Breaking News

Uncategorized

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ   ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು. ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- …

Read More »

ಬಿ.ಎಸ್.ಯಡಿಯೂರಪ್ಪಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು

ಹಾವೇರಿ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದು, ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ. ಬಿ.ಎಲ್.ಸಂತೋಷ್ ಬಲವಂತವಾಗಿ ಪ್ರಚಾರಕ್ಕೆ ಕರೆ ತರುತ್ತಿದ್ದಾರೆ. ಸಿದ್ದರಾಮಯ್ಯಗೆ ಸಂತೋಷ್ ಫೋನ್ ಮಾಡಿ ಹೇಳಿದ್ರಾ? ಬಿಎಸ್​ವೈಗೆ ದೊಣ್ಣೆ ನಾಯಕನ ಅಪ್ಪಣೆ ಏನೂ ಬೇಕಾಗಿಲ್ಲ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಉಪಚುನಾವಣೆಯ ಪ್ರಚಾರದ ವೇಳೆ ಹೇಳಿದ್ದಾರೆ. ಸಿದ್ದರಾಮಯ್ಯ ಕೇಳಿಕೊಂಡು ಯಡಿಯೂರಪ್ಪ ಬರಬೇಕಾ? ಇವರ ಊಹೆಗೆ ನಾವು ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಯಡಿಯೂರಪ್ಪ ಅವರು …

Read More »

ಕರ್ನಾಟಕದಲ್ಲಿ ಹೊಸದಾಗಿ 264 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನ‌‌ರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …

Read More »

ಪುಣೆ ವಿಮಾನ ನಿಲ್ದಾಣವು ಶನಿವಾರದಿಂದ ಹದಿನಾಲ್ಕು ದಿನಗಳವರೆಗೆ ಬಂದ್

ಪುಣೆ : ಪುಣೆ ವಿಮಾನ ನಿಲ್ದಾಣವು ಅಕ್ಟೋಬರ್ 16 ರಿಂದ ಅಕ್ಟೋಬರ್ 29 ರವರೆಗೆ ಹದಿನಾಲ್ಕು ದಿನಗಳ ಕಾಲ ರನ್‌ವೇ ಪುನರ್‌ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಿದೆ. “ನಾಳೆಯಿಂದ ಅಕ್ಟೋಬರ್ 29 ರವರೆಗೆ ವಿಮಾನ ಕಾರ್ಯಾಚರಣೆಗಳು ಸಂಪೂರ್ಣವಾಗಿ ಮುಚ್ಚಲ್ಪಡುತ್ತವೆ ಮತ್ತು ಇದು ಅಕ್ಟೋಬರ್ 30 ರಿಂದ ಪುನರಾರಂಭಗೊಳ್ಳಲಿದೆ” ಎಂದು ಪುಣೆ ವಿಮಾನ ನಿಲ್ದಾಣದ ನಿರ್ದೇಶಕ ಸಂತೋಷ್ ಧೋಕೆ ತಿಳಿಸಿದರು. ರನ್ ವೇ ಕಾರ್ಯಾಚರಣೆಯನ್ನು ನಿರ್ವಹಿಸುತ್ತಿರುವ ಭಾರತೀಯ ವಾಯುಪಡೆ (ಐಎಎಫ್), ರನ್ ವೇಯ ಕ್ಷೀಣಿಸುತ್ತಿರುವ …

Read More »

ಸಾಂಸ್ಕೃತಿಕ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ. ಒಂದು ತಾಸಿನಲ್ಲಿ ಮೆರವಣಿಗೆ ಸಂಪನ್ನಗೊಳ್ಳಲಿದೆ. ಒಂದು ವಾರದಿಂದ ನಡೆದು ಬಂದಿದ್ದ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ದಸರಾ ಮೆರವಣಿಗೆಯನ್ನು ಅರಮನೆ …

Read More »

