Breaking News

Uncategorized

ಬೆಳಗಾವಿ: ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರ; ಮಾಲೀಕ ಅರೆಸ್ಟ್

ಬೆಳಗಾವಿ: ರಾಜ್ಯದಲ್ಲಿ ಹೆಣ್ಣಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಳಗಾವಿಯ ಜಿಲ್ಲೆಯ ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಗೋಕಾಕ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 17ರಂದು ರಾತ್ರಿ ವೇಳೆ ಮಾಲೀಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಆರೋಪಿಯ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಮನೆಯ ಎದುರು ಶೆಡ್​ನಲ್ಲಿ ಆಕೆಯ …

Read More »

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ನ್ನು ಇಂದು ಭೇಟಿಯಾಗಲಿದ್ದಾರೆ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.  ಕಮಲಾ  ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಮೂಲದ ವ್ಯಕ್ತಿ. ಈ ಹಿಂದೆ, ಇಬ್ಬರು ನಾಯಕರು ಕೊವಿಡ್ -19  (Covid -19) ಬಿಕ್ಕಟ್ಟಿನ ಸಂದರ್ಭದಲ್ಲಿ ದೂರವಾಣಿ ಮೂಲಕ ಮಾತನಾಡಿದ್ದರು.  ಪ್ರಧಾನಿ ಮೋದಿ ಬುಧವಾರ ಅಮೆರಿಕಕ್ಕೆ …

Read More »

ಭೋಜನ ಕೂಟದಲ್ಲೂ ಆಪರೇಷನ್ ಹಸ್ತದ ಬಗ್ಗೆ ಎಚ್ಚರಿಕೆ ನೀಡಿದ ಬಿಎಸ್‍ವೈ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರೇಸ್ ವೀವ್ ಕಾಟೇಜ್ ನಿವಾಸದಲ್ಲಿ ನಿನ್ನೆ ರಾತ್ರಿ ಭೋಜನ ಕೂಟ ಏರ್ಪಡಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯಲು ಗಾಳ ಹಾಕಿದೆ ಎಚ್ಚರದಿಂದಿರಿ. ಯಾರೂ ಕಾಂಗ್ರೆಸ್ ಪ್ರಲೋಭನೆಗೆ ಒಳಗಾಗುವುದು ಬೇಡ ಎಂದು ಕಿವಿಮಾತು ನೀಡಿದ್ದಾರೆ. ಶಾಸಕರೊಂದಿಗೆ ಚರ್ಚಿಸಿದ ಬಿಎಸ್‍ವೈ, ಯಾರಾದರೂ ಕಾಂಗ್ರೆಸ್ ನಾಯಕರು ನಮ್ಮ ಶಾಸಕರ ಸಂಪರ್ಕಿಸಿದರೆ ನಾಯಕರ ಗಮನಕ್ಕೆ ತನ್ನಿ. ಶಾಸಕರ ಬೇಕು ಬೇಡಗಳನ್ನು ಈಡೇರಿಸಲು …

Read More »

ಬೆಚ್ಚಿಬಿದ್ದ ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ-ಮಗಳ ಕೊಂದ ಪಾಪಿ ಪತಿ..!

ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ ಮತ್ತು ಮಗಳನ್ನ ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಈಶ್ವರ್ ನಗರದಲ್ಲಿ ನಡೆದಿದೆ. ದಿಗಂಬರ್ 46 ಅನ್ನೋ ವ್ಯಕ್ತಿಯಿಂದ ಪತ್ನಿ ಮತ್ತು ಮಗಳನ್ನ ಕಗ್ಗೊಲೆ ಮಾಡಿದ್ದಾನೆ. ಜಗದೀಶ್ವರಿ 45, ಪ್ರಿಯಾಂಕಾ 11 ಕೊಲೆಯಾದ ದುರ್ದೈವಿಗಳು. ಮಧ್ಯರಾತ್ರಿ ಮನೆಯಲ್ಲಿ ಜಗಳ ತೆಗೆದು ಕೊಲೆ ಮಾಡಿದ್ದಾರೆ. ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿರೋ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿ ದಿಗಂಬರ್​ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೇಡಂ ಪೊಲೀಸ್ …

Read More »

ಇನ್ಮುಂದೆ ಕ್ರಿಕೆಟ್​ನಲ್ಲಿ ‘ಬ್ಯಾಟ್ಸ್​ಮನ್’​ ಎನ್ನುವಂತಿಲ್ಲ: ಲಿಂಗ ಸಮಾನತೆಗಾಗಿ ‘ಬ್ಯಾಟರ್’ ಪದ ಬಳಕೆಗೆ ಆದೇಶ

ಕ್ರಿಕೆಟ್ ಆಟದಲ್ಲಿ ಇನ್ನು ಬ್ಯಾಟಿಂಗ್ ಮಾಡುವವರನ್ನು “ಬ್ಯಾಟ್ಸ್‌ಮನ್” (Batsman) ಎಂದು ಕರೆಯಲಾಗುವುದಿಲ್ಲ. ಕ್ರಿಕೆಟ್ ​ಅನ್ನು ಅಂತರ್ಗತ ಆಟವಾಗಿ ಬಲಪಡಿಸುವ ಪ್ರಯತ್ನವಾಗಿ ಬ್ಯಾಟ್ಸ್​ಮನ್​ ಎಂಬ ಪದದ ಬದಲು ಇನ್ನು ಮುಂದೆ ಲಿಂಗ ತಟಸ್ಥ ಪದ “ಬ್ಯಾಟರ್”​ (Batter) ಎಂಬ ಪದವನ್ನು ಕ್ರಿಕೆಟ್ ನಿಯಮಾವಳಿಯಲ್ಲಿ ಅಳವಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ನಿಯಮ ರೂಪಿಸಲಾಗಿದ್ದು ಬದಲಾವಣೆ ತಕ್ಷಣದಿಂದ ಜಾರಿಯಾಗಿದೆ ಎಂದು ಮೆರಿಲ್‌ಬಾರ್ನ್‌ ಕ್ರಿಕೆಟ್ ಕ್ಲಬ್‌ (MCC) ತಿಳಿಸಿದೆ. ಎಂಸಿಸಿ ಕ್ರಿಕೆಟ್ ನಿಯಮಗಳ ರಕ್ಷಕನಾಗಿದ್ದು, ಐಸಿಸಿ (ICC) …

