Breaking News

Uncategorized

ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್

ಹೈದರಾಬಾದ್: ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿರುವ ನಾಥುರಾಮ್ ಗೋಡ್ಸೆ ಅವರ ಸಿದ್ಧಾಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ಬೆಂಬಲಿಸುತ್ತಿದ್ದಾರೆ ಎಂದು ತೆಲಂಗಾಣ ರಾಷ್ಟ್ರ ಸಮಿತಿ ಕಾರ್ಯಾಧ್ಯಕ್ಷ ಕೆ.ಟಿ. ರಾಮ್‍ರಾವ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ. ಪ್ರಧಾನಿ ಮೋದಿ ಮೌನವಾಗಿ ಮತ್ತು ನೇರವಾಗಿ ಗೋಡ್ಸೆಯ ಸಿದ್ಧಾಂತವನ್ನು ಪಾಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಗುಜರಾತ್ ಶಾಸಕನನ್ನು ಅಸ್ಸಾಂ ಪೊಲೀಸರು ಬಂಧಿಸುವಂತೆ ಮಾಡಿದ ಮೋದಿ ಸರ್ಕಾರಕ್ಕೆ …

Read More »

ಪಿಎಸ್‍ಐ ನೇಮಕಾತಿ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಪ್ರತಿಯೊಂದು ನೇಮಕಾತಿಯಲ್ಲೂ ಗೋಲ್ಮಾಲ್

ಬೆಂಗಳೂರು: ಪಿಎಸ್‍ಐ ನೇಮಕಾತಿ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಪ್ರತಿಯೊಂದು ನೇಮಕಾತಿಯಲ್ಲೂ ಗೋಲ್ಮಾಲ್ ಆಗಿರೋದು ಒಂದರ ಹಿಂದೆ ಒಂದರಂತೆ ಬಹಿರಂಗ ವಾಗುತ್ತಿದೆ. ಪಿಎಸ್‍ಐ, ಕಾನ್ಸಟೇಬಲ್, ಕೆಪಿಎಸ್‍ಸಿ ಜೊತೆ ಲೋಕೋಪಯೋಗಿ ಇಲಾಖೆ ನಡೆಸಿದ ಪರೀಕ್ಷೆಯಲ್ಲೂ ಅಕ್ರಮ ಆಗಿದೆ. 2021ರ ಡಿಸೆಂಬರ್ 13ರಲ್ಲಿ ನಡೆದ ಪಿಡಬ್ಲ್ಯೂಡಿ ಇಲಾಖೆಯ ಜೂನಿಯರ್ ಎಂಜಿನಿಯರ್ ಪರೀಕ್ಷೆಯಲ್ಲಿ ಬ್ಲೂಟೂತ್ ಮೂಲಕ ಉತ್ತರ ಬರೆಯಲಾಗಿದೆ. ಕಲಬುರಗಿಯಲ್ಲಿ ಪರೀಕ್ಷಾ ಕೇಂದ್ರದ ಸಮೀಪದ ಹೊಟೇಲ್‍ವೊಂದರಲ್ಲಿ ಕುಳಿತು ಬ್ಲೂಟೂತ್ ಡಿವೈಸ್ ಮೂಲಕ ಸರಿ ಉತ್ತರ …

Read More »

1441 ಎಲೆಕ್ಟ್ರಿಕಲ್​ ಬೈಕ್​ಗಳನ್ನು ಹಿಂಪಡೆದ ಓಲಾ!

ನವದೆಹಲಿ: ತಾಂತ್ರಿಕ ದೋಷ ಹಿನ್ನಲೆಯಲ್ಲಿ ಸ್ವಯಂಪ್ರೇರಿತವಾಗಿ ಒಲಾ ಕಂಪನಿ ತನ್ನ 1441 ಎಲೆಕ್ಟ್ರಿಕ್​ ಬೈಕ್​ಗಳನ್ನು ವಾಪಸ್​ ಪಡೆದಿದೆ. ಇತ್ತೀಚೆಗೆ ಬೈಕ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದರಿಂದ ಎಚ್ಚೆತ್ತ ತನ್ನ ಬೈಕ್​ಗಳ ತಾಂತ್ರಿಕ ಪರಿಶೀಲನೆಗೆ ಮುಂದಾಗಿದೆ. ಘಟನೆ ಬಳಿಕ ಓಲಾ ಎಲೆಕ್ಟ್ರಿಕಲ್​ ಬೈಕ್​ ಸುರಕ್ಷತೆ ಬಗ್ಗೆ ಹಲವು ಪ್ರಶ್ನೆ ಎದುರಾಗಿತ್ತು. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದಾಗಿ ಸ್ವಯಂಪ್ರೇರಿತವಾಗಿ ಎಲೆಕ್ಟ್ರಿಕ್​ ಬೈಕ್​ಗಳ ತಾಂತ್ರಿಕ ಸುಧಾರಣೆಯ ದೃಷ್ಟಿಯಿಂದ ಬೈಕ್​ಗಳನ್ನು ವಾಪಸ್​ ಪಡೆಯುತ್ತಿರುವುದಾಗಿ ತಿಳಿಸಿದೆ. ಮಾರ್ಚ್​ 26 ರಂದು ಬೈಕ್​ನಲ್ಲಿ ಕಾಣಿಸಿಕೊಂಡಬೆಂಕಿ …

