ಬೆಂಗಳೂರು: ಆರ್ಎಸ್ಎಸ್ ವಿರುದ್ಧ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮತ್ತೆ ಸಮನ್ಸ್ ಜಾರಿ ಮಾಡಿದೆ. ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ತೇಜಸ್ ಗೌಡ ಎಂಬುವವರು ಕಳೆದ ವರ್ಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ರು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಇಂದು ಗೃಹಸಚಿವ ಪ್ರಿಯಾಂಕ್ ಖರ್ಗೆ, ಮಹಮ್ಮದ್ ನಲಪಾಡ್ ಖುದ್ದು ಹಾಜರಾತಿಗೆ ಕೋರ್ಟ್ ಸೂಚಿಸಿತ್ತು. ಆದರೆ …
Read More »ಪತ್ರಕರ್ತರಿಗೆ ಕೌಶಲ ಮತ್ತು ಜ್ಞಾನ ಅಗತ್ಯ : ಕುಲಕರ್ಣಿ
ಬಾಗಲಕೋಟೆ (21): ಪತ್ರಿಕೋದ್ಯಮದಲ್ಲಿ ಎಐ ಮುಂದಿನ ದಿನಮಾನಗಳಲ್ಲಿ ಪ್ರಭಾವ ಬೀರಬಹುದು ಆದರೆ ಕೌಶಲ ಮತ್ತು ಜ್ಞಾನ ಇದ್ದವನು ಉತ್ತಮ ಪತ್ರಕರ್ತನಾಗಬಲ್ಲ ಎಂದು ಹಿರಿಯ ಪತ್ರಕರ್ತರಾದ ಬಂಡು ಕುಲಕರ್ಣಿ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಭವಿಷ್ಯದ ಪತ್ರಿಕೋದ್ಯಮದಲ್ಲಿ ಎಐ ಬಳಕೆ ವಿಷಯದ ಕುರಿತು ಮಾತನಾಡಿದ ಅವರು …
Read More »cyber crime ವಾಟ್ಸ್ಆ್ಯಪ್ ಗ್ರೂಪ್ ಹೆಸರಲ್ಲಿ ವಂಚನೆ
ಹುಬ್ಬಳ್ಳಿ: ಟ್ರೇಡಿಂಗ್ ಹೆಸರಿನಲ್ಲಿ ಹಾರಿಜನ್ 881 ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿ cyber crime, ಲಾಭದಾಸೆ ತೋರಿಸಿ ಧಾರವಾಡದ ವ್ಯಕ್ತಿಯೊಬ್ಬರಿಗೆ 17 ಲಕ್ಷ ರೂ. ವಂಚಿಸಲಾಗಿದೆ. ಅಶೋಕ ಬಿ. ವಂಚನೆಗೆ ಒಳಗಾದವರು. ಮೊಬೈಲ್ ಫೋನ್ ನೋಡುತ್ತ ಕುಳಿತಿದ್ದ ವೇಳೆ ಪ್ರೇಮಪ್ರಕಾಶ ವರ್ಮಾ ಹೆಸರಿನಲ್ಲಿರುವ ಹಾರಿಜನ್ 881 ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿದ್ದಾರೆ. ನಂತರ ಟ್ರೇಡಿಂಗ್ ಮಾಡುವ ಬಗ್ಗೆ ಉಚಿತ ತರಬೇತಿ ಕೊಡುವುದಾಗಿ ನಂಬಿಸಿದ್ದಾರೆ. ಗ್ರೂಪ್ನಲ್ಲಿದ್ದ ಅನನ್ಯ ಕುಲಕರ್ಣಿ ಎಂಬುವವರು ಬೇರೆ ನಂಬರ್ ಮೂಲಕ ಅಶೋಕ ಅವರನ್ನು ಸಂಪರ್ಕಿಸಿ, …
Read More »ನಿರ್ಮಲಾ ಸೀತಾರಾಮನ್ ಡೀಪ್ಫೇಕ್ ವಿಡಿಯೊ ನಂಬಿ 6.88 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್ಫೇಕ್ ವಿಡಿಯೊ ಬಳಸಿಕೊಂಡು ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 6.88 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನಾರಾಯಣಪುರ ನಿವಾಸಿಯಾದ 66 ವರ್ಷದ ವ್ಯಕ್ತಿಗೆ, ಕೇಂದ್ರ ಸರ್ಕಾರ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜಂಟಿಯಾಗಿ ಹೂಡಿಕೆ ಯೋಜನೆ ಆರಂಭಿಸಿರುವಂತೆ ತೋರಿಸುವ ವಿಡಿಯೊ ಫೇಸ್ಬುಕ್ನಲ್ಲಿ ಕಾಣಿಸಿಕೊಂಡಿತ್ತು. ಅದರಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಉತ್ತಮ ಲಾಭ ಸಿಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಮಾತನಾಡಿರುವಂತೆ …
Read More »ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಜು.21ರಂದು ಪತ್ರಿಕಾ ದಿನಾಚರಣೆ.
