Breaking News

Uncategorized

ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.   ಕರಂಬಳ, ಚಾಪಗಾಂವ್ ಸೇರಿ ಹಲವೆಡೆ ಕಾಡಾನೆ ಹಾವಳಿಗೆ ರೈತರು ನಲುಗಿ ಹೋಗಿದ್ದರು. ಕಬ್ಬು ಮತ್ತಿತರ ಬೆಳೆಗಳನ್ನು ಆನೆ ಹಾಳು ಮಾಡುತ್ತಿದ್ದುದರಿಂದ ಕಂಗಾಲಾಗಿದ್ದರು.   ಕಾಡಾನೆ ಹಾವಳಿಗೆ ಕಂಗೆಟ್ಟಿದ್ದ ಖಾನಾಪುರದ ರೈತರಿಗೆ ಇದೀಗ ಮುಕ್ತಿ ಸಿಕ್ಕಿದೆ ಎನ್ನಬಹುದು. ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಬಂದಿದ್ದ ನುರಿತ ಆನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆ …

Read More »

ಡಿ.ಕೆ. ಶಿವಕುಮಾರ್​ ಖಂಡಿತ ಸಿಎಂ ಆಗ್ತಾರೆ: ವಿನಯ್​ ಗೂರುಜಿ

ಚಿಕ್ಕೋಡಿ(ಬೆಳಗಾವಿ): “ಅಜ್ಜಯ್ಯನ ಮೇಲಿರುವ ಗುರು ನಿಷ್ಠೆ, ಪಕ್ಷ ನಿಷ್ಠೆ, ಹಿರಿಯರ ಮೇಲಿರುವ ಭಕ್ತಿ ಮತ್ತು ನಾಟಕವಿಲ್ಲದ ಮಾತು ನೋಡಿದಾಗ ಡಿ.ಕೆ. ಶಿವಕುಮಾರ್​ ಅವರಿಗೆ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಭಗವಂತ ಕೊಡಲಿ. ಅವರ ಗುರುಗಳ ದಯೆಯಿಂದ ಅದು ಖಂಡಿತ ಆಗುತ್ತದೆ ಎಂಬುದು ನನ್ನ ನಂಬಿಕೆ” ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.   ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ” ಸಿದ್ದರಾಮಯ್ಯನವರ ನಂತರ ಸಿಎಂ ಆಗುವ ಅವಕಾಶ ಸಿಗುತ್ತದೆ …

Read More »

ಮೂರು ದಿನಗಳ ಅಂಚೆ ಚೀಟಿಗಳ ಪ್ರದರ್ಶನವನ್ನು 50 ಸಾವಿರಕ್ಕೂ ಅಧಿಕ ಜನರು ಕಂಡು ರೋಮಾಂಚನಗೊಂಡರು.

ಬೆಳಗಾವಿ: ಮೇಲ್, ವಾಟ್ಸ್​​ಆ್ಯಪ್​​ , ಮೆಸ್ಸೆಂಜರ್, ಫೇಸ್​​ಬುಕ್, ಇನ್​​​​ಸ್ಟಾಗ್ರಾಂ ಕಾಲದಲ್ಲೂ ಬೆಳಗಾವಿಯಲ್ಲಿ ಆಯೋಜಿಸಿದ್ದ ಅಂಚೆ ಚೀಟಿಗಳ ಪ್ರದರ್ಶನ ಜನರನ್ನು ಆಕರ್ಷಿಸಿತು. ಹಳೆ ಕಾಲದಿಂದ ಹಿಡಿದು ಈವರೆಗಿನ ಅಂಚೆ ಚೀಟಿಗಳನ್ನು 50 ಸಾವಿರಕ್ಕೂ ಅಧಿಕ ಜನರು ಬೆರಗಿನಿಂದ ವೀಕ್ಷಿಸಿದರು. ಅಂಚೆ ಇಲಾಖೆ, ಅಂಚೆ ಚೀಟಿ ಮತ್ತು ನಾಣ್ಯ ಸಂಗ್ರಹಗಳ ಗ್ರೂಪ್(ಬಿಪಿಎಎನ್‌ಜಿ) ಸಹಯೋಗದೊಂದಿಗೆ ನಗರದ ಮಹಾವೀರ ಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ‘ಇಕ್ಷುಪೆಕ್ಸ್‌ – 2025’ ಜಿಲ್ಲಾಮಟ್ಟದ ಅಂಚೆ ಚೀಟಿಗಳ ಪ್ರದರ್ಶನಕ್ಕೆ …

Read More »

ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ.