Read More »

ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದೆ. ಇಡೀ ದೇಶವನ್ನು ಕೊರೊನಾ ಮುಕ್ತ ಮಾಡಲು ಮಕ್ಕಳು ಹೊರೆತು ಪಡಿಸಿ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಹಾಕಲಾಗುತ್ತಿತ್ತು. ವಾರದ 7 ದಿನವೂ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿತ್ತು. ಆದ್ರೆ ಈಗ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಇಲಾಖೆ ಮುಂದಾಗಿದೆ. ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. …

Read More »

ಅಬುಧಾಬಿಯಲ್ಲಿಂದು ಹೈವೋಲ್ಟೇಜ್ ಪಂದ್ಯ: ಮುಂಬೈ-ಕೋಲ್ಕತ್ತಾ ನಡುವೆ ಯಾರಿಗೆ ವಿಜಯ?

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯಲ್ಲಿಂದು (IPL 2021) 34ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಇಯಾನ್ ಮಾರ್ಗನ್ (Eion Morgan) ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (MIvsKKR) ತಂಡಗಳು ಮುಖಾಮುಖಿ ಆಗುತ್ತಿವೆ. ಮುಂಬೈ ತಂಡ ಈ ಬಾರಿಯ ಟೂರ್ನಿಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಕಂಡಿದೆ. ಆಡಿದ ಎಂಟು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಅನುಭವಿಸಿದೆ. ಇತ್ತ ಕೆಕೆಆರ್ ತಂಡ ಆಡಿದ …

Read More »

ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …

Read More »

ಶ್ರೀ ಸನತ್ ಜಾರಕಿಹೊಳಿ ಅವರಿಗೆ ಹುಟ್ಟಹಬ್ಬದ ಶುಭಾಶಯ ತಿಳಿಸಿದ ಬಸವರಾಜ ಸಾಯನ್ನವ ರ

ಇಂದು ಜಾರಕಿಹೊಳಿ ಕುಟುಂಬದಲ್ಲಿ ಸಂಭ್ರಮದ ದಿನ ಇಂದು ಜಾರಕಿಹೊಳಿ ಕುಟುಂಬದಲ್ಲಿ ಹುಟ್ಟು ಹಬ್ಬದ ಸಂಭ್ರಮ ಭೀಮಶಿ ಜಾರಕಿಹೊಳಿ ಅವರ ಸುಪುತ್ರ ಹಾಗೂ ಗೋಕಾಕ ಲಕ್ಷ್ಮಿ ಎಜುಕೇಷನ್ ಟ್ರಸ್ಟ್ ವ್ಯವ್ಥಾಪಕ ನಿರ್ದೇಶಕ ರಾದ ಶ್ರೀ ಸನತ್ ಜಾರಕಿಹೊಳಿ ಅವರ್ ಹುಟ್ಟುಹಬ್ಬದ ಸಂಭ್ರಮ. ಹೌದು ಇಂದು ಸುಮಾರು ಜನ ಇವರ ಒಂದು ಜನ್ಮ ದಿನಕ್ಕೆ ಶುಭಕೋರಿದರು ಹಾಗೂ ಗೋಕಾಕ ನಗರದ ಎಪಿಎಂಸಿ ನಿರ್ದೇಶಕ ರಾದ ಬಸವರಾಜ್ ಸಾಯನ್ನವರ್ ಅವರು ಇಂದು ಅವರಿಗೆ ಶುಭ …

Read More »

‘ಬೈಡನ್ ಆಹ್ವಾನದ ಮೇರೆಗೆ ಅಮೆರಿಕ ಪ್ರವಾಸ, ಜಾಗತಿಕ ವಿಚಾರಗಳ ಬಗ್ಗೆ ನಮ್ಮ ಚರ್ಚೆ’ ಅಂದ್ರು ಮೋದಿ

ನವದೆಹಲಿ: ಬೈಡೆನ್ ಅಮೆರಿಕ ಅಧ್ಯಕ್ಷರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಳ್ತಿದ್ದಾರೆ. ಇಂದು ಅಮೆರಿಕಾಕ್ಕೆ ಹೊರಡಲಿರುವ ಮೋದಿ, ಕ್ವಾಡ್‌ ಶೃಂಗ ಸಮ್ಮೇ​ಳನ, ವಿಶ್ವ​ಸಂಸ್ಥೆ 76ನೇ ವಾರ್ಷಿಕ ಸಾಮಾನ್ಯ ಸಭೆ​ಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜೋ ಬೈಡೆನ್‌ ಜತೆ ದ್ವಿಪಕ್ಷೀಯ ಮಾತು​ಕತೆಯನ್ನೂ ನಡೆಸಲಿದ್ದಾರೆ. ಹೀಗಾಗಿ ಮೋದಿ-ಬೈಡೆನ್ ಭೇಟಿ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ..ಭೇಟಿ ವೇಳೆ ಗ್ಲೋಬಲ್ ಪಾರ್ಟನರ್​​ಶಿಪ್​​ ಬಗ್ಗೆ ಸಮಗ್ರವಾಗಿ …

Read More »