Read More »

ವಿಮಾನದಲ್ಲಿ ರಾತ್ರಿ 10ರ ನಂತರ ಹಿಂಬದಿ ಸೀಟಿನಲ್ಲಿ ಕುಳಿತು ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ಚೆನ್ನೈ ಮೂಲದ ವ್ಯಕ್ತಿಯೊಬ್ಬ ಬೆಂಗಳೂರಿನ ಮಹಿಳೆಗೆ ವಿಮಾನದ ಒಳಗಡೆ ಕಿರುಕುಳ ಕೊಟ್ಟು ಇದೀಗ ಜೈಲು ಪಾಲಾಗಿದ್ದಾನೆ.  ಮಹಿಳೆಯೊಬ್ಬರು ಮಾರ್ಕೆಟಿಂಗ್ ಕೆಲಸಕ್ಕೆಂದು ಚನ್ನೈಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಇದೇ ಏಪ್ರಿಲ್ 18ರ ರಾತ್ರಿ 10 ಗಂಟೆ ಸುಮಾರಿಗೆ ಇಂಡಿಗೋ 6e6225 ವಿಮಾನದಲ್ಲಿ ಮಹಿಳೆ ಬರುತ್ತಿದ್ದಾಗ, ಹಿಂಬದಿ ಸೀಟ್‌ ನಂ-20a ರಲ್ಲಿ‌ ಕುಳಿತಿದ್ದ ಚನ್ನೈ ಮೂಲದ ಕೃಷ್ಣನ್.ಪಿ. ಎಂಬಾತ ಮುಂದಿನ ಸೀಟಿನಲ್ಲಿ‌ ಕುಳಿತಿದ್ದ ಮಹಿಳೆಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ …

Read More »

ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ: ವಾಟ್ಸ್​ಆಯಪ್​ನಲ್ಲಿ ಎಡಿಟೆಡ್ ವಿಡಿಯೋವೊಂದನ್ನು ಸ್ಟೇಟಸ್ ಆಗಿ ಹಾಕಿಕೊಂಡಿದ್ದನ್ನೇ ನೆಪವಾಗಿಸಿಕೊಂಡು ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.   ಈ ಮೂಲಕ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಎಐಎಂಐಎಂ ಪಕ್ಷದ ಮತ್ತೊಬ್ಬ ಮುಖಂಡನ ಬಂಧನ ಆದಂತಾಗಿದೆ. ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿಯನ್ನು ಇಂದು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಎಐಎಂಐಎಂ ಪಕ್ಷದ ಮುಖಂಡ, ಕಾರ್ಪೋರೇಟರ್​ ನಜೀರ್ …

Read More »

ರಥೋತ್ಸವ ಸಂದರ್ಭ ದುರಂತ; ಒಬ್ಬನ ಸಾವು, ಇಬ್ಬರಿಗೆ ಗಾಯ..

ಕಲಬುರಗಿ: ದೇವಸ್ಥಾನದಲ್ಲಿನ ರಥೋತ್ಸವ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದ್ದು, ಇದರಲ್ಲಿ ಒಬ್ಬ ಸಾವಿಗೀಡಾಗಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಲಕ್ಷ್ಮೀಕಾಂತ್ ಕೆಸಬಳ್ಳಿ (25) ಎಂಬಾತ ಸಾವಿಗೀಡಾಗಿದ್ದು, ಭೀಮಾಶಂಕರ ಪೂಜಾರಿ ಮತ್ತು ಯಂಕಪ್ಪ ನೆಡಲ್​ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ಜಿಲ್ಲೆಯ ಶಹಬಾದ್​ ತಾಲೂಕಿನ ರಾವೂರ ಗ್ರಾಮದ ಶ್ರೀಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಇಂದು ರಥೋತ್ಸವ ನಡೆಯಿತು. ಈ ಸಂದರ್ಭ …

Read More »

ನಾಳೆ ಸಿಐಡಿ ಎದುರು ಹಾಜರಾಗ್ತಾರಾ ಶಾಸಕ ಪ್ರಿಯಾಂಕ್ ಖರ್ಗೆ?

