Breaking News

Uncategorized

ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭಿಸುತ್ತೇವೆ: ಡಿ.ಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು  ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌  ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು. ಈ ವೇಳೆ ವಿದ್ಯಾರ್ಥಿ ಚುನಾವಣೆ ಆರಂಭಿಸುವ ಬಗ್ಗೆ ಅವರು ಮಾಹಿತಿ ನೀಡಿದರು. ಈ ವೇಳೆ ತಾವು ಅಧಿಕಾರ ವಹಿಸಿಕೊಂಡ ದಿನವನ್ನು ನೆನಪಿಸಿಕೊಂಡರು. ನನಗೆ 2020ರ ಮಾ.10 ರಂದು ಸೋನಿಯಾ ಗಾಂಧಿ ಪಕ್ಷದ ಅಧಿಕಾರ ನೀಡಿದ್ದರು. ಆಗ …

Read More »

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು

ದಾವಣಗೆರೆ: ಇಲ್ಲಿನ ಕೈದಾಳೆ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾಗಿದ್ದ  ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗ್ರಾಮದ ನಿವಾಸಿಯಾಗಿದ್ದ ಅಮೂಲ್ಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಈಕೆ ಅದೇ ಗ್ರಾಮದ ಧನುಷ್ (19) ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇಬ್ಬರು ಕ್ಲಾಸ್‌ಮೇಟ್‌ ಆಗಿದ್ದರು. ಇವರ ಪ್ರೀತಿಗೆ ಜಾತಿ ಕಾರಣಕ್ಕೆ ಕುಟುಂಬಸ್ಥರು ವಿರೋಧಿಸಿದ್ದರು. ಆದರೆ ಇಬ್ಬರೂ ಪೊಲೀಸ್‌ ಭದ್ರತೆಯಲ್ಲಿ ಮದುವೆಯಾಗಿದ್ದರು. ಮದುವೆಯಾಗಿ ಒಂದೇ ವರ್ಷದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಯುವತಿಯ ಪೋಷಕರು ಆಕೆಯ ಪತಿ …

Read More »

ಕ್ಯೂರಿಂಗ್ ಮಾಡುವಾಗ ವಿದ್ಯುತ್‌ ಶಾಕ್‌ – ಸ್ಥಳದಲ್ಲೇ ಆರ್‌ಎಫ್‌ಓ ಸಾವು

ಹಾಸನ: ಕ್ಯೂರಿಂಗ್ ಮಾಡುವಾಗ ವಿದ್ಯುತ್‌ ಶಾಕ್‌ನಿಂದ  ಅರಣ್ಯ ಇಲಾಖೆ  ಆರ್‌ಎಫ್‌ಓ ಸಾವನ್ನಪ್ಪಿರುವ ಘಟನೆ ಹಾಸನ  ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ. ಜಗದೀಶ್.ಪಿ (46) ಮೃತಪಟ್ಟ ಅರಣ್ಯಾಧಿಕಾರಿ.‌ ಕುಣಿಗಲ್‌ನಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ನೂತನ ಮನೆ ನಿರ್ಮಿಸುತ್ತಿದ್ದರು. ಇಂದು (ಜೂ.21) ಮನೆಯ ಗೋಡೆಗೆ ನೀರು ಹಾಕುವಾಗ ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 2015 ರಿಂದ 2020 ರವರೆಗೆ ಹಾಸನ ಜಿಲ್ಲೆಯಲ್ಲಿ ಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿದ್ದರು. ಜಗದೀಶ್.ಪಿ ಸಾವಿಗೆ ಅರಣ್ಯ‌ …

Read More »

ಯಲ್ಲಾಪುರದಲ್ಲಿ ಹಂದಿಜ್ವರಕ್ಕೆ ವ್ಯಕ್ತಿ ಬಲಿ

ಕಾರವಾರ: ಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿಜ್ವರಕ್ಕೆ ಬಲಿಯಾಗಿದ್ದಾರೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, …

Read More »

51 ವರ್ಷಗಳಿಂದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ದೇವಸ್ಥಾನ ಮತ್ತೆ ಗೋಚರ!

