ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ತೀವ್ರ ಜಿದ್ದಾಜಿದ್ಧಿನಿಂದ ಕೂಡಿದ್ದ ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತವರೂರಿನಲ್ಲಿಯೇ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಸೋಲನುಭವಿಸಿದ್ದಾರೆ. ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ನ ಶ್ರೀನಿವಾಸ್ ಮನೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 14ನೇ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಶ್ರೀನಿವಾಸ್ …
Read More »ರಾಜ್ಯದ 2ನೇ ಮಲ ಸಂಸ್ಕರಣಾ ಘಟಕಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ರಾಜ್ಯದ 2ನೇ ಮಲ ಸಂಸ್ಕರಣಾ ಘಟಕಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ಸುಮಾರು 4 ಎಕರೆ ಪ್ರದೇಶದಲ್ಲಿ 54 ಲಕ್ಷ ರೂ. ವೆಚ್ಚದಲ್ಲಿ ಮಲ ಸಂಸ್ಕರಣ ಘಟಕ ನಿರ್ಮಾಣವಾಗುತ್ತಿದೆ. ಈ ಸಂಸ್ಕರಣ ಘಟಕದಲ್ಲಿ ಸಂಗ್ರಹವಾಗುವ ಮಲದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿ ರೈತರಿಗೆ ಪೂರೈಕೆ ಮಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ’ ಎಂದು ಶಾಸಕ ಐಹೊಳೆ ತಿಳಿಸಿದರು. ಹೆಸ್ಕಾಂ ನಿರ್ದೇಶಕ ಮಹೇಶ್ ಭಾತೆ …
Read More »ಪುನೀತ್ ನಿಧನದ ಬಳಿಕ ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್ಗೆ ರೋಗಿಗಳ ದೌಡಾ
: ಮಂಡ್ಯ: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಠಾತ್ ನಿಧನ ಜನರ ಆತಂಕಕ್ಕೆ ಕಾರಣವಾಗಿದೆ. ಪುನೀತ್ ನಿಧನದ ಬಳಿಕ ಆತಂಕದಿಂದಲೇ ಆಸ್ಪತ್ರೆಯತ್ತ ಜನ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಬರುವ ಹೃದಯ ಸಂಬಂಧಿ ರೋಗಿಗಳ ಸಂಖ್ಯೆ 1ಕ್ಕಿಂತ 3 ಪಟ್ಟು ಹೆಚ್ಚಾಗತೊಡಗಿದೆ. : ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್ಗೆ ರೋಗಿಗಳ ದೌಡಾಯಿಸಿದ್ದಾರೆ. ಹೃದ್ರೋಗ ತಜ್ಞ ಡಾ. ಪ್ರಶಾಂತ್ ಬಳಿ ಚಿಕಿತ್ಸೆ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. …
Read More »ಬೆಳಗಾವಿಯ ಸಾಹಿತ್ಯ ಕ್ಷೇತ್ರದ ಹಿರಿಯ ಕೊಂಡಿಯೊಂದು ಕಳಚಿದೆ.
ಬೆಳಗಾವಿಯ ಸಾಹಿತ್ಯ ಕ್ಷೇತ್ರದ ಹಿರಿಯ ಕೊಂಡಿಯೊಂದು ಕಳಚಿದೆ. ಖ್ಯಾತ ಸಾಹಿತಿಗಳು ಹಾಗೂ ಜಾನಪದ ಸಂಶೋಧಕರು ಆಗಿದ್ದ ಪ್ರೊ.ಜ್ಯೋತಿ ಹೊಸೂರ ಅವರು ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರೊ.ಜ್ಯೋತಿ ಹೊಸೂರ ಅವರು ಜಾನಪದ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು ಮಾಡಿದ ಸಾಹಿತಿ. ಗಾದೆ, ಒಡಪು, ಗ್ರಾಮದೇವತೆ ಅವರು ಮಾಡಿದ ಸಂಶೋಧನೆಗಳು, ವಿದ್ವತ ಪ್ರಪಂಚದಲ್ಲಿ ಗೌರವ ಆದರಕ್ಕೆ ಪಾತ್ರವಾಗಿದ್ದವು. ರಾಯಬಾಗದಂತಹ ಸಣ್ಣ ಹಳ್ಳಿಯಲ್ಲಿದ್ದರು. ಅವರು ನಡೆಸಿದ ಸಂಶೋಧನೆಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಚರ್ಚೆ …
Read More »ವಿಜಯಪುರದಲ್ಲಿ, ಜಿಲ್ಲಾಡಳಿತದ ವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸ
ಬದುಕಿನುದ್ದಕ್ಕೂ ಕನ್ನಡ ಪ್ರೀತಿ ಮೆರೆಯೋಣ, ಕನ್ನಡಾಂಬೆಯ ಸೇವೆ ಮಾಡೋಣ.” ವಿಜಯಪುರದಲ್ಲಿ, ಜಿಲ್ಲಾಡಳಿತದ ವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ, ಭುವನೇಶ್ವರಿ ತಾಯಿಗೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದ ಬಳಿಕ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿ, ಅಗ್ನಿಶಾಮಕ ದಳದಿಂದ ಗೌರವ ವಂದನೆ ಸ್ವೀಕರಿಸಿದರು. ಕನ್ನಡ …
Read More »ಎಲ್ ಪಿಜಿ ಸಿಲಿಂಡರ್ ದರ 265 ರೂ.ಏರಿಕೆ
ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಳವಾಗಿದೆ. ಆದರೆ 14 …
Read More »ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಸರಕಾರ ಬದ್ಧ : ಸಚಿವ ಗೋವಿಂದ ಕಾರಜೋಳ 66 ನೇ ಕರ್ನಾಟಕ ರಾಜ್ಯೋತ್ಸವ : ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ
ಬೆಳಗಾವಿ : ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರಧ್ವಜಾರೊಃಣ ನೆರವೇರಿಸಿದರು. ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. …
Read More »ಇಂದಿರಾ ಗಾಂಧಿ ಪುಣ್ಯ ತಿಥಿ ಶ್ರದ್ಧಾಂಜಲಿ ಸಲ್ಲಿಸಿದ ಕಾಂಗ್ರೆಸ್ ನಾಯಕರು
ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 37ನೇ ಪುಣ್ಯತಿಥಿಯ ಅಂಗವಾಗಿ ಕಾಂಗ್ರೆಸ್ ನಾಯಕರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದೆ.ಇಂದಿರಾ ಗಾಂಧಿ ಅವರ ಸ್ಮಾರಕ ‘ಶಕ್ತಿ ಸ್ಥಳ’ ದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ‘ಕೊನೆಯ ಗಳಿಗೆಯವರೆಗೂ ನನ್ನ ಅಜ್ಜಿ ದೇಶಕ್ಕೆ ನಿರ್ಭೀತಿಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಜೀವನವು ನಮಗೆ ಸ್ಪೂರ್ತಿಯ ಸೆಲೆಯಾಗಿದೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ‘ಇಂದಿರಾ ಗಾಂಧಿ ಅವರು ಸಾಮರ್ಥ್ಯವನ್ನು ಪ್ರತಿನಿಧಿಸಿದರು, ತ್ಯಾಗವನ್ನು ಪ್ರತಿಫಲಿಸಿದರು, ಸೇವೆಯನ್ನು …
Read More »ಪವರ್ ಸ್ಟಾರ್ ಮಾರ್ಗದಲ್ಲೇ ಗುಮ್ಮಟನಗರಿ ಯುವಕರಿಂದ ನೇತ್ರದಾನ ವಾಗ್ದಾನ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ರಾಜ್ಕುಮಾರ್ ಕುಟುಂಬದವರು ಈಡೀಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ತಂದೆ ಡಾ. ರಾಜ್ಕುಮಾರ್, ತಾಯಿ ಪಾರ್ವತಮ್ಮ ಸಮಾಧಿಯ ಪಕ್ಕದಲ್ಲೇ ಪುನೀತ್ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಗಿದೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ ರಾಜಕುಮಾರ ತಮ್ಮ ಸಾವಿನ ಬಳಿಕ ಅಮರರಾಗಲಿದ್ದಾರೆ. ಪುನೀತ ತಮ್ಮ …
Read More »ಕನ್ನಡ ಚಿತ್ರರಂಗದ ಕಲಾವಿದರಿಗೆ ಶಾಪವಾಯಿತೇ ನಂಬರ್ 17..?
ಬೆಂಗಳೂರು,ಅ.30- ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನದಿಂದ ಗಂಧದ ಗುಡಿ ಖಾಲಿ ಖಾಲಿಯಾಗಿದೆ ಎಂದೆನಿಸುತ್ತದೆ. ಈ ಮಾತು ಅಕ್ಷರಶಃ ಸತ್ಯ. ಚಿಕ್ಕ ವಯಸ್ಸಿನಿಂದಲೂ ಬಣ್ಣದ ಲೋಕದೊಂದಿಗೆ ಬೆಳೆದು ಬಂದ ಅಪ್ಪು ಇಂದು ಕಲಾರಂಗವನ್ನು ಅಗಲಿರುವುದು ಅಭಿಮಾನಿಗಳನ್ನು ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವನ್ನೇ ದುಃಖದ ಮಡುವಿಗೆ ನೂಕಿದೆ.ಪುನೀತ್ ರಾಜಕುಮಾರ್ಅವರು ಜನ್ಮ ದಿನಾಂಕಕ್ಕೂ ಕನ್ನಡ ಚಿತ್ರರಂಗದಲ್ಲಿ ಆಗಸದೆತ್ತರಕ್ಕೆ ಬೆಳೆಯಬೇಕೆಂಬ ಕನಸು ಹೊತ್ತಿದ್ದ ಚಿರಂಜೀವಿ ಸರ್ಜಾ ಗೂ ಸಂಚಾರಿ ವಿಜಯ್ ಅವರ ಜನ್ಮ …
Read More »