ಬೆಂಗಳೂರು: 545 ಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಏ.23ರಂದು ಸುದ್ದಿಗೋಷ್ಠಿ ನಡೆಸಿ 2021ರ ಅಕ್ಟೋಬರ್ 3ರಂದು ನಡೆದ ಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ. ಈ ಕುರಿತು ತಮ್ಮ ಬಳಿ ಸಾಕ್ಷ್ಯಗಳು ಇರುವುದಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಮತ್ತು ಗಂಭೀರವಾಗಿರುವ ಕಾರಣ ತಮ್ಮ ಬಳಿ ಲಭ್ಯವಿರುವ ಸಾಕ್ಷ್ಯಗಳನ್ನು ಸಿಐಡಿಗೆ …

Read More »

ಎಫ್​ಡಿಎನಲ್ಲೂ ಡೀಲ್! ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ರಹಸ್ಯ ಬಯಲು

ಪಿಎಸ್​ಐ ನೇಮಕ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತೆಂಬ ವಿಷಯವನ್ನು ಸಿಐಡಿ ತಂಡ ಬಯಲಿಗೆಳೆದಿದೆ. ಪ್ರಕರಣದ ಕಿಂಗ್​ಪಿನ್ ಆರ್.ಡಿ.ಪಾಟೀಲ್(ರುದ್ರಗೌಡ ಪಾಟೀಲ್) ಎಫ್​ಡಿಎ, ಎಸ್​ಡಿಎ ನೌಕರಿ ಕೊಡಿಸುವ ಡೀಲ್ ಕೂಡ ನಡೆಸುತ್ತಿದ್ದರೆಂಬುದು ವಿಚಾರಣೆ ವೇಳೆ ಬಹಿರಂಗಗೊಂಡಿರುವುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ಕಿರಿಯ ಇಂಜಿನಿಯರ್ ಪರೀಕ್ಷೆಯ ಉತ್ತರ ಹೇಳುವ ವಿಡಿಯೋವೊಂದು ವೈರಲ್ ಆಗಿದೆ. ಪಿಎಸ್​ಐ ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರ್.ಡಿ. ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯ …

Read More »

ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ನನ್ನ ಹೆಸರು ಬೇಡ:B.S.Y.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ( Shivamogga Airport ) ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು. ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( BS Yediyurappa ) ಅವರು, ಮುಖ್ಯಮಂತ್ರಿ …

Read More »

ಅಕ್ರಮ ಬಡ್ಡಿ ದಂಧೆ- ಚಿತ್ರಹಿಂಸೆ ನೀಡಿ ಯುವಕನನ್ನು ಕೊಂದ ಕಿರಾತಕರು

ಗದಗ : ಆ ಅವಳಿ ನಗರದಲ್ಲಿ ಬಡ್ಡಿ ದಂಧೆ ಅಟ್ಟಹಾಸ ಮೀತಿಮಿರಿದೆ. ಬಡ್ಡಿ ಹಣಕ್ಕಾಗಿ ಒತ್ತೆಯಾಳಾಗಿ ಇಟ್ಟುಕೊಂಡು, ಚಿತ್ರಹಿಂಸೆ ನೀಡಿ, ಯುವಕನನ್ನು ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಮಗನ ಮದುವೆ ಮಾಡಬೇಕು ಎಂದು ಕನಸು ಕಂಡಿದ್ದ ತಾಯಿ ಎದುರಲ್ಲೇ ಮುದ್ದಿನ ಮಗ ನರಳಿ ನರಳಿ ಸಾವನ್ನಪ್ಪಿದ್ದಾನೆ. ಗದಗ ನಗರದ ಕೆಸಿರಾಣಿ ರಸ್ತೆಯ ನಿವಾಸಿಯಾದ ಮೃತ್ಯುಂಜಯ ಭರಮಗೌಡರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಸಿಲುಕಿ ಕೊಲೆಯಾದವನು. ಅಕ್ರಮ ಬಡ್ಡಿ ದಂಧೆ- ಚಿತ್ರಹಿಂಸೆ ನೀಡಿ …

Read More »