Breaking News

Uncategorized

ರಷ್ಯಾ ವಿರುದ್ಧದ ಖಂಡನಾ ನಿರ್ಣಯದ ಮತದಾನದಿಂದ ದೂರ ಉಳಿದ ಭಾರತ, ಚೀನಾ

ನವದೆಹಲಿ: ಉಕ್ರೇನ್‌ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಖಂಡಿಸುವ ವಿಚಾರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ. ನಿರೀಕ್ಷೆಯಂತೆ ಚೀನಾ ಕೂಡಾ ರಷ್ಯಾದ ವಿರುದ್ಧ ಮತದಾನದಿಂದ ದೂರ ಉಳಿದಿದೆ. ಯುಎನ್‌ಎಸ್‌ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಭಾರತವು ಒತ್ತಾಯಿಸಿದ್ದು, ವಿವಾದಗಳನ್ನು ಇತ್ಯರ್ಥ ಮಾಡಲು ಮಾತುಕತೆಯೊಂದೇ ದಾರಿ ಎಂದಿದೆ. ವಿಶ್ವಸಂಸ್ಥೆಯಲ್ಲಿ ಭಾರತ ಕಾಯಂ ಪ್ರತಿನಿಧಿಯಾದ ಟಿ …

Read More »

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ …

Read More »

ಹಾವೇರಿ ಜಿಲ್ಲೆಯ ಒಂಬತ್ತು ವಿದ್ಯಾರ್ಥಿಗಳು ಉಕ್ರೇನ್ ಸಿಲುಕಿಕೊಂಡಿದ್ದಾರೆ.

ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವೆ ಗುರುವಾರ ಬೆಳಗ್ಗೆಯಿಂದ ಯುದ್ಧ ಪ್ರಾರಂಭವಾಗಿದೆ. ಸದ್ಯ ಉಕ್ರೇನ್‍ನಲ್ಲಿ ನೆಲೆಸಿರುವ ಅನೇಕ ಭಾರತೀಯರು ಹಾಗೂ ಕನ್ನಡಿಗರಿಗೆ ಆತಂಕ ಹೆಚ್ಚಾಗಿದೆ. ಈ ನಡುವೆ ಹಾವೇರಿ ಜಿಲ್ಲೆಯ ಒಂಬತ್ತು ವಿದ್ಯಾರ್ಥಿಗಳು ಉಕ್ರೇನ್ ಸಿಲುಕಿಕೊಂಡಿದ್ದಾರೆ. ಹೌದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಉಕ್ರೇನ್‍ನಲ್ಲಿ ಪಡೆಯುತ್ತಿದ್ದಾರೆ. ರಾಣೇಬೆನ್ನೂರು ತಾಲೂಕಿನ 8 ವಿದ್ಯಾರ್ಥಿಗಳು ಬ್ಯಾಡಗಿ ತಾಲೂಕಿನ ಓರ್ವ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವಾಸಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮಿತ್ ವೈಶಾಯರ್, …

Read More »

ಅರವಿಂದ ಪಾಟೀಲ ಬಿಜೆಪಿ ಸೇರ್ಪಡೆ ಖಾನಾಪುರ ಟಿಕೆಟ್ ಆಕಾಂಕ್ಷಿ ಗಳಿಗೆ ಬಿಗ್ ಶಾಕ…

ಬೆಳಗಾವಿ: ಎಂಇಎಸ್ ಮಾಜಿ ಶಾಸಕ ಅರವಿಂದ ಪಾಟೀಲ್ ಬಿಜೆಪಿ ಸೇರ್ಪಡೆಗೊಂಡಿದ್ದು, ಈ ವಿಚಾರ ಖಾನಾಪುರ ಮೂಲ ಕಮಲ‌ ಕಾರ್ಯಕರ್ತರಿಗೆ ಬಿಗ್​​ ಶಾಕ್ ನೀಡಿದೆ. ಅರವಿಂದ ಪಾಟೀಲ್​ ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ರಾಜಕೀಯದಲ್ಲಿ ತರಹೇವಾರು ಚರ್ಚೆಗಳು ನಡೆದಿವೆ. ಸ್ವಪಕ್ಷಿಯರ ವಿರೋಧದ ಮಧ್ಯೆಯೇ ಆಪ್ತನನ್ನು ಬಿಜೆಪಿಗೆ ಕರೆತರುವಲ್ಲಿ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ ಸವದಿ ಯಶಸ್ವಿಯಾಗಿದ್ದಾರೆ. ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅರವಿಂದ ಪಾಟೀಲ್​ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾಗಿದ್ದಾರೆ. ಕಳೆದ …

Read More »

ರಾಯಬಾಗ&ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು.