ಬಾಗಲಕೋಟೆ: ನಗರದ ಬಿ.ವಿ.ವಿ. ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಜು. 21ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಲೇಜಿನ ಸಭಾಭವನದಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ವಿಜಯ ಕರ್ನಾಟಕ ದಿನಪತ್ರಿಕೆಯ ಹುಬ್ಬಳ್ಳಿಯ ಕಚೇರಿಯ ಸ್ಥಾನಿಕ ಸಂಪಾದಕರಾದ ಬಂಡು ಕುಲಕರ್ಣಿ ಉದ್ಘಾಟಿಸಿ ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಪತ್ರಿಕೋದ್ಯಮ ವಿಷಯದ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಬಾಗಲಕೋಟೆಯ ಹಿರಿಯ ಪತ್ರಕರ್ತರಾದ ಸುಶೀಲೇಂದ್ರ ಕುಂದರಗಿ …
Read More »ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್
ವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿ ( ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರದ ಬಗ್ಗೆ ಯಾವುದೇ ನಿರ್ಣಯ ತಗೆದುಕೊಳ್ಳದೇ, ಇವತ್ತು ಸಚಿವ ಸಂಪುಟಕ್ಕೋಸ್ಕರ ದೆಹಲಿಯಲ್ಲಿ ಹೋಗಿ ಕುಳಿತಿದ್ದಾರೆ. ಕನಿಷ್ಠ ಅಲ್ಲಿರುವವರಿಗಾದ್ರೂ ಜ್ಞಾನ ಬೇಕು ಎಂದು ಕುಟುಕಿದ್ದಾರೆ. ಒಂದು ಸರ್ಕಾರದ ಮುಖ್ಯಮಂತ್ರಿ , ಎಲ್ಲ ಮಂತ್ರಿಗಳು ದೆಹಲಿಯಲ್ಲಿ ಬಿಡಾರ ಹೂಡಿದ್ದಾರೆ. …
Read More »ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ
ಹಾಸನ: ಮಾಜಿಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅವರ ಪಾರ್ಥಿವ ಶರೀರ ಹೊಳೆನರಸೀಪುರ ಪಟ್ಟಣದ ಹೆಚ್.ಡಿ.ರೇವಣ್ಣ ಅವರ ನಿವಾಸಕ್ಕೆ ಆಗಮಿಸಿದೆ. ಇಂದು ಮಧ್ಯಾಹ್ನ 2 ಗಂಟೆ ನಂತರ ಹರದನಹಳ್ಳಿ ಬಳಿಯ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ಈಗಾಗಲೇ ಸಿದ್ಧತೆಗಳು ಮುಗಿದಿವೆ. ಚೆನ್ನಮ್ಮ ದೊಡ್ಡಗೌಡರ ಕುಟುಂಬದ ಯಜಮಾನಿ. ಕರುಣೆಯ ಮೂರ್ತಿಯಾಗಿದ್ದ ಕ್ಷಮೆಯಾಧರಿತ್ರಿ. ಮನೆ ಬಾಗಿಲಿಗೆ ಬಂದವರಿಗೆ ಬರಿಗೈಯಲ್ಲಿ ಕಳುಹಿಸದ ಅನ್ನಪೂರ್ಣೇಶ್ವರಿ. ರಾಜಕೀಯ ಕುಟುಂಬದ ಸಿಮೀತ ಹೆಣ್ಣು ಮಗಳು ಆಗಿರಲಿಲ್ಲ. …
Read More »ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್ – 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹತ್ವದ ನಿರ್ಧಾರಗಳನ್ನೂ ಪ್ರಕಟಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿರುವುದಾಗಿ ಮಾಹಿತಿ ನೀಡಿದರು. ಜೊತೆಗೆ ಹಾಸ್ಟೆಲ್ ಗಳ ಬೆಡ್ಕಾಟ್ ಖರೀದಿಗೆ 30 ಕೋಟಿ ಕೊಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. …
Read More »ಗುಳೆ ಹೋಗುವುದನ್ನು ತಪ್ಪಿಸಲು ಜನರಿಗೆ ಉದ್ಯೋಗ ನೀಡಿ: ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಪರಮೇಶ್ವರ್ ಸೂಚನೆ
ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ಜನರು ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ. ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳು ವಿಬಿ -ಜಿ ರಾಮ್ ಜಿ ಯೋಜನೆಯಡಿ ಕೂಡಲೇ ಜನರಿಗೆ ಉದ್ಯೋಗ ನೀಡಿ, ಗುಳೆ ಹೋಗುವುದನ್ನು ತಪ್ಪಿಸಲು ಕ್ರಮ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‘ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ, ಚಟುವಟಿಕೆ ಹಾಗೂ ಉದ್ಯೋಗ …
Read More »88 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿತ – ಜೀವಸಂಕುಲಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಡಿಸಿಎಂ ಪರಂ ಸೂಚನೆ
ಬೆಂಗಳೂರು: 88 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಶೇ.4 ರಷ್ಟು ಕುಸಿದಿದೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ. ಮಳೆಯ ಪ್ರಮಾಣ ಕಡಿಮೆಯಾಗಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ತೀರಾ ಕುಸಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಡಾಯಿಸಬಹುದು. ಹಾಗಾಗಿ ಜೀವಸಂಕುಲಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಡಿಸಿಎಂ ಹಾಗೂ ಕಂದಾಯ ಸಚಿವರಾದ ಡಾ.ಜಿ ಪರಮೇಶ್ವರ್ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‘ಬರ ಪರಿಸ್ಥಿತಿ, ಕುಡಿಯುವ …
Read More »
Laxmi News 24×7