ಸ್ವಚ್ಛ ನಗರಿಯಾಗುವತ್ತ ಹುಬ್ಬಳ್ಳಿ…

ಹುಬ್ಬಳ್ಳಿ: ‘ಕಸದ ವಿಷ್ಯದಲ್ಲಿ ಈಗ ಬಾಳನೇ ಸುಧಾರಣೆ ಕಂಡುಬಂದೈತ್ರಿ. ಮೊದಲು ಎರಡು ಮೂರು ದಿವಸ ಮನೆಯಲ್ಲೇ ಕಸ ಇಟ್ಕೊಂಡು ಕುಂದ್ರಬೇಕಾಗ್ತಿತ್ತು. ಮನೆಯಿಡೀ ದುರ್ನಾತ ಬರ್ತಿತ್ತು. ವಿಧಿ ಇಲ್ದೆ ರಾತ್ರೊರಾತ್ರಿ ತಗೊಂಡು ಹೋಗಿ ಗಿಡದ ಕಂಟಿಗೊ, ರಸ್ತೆ ಬದಿಗೊ ಚೆಲ್ಲಿ ಬರ್ತಿದ್ವಿ. ಈಗ ಅಂತಹ ಸ್ಥಿತಿ ಇಲ್ರಿ. ಪೌರ ಕಾರ್ಮಿಕರು ಆಟೊ ಟಿಪ್ಪರ್‌ ಜೊತೆ ಮನೆ ಬಾಗಿಲಿಗೆ ಬಂದು ಕಸ ತಗೊಂಡು ಹೋಗ್ತಾರ್ರಿ…’       ವಾಣಿಜ್ಯ ನಗರಿ ಹುಬ್ಬಳ್ಳಿಯ …

Read More »

ಬೊಮ್ಮಾಯಿ ತಾಲಿಬಾನ್ ನಾಯಕರಂತೆ ಮಾತಾಡಿದ್ದಾರೆ : ರಾಜ್ಯ ಕಾಂಗ್ರೆಸ್

ಬೆಂಗಳೂರು : ನೈತಿಕ ಪೊಲೀಸ್‍ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‍ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ. “ನೈತಿಕತೆಗೆ ಧಕ್ಕೆಯಾದಾಗ ಆಕ್ಷನ್, ರಿಯಾಕ್ಷನ್ ಆಗುತ್ತದೆ,” ಅಂತಾ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದಕ್ಕೆ ಆಕ್ರೋಶ ಹೊರಹಾಕಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ರಾಜ್ಯದಲ್ಲಿ ‘ಅನೈತಿಕ ಪೊಲೀಸ್‍ಗಿರಿ’ ಹೆಸರಲ್ಲಿ ನಡೆಯುತ್ತಿರುವ ಭಯೋತ್ಪಾದಕ …

Read More »

ಎರಡೂವರೆ ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ‘ಸಲಗ’ ಇಂದು ರಾಜ್ಯಾದ್ಯಂತ ಬಿಡುಗಡೆ

ಎಷ್ಟು ಟೆನ್ಶನ್ ಇದೆ ಗೊತ್ತಾ? ರಾತ್ರಿಯಲ್ಲಾ ನಿದ್ದೆ ಇಲ್ಲ. ಮೂರು ಗಂಟೆಗೆ ಎದ್ದು ಕೆಲಸ ಮಾಡುತ್ತಿದ್ದೇವೆ. ಆ ಅನುಭವವನ್ನು ಬಾಯ್ಮಾತಿನಲ್ಲಿ ಹೇಳುವುದು ಕಷ್ಟ. ಅದು ಅನುಭವಿಸಿದವರಿಗೇ ಗೊತ್ತು. ಇನ್ನೊಬ್ಬರಿಗೆ ಶಾಪವಾಗಿಯೂ ಕೊಡುವುದಕ್ಕೆ ಸಾಧ್ಯವಿಲ್ಲ …’ ಎಂದು ನಕ್ಕರು ‘ದುನಿಯಾ’ ವಿಜಯ್. ಎರಡೂವರೆ ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ‘ಸಲಗ’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ವಿಜಯ್ಗೆ ಸಹಜವಾಗಿಯೇ ಟೆನ್ಶನ್ ಇದೆ. ಏಕೆಂದರೆ, ಈ ಚಿತ್ರಕ್ಕೆ ಅವರು ನಾಯಕರಷ್ಟೇ ಅಲ್ಲ, …

Read More »

ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.

ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …

Read More »