ಬೆಳಗಾವಿ: ರಷ್ಯಾ ಯುದ್ಧ ಸಾರಿರುವ ಉಕ್ರೇನ್ ದೇಶದಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ವ್ಯಾಸಂಗ ‌ಮಾಡುತ್ತಿದ್ದಾರೆ. ಉಕ್ರೇನ್ ‌ಮೇಲೆ ರಷ್ಯಾ ನಿರಂತರ ದಾಳಿ ನಡೆಸುತ್ತಿದ್ದು, ಇಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ‌ ಪ್ರಿಯಾ ಭಗವಂತ ನಿಡಗುಂದಿ, ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು. ಬೆಳಗಿನಿಂದ ಉಕ್ರೇನಿನ ಮೇಲೆ ರಷ್ಯಾ ಯುದ್ಧ ನಡೆಸುತ್ತಿದ್ದು, ವಿದ್ಯಾರ್ಥಿನಿಯರು ಭಯಗೊಂಡಿದ್ದಾರೆ. ಪ್ರಿಯಾ ನಿಡಗುಂದಿ ಹಾಗೂ …

Read More »

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

: ಹರ್ಷ ಕುಟುಂಬಕ್ಕೆ ಅಕ್ಷರದಲ್ಲಿ 5 ಲಕ್ಷ, ಅಂಕಿಯಲ್ಲಿ 50,000 ಅಂತ ಬರೆದು ಚೆಕ್ ಕೊಟ್ಟ ಶಾಸಕ ಯತ್ನಾಳ್!

ಶಿವಮೊಗ್ಗ: ಬಜರಂಗದಳ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ(Harsha Murder) ಸಂಬಂಧ ಸಾಂತ್ವಾನ ಹೇಳಲು ಹರ್ಷ ಮನೆಗೆ ಭೇಟಿ ಕೊಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಹರ್ಷ ಕುಟುಂಬಸ್ಥರಿಗೆ ಚೆಕ್ ವಿತರಿಸಿದ್ದಾರೆ. ಸಿದ್ದಸಿರಿ ಸೌಹಾರ್ದ ಸಹಕಾರ ಸಂಸ್ಥೆಯಿಂದ 5 ಲಕ್ಷ ರೂಪಾಯಿ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷ ಮನೆಗೆ ಭೇಟಿ ನೀಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೆರವು ನೀಡಿದ್ದಾರೆ. ಆದ್ರೆ ಯತ್ನಾಳ್ ಚೆಕ್ ಬರೆಯುವಾಗ ಅಕ್ಷರಗಳಲ್ಲಿ 5 …

Read More »

ಬೆಳಗಾವಿಯಲ್ಲಿ ಸ್ಮಾರ್ಟ ಸಿಟಿ ಕಳಪೆ ಕಾಮಗಾರಿ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರಜೋಳ ಹೇಳಿದ್ದೇನು..?

ಸ್ಮಾಟ್ ಸಿಟಿಯ ಕಾಮಗಾರಿಯು ಕಳಪೆ ಮಟ್ಟದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೊಳ ಅವರು ಇಂದು ಗುರುವಾರ ಸ್ಮಾರ್ಟ ಸಿಟಿ ಕಾಮಗಾರಿಯನ್ನು ವೀಕ್ಷಣೆ ಮಾಡಲು ಹೋಗುತ್ತಿದ್ದು ತಾವು ಬರಬಹದು ಎಂದು ಮಾದ್ಯಮ ಪ್ರತಿನಧಿಗಳಿಗೆ ಆಹ್ವಾನಿಸಿದರು ಸ್ಮಾರ್ಟ ಸಿಟಿ ಕಾಮಗಾರಿಯಲ್ಲಿ ಬಹಳಷ್ಟು ಕಳಪೇ ಮಟ್ಟದ ಕಾಮಗಾರಿ ನಡೆಯುತ್ತಿದ್ದು, ಅಂತಹ ಜಾಗಗಳಿಗೆ …

Read More »

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು …

Read More »

ಹಿಜಾಬ್ ವಿವಾದ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರಾದರೆ ಮರುಪರೀಕ್ಷೆ ಇಲ್ಲ: ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: “ಹಿಜಾಬ್ ವಿವಾದದ ಕಾರಣಕ್ಕೆ ವಿದ್ಯಾರ್ಥಿಗಳು ಪಿಯು ಪರೀಕ್ಷೆಗಳಿಗೆ ಗೈರುಹಾಜರಾದರೆ ಅವರಿಗೆ ಮರುಪರೀಕ್ಷೆ ಇರುವುದಿಲ್ಲ. ಯಾರೂ ಕೂಡ ಹಠ ಮಾಡಿ ಶೈಕ್ಷಣಿಕ ಜೀವನ ಹಾಳು ಮಾಡಿಕೊಳ್ಳಬಾರದು,” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮನವಿ ಮಾಡಿದ್ದಾರೆ.   ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕು. “ಹಿಜಾಬ್ ವಿಚಾರದಲ್ಲಿ ಹೈಕೋರ್ಟ್‌ ನೀಡಿರುವ ಆದೇಶವನ್ನು ಕೆಲವರು ವಿರೋಧಿಸಿದ್ದಾರೆ.  ಅಂತಹವರ ಪರವಾಗಿ ಕಾಂಗ್ರೆಸ್‌ನವರು ಮಾತನಾಡುವುದು ಸರಿಯಲ್ಲ. …

Read More »