಿಯಿಂದ ಕಾಪಾಡು!”

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು ಪತ್ರ! • ರಾಮದುರ್ಗದ ರಾಯರ ಮಠದಲ್ಲಿ ವಿಚಿತ್ರ ಪ್ರಸಂಗ • ಹುಂಡಿಯಲ್ಲಿ ಪತ್ತೆಯಾಯಿತು ಭಕ್ತನ ಅಪರೂಪದ ಪತ್ರ • “ಒಬ್ಬ ಹುಡುಗಿಯಿಂದ ಕಾಪಾಡಿ ಸ್ವಾಮಿ” ಎಂದು ಪ್ರಾರ್ಥನೆ • ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು ಪತ್ರ! ರಾಮದುರ್ಗ ತಾಲೂಕಿನ ಪಡಕೋಟಗಲ್ಲಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿ ಎಣಿಕೆ ವೇಳೆ ವಿಚಿತ್ರ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಭಕ್ತನೊಬ್ಬ “ಸ್ವಾಮಿ, ನನ್ನನ್ನು ಒಬ್ಬ ಹುಡುಗಿಯಿಂದ ಕಾಪಾಡಿ” …

Read More »

ಗಣೇಶಪುರ-ಮಹಾಲಕ್ಷ್ಮೀ ಲೇಔಟ್‌ಗೆ ಬಸ್ ಸೇವೆ ಆರಂಭಿಸಿ…:

NWKSRTC ಉಪಾಧ್ಯಕ್ಷ ಸುನಿಲ್ ಹನುಮಣ್ಣನವರ್‌ಗೆ ಮಲ್ಲೇಶ್ ಚೌಗುಲೆ ಮನವಿ! • ಗಣೇಶಪುರದಿಂದ ಸಿಬಿಟಿಗೆ ಬಸ್ ಸೇವೆಗೆ ಆಗ್ರಹ • ಮಲ್ಲೇಶ್ ಚೌಗುಲೆ ನೇತೃತ್ವದಲ್ಲಿ ಸಾರ್ವಜನಿಕರ ಮನವಿ • ಮಹಾಲಕ್ಷ್ಮೀ ಲೇಔಟ್‌ಗೆ ಬಸ್ ಸೇವೆ ಪರಿಶೀಲನೆ • ಸುನಿಲ್ ಹನುಮಣ್ಣನವರ್ ಅವರಿಂದ ಸಕರಾತ್ಮಕ ಭರವಸೆ ಆಂಕರ್: ಬೆಳಗಾವಿಯ ಗಣೇಶಪುರ ಮತ್ತು ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಸೂಕ್ತ ಬಸ್ ಸಂಪರ್ಕವಿಲ್ಲದೆ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯನ್ನು ತಪ್ಪಿಸಲು NWKSRTC ಉಪಾಧ್ಯಕ್ಷ ಸುನಿಲ್ ಹನುಮಣ್ಣನವರ್ ಅವರಿಗೆ …

Read More »

ಗಣೇಶೋತ್ಸವಕ್ಕೆ ಶಿವಶಂಬು ಪಥಕದಿಂದ ನಾದನಮನ: ಅನಿಲ್ ಬೆನಕೆ ಹಾಗೂ ಗಣ್ಯರ ಸಮ್ಮುಖದಲ್ಲಿ ವಾದ್ಯಪೂಜೆ, ಶೈಕ್ಷಣಿಕ ಸನ್ಮಾನ!

• ಚವ್ಹಾಟ್ ಗಲ್ಲಿಯಲ್ಲಿ ಅದ್ಧೂರಿ ವಾದ್ಯಪೂಜೆ • ಅನಿಲ್ ಬೆನಕೆ ಹಾಗೂ ಗಣ್ಯರು ಭಾಗಿ • ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹದ ನುಡಿ • ಶಿವಶಂಬು ಪಥಕದಿಂದ ಅಭ್ಯಾಸ ಶುರು ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವದ ಸಂಭ್ರಮಕ್ಕೆ ಈಗಿನಿಂದಲೇ ಚಾಲನೆ ಸಿಕ್ಕಿದೆ. ಚವ್ಹಾಟ ಗಲ್ಲಿಯ ಶ್ರೀ ಶಿವಶಂಬು ಢೋಲ್-ತಾಶಾ ಪಥಕವು ಮಾಜಿ ಶಾಸಕ ಅನಿಲ್ ಬೆನಕೆ ಹಾಗೂ ಹಲವು ಗಣ್ಯರ ಸಮ್ಮುಖದಲ್ಲಿ ಸಾಂಪ್ರದಾಯಿಕ ಶಿಸ್ತಿನೊಂದಿಗೆ ವಾದ್ಯಪೂಜೆ ನೆರವೇರಿಸಿ, ಗಣೇಶೋತ್ಸವದ ನಾದನಮನಕ್ಕೆ ಅದ್ಧೂರಿ ಚಾಲನೆ …

Read More »

ಸ್ವಚ್ಛತೆ,ನೀರು, ರಸ್ತೆಗೆ ಸಂಬಂಧಿಸಿದ ಸಮಸ್ಯೆಗಳಿರುವ ನಗರದ ಕೆಲವು ಬಡಾವಣೆಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಭೇಟಿ

ನಗರದ ವಿವಿಧ ಬಡಾವಣೆಗಳಿಗೆ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಭೇಟಿ ಸ್ವಚ್ಛತೆ,ನೀರು, ರಸ್ತೆಗೆ ಸಂಬಂಧಿಸಿದ ಸಮಸ್ಯೆಗಳಿರುವ ನಗರದ ಕೆಲವು ಬಡಾವಣೆಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಸುಭಾಷ್ ನಗರ, ಅಶೋಕ್ ನಗರ ಸೇರಿದಂತೆ ನಗರದ ವಿವಿಧೆಡೆ ಭೇಟಿ ನೀಡಿದ ಆಯುಕ್ತರು, ಕೆಯುಡಿಎಫ್ಸಿ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಪರಿಶೀಲಿಸಿದರು. ಕೆಲವು ಕಡೆ ಕುಡಿಯುವ ನೀರಿನ ಪೈಪ್ ಗೆ ಚರಂಡಿ ನೀರು ಸೇರುತ್ತಿರುವ …

Read More »

ಕೆಪಿಸಿಸಿ ಎಸ್‌ಸಿ ಘಟಕದ ರಾಜ್ಯ ನಿರ್ದೇಶಕರಾಗಿ ಬೆಳಗಾವಿಯ ಹಿರಿಯ ದಲಿತ ಮುಖಂಡ ಮಲ್ಲೇಶ ಚೌಗುಲೆ ನೇಮಕ!

• ಕೆಪಿಸಿಸಿ ಎಸ್‌ಸಿ ವಿಭಾಗದ ನಿರ್ದೇಶಕರಾಗಿ ಚೌಗುಲೆ • ಬೆಳಗಾವಿ ಹಿರಿಯ ದಲಿತ ಮುಖಂಡನಿಗೆ ಜವಾಬ್ದಾರಿ • ಸಾಮಾಜಿಕ, ರಾಜಕೀಯ ಕೊಡುಗೆಗೆ ಸಿಕ್ಕ ಗೌರವ • ಕಾಂಗ್ರೆಸ್ ನಾಯಕರು, ಬೆಂಬಲಿಗರಿಂದ ಶುಭಾಶಯದ ಮಹಾಪೂರ ಬೆಳಗಾವಿ ಜಿಲ್ಲೆಯ ಹಿರಿಯ ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ಮಲ್ಲೇಶ ಚೌಗುಲೆ ಅವರಿಗೆ ಪ್ರಮುಖ ಜವಾಬ್ದಾರಿ ಒಲಿದುಬಂದಿದೆ. ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಎಸ್‌ಸಿ ವಿಭಾಗದ ರಾಜ್ಯ …

Read More »

ಕುಟ್ಟಲವಾಡಿ ವಿದ್ಯಾರ್ಥಿಗಳ ನೆರವಿಗೆ ನಿಂತ ನಾಯಕ

ಬಸ್ ಬಾರದಿದ್ದರೂ ಖಾಸಗಿ ವಾಹನ ವ್ಯವಸ್ಥೆ, ಸಾರಿಗೆ ಇಲಾಖೆಗೆ ಉಗ್ರ ಹೋರಾಟದ ಎಚ್ಚರಿಕೆ! ಬೆಳಗಾವಿ ತಾಲೂಕಿನ ಕುಟ್ಟಲವಾಡಿ ಗ್ರಾಮದಲ್ಲಿ ಉತ್ತಮ ರಸ್ತೆಯಿದ್ದರೂ ಸಾರಿಗೆ ಸಂಸ್ಥೆ ಬಸ್ ಸೌಲಭ್ಯ ಕಲ್ಪಿಸದ ಕಾರಣ ಶಾಲಾ ಮಕ್ಕಳು ಪ್ರತಿದಿನ ೪ ಕಿಲೋಮೀಟರ್ ನಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಸ್ಥಳೀಯ ಮುಖಂಡ ಮಾರುತಿ ದೊಡ್ಡಲಕ್ಕಪ್ಪಗೋಳ ಸ್ವಂತ ಖರ್ಚಿನಲ್ಲಿ ವಾಹನ ವ್ಯವಸ್ಥೆ ಮಾಡಿ ಮಾದರಿಯಾಗಿದ್ದು, ಕೂಡಲೇ ಬಸ್ ಬಿಡದಿದ್ದರೆ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. …

Read More »

ರಾಯಚೂರು, ಕೊಪ್ಪಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಸಲಹೆ: ಕೆಇಎ

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಪುನಃ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸುವ ಸಲುವಾಗಿ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ಆಗಸ್ಟ್ 2ರಂದು ನಡೆಯುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. …

Read More »

ವೈದ್ಯಕೀಯ ನೀಟ್ ರೋಲ್ ನಂಬರ್ ದಾಖಲಿಸಲು ಆಗಸ್ಟ್ 3 ಕೊನೆ ದಿನ – ಕೆಇಎ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ಸಿಇಟಿ ಅರ್ಜಿ ಜತೆ ಜೋಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ನೀಟ್ ರೋಲ್ ನಂಬರ್ ದಾಖಲಿಸಿದ ನಂತರ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಮತ್ತು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಮುದ್ರಿತ ನೀಟ್ ನಂಬರ್ ಅನ್ನು ಕೂಡ ಒಮ್ಮೆ …

Read More »