ಬೆಳಗಾವಿ: ಮುಂಗಾರು ಮಳೆ ವಿಳಂಬವಾಗಿ ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಹಿಡಕಲ್ ಜಲಾಶಯದ ಒಡಲು ಬರಿದಾಗುತ್ತಿರುವ ಬೆನ್ನಲ್ಲೇ, ಪ್ರಕೃತಿಯ ವಿಚಿತ್ರವೋ ಎಂಬಂತೆ ಇತಿಹಾಸವೊಂದು ಕಣ್ಣಮುಂದೆ ಮರುಕಳಿಸಿದೆ. ಕಳೆದ 51 ವರ್ಷಗಳಿಂದ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಐತಿಹಾಸಿಕ ವಿಠ್ಠಲ ದೇವಸ್ಥಾನವು ಈಗ ಮತ್ತೆ ಸಂಪೂರ್ಣವಾಗಿ ಗೋಚರಿಸಿದ್ದು, ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸಿದೆ. ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದಲ್ಲಿದ್ದ ಈ ವಿಠ್ಠಲ ದೇವಸ್ಥಾನವನ್ನು 1928 ರಲ್ಲಿ ನಿರ್ಮಿಸಲಾಗಿತ್ತು. ತದನಂತರ 1978 ರಲ್ಲಿ ಹಿಡಕಲ್ ಜಲಾಶಯದ …

Read More »

ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿ

ಬೀದರ್: ಎಲ್ಲರೂ ಮದುವೆಗೆ ಹೋಗಿದ್ದಾಗ ಮನೆಯ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ  ಕಳ್ಳರು ಪರಾರಿಯಾದ ಘಟನೆ ಬೀದರ್  ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ. 150 ಗ್ರಾಂ ಚಿನ್ನದ ಆಭರಣಗಳು, 100 ಗ್ರಾಂ ಬೆಳ್ಳಿ ಆಭರಣಗಳು ಮತ್ತು 1.50 ಲಕ್ಷ ನಗದು ದೋಚಿ ಖದೀಮರು ಪರಾರಿಯಾಗಿದ್ದಾರೆ. ಮನೆಯವರು ಎಲ್ಲರೂ ಸಂಬಂಧಿಕರ ಮದುವೆ ಸಮಾರಂಭಕ್ಕೆ ಹೋಗಿದ್ದಾಗ ರಾಜಕುಮಾರ …

Read More »

ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ವಿಜಯಪುರ: ಭೀಮಾತೀರದಲ್ಲಿ  6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ಮೇಲೆ ಫೈರಿಂಗ್ ನಡೆದಿದೆ. ಕಾಲಿಗೆ ಗುಂಡು ಹಾರಿಸಿ ಚಡಚಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಮಹೇಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮಹೇಶನನ್ನ ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ ಮಹೇಶ್ ತಳವಾರ್ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ …

Read More »

ಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಬಿಗ್ ಶಾಕ್: ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರದಿಂದ 2 ವರ್ಷ ನಿಷೇಧ

ಬೆಂಗಳೂರು: ನಗರದ ಪ್ರತಿಷ್ಠಿತ ಹೆಚ್‌ಸಿಜಿ (HCG) ಕ್ಯಾನ್ಸರ್ ಆಸ್ಪತ್ರೆಯ ನೈತಿಕ ಸಮಿತಿಗೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ(CDSCO) ಕಠಿಣ ಶಾಕ್ ನೀಡಿದೆ. ಮಾನವ ಪ್ರಯೋಗಗಳ  ವೇಳೆ ಕಂಡುಬಂದ ಗಂಭೀರ ಲೋಪಗಳು ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಆಸ್ಪತ್ರೆಯು ಮುಂದಿನ 2 ವರ್ಷಗಳ ಕಾಲ (24 ತಿಂಗಳು) ಯಾವುದೇ ಹೊಸ ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಆಸ್ಪತ್ರೆಯ ನೈತಿಕ ಸಮಿತಿಯ ಮಾಜಿ ಮುಖ್ಯಸ್ಥರೂ ಹಾಗೂ ನಿವೃತ್ತ …

Read More »

ಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್‌ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ  ಮತ್ತು ಬಿಎಂಟಿಸಿ  ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌(ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು …

Read More »

ಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ – ಡಿಕೆಶಿಗೆ ಹೆಚ್‌ಡಿಕೆ ಸವಾಲು

ಬೆಂಗಳೂರು: ಇತ್ತೀಚಿನ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬಿಡದಿ ಸ್ಮಾರ್ಟ್ ಸಿಟಿ ಟೌನ್‌ಶಿಪ್ಯೋಜನೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ದಾಖಲೆಗಳ ಸಮೇತ ಸಿಡಿದೆದ್ದಿದ್ದಾರೆ. ಅಷ್ಟೇ ಅಲ್ಲದೇ ಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ ರೈತರ ಜೊತೆ ಮಾತನಾಡೋಣ ಎಂದು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಸವಾಲು ಎಸೆದಿದ್ದಾರೆ. ಮಾಜಿ ಶಾಸಕ ಮಾಗಡಿ ಮಂಜುನಾಥ್ ಮತ್ತು ಜೆಡಿಎಸ್‌ನ ಗ್ರೇಟರ್ ಬೆಂಗಳೂರು ಅಧ್ಯಕ್ಷ ಎಚ್‌ಎಂ …

Read More »