ಬೆಂಗಳೂರು: ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷೆಯ ದಿನಾಂಕಗಳನ್ನು ಇಂದು ಘೋಷಣೆ ಮಾಡಿದೆ. ಪರೀಕ್ಷೆ – 1ರ ವೇಳಾಪಟ್ಟಿ ಇದಾಗಿದ್ದು, 10ನೇ ತರಗತಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭಗೊಂಡು ಏಪ್ರಿಲ್ 4 ಕ್ಕೆ ಅಂತ್ಯಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 …

Read More »

ಬಿಬಿಎಂಪಿ ಕಚೇರಿಯಲ್ಲಿ ಉಪ ಲೋಕಾಯುಕ್ತರಿಂದ ಪರಿಶೀಲನೆ

ಬೆಂಗಳೂರು: ರಾಜಧಾನಿಯ ಬಿಬಿಎಂಪಿಯ ಬಹುತೇಕ ಆರ್‌ಓ ಮತ್ತು ಎಆರ್‌ಓ ಕಚೇರಿಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಲೋಪಗಳು ಕಂಡುಬಂದ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.   ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಇಬ್ಬರು ಉಪ ಲೋಕಾಯುಕ್ತರು ದಾಳಿಯಲ್ಲಿ ಭಾಗಿಯಾಗಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡರು. ಶುಕ್ರವಾರ ಮಧ್ಯಾಹ್ನದಿಂದ ನಡೆಯುತ್ತಿದ್ದ ತಪಾಸಣೆಯು ಹಲವು ಕಚೇರಿಗಳಲ್ಲಿ ತಡರಾತ್ರಿವರೆಗೂ …

Read More »

ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿಯಾದ ಶಿವಮೊಗ್ಗದ ಸಫಾ ಬೈತುಲ್ ಮಾಲ್​ ಸಂಸ್ಥೆ

ಶಿವಮೊಗ್ಗ : ನಮ್ಮ ನಿಮ್ಮ ಮನೆಯಲ್ಲಿ ಉಪಯೋಗಕ್ಕೆ ಬಾರದೇ ಇರುವ ವಸ್ತುಗಳನ್ನು ಗುಜರಿಗೆ ಹಾಕುತ್ತೇವೆ. ಆದರೆ, ಇಂತಹ ಗುಜರಿ ವಸ್ತುಗಳನ್ನು ಪಡೆದ ಶಿವಮೊಗ್ಗದ ಸಂಸ್ಥೆಯೊಂದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅಡಿಪಾಯ ಹಾಕುವ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿದೆ.   ಶಿವಮೊಗ್ಗದ ಇಲಿಯಾಜ್ ನಗರದಲ್ಲಿನ ಸಫಾ ಬೈತುಲ್ ಮಾಲ್ ಸಂಸ್ಥೆಯು ಗುಜರಿ ವ್ಯಾಪಾರ ನಡೆಸಿ, ಇದರಲ್ಲಿ ಬಂದ ಹಣದಲ್ಲಿ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ಹೇಳಿ‌ ಕೊಡುವ ಜೊತೆಗೆ ಕಂಪ್ಯೂಟರ್ ಶಿಕ್ಷಣವನ್ನೂ ನೀಡುತ್ತಿದೆ. …

Read More »

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್​ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಪ್ರಜ್ವಲ್‌ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ …

Read More »

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ.   ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.   …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಸೇರಿದಂತೆ ಇತರ ಆರೋಪಿಗಳು ಇಂದು ನ್ಯಾಯಾಲಯದೆದುರು ಹಾಜರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಷರತ್ತಿನ ಪ್ರಕಾರ ಇಂದು (ಶುಕ್ರವಾರ) ಬೆಂಗಳೂರಿನ ಸಿಸಿಹೆಚ್ 57ರ ನ್ಯಾಯಾಲಯದ ಮುಂದೆ ಹಾಜರಾದರು. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಸೇರಿದಂತೆ ಎಲ್ಲ 17 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.   ಆರೋಪಿಗಳಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ, ಎಲ್ಲಾ ಆರೋಪಿಗಳು ನ್ಯಾಯಾಧೀಶರೆದುರು ಹಾಜರಾಗಿದ್ದಾರೆ. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು …

Read More »

ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳೆಲ್ಲಿ? ‘ಪೊಲೀಸರು ಪತ್ತೆ ಹಚ್ತಾರೆ’- ಜಿ.ಪರಮೇಶ್ವರ್

ಬೆಂಗಳೂರು: ”ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.   ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮವದವರ ಜೊತೆ ಮಾತನಾಡಿದ ಅವರು, ಸರ್ಕಾರವು ನಕ್ಸಲರಿಗೆ ಪರಿಹಾರ‌ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರ ಹುಡುಕುವುದರಲ್ಲಿ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ”ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಶಸ್ತ್ರಾಸ್ತ್ರ ಇಟ್ಟಿದ್ದಾರೆ …

Read More »